Tuesday, February 23, 2021

Bhishma Ekadasi & Vishnu Sahasranama Jayanthi day - 23rd February 2021

 

 Bhishma Ekadasi & Vishnu Sahasranama Jayanthi day - 23rd February 2021

 

                                                            Sri Bhishmacharyaru 

ಭೀಷ್ಮ ಏಕಾದಶಿ ಅಂದೇ ವಿಷ್ಣು ಸಹಸ್ರನಾಮ ಜಯಂತಿ

on 23rd February 2021


Bhisma Ekadasi and Vishnu Sahasra Nama Jayanthi falls on 23rd February 2021

 

Bhishma informs the Power of Vishnu Sahasranama:



ಶ್ರೀವಿಷ್ಣು ಸಹಸ್ರನಾಮದ ಮಹತ್ವ:

ಸರ್ವಶ್ರೇಷ್ಠವಾದ ಶ್ರೀ ವಿಷ್ಣು ಸಹಸ್ರನಾಮ

. ವಿಷ್ಣು ಸ್ವತಃ ತನ್ನ ಹೆಸರಿನ ಅತೀಂದ್ರಿಯ ಧ್ವನಿಯಲ್ಲಿ ಸಂಪೂರ್ಣವಾಗಿ ಅಸ್ತಿತ್ವದಲ್ಲಿರುತ್ತಾನೆ. ಹಾಗಾಗಿ ವಿಷ್ಣುಸಹಸ್ರನಾಮವನ್ನು ಹೆಚ್ಚು ಹೆಚ್ಚು ಕಾಲ ಪಠಣಮಾಡಿದರೆ ಒಳ್ಳೆಯದು.

. ವಿಷ್ಣು ಸಹಸ್ರನಾಮದಲ್ಲಿ ಎಲ್ಲ ವೈದಿಕ ಮಂತ್ರಗಳನ್ನು ಸೇರಿಸಲಾಗುತ್ತದೆ. ಆದ್ದರಿಂದ ಈ ಮಂತ್ರವನ್ನು ಪಠಿಸುವ ಮೂಲಕ ಹೇಳುವವರಿಗೆ ಅಷ್ಟೇ ಅಲ್ಲ ಕೇಳುವವರು ಕೂಡ ಪ್ರಯೋಜನ ಪಡೆಯುತ್ತೀರಿ

. ವಿಷ್ಣುಸಹಸ್ರನಾಮ ಪಾರಾಯಣಕ್ಕೂ ಭೇದವೇನೂ ಇರುವದಿಲ್ಲ. ಹಾಗೆ ಪಠಣಕ್ಕಾಗಿ ಯಾವುದೇ ಕಠಿಣ ಮತ್ತು ವೇಗದ ನಿಯಮಗಳಿಲ್ಲ. ಯಾವುದೇ ಸಂದರ್ಭಗಳಲ್ಲಿ, ಯಾವುದೇ ಸಮಯದಲ್ಲಿ ನೀವು ಎಲ್ಲಿಯಾದರೂ ಪಠಿಸಬಹುದು.

. ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ನಿಮ್ಮ ಹಿಂದಿನ ಜನ್ಮದ ಕರ್ಮದ ಪ್ರತಿಕ್ರಿಯೆಗಳಿಂದ ನಿಮ್ಮನ್ನು ಮುಕ್ತಗೊಳಿಸುತ್ತದೆ.

. ವಿಷ್ಣು ಸಹಸ್ರನಾಮ ಪಠಿಸುವ ಭಕ್ತರಿಗೆ ಎಂದೂ ಭಯವಿಲ್ಲ. ಇದರಿಂದ ವಿಶೇಷ ಕಾಂತಿ, ವರ್ಚಸ್ಸು, ಆತ್ಮವಿಶ್ವಾಸ, ಮನೋಬಲ, ದೇಹಬಲ ಇಂದ್ರಿಯಬಲ ಹೆಚ್ಚಾಗಿ ಉತ್ತಮ ಆರೋಗ್ಯವನ್ನು ಪಡೆಯಬಹುದು.

