Monday, June 29, 2026

ತುಪ್ಪದ ಮಹತ್ವ – Importance & Power of Ghee

                                                                          GHEE

 

ತುಪ್ಪದ ಮಹತ್ವ – Importance & Power of 

Ghee

ಖಾಲಿ ಹೊಟ್ಟೆಯಲ್ಲಿ ‘ತುಪ್ಪ’ ತಿಂದರೆ ಏನಾಗುತ್ತದೆ ಗೊತ್ತೇ

 ತುಪ್ಪದ ಬಗ್ಗೆ ಇರುವ ಮಹತ್ವ ತಿಳಿಯಿರಿ.

ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ.ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ?ಎನ್ನುವುದನ್ನು ಮೆಲುಕುಹಾಕಿ.ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು.ನೀರು ಕುಡಿಯುತ್ತೇವೆ,ಹಲ್ಲುಜ್ಜುತ್ತೇವೆ,ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು.

ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು.ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ,ಅದನ್ನು ಮಿತವಾಗಿ ಸೇವಿಸಬೇಕು,ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು,ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಬರೀ ಒಂದೆರಡು ಚಮಚ ತುಪ್ಪದಲ್ಲಿದೆ ಹತ್ತಾರು ಲಾಭ ಆದರೆ ಈ ಲೇಖನದಲ್ಲಿ ತುಪ್ಪ ತಿಂದರೆ ಯಾವೆಲ್ಲಾ ರೋಗವನ್ನು ನಿವಾರಿಸಬಹುದು ಎನ್ನುವ ವಿವರಣೆಯನ್ನು ನೀಡಲಾಗಿದೆ.ಹೌದು, ತುಪ್ಪ ಎಂದರೆ ಅದು ಕೇವಲ ಕೊಬ್ಬಿನ ಪದಾರ್ಥ ಎನ್ನುವುದಕ್ಕೆ ಸೀಮಿತವಾಗಿಲ್ಲ.ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ.

ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು.ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

                                                            another Picture

 

ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಆದರೆ ಇದು ಸತ್ಯ.ತುಪ್ಪದ ಸೇವನೆಯಿಂದ ಯಾವೆಲ್ಲಾ ಸಮಸ್ಯೆಗಳಿಂದ ದೂರ ಇರಬಹುದು ಎನ್ನುವುದನ್ನು ತಿಳಿದುಕೊಳ್ಳಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ…

ಜೀವಕೋಶದ ಚಟುವಟಿಕೆ ಹೆಚ್ಚುವುದು ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.

ಅಲ್ಲದೆ ದೇಹಕ್ಕೆ ಉತ್ತಮವಾದ ಆರೈಕೆಯನ್ನು ನೀಡುವುದು.ಚರ್ಮದ ಕಾಂತಿ ಹೆಚ್ಚುವುದು ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ,ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ. ಸೋರಿಯಾಸಿಸ್‍ನಂತಹ ಚರ್ಮ ರೋಗಗಳನ್ನು ಇದು ತಡೆಯುವುದು.ಸಂಧಿವಾತವನ್ನು ತಡೆಯುತ್ತದೆ ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ.

 

                                                                           PIC-1


ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು. ತುಪ್ಪದ ಸೇವನೆಯಿಂದ ಆಸ್ಟಿಯೊಪೊರೋಸಿಸ್ ಸೇರಿದಂತೆ ಅನೇಕ ಮೂಳೆ ಸಮಸ್ಯೆಗಳನ್ನು ನಿವಾರಿಸುತ್ತದೆ.

ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ,ಕಲಿಕೆ,ಜ್ಞಾನ ಗ್ರಹಣ,ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

 

                                                                           PIC-2

 

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.ತೂಕ ಇಳಿಸುವುದು ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ.ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಅಲ್ಲದೆ ಗಣನೀಯವಾದ ತೂಕ ಇಳಿಕೆಯನ್ನು ನೀವು ನಿರೀಕ್ಷಿಸಬಹುದು.ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ.

 

                                                                           PIC-3

 

ಇದರಿಂದ ಹೊಳಪಿನಿಂದ ಕೂಡಿರುವ ದಟ್ಟವಾದ ಕೂದಲನ್ನು ನೀವು ಹೊಂದಬಹುದು. ಲ್ಯಾಕ್ಟೋಸ್‍ಗಳನ್ನು ಸುಧಾರಿಸುತ್ತದೆ ಕೆಲವರಿಗೆ ಹಾಲು ಅಥವಾ ಹಾಲಿನಿಂದ ತಯಾರಿಸಿರುವ ಉತ್ಪನ್ನಗಳನ್ನು ಸೇವಿಸದಾಗ ಸೂಕ್ತ ರೀತಿಯ ಜೀರ್ಣಕ್ರಿಯೆ ಉಂಟಾಗುವುದಿಲ್ಲ.

