Friday, December 25, 2020

Vaikunta Ekadasi - Understanding & its Significance

Sri Vaikunta Ekadasi – Understanding and its Significance

                                                                  Lord Venkateswara

Sri  Vaikunta Ekadasi - Understanding & its Significance 

ಶ್ರೀ ವೈಕುಂಠ ಏಕಾದಶಿ ಅದರ ಮಹತ್ವ

ದಿನಾಂಕ 25--12--2020 ಶುಕ್ರವಾರ ದ೦ದು ಆಚರಿಸಲಾಗುತ್ತಿದೆ

ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ
ಉಪವಾಸದ ವೈಜ್ಞಾನಿಕ ಸತ್ಯ….!

ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”,

ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ :

ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

ಇನ್ನು “ಏಕಾದಶಿ” ಎಂದರೆ

ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು. “ಏಕಾದಶಿ” ಒಂದು ವ್ರತ.

ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.

ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.

ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು.

ಎಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.
ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ.

ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.

ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :

ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.

ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.

ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.

ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.

ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.

ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ.

ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.
ನಂದಗೋಪನಿಗೆ ಪರಮಾನಂದವಾಯಿತು


                                                      Lord Venkateswara or Srinivasa

ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜ ರೂಪ ಅರಿಯಲಾರೆವು ಎಂದು ಪರಿತಪಿಸಿದರು.

ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು,

ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.

ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.

ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.

ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು.

ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.

ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು.

ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..

ವೈಕುಂಠ ಏಕಾದಶಿ...!!!
ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.

ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ.

ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು ಬಂದಿದೆ.
ಈ ಒಂದು ಏಕಾದಶಿ ಮೂರು ಕೋಟಿ ಏಕಾದಶಿಗಳಿಗೆ ಸಮವಾದ ಪವಿತ್ರತೆಯನ್ನು ಹೊಂದಿರುವ ಕಾರಣ ಇದನ್ನು ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.

ಮುಕ್ಕೋಟಿ ಏಕಾದಶಿ ದಿನ ಹಾಲಾಹಲ, ಅಮೃತ ಎರಡೂ ಹುಟ್ಟಿದವು. ಈ ದಿನವೇ ಶಿವನು ಹಾಲಾಹಲ ನುಂಗಿದ. ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಕೃಷ್ಣನು ಅರ್ಜುನನಿಗೆ ಇದೇ ದಿನ ಉಪದೇಶಿಸಿದ ಎಂಬ ನಂಬಿಕೆ ಇದೆ.

 

                                                                Pic-1


ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ .

ವಿಷ್ಣು ಪುರಾಣದ ಪ್ರಕಾರ ಇಬ್ಬರು ರಾಕ್ಷಸರು ತನಗೆ ವಿರೋದ ವಾಗಿದ್ದರೂ ವೈಕುಂಠ ಏಕಾದಶಿ ದಿನ ತನ್ನ ಬಾಗಿಲನ್ನು ತೆರೆದಿರುತ್ತಾನಂತೆ ಈ ಕತೆಯನ್ನು ಕೇಳಿದವರಿಗೆ ಮೋಕ್ಷ ಪ್ರಾಪ್ತಿಯಾಗುವಂತೆ ವೈಕುಂತದ ಬಾಗಿಲನ್ನು ತೆರೆದಿಡುವಂತೆ ಬೇಡಿಕೊಳ್ಳುತ್ತಾರೆ.

ಆದುದರಿಂದ ಎಲ್ಲಾ ವಿಷ್ಣು ದೇವಾಲಯದ ಬಾಗಿಲುಗಳನ್ನು ಆ ದಿನ ತೆಗೆದಿರುತ್ತಾರೆ . ಮಾಮೂಲಿ ದಿನಗಳಲ್ಲಿ ಉತ್ತರ ದ್ವಾರಗಳನ್ನು ಮುಚ್ಚಿರುತ್ತಾರೆ .

ಆದರೆ, ವೈಕುಂಠ ಏಕಾದಶಿದಿನ ಬಾಗಿಲನ್ನು ತೆರೆದಿರುತ್ತಾರೆ .
ವೈಕುಂಠ ಏಕಾದಶಿ ದಿನ ತಿರುಮಲೆಯ ದೇವಾಲಯದಲ್ಲಿರುವ ಉತ್ತರ ದ್ವಾರವನ್ನು ತೆರೆದಿರುತ್ತಾರೆ. ಪದ್ಮ ಪುರಾಣದ ಪ್ರಕಾರ ವಿಷ್ಣುವಿನಿಂದ ಬಂದ ಶಕ್ತಿಯಿಂದ ಮೊರಾ ಎಂಬ ರಾಕ್ಷಸನನ್ನು ಸಂಹರಿಸಿದ ದಿನವಂತೆ .

ಮುಕ್ಕೋಟಿ ಏಕಾದಶಿ ದಿನದಂದು ಅಂದರೆ ಧನುರ್ಮಾಸ ಶುಕ್ಲ ಏಕಾದಶಿ ದಿನದಂದು ಉಪಾಸವಿರ ಬೇಕಂತೆ ಇದಕ್ಕೆ ಕಾರಣವೇನೆಂದರೆ..

ಮೊರಾ ಎಂಬ ರಾಕ್ಷಸನು ಅಂದು ಅಕ್ಕಿಯಲ್ಲಿ ಅಡಗಿ ಕುಳಿತಿರುತ್ತಾನಂತೆ ಆದುದರಿಂದ ಅಂದು ಅಕ್ಕಿಯಿಂದ ಮಾಡಿದ ಯಾವುದೇ ಪದಾರ್ಥವನ್ನು ತಿನ್ನ ಬಾರದು .

 

                                                          Lord Vishnu's Dasavatara


ಮುಕ್ಕೋಟಿ ಏಕಾದಶಿ ಒಂದು ದಿನ ಉಪವಾಸ ವಿದ್ದರೆ ಮಿಕ್ಕ 23 ಏಕಾದಶಿಗಳಲ್ಲಿ ಉಪವಾಸ ವಿದ್ದಂತೆಯೇ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ.
ಮೊರಾ ಎಂದರೆ ರಾಜಸಿಕ ಹಾಗೂ ತಾಮಾಸಿಕ ಗುಣಗಳಿಗೆ ಪ್ರತೀಕ ಅವುಗಳನ್ನು ಉಪವಾಸ ವಿರುವುದರ ಮೂಲಕ ಜಯಿಸುವುದರ ಮೂಲಕ ಮುಕ್ತಿಗೆ ಮಾರ್ಗ ದೊರೆಯುತ್ತದಂತೆ.

-------- Hari Om --------

Wednesday, November 18, 2020

ಮನೆ ಮದ್ದು Mane Maddu or Home Remedies

ಮನೆ ಮದ್ದು 

 

 Mane Maddu or Home Remedies 

 

                                                         Menthiya or Fenugreek seeds


                                                       Oma Kalu or Carom seeds


                                                           Zeerige or Cumin seeds


ಮೆಂತ್ಯೆ, ಓಂಕಾಳು, ಜೀರಿಗೆ ಮೂರೂ ಬೆರೆಸಿ ಮೂರು ತಿಂಗಳ ಕಾಲ ತೆಗೆದುಕೊಂಡರೆ…ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತವೆ.


ಬಿಸಿ ನೀರಿನಲ್ಲಿ ಮೆಂತ್ಯೆ, ಓಂಕಾಳು, ಜೀರಿಗೆ ಪುಡಿ ಬೆರೆಸಿ ಕುಡಿದರೆ 3 ತಿಂಗಳಲ್ಲಿ ದೇಹದಲ್ಲಿನ ಕೆಟ್ಟ ಕೊಬ್ಬೆಲ್ಲಾ ಕರಗಿ ತೂಕ ಕಡಿಮೆಯಾಗುತ್ತವೆ.. ಕೇವಲ ತೂಕವಷ್ಟೇ ಅಲ್ಲ… ಕೂದಲ ಬೆಳವಣಿಗೆ, ಹೃದಯ ಸಂಬಂಧಿ ಕಾಯಿಲೆಗಳು, ಮಲಬದ್ಧತೆ ಇನ್ನೂ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿ ಈ ಪುಡಿ ಕೆಲಸ ಮಾಡುತ್ತದೆ. ಆ ಪುಡಿಯನ್ನು ಹೇಗೆ ತಯಾರಿಸಿಕೊಳ್ಳಬೇಕು, ಹೇಗೆ ಬಳಸಬೇಕು… ಅದರಿಂದ ಆಗುವ ಇತರೆ ಉಪಯೋಗಗಳು ಏನು ಎಂದು ತಿಳಿದುಕೊಳ್ಳೋಣ.

ಬೇಕಾದ ಪದಾರ್ಥಗಳು:

250
ಗ್ರಾಂ ಮೆಂತ್ಯೆ
100
ಗ್ರಾಂ ಓಂಕಾಳು
50
ಗ್ರಾಂ ಜೀರಿಗೆ


ತಯಾರಿಸುವ ವಿಧಾನ:
ಮೊದಲು 3 ಪದಾರ್ಥಗಳನ್ನು ಬೇರೆಬೇರೆ ಹೆಂಚಿನ ಮೇಲೆ ಹಾಕಿ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಮೆಂತ್ಯೆ, ಓಂಕಾಳು, ಕಪ್ಪು ಜೀರಿಗೆ ಬೆರೆಸಿ ಪುಡಿ ಮಾಡಿಕೊಳ್ಳಬೇಕು. ಆ ಪುಡಿಯನ್ನು ಗಾಳಿಯಾಡದ ಬಾಟಲಿಯಲ್ಲಿಡಬೇಕು.



                                                        Menthiya seeds

 
ಬಳಸುವುದು ಹೇಗೆ?