. ವಿಷ್ಣುಸಹಸ್ರನಾಮವನ್ನು ಪ್ರತಿನಿತ್ಯ ಪಾರಾಯಣ ಮಾಡಿದರೆ ಜೀವನದಲ್ಲಿ ಬರುವ ಸಂಕಷ್ಟಗಳು ಪರಿಹಾರವಾಗುತ್ತವೆ.

. ಶುದ್ಧಮನದಿಂದ ವಿಷ್ಣುಸಹಸ್ರನಾಮವನ್ನು ಪಠಿಸಿದರೆ ಆಧ್ಯಾತ್ಮಿಕ, ಆಧಿದೈವಿಕ ಹಾಗೂ ಆಧಿಭೌತಿಕ ಪೀಡೆಗಳಿಗೆ ಪರಿಹಾರ ದೊರೆಯುತ್ತದೆ.

. ವಿಷ್ಣುಸಹಸ್ರನಾಮ ಅಂದರೆ ಮಹಾವಿಷ್ಣುವಿನ ಸಹಸ್ರನಾಮ ಪಠನ ಇದರಲ್ಲಿ ಅಲೌಕಿಕ ಶಕ್ತಿ ಇರುವುದನ್ನು ಅನೇಕ ಸಾಧಕರು ಕಂಡಿದ್ದಾರೆ, ಅನುಭವಿಸಿದ್ದಾರೆ. ವಿಷ್ಣುಸಹಸ್ರನಾಮ ಪಾರಾಯಣದಿಂದ ಕ್ಯಾನ್ಸೆರ್ ನಂತಹ ಭಯಂಕರ ಖಾಯಿಲೆಯಿಂದ ಹಿಡಿದು ಇನ್ನು ಇತರೆ ಕಾಯಿಲೆಗಳು ಕೂಡ ವಾಸಿಯಾಗುತ್ತವೆ.

. ಮನೆಯಲ್ಲಿ ಸಾಮೂಹಿಕ ಪಾರಾಯಣ ಪಠಿಸಿದರೆ ಮನೆಯ ವಾತವರಣವೇ ಬದಲಾಗುತ್ತದೆ. ಮನೆಯವ ಮೈಯಲ್ಲಿ ಮನಸ್ಸಲ್ಲಿ ಆಧ್ಯಾತ್ಮದ ಶಕ್ತಿಸಂಚಾರವಾದಂತಹ ಅನುಭವವಾಗುತ್ತದೆ. ಸಾಮೂಹಿಕ ಪಾರಾಯಣದಲ್ಲಿ ಅಂಥ ಒಂದು ವಿಶೇಷ ಶಕ್ತಿ ಇದೆ.

೧೦. ವಿಷ್ಣುಸಹಸ್ರನಾಮಕ್ಕೆ ಗಂಡಸು-ಹೆಂಗಸು-ಶೂದ್ರ-ಬ್ರಾಹ್ಮಣ ಎನ್ನುವ ಭೇದವಿಲ್ಲ. ಅದು ಎಲ್ಲಾ ವರ್ಣಾಶ್ರಮದವರಿಗೆ ಭಗವಂತ ನೀಡಿದ ಪಂಚಮ ವೇದ ಇದಾಗಿದೆ. ಹಾಗಾಗಿ ಈ ಸ್ತೋತ್ರವನ್ನು ಎಲ್ಲ ವರ್ಗದವರು ಮತ್ತು ಎಲ್ಲವಯಸ್ಸಿನವರು ಪಠಿಸಬಹುದಾಗಿದೆ.