ಅದೇ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸ್ವೀಕರಿಸಿದರೆ ಲ್ಯಾಕ್ಟೋಸ್ ಸಮಸ್ಯೆಯು ಸುಧಾರಣೆ ಕಾಣುತ್ತದೆ.ಜೀರ್ಣ ಕ್ರಿಯೆಯೂ ಉತ್ತಮವಾಗಿ ನೆರವೇರುವುದು.ಕ್ಯಾನ್ಸರ್ ನಿಂದ ದೂರ ಇಡುವುದು ನೈಸರ್ಗಿಕವಾದ ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಬಗೆಯ ಕ್ಯಾನ್ಸರ್ ಕಾಯಿಲೆಯಿಂದ ದೂರ ಇರಬಹುದು.


---------- Hari Om ----------

 

 

 

                                              

Sunday, June 28, 2026

ಮನೋ ವಿಜ್ಞಾನ - ಯದ್ಭಾವಮ್ ತದ್ಭವತಿ - ಯಥಾ ಪಿಂಡೆತಥಾ ಬ್ರಹ್ಮಾಂಡೇ - Happy Harmones

 



ಮನೋ ವಿಜ್ಞಾನ - ಯದ್ಭಾವಮ್ ತದ್ಭವತಿ

ಯಥಾ ಪಿಂಡೆತಥಾ ಬ್ರಹ್ಮಾಂಡೇ


Psychiatry-Yadbhavam tadbhavathi- 
Yatha Pinde tatha Brahmande

ಸಂತೋಷದ ಹಾರ್ಮೋನುಗಳು

Happy Harmones


ಎಂದೋ ನಡೆದುಹೋದ ಕಹಿ ಗಳಿಗೆಗಳನ್ನು ಪ್ರತೀ ಬಾರಿ ನೆನೆದಾಗಲೂ ಶರೀರದಲ್ಲಿ ಅಂದು ಅನುಭವಿಸಿದ ಕೋಪ, ಕ್ರೋಧ, ವ್ಯಥೆ, ನಿರಾಶೆ, ಹತಾಶೆ ಈ ರೀತಿಯ ನೆಗಟಿವ್ ಎಮೋಷನ್ ಗಳು ಮತ್ತೆ ಅದೇ ರೀತಿ ಮರುಕಳಿಸುತ್ತವೆ. ಪ್ರತಿ ಬಾರಿಯ ನೆನಪಿನಲ್ಲಿಯೂ ನಿಮ್ಮ ಶರೀರ ಮನಸ್ಸು ಮತ್ತೆ ಕೆಟ್ಟ ಸನ್ನಿವೇಶದ ಪ್ರಭಾವವನ್ನು ಮತ್ತೊಮ್ಮೆ ಅನುಭವಿಸುತ್ತಾ ಜರ್ಜರಿತವಾಗುತ್ತಾ ಹೋಗುತ್ತದೆ.