ನಿತ್ಯ ರಾತ್ರಿ ಊಟದ ಬಳಿಕ 1 ಗ್ಲಾಸ್ ಬಿಸಿ ನೀರಿನಲ್ಲಿ 1 ಸ್ಪೂನ್ ಪುಡಿಯನ್ನು ಬೆರೆಸಿ ಕುಡಿಯಬೇಕು. ಕುಡಿದ ಬಳಿಕ ಯಾವುದೇ ಆಹಾರ ತೆಗೆದುಕೊಳ್ಳಬಾರದು.

ನಿತ್ಯ ಈ ಪುಡಿಯನ್ನು ಬಳಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ವಿಷ ಪದಾರ್ಥಗಳು ಮಲ, ಮೂತ್ರ, ಬೆವರಿನ ಮೂಲಕ ಹೊರಹೋಗುತ್ತವೆ. ನಿಯಮಿತವಾಗಿ 40-45 ದಿನ ಬಳಸಿದರೆ ತುಂಬಾ
ಪ್ರಯೋಜನಕಾರಿಯಾಗುತ್ತದೆ. 3 ತಿಂಗಳು ಬಳಸಿದರೆ ನಿಮ್ಮ ಆರೋಗ್ಯಕ್ಕೆ ಸರಿಸಾಟಿ ಇರಲ್ಲ.

ಈ ಪುಡಿಯನ್ನು ಬಳಸಿದ ಮೇಲೆ ದೇಹದಲ್ಲಿನ ಅಧಿಕ ಕೊಬ್ಬು ಕರಗಿಹೋಗುತ್ತದೆ. ರಕ್ತ ಶುದ್ಧಿಯಾಗುತ್ತದೆ.

ದೇಹದಲ್ಲಿ ಉತ್ತಮವಾದ ರಕ್ತ ಪ್ರವಹಿಸುತ್ತದೆ. ದೇಹದ ಮೇಲಿನ ಸುಕ್ಕುಗಳು ನಿವಾರಣೆಯಾಗುತ್ತದೆ. ಯೌವನದಿಂದ ಇರುತ್ತೀರ. ದೇಹ ದೃಢವಾಗಿ, ಚುರುಗಾಗಿ, ಹೊಳಪಿನಿಂದ ಕೂಡಿರುತ್ತದೆ.

 


                                                     Oma Kalu or Oma seeds


ಈ ಪುಡಿಯಿಂದ ಆಗುವ ಇತರೆ ಪ್ರಯೋಜನಗಳು:

ಕೀಲು, ಮೊಣಕಾಲು ನೋವು ಕಡಿಮೆಯಾಗುತ್ತದೆ. ಮೂಳೆಗಳು ಬಲಗೊಳ್ಳುತ್ತವೆ.

ಕಣ್ಣಿನ ದೃಷ್ಟಿ ಚುರುಕಾಗುತ್ತದೆ ಅಲ್ಲದೆ… ವಸಡುಗಳು ದೃಢವಾಗುತ್ತವೆ, ಆರೋಗ್ಯವಾಗಿ ಬದಲಾಗುತ್ತಾರೆ.

ಈ ಹಿಂದೆ ತೆಗೆದುಕೊಂಡಿದ್ದ ಇಂಗ್ಲಿಷ್ ಮೆಡಿಸಿನ್ ಸೈಡ್ ಎಫೆಕ್ಟ್ಸ್‌ನ್ನು ಇದು ಕ್ಲಿಯರ್ ಮಾಡುತ್ತದೆ. ಕೂದಲ ಬೆಳವಣಿಗೆಯನ್ನು ಇದು ಉತ್ತಮ ಪಡಿಸುತ್ತದೆ.

ಮಲಬದ್ಧತೆ ಶಾಶ್ವತವಾಗಿ ದೂರವಾಗುತ್ತದೆ. ಮೋಷನ್ ಸುಲಭವಾಗಿ ಆಗುತ್ತದೆ.

ರಕ್ತ ಸಂಚಲನೆ ಉತ್ತಮಗೊಳ್ಳುತ್ತದೆ. ಹೃದಯದ ಕೆಲಸ ಸುಧಾರಿಸುತ್ತದೆ.

ದೀರ್ಘಕಾಲದಿಂದ ಕೆಮ್ಮಿನಿಂದ ಬಳಲುತ್ತಿರುವವರಿಗೆ ಇದು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಇದನ್ನು ನಿತ್ಯ ರಾತ್ರಿ ಹೊತ್ತು ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತದೆ.

ಮಿದುಳು ಚುರುಕಾಗುತ್ತದೆ. ಶ್ರವಣ ಸಾಮರ್ಥ್ಯ ಬೆಳೆಯುತ್ತದೆ. ನಿತ್ಯ ಕೆಲಸಗಳಲ್ಲಿ ಚುರುಕಾಗಿ ಪಾಲ್ಗೊಳ್ಳಬಹುದು.

ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ಇದರ ಫಲಿತಾಂಶಗಳನ್ನು ಗಮನಿಸಿದವರು ಈ ಪುಡಿಯನ್ನು ಮತ್ತೆ ಬಳಸಬೇಕೆಂದರೆ ಮೂರು ತಿಂಗಳಿಗೊಮ್ಮೆ ಹದಿನೈದು ದಿನ ಗ್ಯಾಪ್ ಬಿಟ್ಟು ಮತ್ತೆ ಕುಡಿಯುವುದನ್ನು ಶುರು ಮಾಡಬೇಕು

 

                                                               Zeerige Kalu


 This is a wonderful Kashaya mix of basic 3 herbs it has many Health benefits follow above instructions and be Hale & Healthy all the Times.


----------- Hari Om ----------

Tuesday, October 13, 2020

Pushya Arka Yoga

 Pushya Arka Yoga

 

PUSHYA-ARKA YOGA 


 

      Sri Raghavendra Swamy

 
Combination of Pushyami Nakshathra associated with Sunday (Arka Vaara) is spiritually considered as meritorious (parvakaala) for performing sacred deeds like prayer, daAna etc.

Astrologically this phenomena of Pushya-Arka yoga occurs when Moon is transiting in Pushyami star in Karkataka Rasi associated with Sunday. It occurs more than once in a year.

If it is also associated with Pournami thithi > Pushya maasa (when Moon will be in Pushyami star on the full moon day) and Sun transiting in Uttaraashaada Nakshathra (Sun is star lord of Uttaraashaada) in Makara Raasi the merits are > bountiful.

Jupiter (Guru) is star lord of Pushyami Nakshathra and it is befitting and auspicious to invoke/seek the blessings of spiritual Gurus' on this sacred day.

Who else can we worship other than Mantralaya Guru Saarvabhouma Sri Raghavendra Swamy?

> who is a true Guru, Kaamadhenu, Kalpa Vriksha.

Sri Appanaachaarya an ardent devotee and prime disciple of Sri Guru Raayaru in his famous hymn on Guru Raaghavendra (Sri Raaghavednra Stothra) emphasizes as follows....


ಸೋಮಸೂರ್ಯೋಪರಾಗೇ ಚ ಪುಷ್ಯಾರ್ಕಾದಿಸಮಾಗಮೇ |
ಯೋನೋತ್ತಮಮಿದಂ ಸ್ತೋತ್ರಮಷ್ಟೋತ್ತರಶತಂ ಜಪೇತ್ |
ಭೂತಪ್ರೇತಪಿಶಾಚಾದಿ ಪೀಡಾ ತಸ್ಯ ನ ಜಾಯತೇ |

Soma sooryo paraage cha pushyaarkaadi samaagame,
Yo anuthamam idham stotramashtothara satham japeth,
Bootha pretha pisachaadi peeda thasya na jaayathe

Whenever there is a lunar or solar eclipse or during Pushya Star occurring on Sunday, any person reciting Sri Raaghavendra Stothra 108 times with all sincerity and devotion will not have trouble from ghosts/devils and no evil befall on him.

ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯ ಚ |
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||

ದುರ್ವಾದಿ ಧ್ವಾಂತರವಯೇ ವೈಷ್ಣವೇಂದೀವರೇಂದವೇ
ಶ್ರೀರಾಘವೇಂದ್ರಗುರವೇ ನಮೋತ್ಯಂತದಯಾಳವೇ ||

ಮೂಕೋಪಿ ಯತ್ಪ್ರಸಾದೇನ ಮುಕುಂದ ಶಯನಾಯತೇ
ರಾಜರಾಜಾಯತೇ ರಿಕ್ತೋ ರಾಘವೇಂದ್ರಂ ತಮಾಶ್ರಯೇ ||

ಆಪಾದಃ ಮೌಲಿ ಪರ್ಯಂತಂ ಗುರೂಣಾಂ ಆಕೃತಿಂ ಸ್ಮರೇತ್
ತೇನ ವಿಘ್ನಾಃ ಪ್ರಣಶ್ಯಂತಿ ಸಿಧ್ಧ್ಯಂತಿ ಚ ಮನೋರಥಾಃ ||

naMbi keTTavarillavO ee gurugaLa |
naMbadE keDuvaruMTE ||


yadbrindaavanasapradakshinanamaskaaraabhishhekastuti
dhyaanaaraadhanamridvilepanamukaanekopachaaraan sadaa |
kaarankaaramabhiprayaanti chaturo lokaha pumarthaan sadaa
Shrimadsadgururaaghavendrayatiraat kuryaaddhruvam mangalam;

ಯದ್ಬೃಂದಾವನಸತ್ಪ್ರದಕ್ಷಿಣನಮಸ್ಕಾರಾಭಿಷೇಕಸ್ತುತಿ
ಧ್ಯಾನಾರಾಧನ ಮೃದ್ವಿಲೇಪನಮುಖಾನೇಕೋಪಚಾರಾನ್ ಸದಾ |
ಕಾರಂಕಾರಮಭಿಪ್ರಯಾಂತಿ ಚತುರೋ ಲೋಕಾಃ ಪುಮರ್ಥಾನ್ ಸದಾ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಲಂ ||