11.
ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಭೇಟಿ ನೀಡಿ ನಾವಾಗಿಯೇ ಪರಣ ಮಾಡಿ ಬರಬಹುದು . ಸಮಯ ವಿಲ್ಲದವರು ತಮ್ಮ ತಮ್ಮ ಮನೆಯಲ್ಲಿಯೇ ನಿತ್ಯ ಪಠಣ ಮಾಡಿದರೆ ನಮಗೂ ಹಾಗು ನಮ್ಮ ಸುತ್ತ ಮುತ್ತಲಿನ ಪರಿಸರಕ್ಕೂ ವಿಶೇಷ ಶಕ್ತಿ ಪ್ರಾಪ್ತಿಯಾಗುವುದು.

12. *
ಪ್ರಾಕೃತಿಕ ಸಮತೋಲನಕ್ಕಾಗಿ,
ಗ್ರಾಮದ ಶಾಂತಿಗಾಗಿ,
ಕುಟುಂಬ ರಕ್ಷಣೆಗಾಗಿ, ನಮ್ಮೆಲ್ಲರ ಉನ್ನತಿಗಾಗಿ

ನಿತ್ಯ ಪಠಿಸೋಣ*
***

ಮನುಷ್ಯನ ಆಯಸ್ಸು ನೂರು ವರ್ಷ…

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
****

ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ .…


ತಿರುಚ್ಚಿಯ ಶ್ರೀರಂಗನಾಥ ದೇವಸ್ಥಾನ , ಅಲ್ಲಿ ಬೆಳಗಿನ ಪೂಜೆ ಆದ ಬಳಿಕ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದವನ್ನು ನೆರೆದ ಭಕ್ತರಿಗೆ ಹಂಚುವುದು ವಾಡಿಕೆ .ಹಾಗೆ ಅದನ್ನು ಸ್ವಕರಿಸಲು ಭಕ್ತರೆಲ್ಲರೂ ಸರದಿಯ ಸಾಲಿನಲ್ಲಿ ಬಂದು ಭಕ್ತಿಯಿಂದ ಸ್ವೀಕರಿಸುತ್ತಿದ್ದಾಗ ಕಡು ಬಡವ ಹಿರಿಯರೊಬ್ಬರು ಸರದಿಯ ಸಾಲಿನಲ್ಲಿ ನಿಲ್ಲದೆ ಎಲ್ಲರನ್ನು ದೂಡಿ ಮುಂದೆಹೋಗಿ ನಿಲ್ಲುತ್ತಿದ್ದರು ಅಲ್ಲದೆ ಕೈಯಲ್ಲಿ ದೊಡ್ಡದೊಂದು ಪಾತ್ರೆಯನ್ನು ಹಿಡಿದು ಪ್ರಸಾದವನ್ನು ಕೇಳುತ್ತಿದ್ದರು. ನಾನು ಬಡವ ನನಗೆ 6 ಜನ ಮಕ್ಕಳಿದ್ದಾರೆ , ಇದು ಸಿಗದಿದ್ದರೆ ಅವರೆಲ್ಲ ನಿರಾಹಾರರಾಗ ಬೇಕಾಗುತ್ತದೆ ಎನ್ನುತ್ತಾ ಪ್ರಸಾದವನ್ನು ಕೇಳಿ ಪಡೆಯುತ್ತಿದ್ದರು. ಆದರೆ ಇದು ಪ್ರಸಾದ ಹಂಚುವ ದೇವಸ್ಥಾನದವರಿಗೆ ಮುಜುಗರ ತರುತ್ತಿತ್ತು, ಹಾಗಾಗಿ ಅವರು ನೇರವಾಗಿ ಶ್ರೀ ರಾಮಾನುಜರ ಬಳಿ ದೂರು ಕೊಟ್ಟರು.