ಇದು ನಮ್ಮ ಮಿದುಳಿನಲ್ಲಿ ನಡೆಯುವ ರಾಸಾಯನಿಕ ಕ್ರಿಯೆಯ ಪರಿಣಾಮ. ನಮ್ಮ ಮನಸ್ಸಿನಲ್ಲಿ ಮೂಡುವ ಭಾವನೆಗಳಿಗೆ ತಕ್ಕಂತೆ ಮಿದುಳಿಗೆ ಸೂಚನೆಗಳು ಹೋಗುತ್ತವೆ. ಮಿದುಳು ಅದಕ್ಕೆ ಅನುಗುಣವಾಗಿ ಹಾರ್ಮೋನ್ ಗಳನ್ನು ಉತ್ಪತ್ತಿ ಮಾಡಲು ನಿರ್ದೇಶನ ನೀಡುತ್ತದೆ.
ಈ ಹಾರ್ಮೋನ್ ಗಳೇ ಶರೀರವನ್ನು ದುರ್ಬಲಗೊಳಿಸುತ್ತವೆ. ನಮ್ಮ ದೇಹದಲ್ಲಿ 60 ಟ್ರಿಲಿಯನ್ ಗೂ ಅಧಿಕ ಜೀವಕೋಶ ಗಳಿವೆ. ಈ ಜೀವ ಕೋಶಗಳು ಆರೋಗ್ಯಕರವಾಗಿ ಇರಬೇಕೆಂದರೆ ಅವುಗಳಿಗೆ ಆರೋಗ್ಯಕರ ವಾತಾವರಣವೂ ಇರಬೇಕು. ಜೀವಕೋಶಗಳಿಗೆ ಬೇಕಾದ ಪ್ರೊಟೀನ್, ವಿಟಮಿನ್, ಮಿನರಲ್ಸ್, ಅಮಿನೊ ಆಸಿಡ್ ಗಳ ಜೊತೆಗೆ ಉಲ್ಲಾಸದ ಮನಸ್ಸು ಅಷ್ಟೇ ಮುಖ್ಯ. ಸರಿಯಾದ ಆರೈಕೆ ಇಲ್ಲದೆ ಜೀವಕೋಶಗಳು ಹಾಳಾಗುವುದಕ್ಕಿಂತ, ಹತ್ತು ಪಟ್ಟು ಹೆಚ್ಚು ಕೆಟ್ಟ ಯೋಚನೆಗಳಿಂದ, ನೆಗಟಿವ್ ಎಮೋಷನ್ ಗಳಿಂದ ಹಾನಿಗೆ ಒಳಗಾಗುತ್ತವೆ.


ಇದೇ ಮನಸ್ಥಿತಿಯಲ್ಲಿ ಶರೀರವಿದ್ದಲ್ಲಿ ಜೀವಕೋಶಗಳು ಕೆಡಲು ಶುರುವಾಗುತ್ತವೆ. ಹೀಗೆ ಹಾಳಾದ ಜೀವಕೋಶಗಳು ತಮ್ಮ ಸುತ್ತಮುತ್ತಲಿನ ಆರೋಗ್ಯವಂತ ಕೋಶಗಳನ್ನು ನಾಶ ಮಾಡಲು ತೊಡಗುತ್ತವೆ. ಶರೀರ ಬಹಳ ಸುಲಭವಾಗಿ ಕಾಯಿಲೆಗಳಿಗೆ ತುತ್ತಾಗುತ್ತದೆ. ಬೇಗ ಕೃಶವಾಗುತ್ತದೆ.

ಮನುಷ್ಯನೆಂದ ಮೇಲೆ "ಸಿಟ್ಟು ಕೋಪ ದುಃಖ" ಇತ್ಯಾದಿ ಭಾವನೆಗಳು ಇರುವುದು ಸಹಜ. ಅವೆಲ್ಲವೂ ಬರದಂತೆ ಸದಾ ನಗು ನಗುತ್ತಲೇ ಇರಬೇಕು ಅಂದರೆ ಕಷ್ಟವೇ ಹೌದು. ಎಲ್ಲರೂ ನಿತ್ಯ ಆನಂದವಾಗಿರಲು ಸಾಧ್ಯವಿಲ್ಲ.

ಸಂಸ್ಕೃತದಲ್ಲಿ ಒಂದು ಮಾತಿದೆ ”ಯದ್ಭಾವಮ್ ತದ್ಭವತಿ” ನಾವು ಏನು ಯೋಚನೆ ಮಾಡುತ್ತೇವೆಯೋ ನಾವು ಅದೇ ಆಗುತ್ತೇವೆ. "ಯಥಾ ಪಿಂಡೆ ತಥಾ ಬ್ರಹ್ಮಾಂಡೇ" ಎಂಬಂತೆ "ಅಣು ಹೇಗಿರುತ್ತದೆಯೋ ಆಗೆಯೇ ಈ ಬ್ರಹ್ಮಾಂಡವೂ".


There is a saying in Sanskrit, "Yadbhavam tadbhavati" -
what we think, we become. "Yatha Pinde tatha Brahmande"
- "As the atom is, so is the Universe".