(says Sri AppanaCharya in Sri Raghavendra MangalaAshtaka)

➡️ Sri Guru RaAyaru;

1. Mantralayam (abode of Sri Guru Raaghavendra);
2. Raayara Brindavana Darshana;
3. Raayara Seva/Aaraadhana;
4. Raayara Paadodaka;
5. Raayara Smarane/Guna Stavana;
6. Raayara Abhisheka; Archana;
7. Raayara Brindavana Pradakshina/Namaskaara;
8. Raayara Ashtakshari Manthra/Raayara Stothra;
9. Raayara Mrittika;
10. Raayara Hastodaka;
11. Raayara Phala-Mantrakshate;
12. Raayara Mahima/Leela;
(list is not exhaustive....)
> are always sacred and highly meritorious;

Therefore, Sri Guru Raayaru should always be adored with utmost reverence; devotion; faith; obeisance and gratitude. He is Kaliyuga Kaamadhenu – Kalpavriksha; His glory is everlasting;

> Worshiping Sri Guru RaAyaru is Hari Preeti;

> Lord Vishnu will not get pleased if His devotees are ignored/disrespected;

> Raayaru is one of the greatest devotees of Lord Vishnu -
Parama Bhagavatottama;

> RaAyaru is an incarnation of Bhakta Prahlada (Prahlada Raayaru) whose Apratima Vishnu Bhakti has been mentioned by Sri Madhvacharyaru in his scripts;

> Only such of those who follow the footsteps of Sri Guru Raayaru will get the Grace of Lord Narasimha;

> Having Visesha Vaayu Aavesha in Sri Guru Raayaru, one must always worship Lord Vishnu with anusandhana of Sri Raaghavendra Theertha Guruvanthargatha - Bharateeramana Mukhya Praanaanthargatha

Hari Sarvottama - Vaayu Jeevottama
'nAham kartA hariH kartA'
Sri GuruRaajoVijayate

 

----------- Hari Om ----------

Sunday, October 11, 2020

Anjaneya temple in Chikka Bommasandra-Yelahanka New Town

 Anjaneya temple in Chikka Bommasandra-Yelahanka New Town -- Bengaluru -- 560064

 

                                      Kambada Anjaneya swamy installed by sri Vyasarajaru 

This Kambada Anjaneya temple is in Chikka Bommansandra in Yelahanka New Town and just walk-able 1 km distance from Yelahanka New town Bus stand.

 

                                                          Kambada Anjaneya Swamy

 

                                                              View of both Anjaneya                                      


This Kambada Anjaneya idol was installed sri Vyasaraja tirtharu and has been moved to the side by local people and another Anjaneya idol which has been installed main along with side recently.

 

                                                             Main Entrance

 

                                                             Main Anjaneya Idol

Sri VYASARAJA Tirtharu has installed/consecreted MukyaPrana ( Anjaneya ) 732 Idols mainly all over South India and only 510 such idols are Found till date & Remaining idols are yet to be traced / identified, regular Poojas / Festivals are carried out at all the places.


To Understand and identify Sri Vyasaraja Tirtha installed Lord Anjaneya , we need to know what are the features and characteristics of all those Idols which were installed by him.

Some common salient features of the idols are:

Avatara Thraya Roopa - representing Hanuma, Bheema & Madhwa avataragalu

1. Hanuma Roopa - Bala, Ghante , Abhaya Hastha, Moothi/Face - etc
2. Bheema Roopa- Gadhe, Sougandhika Pushpa, Karna Kundala etc (any other Kshatriya features)
3. Madhwa Roopa- Shikha, Yogada patti, granthas etc.

AUM ANJANEYAYE VIDMAHE,
MAHABALAYE DHI-MAHI
TANNO HANUMAN PRACHODAYAT

Let us contemplate on divine Hanuman, let this power fill and direct us.

 

                                                        Other idols- Lord Ganesha

                                                                 Sri Kodanda Rama


Asaadhya Saadhaka Swaamin Asaadhyam Thava Kim Vadha /
Sri Raama Dhootha Krupaa Sindhoh Math Kaaryam Saadhaya Prabhoh //

Oh! SrI RAma dhootha!  (Hanuman) You are the one who can accomplish the impossible. Come! Tell me! Is there anything that by the mercy of RAma, you cannot accomplish? Oh! Ocean of mercy! My Lord!  Kindly make my wishes come true"


anjana nandanam viram janaki-soka naashanam
kapisha maksahan taaram vande lanka-bhayankaram

I salute the heroic Hanuman, the leader of the monkeys and the son of Anjana, who is the slayer of (Ravan’s son) Akshkumara, who was a terror to the inhabitants of Lanka, and who assuaged the grief of Sita.


anjaneya mati patalaananam
kanchanadri kamaniya-vigraham
parijata tarumula-vasinam
bhavayaami paavamana-nananam

I meditate on the son of the Wind God and Anjana, whose face is deep red in complexion, whose body is as fascinating as a mountain of gold, and whose favorite resort is the base of the Parijatha tree.

 

                                                                      Pic2


                                                                           Pic3


                                                                   Pic4 

yatra yatra raghunaatha-kirtanam
tatra tatra krta masta kaanjalim
baspa vaari paripurna-lochanam
maarutim naamata rakshas-antakam  


मनोजवम् मारुततुल्यवेगम् जितेन्द्रियम् बुद्धिमताम् वरिष्ठम्।
वातात्मजम् वानरयूथमुख्यम् श्रीरामदूतम् शरणम् प्रपद्ये॥

Manojavam Marutatulyavegam Jitendriyam Buddhimatam Varishtham।
Vatatmajam Vanarayuthamukhyam Shriramadutam Sharanam Prapadye॥

 

Pic5

                                                                           Pic6

Please Visit this temple which has 500 years old History and get Blessings from Lord Anjaneya.




                                                                    ------ Hari Om  ------
           





Tuesday, September 22, 2020

Power of Banana or Plantain Leaf

Power of Banana or Plantain Leaf


 


                                                 
Banana or Plantain Leaf


ಬಾಳೆ ಎಲೆಯಲ್ಲಿ ಏಕೇ ಊಟ ಮಾಡಬೇಕು? ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ



ಆಧುನಿಕ ಪದ್ಧತಿಗೆ ಒಗ್ಗಿಕೊಂಡಿರುವ ನಾವು ಕೆಲವು ಅತ್ಯುತ್ತಮ ಹಳೆಯ ಆಚಾರ ವಿಚಾರಗಳನ್ನು ಮೂಲೆಗುಂಪಾಗಿಸಿದ್ದೇವೆ.

ಅವುಗಳಲ್ಲಿ ಬಾಳೆಲೆಯಲ್ಲಿ ಊಟ ಮಾಡುವ ಪದ್ಧತಿಯೂ ಒಂದು.

ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ.

ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ, ಅದು ಸಂಪ್ರದಾಯ ಸಹ ಹೌದು.

ಹಾಗಾಗಿಯೇ, ಮದುವೆ, ದೇವಾಲಯಗಳ ಪ್ರಸಾದ ಭೋಜನ, ಅನ್ನಸಂತರ್ಪಣೆಗಳಲ್ಲಿ ಬಾಳೆ ಎಲೆಯ ಮೇಲೆ ಊಟವನ್ನು ಬಡಿಸಲಾಗುತ್ತದೆ.

ಮನೆಯ ಮುಂದೆ ಮತ್ತು ಹಿತ್ತಲಿನ ತೋಟದಲ್ಲಿ ಬಾಳೆಗಿಡಗಳನ್ನು ಬೆಳೆಸುವುದು ಶುಭಕರವೆಂದು ಹೇಳಲಾಗುತ್ತದೆ.

ಬಾಳೆಎಲೆ ಊಟದಿಂದ ಕೇವಲ ತುಂಬುವುದೊಂದೇ ಅಲ್ಲ, ಈ ಎಲೆಯಲ್ಲಿ ಅನೇಕ ಆರೋಗ್ಯದ ಗುಟ್ಟುಗಳಿವೆ ಮುಖ್ಯವಾದ ಲಾಭಗಳು ಇಲ್ಲಿವೆ,

1.
ಬಾಳೆಎಲೆಯ ಮೇಲ್ಪದರದ ರಚನೆಯಲ್ಲಿ ಎಪಿಗಾಲ್ಸೋಕ್ಯಾಟಿಚಿನ್ ಗ್ಯಾಲೆಟ್ ಎಂಬ ಪಾಲಿಫಿನಾಲ್ ಅಂಶವಿರುತ್ತದೆ.

ಬಿಸಿ ಆಹಾರದ ಎಲೆಗೆ ಬಿದ್ದಾಕ್ಷಣ ಇವು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತವೆ, ಇದರಿಂದ ಜೀರ್ಣ ಕ್ರಿಯೆ ಚೆನ್ನಾಗಾಗುತ್ತದೆ.

2.
ಬಾಳೆಎಲೆಯ ಮೇಲೆ ಬ್ಯಾಕ್ಟೀರಿಯಾಗಳು ಬಾಳುವುದಿಲ್ಲ. ಇದರಲ್ಲಿ ಏನೇ ಆಹಾರ ಬಡಿಸಿದರೂ ಹೊಟ್ಟೆಗೆ ಹೋಗುವ ಮುನ್ನವೇ ಕೊಲ್ಲಲ್ಪಡುತ್ತವೆ.

ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಪ್ರೀ ರ್ಯಾಡಿಕಲ್ ಎಂಬ ಜೈವಿಕ ರಾಸಾಯನಿಕಗಳನ್ನು ಇದು ದೇಹ ಸೇರಲು ಬಿಡುವುದೇ ಇಲ್ಲ.