ಇದನ್ನು ಕೇಳಿದ ಶ್ರೀ ರಾಮಾನುಜರು ಆ ಬಡವನನ್ನು ನೋಡಿ ವಿಚಾರ ತಿಳಿಯಲೆಂದು ಒಂದು ದಿನ ಪ್ರಸಾದ ಹಂಚುವಲ್ಲಿಗೆ ಬಂದು ಆ ಬಡವ ಹಿರಿಯರನ್ನು ಕಂಡು ಯಾಕೆ ಹೀಗೆ ಮಾಡುತ್ತೀರಿ ಎನ್ನಲು . ಆ ಬಡವ ಹಿರಿಯರು ಸ್ವಾಮಿ ನಾನು ಬಡವ ನನಗೆ 6 ಜನ ಸಣ್ಣಸಣ್ಣ ಮಕ್ಕಳಿದ್ದಾರೆ , ಹೊಟ್ಟೆಗೆ ಗತಿಯಿಲ್ಲ ಹಾಗಾಗಿ ನಾನು ಎಲ್ಲರನ್ನು ಹಿಂದೆಹಾಕಿ ಮುಂದೆನಿಂತು ಪಾತ್ರೆಯಲ್ಲಿ ಪ್ರಸಾದ ಕೇಳುತ್ತೇನೆ. ಸಾಲಿನಲ್ಲಿ ನಿಂತರೆ ಎಲ್ಲಿ ಪ್ರಸಾದ ಖಾಲಿಯಾಗುತ್ತದೆಯೋ ಅನ್ನುವ ತವಕ..


ವಿಚಾರ ತಿಳಿದ ಶ್ರೀ ರಾಮಾನುಜರು ಆ ಹಿರಿಯರನ್ನು ನಿಮಗೆ ಶ್ರೀ ವಿಷ್ಣುಸಹಸ್ರನಾಮ ಹೇಳಲು ಬರುತ್ತದೆಯೋ ಅನ್ನಲು ಹಿರಿಯರು ನಾನು ಕಲಿತವನಲ್ಲ .. ಆದರೆ ಇಲ್ಲಿ ದೇವಸ್ಥಾನದಲ್ಲಿ ಅಲ್ಪ ಸ್ವಲ್ಪ ಕೇಳಿದ್ದೇನೆ.. ಶ್ರೀ ವಿಷ್ಣುಸಹಸ್ರನಾಮವನ್ನು…


ಹಾಗಾದರೆ ನಿನಗೆ ಬರುವಷ್ಟು ಹೇಳು ಅನ್ನಲು ಆತ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |
ಭೂತಕೃದ್ಭೂತಭೃದ್ಭಾವೋ ... ಅನ್ನುತ್ತಲೇ ಶ್ರೀರಾಮಾನುಜರು ಅಂದರೆ ನಿನಗೆ ಶ್ರೀ ವಿಷ್ಣುವಿನ ಸಾವಿರ ಹೆಸರಿನಲ್ಲಿ ಆರು ಹೆಸರು ಮಾತ್ರ ಬರುತ್ತದೆ .. ಹೌದು ನಾನು ಕಲಿತವನಲ್ಲ... ಆಗ ಶ್ರೀಪಾದರು ಅದಕ್ಕೇನು ಬೇಸರವಿಲ್ಲ ಅದರಲ್ಲಿ ಬರುವ ಆರನೆಯ ಹೆಸರು ಭೂತ-ಭೃತ್: ಅಂದರೆ ಎಲ್ಲಾ ಜೀವಿಗಳನ್ನು ಪೋಷಿಸುವವನು ಎಂದು , ನೀನು ಶ್ರದ್ದೆ ಮತ್ತು ಸಂಪೂರ್ಣ ಭಕ್ತಿಯಿಂದ ಆ ಆರನೆಯ ಹೆಸರನ್ನು ಜಪಮಾಡು ಅದರಿಂದ ನಿನ್ನ ಕಷ್ಟ ಪರಿಹಾರವಾಗುತ್ತದೆ ಎಂದು ಆತನಿಗೆ ಶ್ರೀ ಭೂತ-ಭೃತ್ಯಯೇ ನಮಃ ಅನ್ನುವಂತೆ ಉಪದೇಶಿಸಿದರು..