ಸನ್ನಿವೇಶಗಳಿಗೆ ತಕ್ಕ ಹಾಗೆ ನಾವು ಪ್ರತಿಕ್ರಿಯೆ ನೀಡಲೇ ಬೇಕು. ಅದು ಸಹಜ. ಹೆದರಿಕೆ ಭಯ ಇಲ್ಲದೆ ನಾವು ಬದುಕಲಾರೆವು. ಜೀವ ರಕ್ಷಣೆಗೆ ನಾವು ಹೆದರಲೇ ಬೇಕು. ಹಾಗೆ ಕೋಪಗೊಳ್ಳಲೂ ಬೇಕು. ಆಗ ಸ್ರವಿಸುವ ಹಾರ್ಮೋನ್ ಗಳು ದೇಹ ರಕ್ಷಣೆಗೆ ಬೇಕಾದ ಅಧಿಕ ಹಾರ್ಮೋನ್ ಗಳನ್ನು ಸ್ರವಿಸಿ ಆ ಕ್ಷಣದಿಂದ ನಮ್ಮನ್ನು ಪಾರು ಮಾಡುತ್ತದೆ. ಆದರೆ ಅದೇ ಎಮೋಷನ್ ಗಳನ್ನು ಸದಾ ಕಾಲ ನಾವು ಮನಸಿನಲ್ಲಿ ಪೋಷಿಸಬಾರದು ಅಷ್ಟೇ. ನಮ್ಮನ್ನು ದ್ವೇಷಿಸುವರನ್ನು ನಾವು ಕ್ಷಮಿಸಬೇಕು. ಅದು ದೊಡ್ಡ ಗುಣ ಅಂತ ಅಲ್ಲ "ನಮ್ಮ ಒಳಿತಿಗಾಗಿ. ನಮ್ಮ ಆರೋಗ್ಯಕ್ಕಾಗಿ" ಮಾತ್ರ.



                                                    4 ( Four ) Happiness Harmones

 

ನಮ್ಮ ದೇಹದಲ್ಲಿ ನಾಲ್ಕು ಹಾರ್ಮೋನ್ ಗಳು ಮನಸ್ಸಿಗೆ 

ಸಂತೋಷವನ್ನು ಉಂಟು ಮಾಡುವಂತವು.

1. ಎಂಡೋರ್ಫಿನ್.
2.
ಡೋಪಮಿನ್.
3.
ಸೇರೋಟಾನಿನ್.
4.
ಆಕ್ಸಿಟೋಸಿನ್


ಇವೇ ನಾಲ್ಕು.

ನಾವು ವ್ಯಾಯಾಮ ಮಾಡಿದಾಗ ಶರೀರದಲ್ಲಿ "ಎಂಡೋರ್ಫಿನ್" ಉತ್ಪತ್ತಿಯಾಗುತ್ತದೆ. ವ್ಯಾಯಾಮದ ನೋವನ್ನು ತಡೆಯಲು ಇದು ಸಹಾಯ ಮಾಡುತ್ತದೆ. ಕಸರತ್ತಿನ ನೋವೂ ಹಿತ ಎನಿಸುವುದು ಇದರಿಂದಲೇ. ಜೋರಾಗಿ ನಗುವುದರಿಂದಲೂ ಎಂಡೋರ್ಫಿನ್ ಬಿಡುಗಡೆ ಆಗುತ್ತದೆ. ನಿತ್ಯ 30 ನಿಮಿಷ ವ್ಯಾಯಾಮ ಮಾಡಿದರೆ , ಮತ್ತು ನಗು ಬರುವಂತಹ ಲಘು ಓದು, ಸಿನೆಮಾ, ಹರಟೆ ಇವುಗಳಿಂದ ಅಂದಿನ ಎಂಡೋರ್ಫಿನ್ ಕೋಟಾ ವನ್ನು ನಾವು ಪಡೆಯಬಹುದು.