3.
ಚೆನೈನ ಆಯುರ್ವೇದ ತಜ್ಞರ ಪ್ರಕಾರ, ಸಣ್ಣ ವಯಸ್ಸಿನಲ್ಲೇ ಬಿಳಿಕೂದಲಿನ ಸಮಸ್ಯೆಯಿದ್ದವರು ನಿತ್ಯ ಬಾಳೆಎಲೆಯಲ್ಲಿ ಊಟಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದಂತೆ.

4.
ನೀವು ತಟ್ಟೆಗಳಲ್ಲಿ ಊಟ ಮಾಡಿದರೆ ಅವುಗಳಲ್ಲಿ ಮಾರ್ಜಕದ ಕಣಗಳು ನಿಮ್ಮ ಹೊಟ್ಟೆ ಸೇರಬಹುದು.

ಆದರೆ, ಬಾಳೆಎಲೆಯಲ್ಲಿ ಈ ಸಮಸ್ಯೆಯೇ ಇರುವುದಿಲ್ಲ.



5.
ಬಾಳೆಎಲೆ ಊಟ ಆರೋಗ್ಯಕ್ಕೆತಂಪು. ಗ್ಯಾಸ್ ಅಡುಗೆಯಿಂದ ಆಹಾರ ಸೇರಿಕೊಳ್ಳುವ ಕೃತಕ ಉಷ್ಣವೂ ಇಲ್ಲಿ ತಣ್ಣಗಾಗುತ್ತದೆ.

6.
ಬಾಳೆಎಲೆಯಲ್ಲಿ ಅಧಿಕ ಪ್ರಮಾಣದ ವಿಟಮಿನ್ ‘ಡಿ’ ಶೇಖರಣೆಗೊಂಡಿರುತ್ತದೆ, ಹೀಗಾಗಿ ಹಸುಗೂಸುಗಳನ್ನು ಶುಂಠಿ ಎಣ್ಣೆಲೇಪಿತ ಬಾಳೆಎಲೆಯಿಂದ ಸುತ್ತಿ ಸೂರ್ಯನ ಕಿರಣಗಳಿಗೆ ಹಿಡಿಯುತ್ತಾರೆ.

ಭವಿಷ್ಯದಲ್ಲಿ ಚರ್ಮರೋಗಗಳು ಬಾರದಮತೆ ತಡೆಯುವ ವೈದ್ಯೋದ್ದೇಶ ಇದರದ್ದು.

ತೆಂಗಿನೆಣ್ಣೆ ಲೇಪಿತ ಬಾಳೆಎಲೆಯನ್ನು ಸುಕ್ಕಾಗಿರುವ ಚರ್ಮದ ಸುತ್ತ ಸುತ್ತಿದರೆ ಕೆಲವೇ ದಿನಗಳಲ್ಲಿ ಒಳ್ಳೆಯ ರಿಸಲ್ಟ್ ಸಿಗುತ್ತದೆ.

7.
ಮಕ್ಕಳ ತ್ವಚೆಗೆ ಪರಿಹಾರ
ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ (beeswax) ಮಿಶ್ರ ಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಆ ಗುಳ್ಳೆಗಳು ಮಾಯವಾಗುವುದು.

8.
ಸುಟ್ಟ ಗಾಯಗಳಿಗೆ
ದೇಹದ ಮೇಲೆ ಕಂಡು ಬರುವ ಯಾವುದಾದರು ಸುಟ್ಟ ಗಾಯಗಳಿಗೆ ಶುಂಠಿ ಎಣ್ಣೆಯಲ್ಲಿ ಅದ್ದಿದ ಬಾಳೆ ಎಲೆಯನ್ನು ಹಾಕಿ ಕಟ್ಟು ಕಟ್ಟಿದರೆ ಅಥವಾ ಮುಚ್ಚಿದರೆ ಸುಟ್ಟ ಗಾಯವನ್ನು ಸಹ ಶಮನಗೊಳಿಸುತ್ತದೆ.

ಭೋಜನ ಕಾಲದಲ್ಲಿ ಬಡಿಸಲಾಗುವ ಪದಾರ್ಥಗಳು ಮತ್ತು ಅವುಗಳ ಭಗವದ್ರೂಪಗಳ ಪರಿಚಯ.

ಬಡಿಸುವ ಕ್ರಮಾನುಸಾರವಾಗಿ ಭಗವಂತನ ೨೪ ನಾಮಗಳನ್ನು ಅನುಕ್ರಮವಾಗಿ ನೀಡಲಾಗಿದ್ದು ಇದೇ ಕ್ರಮವನ್ನು ಸಾಮಾನ್ಯವಾಗಿ ಅನುಸರಿಸಲಾಗುತ್ತದೆ.

1
ಉಪ್ಪು (ಸೌಗಂಧಿ ಸಹಿತ ಜನಾರ್ಧನ)

2
ಚಟ್ನಿ, ಕೋಸಂಬರಿ, ಮುಂತಾದುವು (ಸತ್ಯ ಸಹಿತ ಪ್ರದ್ಯುಮ್ನ)

3
ಕೊಬ್ಬರಿ ಬಳಸಿರುವ ಪಲ್ಯ (ಬುದ್ಧಿಸಹಿತ ಪದ್ಮನಾಭ)

4
ಸೊಪ್ಪು ಬಳಸಿರುವ ಪಲ್ಯಗಳು (ಮಂಗಳಾದೇವಿ ಸಹಿತ ಹೃಶೀಕೇಷ)

5
ಹುಳಿರಹಿತ ಪದಾರ್ಥಗಳು (ಹರಿಣಿ ಸಹಿತ ಸಂಕರ್ಷಣ)

6
ಕಟು ಅಥವಾ ಕಹಿ ಪದಾರ್ಥಗಳು (ನಿತ್ಯ ಸಹಿತ ಅನಿರುದ್ಧ)

7
ಹುಳಿ ಪದಾರ್ಥಗಳು (ಇಂದಿರಾ ಸಹಿತ ದಾಮೋದರ)

8
ಭಕ್ಷ್ಯ ಅಥವಾ ಸಿಹಿ ಪದಾರ್ಥಗಳು (ಕಮಲಾ ಸಹಿತ ಯಾಧವ)

9
ಹೋಳಿಗೆ (ಕಮಲಾಲಯ ಮಧುಸೂದನ)

10
ಗೊಜ್ಜು ಮತ್ತು ಕರಿದ ಪದಾರ್ಥಗಳು (ಸದಾಶ್ರಯ ಆಧೊಷಜ)

11
ಜಹಾಂಗೀರು, ವಡೆ ಮುಂತಾದ ಉದ್ದು ಬಳಸಿರುವ ಪದಾರ್ಥಗಳು (ಸಖಾದೇವಿ ಸಹಿತ ಆಚ್ಯುತ)

12
ಕುಂಬಳಕಾಯಿ, ಎಳ್ಳು, ಉದ್ದಿನ ಪದಾರ್ಥಗಳು-ಹಪ್ಪಳ ಸಂಡಿಗೆ ಮುಂತಾದುವು (ಲಕ್ಷ್ಮೀ ಸರಸಿಂಹ)

13
ಹಣ್ಣು ಮತ್ತು ಪಾನಕಗಳು (ಸುಂದರಿ ಸಹಿತ ಉಪೇಂದ್ರ)

14
ತೊವ್ವೆ (ಧಾನ್ಯ ಸಹಿತ ಶ್ರೀಧರ)

15
ಪರಮಾನ್ನ -ಪಾಯಸ (ಲಕ್ಷ್ಮೀ ಸಹಿತ ನಾರಾಯಣ)

16
ಅನ್ನ (ಶ್ರೀಕೇಶವ)

17
ತುಪ್ಪ (ಪದ್ಮಾ ಸಹಿತ ಗೋವಿಂದ)

18
ಬೆಣ್ಣೆ (ರಮಾ ಸಹಿತ ತ್ರಿವಿಕ್ರಮ)

19
ಹಾಲು / ಕ್ಷೀರ (ಪದ್ಮಿನೀ ಸಹಿತ ಗೋವಿಂದ)

20
ಮೊಸರು (ವೃಕ್ಷಾಕಪಿ ಸಹಿತ ವಾಮನ)

21
ಕುಡಿಯುವ ನೀರು (ಶ್ರೀಕೃಷ್ಣ)

22
ಸಕ್ಕರೆ, ಬೇಳೆ (ದಕ್ಷಿಣಾ ಸಹಿತ ವಾಸುದೇವ)

23
ಶ್ಯಾವಿಗೆ, ಇಂಗು, ಏಲಕ್ಕಿ, ಕೇಸರಿ, ಕರ್ಪೂರ, ಜೀರಿಗೆ, ಮುಂತಾದುವು (ಆನಂದ ಸಹಿತ ಪುರುಷೋತ್ತಮ)

24
ವೀಳ್ಯದೆಲೆ (ಶ್ರೀಹರಿ)

25
ಪಾನಕ - ನಿಂಬೆ (ವಿಶ್ವ)

ವಿಷಯಸೂಚಿ :


1.
ಕೆಲವು ಸಂಪ್ರದಾಯಗಳಲ್ಲಿ ತುಪ್ಪವನ್ನು ಭೋಜನಾರಂಭಕ್ಕೆ ಮುಂಚಿತವಾಗಿ ಬಡಿಸುವುದು ರೂಢಿಯಲ್ಲಿದೆ. ಈ ಕ್ರಮವನ್ನು ಪಾತ್ರಾಭಿಗಾರ ಎನ್ನುತ್ತಾರೆ.

2.
ಬಡಿಸುವವರು ಭೋಜನ ಮಾಡುವವರ ಎದುರಿನಿಂದ ಬಡಿಸಬೇಕು.