ಕೆಲದಿನಗಳ ಬಳಿಕ ಶ್ರೀಪಾದರು ಪ್ರಸಾದ ಹಂಚುವವರನ್ನು ಆ ಹಿರಿಯ ವಿಚಾರದಲ್ಲಿ ಕೇಳಿದಾಗ ಅವರು ಸ್ವಾಮಿ ಅವರು ಈಗ ಬರುತ್ತಿಲ್ಲ . ಏನಾಗಿದೆ ಅಂತ ಗೊತ್ತಿಲ್ಲ. ಬಹಳಷ್ಟು ಸಮಯ ವಾಯಿತು ಅವರನ್ನು ನೋಡದೆ.. ಆದರೆ ಒಂದು ವಿಚಾರ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದ ಪೂಜೆಯ ಬಳಿಕ ನೋಡಿದರೆ ಯಾರೋ ತೆಗೆದಂತೆ ಕಾಣುತ್ತದೆ . ಆ ಹಿರಿಯರು ಹೇಗೋ ಬಂದು ಅದನ್ನು ತೆಗೆಯುತ್ತಾರಾ ಏನೋ ಅನ್ನುವ ಸಂಶಯ ವ್ಯಕ್ತ ಪಡಿಸಿದರು. ಶ್ರೀಪಾದರು ಒಂದು ದಿನ ನೋಡಲು ಪ್ರಸಾದ ಪೂಜೆಯ ಬಳಿಕ ಕಮ್ಮಿಯಾದದ್ದನ್ನು ಕಂಡು…


ಶ್ರೀಪಾದರು ಆ ಹಿರಿಯರನ್ನು ಕಾಣಲು ನದಿಯನ್ನು ದಾಟಿ ಹಿರಿಯರಿದ್ದ ಸಣ್ಣ ಗುಡಿಸಲಿನತ್ತ ಹೋದಾಗ ಹಿರಿಯರು ಶ್ರೀಪಾದರ ಕಾಲಿಗೆ ನಮಸ್ಕರಿಸಿ ತಾವು ಮಹಾನ್ ಮಹಿಮರು ನಮ್ಮ ಕಷ್ಟಗಳೆಲ್ಲ ಪರಿಹಾರವಾಯಿತು. ಅಲ್ಲಿಗೆ ಪ್ರಸಾದಕ್ಕೆ ಬರಬೇಕಾಗಿಲ್ಲ ದಿನಾ ನೀವು ಕಳುಹಿಸಿದ ಹುಡುಗ ಬಂದು ನಮಗೆ ಬೇಕಾದಷ್ಟು ಪ್ರಸಾದವನ್ನು ಕೊಟ್ಟು ಹೋಗುತ್ತಿದ್ದಾನೆ . ನಿಮಗೆ ತುಂಬುದು ಹೃದಯದ ಧನ್ಯವಾದಗಳು ಅನ್ನುತ್ತಲೇ ಶ್ರೀಪಾದರಿಗೆ ಅರಿವಾಯಿತು ಇದೆಲ್ಲ ಶ್ರೀ ರಂಗನಾಥನ ಮಹಿಮೆ .…


ಭೂತ-ಭೃತ್: ಎಲ್ಲಾ ಜೀವಿಗಳನ್ನು ಪೋಷಿಸುವವನು ಅವನೇ ಹಾಗಿರುವಾಗ ಭಕ್ತಿಯಿಂದ ಪೂಜಿಸಿದ ಜಪಮಾಡಿದ ಹಿರಿಯರನ್ನು ಹೇಗೆಬಿಟ್ಟುಹೋಗುತ್ತಾನೆ ಎಂದು ಮನದಲ್ಲಿಯೇ ನೆನೆಸಿದರು. ಅಲ್ಲದೆ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಹೇಳಿದ ಮಾತು ಮತ್ತೆ ನೆನಪಾಯಿತು. ನಚ ಮಸ್ತಾನಿ ಭೂತಾನಿ .. ಪಶ್ಯಾಮಿ ಯೋಗ ಮಸ್ವರಂ..