ಯಾರಾದರೂ ನಮ್ಮನ್ನು ಹೊಗಳಿದಾಗ, ನಮ್ಮ ಕೆಲಸಗಳನ್ನು ಮೆಚ್ಚಿ ಮಾತಾನಾಡಿದಾಗ ನಮ್ಮ ಶರೀರದಲ್ಲಿ "ಡೋಪಮಿನ್" ಉತ್ಪತ್ತಿ ಆಗುತ್ತದೆ. ಅಡುಗೆ ಕೆಲಸ ಮಾಡುವ ಮನೆಯ ಹೆಣ್ಣು ಮಕ್ಕಳಿಗೆ ಈ ಡೋಪಮಿನ್ ಸಿಗುವುದು ಕಷ್ಟ ಮತ್ತು ಅದರ ಪ್ರಮಾಣವು ಕಡಿಮೆ ಇದಕ್ಕೆ ಕಾರಣ ಅವರು ಕಷ್ಟ ಪಟ್ಟು ಅಡುಗೆ ಮಾಡಿದರು ಅಥವಾ ಯಾವುದೆ ಸಾಧನೆ ಮಾಡಿದರೂ ಅದಕ್ಕೆ ತಪ್ಪು ಹಿಡಿಯುವರೆ ಜಾಸ್ತಿ. ದಯ ಮಾಡಿ ನಿಮ್ಮ ಮನೆಯವರ ಅಡುಗೆಯನ್ನು ನೀವು ಕಡ್ಡಾಯವಾಗಿ ಹೊಗಳಿರಿ ಮತ್ತು ಅವರ ಸಾಧನೆಗೆ ಮೆಚ್ಚುಗೆ ಸೂಚಿಸಿ. ಏಕೆಂದರೆ ಇದರಿಂದ ಡೋಪಮಿನ್ ಪ್ರಮಾಣ ಹೆಚ್ಚುತ್ತದೆ. ನಾವು ಏನಾದರೂ ಹೊಸ ವಸ್ತು ಖರೀದಿಸಿದಾಗ ಖುಷಿ ಆಗುವುದು ಈ ಡೋಪಮಿನ್ ನಿಂದಲೇ. ಹಾಗಾದರೇ ಶಾಪಿಂಗ್ ಮಾಡಿದಾಗ ಸಂತೋಷವಾಗುವುದು ಏಕೆ ಎಂದು ನಿಮಗೆ ಗೊತ್ತಾಗಿರಬೇಕು.

ನಾವು ಬೇರೆಯವರಿಗೆ ಸಹಾಯ ಮಾಡಿದಾಗ ನಮ್ಮಲ್ಲಿ ಉಂಟಾಗುವ ಧನ್ಯತಾ ಭಾವಕ್ಕೆ ಕಾರಣ "ಸೇರೋಟಿನ್" ಎನ್ನುವ ಹಾರ್ಮೋನ್. ಇದು ನಮ್ಮ ಮನಸ್ಸನ್ನು ಮುದಗೊಳಿಸುತ್ತೆ. ಅಷ್ಟೇ ಅಲ್ಲ ನಮ್ಮ ಜೀವ ಕೋಶಗಳನ್ನು ಉತ್ತೇಜಿಸುತ್ತದೆ. ಅಡ್ರೆಸ್ ಕೇಳುವ ದಾರಿಹೋಕರಿಗೆ ಮಾಹಿತಿ ನೀಡಿದರೆ, ಅಂಧರಿಗೆ ರಸ್ತೆ ದಾಟಲು ಸಹಾಯ ಮಾಡಿದರೆ ಇತ್ಯಾದಿ ಸಣ್ಣಪುಟ್ಟ ಸಹಾಯ ಹಸ್ತ ಚಾಚುವ ಕೆಲಸಗಳಿಂದ ಈ ಹಾರ್ಮೋನ್ ನಮ್ಮನ್ನು ಖುಷಿಯಾಗಿ ಇಡುತ್ತದೆ.

ನಾವು ಬೇರೆಯವರಿಗೆ ಆತ್ಮೀಯತೆ ತೋರಿದಾಗ "ಆಕ್ಸಿಟೋಸಿನ್" ಉತ್ಪತ್ತಿ ಆಗುತ್ತದೆ. ಅಳುವ ಮಗುವನು ರಮಿಸುವಾಗ ನಮ್ಮ ಸ್ಪರ್ಶ ಅಪ್ಪುಗೆ ನಮ್ಮಲ್ಲಿ ಮತ್ತು ಮಗುವಿನಲ್ಲೂ ಆಕ್ಸಿಟೋಸಿನ್ ನಿಂದಾಗಿ ಮನಸು ಸಮಾಧಾನ ಗೊಳ್ಳುತ್ತದೆ. ಕೈ ಕುಲುಕುವುದರಿಂದ (thanks) ಆತ್ಮೀಯ ಆಲಿಂಗನದಿಂದ ಮನಸ್ಸು ಪ್ರಫುಲ್ಲಿತ ವಾಗುತ್ತದೆ.