ಸರ್ವಜನ ಸುಖಿನೋಭವಂತು

ಕೃಷ್ಣಾರ್ಪಣಮಸ್ತು

 

METHOD OF SERVING IN BANANA or PLANTAIN LEAF:

    The broader side of a leaf is to be placed on the right since right hands is used to eat and it would be easy to have the wider part for eating.

    A traditional meal starts off by serving water. Leaf is washed remove dust.

    With main dishes like rice, chapati served on the lower side of the leaf and side dish on the top of the leaf.

    Salt is served first followed by sweet, pickle, fruit, Vegetable gravy dishes, fry, Papad and other crispies like Vada all have their own places reserved on the banana leaf.

    On the bottom of the leaf rice is served followed by Dal with Ghee, Sambar, next Mor kuzhambu, Vatral kuzhambu and Rasam in sequence aids in digestion. Just before curds payasam/ desserts is served.

    As a Final touch close with banana and betel leaves with nuts and Calcium carbonate as an aid for digestion.

    There is also a procedure to conclude your lunch after you complete always close the top leaf side over lower leaf side.

Advantages of using Banana or Plantain Leaf

  1. Consuming food in plantain leaf itself has more benefits that to if the food is hot has more beneficiaries.

  2. Cooking food with Banana leaf either by Steaming or topping or wrapping confers aroma to the food.

  3. Cooking food with Banana imparts 99% chlorophyll content to the dish and avoids early spoiling of the food.

  4. Chlorophyll in the leaf helps to purify blood, relieves organ engorgement and helps in toning organs both internally and externally.

  5. The Banana leaf also kills various bacteria and germs in the food thus preventing us from various diseases.

  6. When the food is eaten in Banana leaves stimulates the taste bud and soothens digestive system and cures ulcers.

  7. Eating food in Banana leaf helps to overcome signs of ageing like Graying of Hair.

  8. Banana Leaf is a best medicine for burns are packed with leaf to reduce the impact.

  9. When infants suffers Vitamin D deficiency they are massaged with Gingely oil and made to lie down under rising sun with banana leaf covered over them. This helps to protect them from skin disease and sun burns.

  10. In case of any injury, skin lesions apply a wet cloth with Banana leaf on top it also helps in curing tumor, ulcers.

  11. Small pox, Bed sore rub honey on Banana leaf and made to lie on the leaf.

  12. Of all Eating in Plantain Leaf helps to improve the Life Span. 

     

                                               ------------ Hari Om ----------- 



Thursday, August 6, 2020

Sri Raghavendra Pahi Prabho


Sri Raghavendra Pahi prabho



Sri Ragavendra Swamy


Sri Raghavendra Pahi prabho


ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಆನಂದರೂಪಾಯ ನಂದಾತ್ಮಜ ಶ್ರೀಪದಾಂಭೋಜಭಾಜೇ ನಮಸ್ತೇ ಗುರೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಇಷ್ಟಪ್ರದಾನೇನ ಕಷ್ಟಪ್ರಹಾಣೇನ ಶಿಷ್ಟಸ್ತುತ ಶ್ರೀಪದಾಂಭೋಜ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಈಡೇ ಭವತ್ಪಾದ ಪಾಥೋಜಮಾಧ್ಯಾಯ ಭೂಯೋಽಪಿ ಭೂಯೋ ಭಯಾತ್ ಪಾಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಉಗ್ರಂ ಪಿಶಾಚಾದಿಕಂ ದ್ರಾವಯಿತ್ವಾಶು ಸೌಖ್ಯಂ ಜನಾನಾಂ ಕರೋಶೀಷ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಊರ್ಜತ್ ಕೃಪಾಪೂರ ಪಾಥೋನಿಧೇಮಂಕ್ಷು ತುಷ್ಟೋಽನುಗೃಹ್ಣಾಸಿ ಭಕ್ತ್ವಾನ್ ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಋಜೂತ್ತಮ ಪ್ರಾಣ ಪಾದಾರ್ಚನಪ್ರಾಪ್ತ ಮಾಹಾತ್ಮ್ಯ ಸಂಪೂರ್ಣ ಸಿದ್ಧೇಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಋಭುಸ್ವಭಾವಾಪ್ತ ಭಕ್ತೇಷ್ಟಕಲ್ಪದ್ರು ರೂಪೇಶ ಭೂಪಾದಿ ವಂದ್ಯ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ೠದ್ಧಂ ಯಶಸ್ತೇ ವಿಭಾತಿ ಪ್ರಕೃಷ್ಟಂ ಪ್ರಪನ್ನಾರ್ತಿಹಂತರ್ಮಹೋದಾರ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಕ್ಲಿಪ್ತಾತಿ ಭಕ್ತೌಘ ಕಾಮ್ಯಾರ್ಥ ದಾತರ್ಭವಾಂಬೋಧಿ ಪಾರಂಗತ ಪ್ರಾಜ್ಞ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೦ ||

ಏಕಾಂತ ಭಕ್ತಾಯ ಮಾಕಾಂತ ಪಾದಾಬ್ಜ ಉಚ್ಚಾಯ ಲೋಕೇ ನಮಸ್ತೇ ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೧ ||

ಐಶ್ವರ್ಯಭೂಮನ್ ಮಹಾಭಾಗ್ಯದಾಯಿನ್ ಪರೇಶಾಂ ಚ ಕೃತ್ಯಾದಿ ನಾಶಿನ್ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೨ ||



ಓಂಕಾರ ವಾಚ್ಯಾರ್ಥಭಾವೇನ ಭಾವೇನ ಲಬ್ಧೋದಯ ಶ್ರೀಕ ಯೋಗೀಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೩ ||

ಔರ್ವಾನಲಪ್ರಖ್ಯ ದುರ್ವಾದಿದಾವಾನಲೈಃ ಸರ್ವತಂತ್ರ ಸ್ವತಂತ್ರೇಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೪ ||

ಅಂಭೋಜಸಂಭೂತಮುಖ್ಯಾಮರಾರಾಧ್ಯ ಭೂನಾಥ ಭಕ್ತೇಶ ಭಾವಜ್ಞ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೫ ||

ಅಸ್ತಂಗತಾನೇಕಮಾಯಾದಿ ವಾದೀಶ ವಿದ್ಯೋತಿತಾಶೇಷ ವೇದಾಂತ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೬ ||

ಕಾಮ್ಯಾರ್ಥದಾನಾಯ ಬದ್ಧಾದರಾಶೇಷ ಲೋಕಾಯ ಸೇವಾನುಸಕ್ತಾಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೭ ||

ಖದ್ಯೋತಸಾರೇಷು ಪ್ರತ್ಯರ್ಥಿಸಾರ್ಥೇಶು ಮಧ್ಯಾಹ್ನ ಮಾರ್ತಾಂಡ ಬಿಂಬಾಭ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೮ ||

ಗರ್ವಿಷ್ಠ ಗರ್ವಾಂಬುಶೋಷಾರ್ಯಮಾತ್ಯುಗ್ರ ನಮ್ರಾಂಬುಧೇರ್ಯಾಮಿನೀ ನಾಥ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೯ ||

ಘೋರಾಮಯಧ್ವಾಂತ ವಿಧ್ವಂಸನೋದ್ದಾಮ ದೇದೀಪ್ಯ ಮಾನಾರ್ಕ ಬಿಂಬಾಭ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೦ ||

ಙಣತ್ಕಾರದಂಡಾಂಕ ಕಾಷಾಯವಸ್ತ್ರಾಂಕ ಕೌಪೀನ ಪೀನಾಂಕ ಹಂಸಾಂಕ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೧ ||

ಚಂಡೀಶ ಕಾಂಡೇಶ ಪಾಖಂಡ ವಾಕ್ಕಾಂಡ ತಾಮಿಶ್ರಮಾರ್ತಾಂಡ ಪಾಷಂಡ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೨ ||

ಛದ್ಮಾಣುಭಾಗಂ ನವಿದ್ಮಸ್ತ್ವದಂತಃ ಸುಸದ್ಮೈವ ಪದ್ಮಾವಧಸ್ಯಾಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೩ ||

ಜಾಡ್ಯಂಹಿನಸ್ತ್ವಿಜ್ವರಾರ್ಶಃಕ್ಷಯಾದ್ಯಾಶು ತೇ ಪಾದ ಪದ್ಮಾಂಬುಲೇಶೋಽಪಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೪ ||




ಝಶಧ್ವಜೀಯೇಷ್ವಲಭ್ಯೋರುಚೇತಃ ಸಮಾರೂಢಮಾರೂಢ ವಕ್ಷೋಂಗ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೫ ||

ಞಾಂಚಾವಿಹೀನಾಯ ಯಾದೃಚ್ಛಿಕ ಪ್ರಾಪ್ತ ತುಷ್ಟಾಯ ಸದ್ಯಃ ಪ್ರಸನ್ನೋಽಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೬ ||

ಟೀಕಾರಹಸ್ಯಾರ್ಥ ವಿಖ್ಯಾಪನಗ್ರಂಥ ವಿಸ್ತಾರ ಲೋಕೋಪಕರ್ತಃ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೭ ||

ಠಂಕುರ್ವರೀಣಾಮ ಮೇಯಪ್ರಭಾವೋದ್ಧರಾಪಾದ ಸಂಸಾರತೋ ಮಾಂ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೮ ||

ಡಾಕಿನ್ಯಪಸ್ಮಾರ ಘೋರಾಧಿಕೋಗ್ರ ಗ್ರಹೋಚ್ಚಾಟನೋದಗ್ರ ವೀರಾಗ್ರ್ಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೯ ||