ಶ್ರೀ ವಿಷ್ಣುಸಹಸ್ರನಾಮದ ಪ್ರತಿಯೊಂದು ಹೆಸರು ಅದರದೇ ಆದ ಮಹತ್ವವನ್ನು ಹೊಂದಿದೆ ಅದನ್ನು ಅರಿತು ಪಠಿಸಿದರೆ ಒಳ್ಳೆಯದು...

▬▬▬
ஜ۩۞۩ஜ▬▬▬*▬▬▬ஜ۩۞۩ஜ▬▬
ಸರ್ವೇಷಾಂ ಸಮಸ್ತ ಸನ್ಮಂಗಳಾನಿ ಭವಂತು
'
ಸರ್ವೇ ಜನಾಃ ಸುಖಿನೋ ಭವಂತು'

ಧಮೋ೯ ರಕ್ಷತಿ ರಕ್ಷಿತ: ಕೃಷ್ಣಾರ್ಪಣಮಸ್ತು*
▬▬▬
ஜ۩۞۩ஜ▬▬▬▬▬▬ஜ۩۞۩ஜ▬▬▬


------------ Hari OM ------------

Thursday, February 18, 2021

Ratha Saptami

                                                      Lord Surya / Sun God / Bhagavan
 

🌞 ☀️ "ರಥಸಪ್ತಮಿ" ☀️ 🌞


Ratha Saptami Muhurata Or Timings

Ratha Saptami on Friday, February 19, 2021


Snana Muhurata on Ratha Saptami -Day – between 05:03 AM to 06:40 AM

Duration - 01 Hour 38 Minutes

Main timing for Ratha Saptami - 06:19 AM

 

Observing or Viewing Sun time on Ratha Saptami day - 06:40 AM

Saptami Tithi Begins - 08:17 AM on Feb 18, 2021

Saptami Tithi Ends - 10:58 AM on Feb 19, 2021

 

                                                                        Pic1


🕉️ ರಥ ಸಪ್ತಮಿ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ 🕉



🌞🌺ಬಾಲ್ಯದಲ್ಲಿ ಅಜ್ಜಿ ಪಾಡ್ಯ, ಬಿದಿಗೆ, ತದಿಗೆ... ಅಮಾವಾಸ್ಯೆಯವರೆಗೆ ಕಂಠಪಾಠ ಮಾಡಿಸುವಾಗ ಒಂದೊಂದು ತಿಥಿಗೂ ಒಂದೊಂದು ಹಬ್ಬವನ್ನು ಸೇರಿಸಿ ಹೇಳಿಕೊಡುತ್ತಿದ್ದರು.

🌞🌺
ಪಾಡ್ಯ- ಉಗಾದಿ ಪಾಡ್ಯ, ಬಿದಿಗೆ-ಭಾನು ಬಿದಿಗೆ, ತದಿಗೆ-ಅಕ್ಷ ತದಿಗೆ, ಚೌತಿ-ವಿನಾಯಕನ ಚೌತಿ. . . . ಹೀಗೆ ‘ಸಪ್ತಮಿ’ಯ ಸರದಿ ಬಂದಾಗ ರಥಸಪ್ತಮಿ ಸೇರಿಕೊಳ್ಳುತ್ತಿತ್ತು.

🌞🌺
ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ವಿವರಿಸುತ್ತಿದ್ದರು.ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಅರ್ಥಪೂರ್ಣ ಆಚರಣೆಯಾಗುತ್ತದೆ.

🌞🌺
ಯುಗಾದಿ ಹೊಸತನವನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ.

🌞🌺 “
ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆ” ಅಂತ ಅಜ್ಜಿ ಹೇಳುತ್ತಿದ್ದುದು ನೆನಪಾಗುತ್ತದೆ.

🌞🌺
ಅಲ್ಲದೆ ಈ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ.

🌞🌺
ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ.

🌞🌺
ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ.

🌞🌺
ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ.

🌞🌺
ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ.

🌞🌺
ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ನಾಳೆ (ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿ-ಗುರುವಾರ) ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ.

ಆರೋಗ್ಯಂ ಭಾಸ್ಕರಾದಿಚ್ಛೇತ್...