ಹೀಗಾಗಿ ನಮ್ಮ ಆರೋಗ್ಯದ ದೃಷ್ಟಿಯಿಂದ, ನಮ್ಮ ಜೀವನವನ್ನು ಸುಖಮಯವಾಗಿಸುವ ದೃಷ್ಟಿಯಿಂದ ದಯವಿಟ್ಟು ಪ್ರತಿದಿನ ವ್ಯಾಯಾಮ ಮಾಡಿ, ನಗುತ್ತ ಇರಿ, ಬೇರೆಯವರ ಪ್ರಯತ್ನಗಳನ್ನು ಹೊಗಳಿ, ಅಗತ್ಯ ಇರುವವರಿಗೆ ಕೈಲಾದಷ್ಟು ಸಣ್ಣ ಪುಟ್ಟ ಸಹಾಯ ಮಾಡಿ. ಸಹಾಯ ಮಾಡಲು ಸಾಧ್ಯವಾಗದಿದ್ದರೆ ಪರವಾಗಿಲ್ಲ ಮಾತಿನಲ್ಲಿ ಆತ್ಮೀಯತೆ ಇರಲಿ. ಆದಷ್ಟೂ ಎಲ್ಲರೊಂದಿಗೆ ಪ್ರೀತಿಯಿಂದ ಜೀವಿಸಿ. ಕೊನೆಯದಾಗಿ ಆದಷ್ಟು ಬೇರೆಯವರ ತಪ್ಪುಗಳನ್ನು ಕ್ಷಮಿಸಿಬಿಡಿ. ಇಲ್ಲದಿದ್ದರೆ, ಸಂಬಂಧದಿಂದಲೇ ದೂರವಿದ್ದುಬಿಡಿ.

 

                                                                  another Picture


 

The Four Primary "Happy Hormones" are 

Dopamine, Serotonin, Oxytocin, and Endorphins. These brain chemicals regulate mood, motivation, and feelings of well-being, and they can be naturally boosted through specific lifestyle choices like exercise, social connection, and self-care.



1. Dopamine (The Reward Chemical)

Dopamine drives the brain's reward system, motivating you to take action and achieve goals. It gives you a feeling of satisfaction when you accomplish something.

  • How to boost it: Complete a to-do list, celebrate small wins, eat a favorite meal, or engage in physical exercise. 

2. Serotonin (The Mood Stabilizer)

Serotonin is the key Neuro chemical responsible for balancing mood, easing anxiety, and promoting feelings of overall well-being and happiness.

  • How to boost it: Get sunlight, meditate, practice gratitude, or go for a brisk walk.

3. Oxytocin (The Love Hormone)

Oxytocin promotes trust, empathy, and deep bonding. It is largely released during physical affection and social interactions, making you feel safe and connected to others. 

  • How to boost it: Hug a loved one, spend quality time with friends, play with a pet, or perform acts of kindness.

4. Endorphins (The Pain Reliever)

Endorphins are the body's natural painkillers, released in response to stress, discomfort, or physical exertion. They help minimize pain while maximizing pleasure to help you push through challenging situations.

  • How to boost it: Laugh, exercise or run, eat dark chocolate, or practice yoga.



ಇರುವುದೊಂದೇ ಜೀವನ ಚಂದವಾಗಿ ಬಾಳೋಣ ಬದುಕೋಣ.


---------------- Hari Om -----------------

 

 

Saturday, June 27, 2026

ಭೂತರಾಜರು ಯಾರು ? ---- Bhootha Rajaru

 

                                                                        Sri Bhoota Rajaru

 