ಢಕ್ಕಾಧಿಕಧ್ವಾನ ವಿದ್ರಾವಿತಾನೇಕ ದುರ್ವಾದಿಗೋಮಾಯು ಸಂಘಾತ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೦ ||

ಣಾತ್ಮಾದಿಮಾತ್ರರ್ಣಲಕ್ಷ್ಯಾರ್ಥಕ ಶ್ರೀಪತಿಧ್ಯಾನಸನ್ನದ್ಧಧೀಸಿದ್ಧ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೧ ||

ತಾಪತ್ರಯ ಪ್ರೌಢ ಬಾಧಾಭಿಭೂತಸ್ಯ ಭಕ್ತಸ್ಯ ತಾಪತ್ರಯಂ ಹಂಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೨ ||

ಸ್ಥಾನತ್ರಯಪ್ರಾಪಕಜ್ಞಾನದಾತಸ್ತ್ರಿಧಾಮಾಂಘ್ರಿಭಕ್ತಿಂ ಪ್ರಯಚ್ಛ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೩ ||

ದಾರಿದ್ರ್ಯ ದಾರಿದ್ರ್ಯ ಯೋಗೇನ ಯೋಗೇನ ಸಂಪನ್ನ ಸಂಪತ್ತಿ ಮಾ ದೇಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೪ ||

ಧಾವಂತಿ ತೇ ನಾಮಧೇಯಾಭಿ ಸಂಕೀರ್ತನೇನೈನ ಸಾಮಾಶು ವೃಂದಾನಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೫ ||

ನಾನಾ ವಿಧಾನೇಕ ಜನ್ಮಾದಿ ದುಃಖೌಘತಃ ಸಾಧ್ವಸಂಸಂಹರೋದಾರ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೬ ||



ಪಾತಾ ತ್ವಮೇವೇತಿ ಮಾತಾ ತ್ವಮೇವೇತಿ ಮಿತ್ರಂ ತ್ವಮೇವೇತ್ಯಹಂ ವೇದ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೭ ||

ಫಾಲಸ್ಥದುರ್ದೈವವರ್ಣಾವಳೀಕಾರ್ಯಲೋಪೇಽಪಿ ಭಕ್ತಸ್ಯ ಶಕ್ತೋಽಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೮ ||

ಬದ್ಧೋಸ್ಮಿ ಸಂಸಾರ ಪಾಶೇನ ತೇಽಂಘ್ರಿಂ ವಿನಾನ್ಯಾ ಗತಿರ್ನೇತ್ಯಮೇಮಿ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೯ ||

ಭಾವೇ ಭಜಾಮೀಹ ವಾಚಾ ವದಾಮಿ ತ್ವದೀಯಂ ಪದಂ ದಂಡವನ್ನೌಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೦ ||

ಮಾನ್ಯೇಷು ಮಾನ್ಯೋಽಸಿ ಮತ್ಯಾ ಚ ಧೃತ್ಯಾ ಚ ಮಾಮದ್ಯಮಾನ್ಯಂ ಕುರುದ್ರಾಗ್ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೧ ||

ಯಂಕಾಮಮಾಕಾಮಯೇ ತಂ ನ ಚಾಪಂ ತತಸ್ತ್ವಂ ಶರಣ್ಯೋ ಭವೇತ್ಯೇಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೨ ||

ರಾಜಾದಿ ವಶ್ಯಾದಿ ಕುಕ್ಷಿಂಭರಾನೇಕಚಾತುರ್ಯವಿದ್ಯಾಸು ಮೂಢೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೩ ||

ಲಕ್ಷ್ಯೇಶು ತೇ ಭಕ್ತವರ್ಗೇಶು ಕುರ್ವೇಕಲಕ್ಷ್ಯಂ ಕೃಪಾಪಾಂಗಲೇಶಸ್ಯ ಮಾಂ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೪ ||

ವಾರಾಂಗನಾದ್ಯೂತಚೌರ್ಯಾನ್ಯ ದಾರಾರತತ್ವಾದ್ಯವದ್ಯತ್ವತೋ ಮಾಂ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೫ ||

ಶಕ್ತೋ ನ ಶಕ್ತಿಂ ತವ ಸ್ತೋತುಮಾಧ್ಯಾತುಮೀದೃಕ್ವಹಂ ಕರೋಮೀಶ ಕಿಂ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೬ ||

ಷಡ್ವೈರಿವರ್ಗಂ ಮಮಾರಾನ್ನಿರಕುರ್ವಮಂದೋಹರೀರಾಂಘ್ರಿರಾಗೋಽಸ್ತುಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೭ ||

ಸನ್ಮಾರ್ಗಸಚ್ಛಾಸ್ತ್ರ ಸತ್ಸಂಗ ಸದ್ಭಕ್ತಿ ಸುಜ್ಞಾನ ಸಂಪತ್ತಿ ಮಾದೇಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೮ ||



ಹಾಸ್ಯಾಸ್ಪದೋಽಹಂ ಸಮಾನೇಷ್ಟಕೀರ್ತ್ಯಾ ತಂವಾಂಘ್ರಿಂ ಪ್ರಪನ್ನೋಽಸ್ಮಿ ಸಂರಕ್ಷ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೯ ||

ಲಕ್ಷ್ಮೀ ವಿಹೀನತ್ವ ಹೇತೋಃ ಸ್ವಕೀಯೈಃ ಸುದೂರೀಕೃತೋಸ್ಮ್ಯದ್ಯ ವಾಚ್ಯೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೫೦ ||

ಕ್ಷೇಮಂಕರಸ್ತ್ವಂ ಭವಾಂಭೋಧಿ ಮಜ್ಜಜ್ಜನಾನಾಮಿತಿ ತ್ವಾಂ ಪ್ರಪನ್ನೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೫೧ ||

ಕೃಷ್ಣಾವಧೂತೇನ ಗೀತೇನ ಮಾತ್ರಕ್ಷರಾದ್ಯೇನ ಗಾಥಾಸ್ತವೇನೇಢ್ಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೫೨ |


Sri Raghavendra swamy


--------- Hari Om ----------

Wednesday, July 1, 2020

Ashada Ekadsi

 


Ashada Ekadasi 
 



ನ ಭೋಕ್ತವ್ಯಂ ನ ಭೋಕ್ತವ್ಯಂ ನ ಭೋಕ್ತವ್ಯಂ ಹರೇರ್ದಿನೇ ಹರಿದಿನದೊಳು ಉಂಡವಗೆ ನರಕ ತಪ್ಪದು

ಇಂದು ಪ್ರಥಮ ಏಕಾದಶೀ.ಇದನ್ನು ಶಯನೀ ಏಕಾದಶೀ ಎಂದೂ ಪದ್ಮಾ ಏಕಾದಶೀ ಎಂದೂ ಕರೆಯುವುದುಂಟು.

ಆಷಾಢ ಏಕಾದಶಿಯನ್ನು ಶಯನೀ ಏಕಾದಶಿ ಎನ್ನುವರು , ಕಾರಣ ವಿಷ್ಣು ಇನ್ನು ನಾಲ್ಕು ತಿಂಗಳು ಯೋಗನಿದ್ರೆಗೆ ಜಾರುವನು ,ಅದಕ್ಕಾಗಿ ಅದನ್ನು ಶಯನೀ ಏಕಾದಶಿ ಎನ್ನುವರು ,ಈ ದಿನ ಭಗವಂತನು ಪ್ರಪಂಚ ದೃಷ್ಟಿಯಲ್ಲಿ ಮಲಗಿದಂತೆ ಅನುಸಂಧಾನ ಮಾಡುವರು. ಈ ಏಕಾದಶಿಯನ್ನು ಮಾಡಿದರೆ ಸಂಪತ್ತನ್ನು ಭಾಗ್ಯವನ್ನು ಪಡೆಯುತ್ತಾರೆ , ದುಃಖ ದೂರವಾಗುತ್ತದೆ.....

ಮೊದಲು ಏಕಾದಶಿಯ ಮಹತ್ವವೇನು ? ಏಕಾದಶಿಯ ದಿನ ಯಾಕೆ ಉಪವಾಸ ಮಾಡಬೇಕು ? ಮತ್ತು ಏನು ಫಲ ? ಎಂದು ಅರಿಯೋಣ.

ಪ್ರಾಚೀನ ಕಾಲದಲ್ಲಿ "ಮುರ" ಎಂಬ ರಾಕ್ಷಸನಿದ್ದ .ಇವನು ಇಂದ್ರಾದಿ ದೇವತೆಗಳನ್ನೆಲ್ಲಾ ಸೋಲಿಸಿದನು. ಆಗ ದೇವತೆಗಳೆಲ್ಲಾ ಒಟ್ಟಾಗಿ ಕ್ಷೀರಸಾಗರದಲ್ಲಿ ಮಲಗಿದ್ದ ಶ್ರೀಮನ್ನಾರಾಯಣನನ್ನು ಮುರನಿಂದ ತಮ್ಮನ್ನು ರಕ್ಷಿಸುವಂತೆ ಬ್ರಹ್ಮದೇವರ ಮೂಲಕ ಪ್ರಾರ್ಥಿಸಿದರು.