🌞🌺
ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯ ತುಂಬಿಕೊಳ್ಳುತ್ತದೆ. ‘

🌞🌺
ಆರೋಗ್ಯಂ ಭಾಸ್ಕರಾದಿಚ್ಛೇತ್’ ಅಂದರೆ ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ.

🌞🌺
ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.

🌞🌺
ಚಂದ್ರನ ಬೆಳಕಿನಲ್ಲಿ ವಿಟಮಿನ್ ‘ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ‘ಡಿ’ ಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

🌞🌺
ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧ ನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ.

🌞🌺
ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ.

🌞🌺
ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ.

🌞🌺
ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ.

🌞🌺
ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

🌞🌺
ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.

🌞🌺108
ಸೂರ್ಯ ನಮಸ್ಕಾರ ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ.

🌞🌺
ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ.

🌞🌺
ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.

🌞🌺
ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ.

 

                                                                             Pic2
       


ಪೌರಾಣಿಕ ಹಿನ್ನೆಲೆಯೇನು?



🌞🌺
ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ.

🌞🌺
ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ.

🌞🌺
ಈ ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು.

🌞🌺
ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು.

🌞🌺
ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು.

🌞🌺
ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ.

🌞🌺
ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ.

🌞🌺
ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.

🌞🌺
ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

🌞🌺
ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ.

🌞🌺
ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ.

🌞🌺
ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ.

🌞🌺
ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.

🌞🌺
ಇನ್ನು, ‘ಭೂರ್ಭುವಸ್ವಃ'. . . ಎಂಬಮಂತ್ರದಲ್ಲಿ ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

🌞🌺
ಎಕ್ಕದೆಲೆಯ ಸ್ನಾನ ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು.

🌞🌺
ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

🌞🌺
ಹೀಗಾಗಿಯೇ ಈ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

🌞🌺
ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುವ ಬದಲು ಪ್ರತ್ಯಕ್ಷವಾಗಿ ಕಾಣುವ ದೈವೀ ಸ್ವರೂಪಗಳಾದ, ಯಾವುದೇ ಜಾತಿಭೇದ, ಧರ್ಮದ ಚೌಕಟ್ಟಿಲ್ಲದ ಸೂರ್ಯ, ಚಂದ್ರ, ವೃಕ್ಷ, ಬೆಟ್ಟ, ನದೀನದಗಳ ಆರಾಧನೆಯನ್ನು ನಮ್ಮ ಪೂರ್ವಿಕರು ಆಚರಣೆಗೆ ತಂದಿರುವುದು ಎಷ್ಟೊಂದು ಅರ್ಥಪೂರ್ಣವಾಗಿದೆಯಲ್ಲವ?

*
ಸಪ್ತ ಸಪ್ತ ಮಹಾಸಪ್ತ
ಸಪ್ತ ದ್ವೀಪ ವಸುಂಧರ*

*
ಸಪ್ತಾರ್ಕ ಪ್ರಣಮಾಧ್ಯಾಯ
ಸಪ್ತಮಿ ರಥ ಸಪ್ತಮಿ*

ಎಂದು ಈ ಶ್ಲೋಕವನ್ನು ಹೇಳಿಕೊಂಡು ತಲೆಗೆ ಸ್ನಾನ ಮಾಡಿದರೆ ಓಳ್ಳಯದು

ಈ ಮೇಲಿನ ಎಲ್ಲಾ ಸಂಗತಿಗಳನ್ನು ಓದಿ, ನಿಮ್ಮ ಕುಟುಂಬ, ಬಂದು, ಬಳಗ, ಮತ್ತು ವಿಶೇಷ ವಾಗಿ ಇಂದಿನ ಮಕ್ಕಳಿಗೆ ಮನವರಿಕೆ ಮಾಡಿ.


ನಮ್ಮ ಸಂಸ್ಕೃತಿ ಉಳಿಸಲು ನಿಮ್ಮ ಕೊಡುಗೆ ಇರಲಿ.


                                                                             Pic3                                                 


                                                             ----------- Hari Om -----------