ಭೂತರಾಜರು ಯಾರು ? ---- Bhootha Rajaru

ಆವರ ಪರಿಚಯ ------

ದಕ್ಷಿಣ ಕನ್ನಡ ಜಿಲ್ಲೆಯ ನಾರಳ ಗ್ರಾಮದಲ್ಲಿ ಜನಿಸಿದ ನಾರಾಯಣಾಚಾರ್ಯ ಎಂಬುವರು ಶ್ರೀವಾದಿರಾಜರ ಜೊತೆಗೆ ಆವರ ಮಠದಲ್ಲಿ ಇದ್ದರು. ಒಮ್ಮೆ ಪ್ರಸಂಗವಶಾತ್ ಆಚಾರದ ವಿಷಯದಲ್ಲಿ ಗುರುಗಳನ್ನು ಹಿಂಬಾಲಿಸಿ ಪರೀಕ್ಷಿಸಲು ಹೋರಟ ನಾರಾಯಣಾಚಾರ್ಯರ ಜಿಜ್ಞಾಸೆ , ಗುರುಗಳಾದ ಶ್ರೀ ವಾದಿರಾಜರಿಗೆ ಗೊತ್ತಾಯಿತು. ಆ ಪ್ರಸಂಗ ಯಾವುದು ಅಂದರೆ. ಒಮ್ಮೆ ಸಾಧನ ದ್ವಾದಶಿ ದಿವಸ ವ್ಯಾಸರಾಜರು ಮತ್ತು ಇತರರು ವಾದಿರಾಜರಿಗಾಗಿ ಕಾದಿದ್ದರೆ. ಅಂದು ರಾಜರು ಧ್ಯಾನಾಸಕ್ತರಾಗಿ ಇರುವದರಿಂದ ಸ್ವಲ್ಪ ತಡವಾಯಿತು. ಅವರು ಮರುಕ್ಷಣದಲ್ಲಿ ಸ್ನಾನಮಾಡಿ ಪೂಜೆಯನ್ನು ಮಾಡಲು ಕಾಲಾವಕಾಶ ಇಲ್ಲಿದ್ದರಿಂದ ಪಾರಣಿ ಮುಗಿಸಿದರು. ಆದಮೇಲೆ, ಅವರು ಕಾಡಿನಲ್ಲಿ ದೂರ ಯಾರು ಇಲ್ಲದ ಪ್ರದೇಶದಲ್ಲಿ ಹೋಗಿ ತಮ್ಮ ಯೋಗಶಕ್ತಿಯಿಂದ ಎಲ್ಲ ಆಹಾರವನ್ನು ಹೊರಗೆ ತೆಗೆದು, ಬಾಲೆದೆಲೆಯ ಮೇಲೆ ಇಟ್ಟರು. ಆದಮೇಲೆ ಸ್ನಾನ ದೇವರಪೂಜೆ ನದಿಯಲ್ಲಿ ಆಚರಿಸಿದರು. ಇದನ್ನು ದೂರದಿಂದ ನಾರಾಯಣಾಚಾರ್ಯರು ಗಿಡದ ಹಿಂದಿನಿಂದ ನೋಡುತ್ತಿದ್ದರು. ಪರೀಕ್ಷಾರ್ಥವಾಗಿ ಬಂದ ನಾರಾಯಣಾಚಾರ್ಯರಿಗೆ ಬ್ರಹ್ಮರಾಕ್ಷಸ ಆಗಬೇಕೆಂದು ಶಾಪಪ್ರದಾನ ಮಾಡಿದರು. ತಮ್ಮ ಅಕೃತ್ಯಕ್ಕಾಗಿ ಪರಿತಪಿಸಿ ಪ್ರಾರ್ಥಿಸಿದಾಗ ಯಾರು "ಆ ಕಾ ಮ ವೈ ಕೋ ನ ಸ್ನಾಥಹ" ಎನ್ನುವ ಪ್ರಶ್ನಕ್ಕೆ ಉತ್ತರ ಹೇಳುತ್ತಾರೋ ಅವರೇ ಶಾಪವಿಮೋಚನ ಮಾಡುತ್ತಾರೆಂದು ಹೇಳಿದರು.


ಕೆಲ ಸಮಯ ಬ್ರಹ್ಮರಾಕ್ಷಸ ಜನ್ಮದಲ್ಲಿದ್ದ ನಾರಾಯಣಾಚಾರ್ಯರಿಗೆ, ಒಂದು ದಿನ ತಾನು ಇದ್ದ ಅರಣ್ಯದಲ್ಲಿಯೇ ರಾಜರು ಹಾದಿ ಹೋಗುತ್ತಿದ್ದರು. ಆಗ ಅವರನ್ನು ತಡೆದು ಯಥಾ ಪ್ರಕಾರ ಆ ಪ್ರಶ್ನೆಯನ್ನು ಕೇಳಿತು. ರಾಜರಿಗೆ ಈ ರಾಕ್ಷಸ ವಿಷಯ ಸ್ಮರಣೆಗೆ ಬಂತು. ಆಗ ರಾಜರು ಮುಗುಳ್ನಗೆಯಿಂದ 'ಯಾರು ಆಷಾಡ ಕಾರ್ತೀಕ ಮಾಘ ಮತ್ತು ವೈಶಾಖ ಮಾಸಗಳಲ್ಲಿ ಉದಯಕಾಲದಲ್ಲಿ ಸ್ನಾನ ಮಾಡುತ್ತಾನೆಯೋ ಅವನಿಗೆ ಬ್ರಹ್ಮರಾಕ್ಷಸ ಜನ್ಮ ಬರುವುದಿಲ್ಲ' ಎಂದು ಹೇಳಿದ ತಕ್ಷಣ ಗುರುಗಳಿಂದಲೇ ಶಾಪವಿಮೋಚನ ಆಯಿತು. ಅವರು ಶಾಪ ವಿಮೋಚನ ಆದೊಡನೆ ದಿವ್ಯ ರೂಪ ಧರಿಸಿ ಮುಂದೆ ನಿಂತರು.