ಆಗ ದೇವತೆಗಳ ಪ್ರಾರ್ಥನೆಯಂತೆ ಶ್ರೀಹರಿಯು ತನ್ನ ದಿವ್ಯ ಬಾಣಗಳು ಹಾಗೂ ಚಕ್ರವನ್ನು ಮುರಾಸುರನ ಮೇಲೆ ಪ್ರಯೋಗಿಸಿದನು. ಇದರಿಂದ ಮುರಾಸುರನನ್ನು ಬಿಟ್ಟು ಉಳಿದೆಲ್ಲ ರಾಕ್ಷಸರು ಹತರಾದರು . ಶ್ರೀಹರಿಯು ಬದರಿಕಾಶ್ರಮಕೆ ಹೋಗಿ ಅಲ್ಲಿದ್ದ ಒಂದು ಗುಹೆಯಲ್ಲಿ ಮಲಗಿಬಿಟ್ಟರು. ಮುರನು ವಿಷ್ಣುವನ್ನು ಕೊಲ್ಲಲು ಅಲ್ಲಿಗೆ ಬಂದನು. ಆಗ ಭಗವಂತನ ತೇಜಾಂಶದಿಂದ ಅಸ್ತ್ರ ಶಸ್ತ್ರ ಸಜ್ಜಿತಳಾದ ಒಂದು ಕನ್ಯೆಯ ಅವತಾರವಾಯಿತು. ಮುರನಿಗೂ ಆಕೆಗೂ ಯುದ್ಧವಾಯಿತು. ಆಕೆಯ ಒಂದೇ ಹೂಂಕಾರಕ್ಕೆ ಸುಟ್ಟು ಭಸ್ಮನಾದ ಮುರಾಸುರ.ಇದರಿಂದ ಸಂತೋಷಗೊಂಡ ಶ್ರೀಹರಿಯು ಆಕೆಯು ಬೇಡಿದಂತೆ ವರ ಕರುಣಿಸಿದನು.

ಆಕೆಯೇಸಾಕ್ಷಾತ್ಏಕಾದಶೀ

ಆಕೆಯು ಪರಮಾತ್ಮನಲ್ಲಿ ಭಯ ಭಕ್ತಿಯಿಟ್ಟು ತನ್ನದಿನದಂದು ಉಪವಾಸ ಮಾಡಿದರೆ ಅವರ ಪಾಪಗಳನ್ನೆಲ್ಲಾ ಕಳೆದು ಮೊಕ್ಷ ಕರುಣಿಸುವಂತೆ ಕೋರಿಕೊಂಡಳು. ಅದಕ್ಕಾಗಿಯೇ ಎರಡೂ ಪಕ್ಷಗಳ ಏಕಾದಶಿಗಳು ಪಾಪನಾಶಕಗಳು .ಆದ್ದರಿಂದ ಏಕಾದಶಿಯ ಉಪವಾಸ ಅತ್ಯಂತ ಶ್ರೇಷ್ಠವಾದದ್ದು . ಆದಿನ ಉಪವಾಸ ಮಾಡಿ ಶ್ರೀಮನ್ನಾರಾಯಣನ ಸ್ಮರಣೆ, ದ್ವಾದಶಿಯ ಪಾರಣೆ ಮಾಡಿದರೆ ಕಲಿಯ ದೋಷ ಪರಿಹಾರ .‌‌‌..

ಆಷಾಡಏಕಾದಶೀಮಾಹಾತ್ಮೆ


ಒಮ್ಮೆ ನಾರದರು ತನ್ನ ತಂದೆಯಾದ ಚತುರ್ಮುಖ ಬ್ರಹ್ಮದೇವರ ಕುರಿತು ಆಷಾಢ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಏಕಾದಶಿಯ ಮಹಿಮೆಯನ್ನು ಹೇಳಬೇಕಾಗಿ ಬೇಡಿಕೊಂಡರು. ಆಗ ಬ್ರಹ್ಮದೇವರು ನಾರದರನ್ನು ಕುರಿತು – ಹೇ ವಿಷ್ಣುಭಕ್ತರಲ್ಲಿ ಶ್ರೇಷ್ಠನಾದ ನಾರದನೇ – ಸಕಲ ಲೋಕದಲ್ಲಿಯೂ ಏಕಾದಶೀ ವ್ರತಕ್ಕಿಂತ ಶ್ರೇಷ್ಠವಾದ ಬೇರೊಂದು ಪವಿತ್ರವಾದ ವ್ರತವಿಲ್ಲ, ಆದುದರಿಂದ ಸರ್ವಪಾಪಗಳ ನಿವೃತ್ತಿಗಾಗಿ ಪ್ರಯತ್ನಪೂರ್ವಕ ಏಕಾದಶೀ ವ್ರತವನ್ನು ಆಚರಿಸಬೇಕು. ಏಕಾದಶ್ಯಾಂ ವ್ರತಂ ಪುಣ್ಯಂ ಪಾಪಘ್ನಂ ಸರ್ವಕಾಮದಮ್ | ನ ಕೃತಂ ಯೈರ್ನರೈರ್ಲೋಕೇ ತೇ ನರಾ ನಿರಯೈಷಿಣಃ || ಪಾಪಗಳನ್ನು ನಾಶಮಾಡುವಂತಹ, ಸಕಲ ಕಾಮನೆಗಳನ್ನು ತಂದುಕೊಡುವಂತಹ ಏಕಾದಶೀ ಎಂಬ ಪುಣ್ಯವ್ರತವನ್ನು ಈ ಲೋಕದಲ್ಲಿ ಯಾರು ಆಚರಿಸುವುದಿಲ್ಲವೋ ಅವರು ನರಕವನ್ನು ಸೇರುತ್ತಾರೆ. ಹೀಗೆ ಏಕಾದಶೀ ಉಪವಾಸದ ಮಹತ್ತ್ವವನ್ನು ವರ್ಣಿಸಿ, ಪದ್ಮಾ ಎಂಬ ಹೆಸರುಳ್ಳ ಶ್ರೀಹರಿಯ ಅತ್ಯಂತ ಪ್ರೀತಿಗೆ ಪಾತ್ರವಾದಂಥಹ ಈ ಏಕಾದಶಿಯ ಕುರಿತ ಪೌರಾಣಿಕವಾದ ಐತಿಹ್ಯವನ್ನು ಬ್ರಹ್ಮದೇವರು ಹೇಳಿದರು. ಈ ಪುರಾಣಕಥಾ ಶ್ರವಣ ಮಾತ್ರದಿಂದ ಮಹಾಪಾಪಗಳು ನಾಶವಾಗಿ ಸದ್ಗತಿ ದೊರಕುತ್ತದೆ. ಹಿಂದೆ ಕೃತಯುಗದಲ್ಲಿ ವೈವಸ್ವತಮನುವಿನ ವಂಶದಲ್ಲಿ ಮಹಾಧರ್ಮಿಷ್ಠನಾದ ಮಾಂಧಾತಾ ಎಂಬ ರಾಜನು ಚಕ್ರವರ್ತಿಯಾಗಿ ಭೂಮಿಯನ್ನು ಆಳುತ್ತಿದ್ದನು. ಮಹಾ ಪರಾಕ್ರಮಿಯೂ, ಸತ್ಯನಿಷ್ಠನೂ ಆದ ಆ ರಾಜರ್ಷಿಯು ತನ್ನ ಪ್ರಜೆಗಳನ್ನು ಮಕ್ಕಳ ಹಾಗೆ ಪರಿಪಾಲಿಸುತ್ತಿದ್ದನು. ಅವನ ರಾಜ್ಯದಲ್ಲಿ ಪ್ರಜೆಗಳೆಲ್ಲರೂ ನಿರಾತಂಕರಾಗಿ, ಧರ್ಮದಿಂದ ಸಮೃದ್ಧ ಜೀವನ ನಡೆಸುವವರಾಗಿದ್ದರು. ದುರ್ಭಿಕ್ಷೆಯಾಗಲಿ ಆಧಿವ್ಯಾಧಿಗಳ್ಯಾವುವೂ ಅವನ ರಾಜ್ಯದಲ್ಲಿ ಇರಲಿಲ್ಲ. ಒಮ್ಮೆ ಮಾಂಧಾತಾ ರಾಜನ ರಾಜ್ಯದಲ್ಲಿ ವಿಧಿವಶಾತ್ ಎಂಬಂತೆ ಭಯಂಕರವಾದ ಮೂರು ವರ್ಷಗಳಷ್ಟು ದೀರ್ಘಕಾಲ ಬರಗಾಲ ಬಿದ್ದಿತು. ಮಳೆ-ಬೆಳೆಗಳಿಲ್ಲದೇ ಪ್ರಜೆಗಳಲ್ಲಿ ಹಾಹಾಕಾರ ಉಂಟಾಯಿತು. ಹಸಿವೆ ನೀರಡಿಕೆಯಿಂದ ಪೀಡಿತರಾಗಿ ಜನ ರಾಜನ ಮೊರೆ ಹೊಕ್ಕರು.



ಹೇ ರಾಜನೇ – ಪರ್ಜನ್ಯರೂಪಿಯಾದ ಭಗವಾನ್ ವಿಷ್ಣುವು ಸದಾ ಸರ್ವತ್ರ ವ್ಯಾಪ್ತನಾಗಿರುವನು, ಅವನೇ ಮಳೆಯನ್ನು, ಮಳೆಯಿಂದ ಬೆಳೆಗಳನ್ನು ಮತ್ತು ಬೆಳೆಗಳಿಂದ ಪ್ರಜೆಗಳನ್ನು ಸೃಷ್ಟಿಮಾಡುವನು. ಮಳೆಯ ಅಭಾವದಿಂದ ಪ್ರಜೆಗಳ ನಾಶವಾಗುತ್ತಿರುವ ಕಾರಣ, ನೀನು ಏನಾದರೂ ಉಪಾಯವನ್ನು ಮಾಡು – ಎಂದು ಪ್ರಾರ್ಥಿಸಿಕೊಂಡರು. ಪ್ರಜಾಪಾಲಕನಾದ ರಾಜನು ಈ ಕ್ಷೋಭೆಯಿಂದ ಪರಿಹಾರದ ಶೋಧನೆಗಾಗಿ ಋಷಿಮುನಿಗಳ ಆಶ್ರಮಗಳನ್ನು ಅರಸುತ್ತಾ ಅರಣ್ಯಕ್ಕೆ ತೆರಳಿದನು. ಒಂದು ಪ್ರದೇಶದಲ್ಲಿ ಅತ್ಯಂತ ತೇಜೋರಾಶಿಯಂತಿರುವ ಪ್ರತಿಬ್ರಹ್ಮನ ಹಾಗೇ ಹೊಳೆಯುತ್ತಿರುವ ಬ್ರಹ್ಮದೇವರ ಮಗನಾದ ಅಂಗೀರಸ ಮುನಿಗಳನ್ನು ನೋಡಿದನು. ಅವರಿಂದ ಅನುಗ್ರಹ ಪಡೆಯಬೇಕೆಂದು ಇಚ್ಛಿಸಿ ಬಳಿ ಸಾರಿ ವಿನಯಪೂರ್ವಕವಾಗಿ ನಮಸ್ಕರಿಸಿ ನಿಂತುಕೊಂಡನು. ಚಕ್ರವರ್ತಿಯು ತನ್ನ ರಾಜ್ಯದಲ್ಲಿ ಉಂಟಾದ ಪ್ರಕೃತಿ ವಿಕೋಪದ ವಿಷಯವನ್ನು ಅಂಗೀರಸರಿಗೆ ತಿಳಿಸಿ ಸಮಾಧಾನವನ್ನು ಹೇಳಬೇಕೆಂದು ಕೇಳಿಕೊಂಡನು.



ಋಷಿಗಳು, ಮಾಂಧಾತ ರಾಜನೇ – ಈ ಕೃತಯುಗವು ಯುಗಗಳಲ್ಲಿ ಶ್ರೇಷ್ಠವಾಗಿದೆ, ಈ ಯುಗದಲ್ಲಿ ಎಲ್ಲರೂ ಬ್ರಹ್ಮನನ್ನು ಕುರಿತು ಉಪಾಸನೆಯನ್ನು ಮಾಡುವುದರಿಂದ ಧರ್ಮವು ನಾಲ್ಕೂ ಚರಣಗಳಿಂದ ಯುಕ್ತವಾಗಿದೆ. ಬ್ರಾಹ್ಮಣರು ಮಾತ್ರ ವೈದಿಕ ಮಾರ್ಗದಿಂದ ತಪವನ್ನಾಚರಿಸುವುದು ಈ ಯುಗಧರ್ಮ, ಆದರೆ ಇದಕ್ಕೆ ವಿರುದ್ಧವಾಗಿ ನಿನ್ನ ರಾಜ್ಯದಲ್ಲಿ ವಿಧರ್ಮಿಯಾದ ವೃಷಲನೆಂಬ ಅಂತ್ಯಜನು ಅನ್ಯಾಯವನ್ನು ಬಯಸಿ ತಪಸ್ಸನ್ನಾಚರಿಸುತ್ತಿರುವುದು ಈ ಕ್ಷಾಮಕ್ಕೆ ಕಾರಣವಾಗಿದೆ. ಅವನ ನಿವಾರಣೆಯಾದರೆ ಕ್ಷಾಮ ಕಳೆದು ಪುನಃ ಸುಭೀಕ್ಷವುಂಟಾಗುತ್ತದೆ ಎಂದು ಹೇಳಿದರು. ರಾಜನು, ನಿರಪರಾಧಿಯಾದ ಮತ್ತು ತಪಸ್ಸನ್ನಾಚರಿಸುತ್ತಿರುವ ಅವನನ್ನು ತಾನು ನಿವಾರಿಸಲಾರೆ, ಆದ್ದರಿಂದ ಇನ್ನೇನಾದರೂ ಪರ್ಯಾಯ ಧರ್ಮೋಪಾಯವನ್ನು ತಿಳಿಸಬೇಕೆಂದು ಬೇಡಿಕೊಂಡನು. ರಾಜನ ಕ್ಷಮಾಗುಣ ಮತ್ತು ಧರ್ಮಬುದ್ಧಿಯಿಂದ ಅಂಗೀರಸರು ಪ್ರಸನ್ನರಾಗಿ, ಹೇ ರಾಜನೇ ಆಷಾಢ ಮಾಸದ ಶುಕ್ಲಪಕ್ಷದಲ್ಲಿ ಬರುವ ಪದ್ಮಾನಾಮಕ ಏಕಾದಶಿಯ ವ್ರತವನ್ನು ನೀನು ಪರಿವಾರ ಪ್ರಜಾ ಸಹಿತನಾಗಿ ಕ್ಷಾಮ ಪರಿಹಾರಕ್ಕಾಗಿಯೇ ಸಂಕಲ್ಪಿಸಿ ಮಾಡುವಿಯಾದರೆ ಕ್ಷಾಮವು ನೀಗಿ ನಿನ್ನ ರಾಜ್ಯದಲ್ಲಿ ಮೊದಲಿನಂತೆ ಸುಭೀಕ್ಷ ಉಂಟಾಗುತ್ತದೆ, ಹೇಗೆಂದರೆ ಈ ಏಕಾದಶಿಯು – ಸರ್ವಸಿದ್ಧಿಪ್ರದಾ ಹ್ಯೇಷಾ ಸರ್ವೋಪದ್ರವನಾಶಿನೀ | ಸರ್ವಸಿದ್ಧಿಯನ್ನು ಕೊಡುವುದು ಮತ್ತು ಎಲ್ಲ ಉಪದ್ರವಗಳನ್ನು ನಾಶಮಾಡುವಂತಹದ್ದಾಗಿದೆ, ಆದ್ದರಿಂದ ನೀನು ಈ ವ್ರತವನ್ನು ಖಂಡಿತವಾಗಿ ಮಾಡು ಎಂದು ಉಪದೇಶವನ್ನು ಕೊಟ್ಟರು. ಈ ಪ್ರಕಾರ ಅಂಗೀರಸರಿಂದ ಉಪದೇಶ ಪಡೆದವನಾಗಿ ರಾಜನು ತನ್ನ ರಾಜ್ಯಕ್ಕೆ ತೆರಳಿ, ಆಷಾಢ ಪ್ರಾಪ್ತವಾಗಲು ಸಮಸ್ತ ಪ್ರಜಾಜನ ಮತ್ತು ಪರಿವಾರ ಸಮೇತ ಈ ಏಕಾದಶೀ ವ್ರತವನ್ನು ವಿಧಿವತ್ತಾಗಿ ಸಂಕಲ್ಪಿಸಿ ಮಾಡಿದನು. ಶೀಘ್ರವಾಗಿ ವ್ರತಪ್ರಭಾವದಿಂದ ರಾಜ್ಯದಲ್ಲಿ ಸುವೃಷ್ಟಿಯಾಯಿತು ಮತ್ತು ಅವನ ರಾಜ್ಯ ಪುನಃ ಸಂಪದ್ಭರಿತವಾಯಿತು. ಈ ಕಾರಣದಿಂದಲೇ ಶ್ರೇಷ್ಠವಾದ ಈ ಪದ್ಮಾವ್ರತವನ್ನು ಆಚರಿಸಬೇಕು. ಈ ವ್ರತವು ಭುಕ್ತಿ ಮುಕ್ತಿ ಪ್ರದವೂ, ಜನರಿಗೆ ಸುಖದಾಯಕವೂ ಆಗಿದೆ. ಈ ವ್ರತದ ಮಹಾತ್ಮೆಯ ಪಠನ ಹಾಗೂ ಶ್ರವಣಗಳಿಂದ ಸರ್ವಪಾಪಗಳೂ ನಾಶವಾಗುತ್ತವೆ. ಇತಿ ಆಷಾಢ ಏಕಾದಶೀ ವ್ರತ ಮಾಹಾತ್ಮ್ಯಮ್.


ಏಕಾದಶೀ ವ್ರತವನ್ನುಮಾಡುವಕ್ರಮ

ಮೊದಲನೆಯ ದಿನ ದಶಮಿಗೆ ಏಕಭುಕ್ತವಿರಬೇಕು.
ಏಕಾದಶಿಯಂದು ಪ್ರಾತಃಸ್ನಾನ ಮಾಡಿ ತುಳಸಿಯನ್ನು ಅರ್ಪಿಸಿ ವಿಷ್ಣುವಿನ ಪೂಜೆಯನ್ನು ಮಾಡಬೇಕು.


ಪೂರ್ಣದಿವಸ ಉಪವಾಸ ಮಾಡಬೇಕು. ರಾತ್ರಿ ಹರಿಭಜನೆಯೊಂದಿಗೆ ಜಾಗರಣೆ ಮಾಡಬೇಕು. ಆಷಾಢ ಶುಕ್ಲ ದ್ವಾದಶಿಗೆ ವಾಮನನನ್ನು ಪೂಜಿಸಿ ಪಾರಣೆ ಮಾಡಬೇಕು. ಈ ಎರಡೂ ದಿನಗಳಂದು ಶ್ರೀವಿಷ್ಣುವನ್ನು ‘ಶ್ರೀಧರ’ ಎನ್ನುವ ಹೆಸರಿನಿಂದ ಪೂಜಿಸಿ ಉಪವಾಸ ಮಾಡಿ ಭಗವಂತನಿಗೆ ಪೂಜೆ ಮಾಡಿ ತುಳಸಿಯಿಂದ ಅರ್ಚಿಸಿ , ಮಾರನೇಯ ದಿನ ದ್ವಾದಶಿ ಬೆಳಿಗ್ಗೆ ಪಾರಣೆಮಾಡಿದರೆ ಎಲ್ಲ ಕಷ್ಟಗಳೂ ಪರಿಹಾರವಾಗುವುದು. ಏಕಭುಕ್ತ ಈ ದಿನವೂ ಆವಶ್ಯಕ.






                                                         ----------- Hari Om ----------