 

                                                                  another Picture


ಆವರ ಸ್ವರೂಪದ ಬಗ್ಗೆ ಶ್ರೀ ವಾದಿರಾಜರಿಗೆ ಪೂರ್ಣ ಅರಿವಿತ್ತು. ಶ್ರೀವಾದಿರಾಜರು ದಿವ್ಯರೂಪದಲ್ಲಿದ್ದ ನಾರಾಯಣಾಚಾರ್ಯರಿಗೆ ಹೀಗೆ ನುಡಿದರು. ಮುಂದಿನ ಕಲ್ಪದಲ್ಲಿ ರುದ್ರದೇವರ ಪದವಿಗೆ ಹೋಗುವವರೆಗೂ ಭೂತರಾಜ ಎಂಬ ಹೆಸರಿನಿಂದ ಗುರುಗಳ ಸೇವೆಯನ್ನು ಅದೃಶ್ಯರಾಗಿ ಮಾಡಬೇಕೆಂದು ಆಜ್ಞೆ ಮಾಡಿದರು. ಮುಂದೆ ಶ್ರೀರಾಜರು ಬೃಂದಾವನ ಪ್ರವೇಶ ಮಾಡುವವರೆಗೂ ಅದೃಶ್ಯರಾಗಿ ಸೇವೆ ಮಾಡಿದರು. ತದನಂತರ ಕ್ಷೇತ್ರ ಪಾಲಕರಾಗಿ ಶ್ರೀಸೋದಾಕ್ಷೆತ್ರದಲ್ಲಿ ಇದ್ದು, ಇಂದಿಗೂ ಅದೃಶ್ಯರಾಗಿ ಗುರುಗಳ ನಿರಂತರ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಂದ ಭಕ್ತರ ಭೂತಪ್ರೇತಗಳ ಬಾಧೆಯನ್ನು ನಿವಾರಿಸುತ್ತ ವಿರಾಜಮಾನರಾಗಿದ್ದಾರೆ.

 

                                                                          PIC-1

 

ಭೂತಪ್ರೇತಗಳು ತಾವಾಗಿಯೇ ವಿದಾಯ ಹೇಳುವ ಕ್ಷೇತ್ರ 

ಶ್ರೀ ಸೋದಾ ಕ್ಷೇತ್ರ

 

                                                    

                                                        PIC-2


 

ತೀರ್ಥಪ್ರಬಂಧ ಸಂಗ್ರಹ :

 

ಸೋದೆಯಲ್ಲಿ ಇರುವ ತ್ರಿವಿಕ್ರಮ ದೇವರು ತಂತ್ರ ಸಾರೋಕ್ತ ಲಕ್ಷಣಉಳ್ಳ ಸುಂದರ ವಿಗ್ರಹ. ಇದು ಗಂಗಾತೀರದ ಕಾಶಿ ಇಂದ ಬಂದ ವಿಗ್ರಹ ಎಂದು ಶಿಲಾ ಶಾಶನ ಇದೆ ಮತ್ತು ರಥಾ ರೂಢವಾಗಿರುವುದು ಮತ್ತೊಂದು ವೈಶಿಷ್ಟ. ಇದನ್ನು ವಾದಿರಾಜರು ತಮ್ಮ ಶಿಷ್ಯರಾದ ಭೂತರಾಜರಿಂದ ತರಿಸಿದರೆಂದು ಇತಿಹ್ಯಇದೆ.


ರಥಾ ಸಮೇತರಾಗಿ ವಿಗ್ರಹವನ್ನು ಭೂತರಾಜರು ತರುವ ಕಾಲದಲ್ಲಿ ಒಬ್ಬ ದೈತ್ಯಬಂದು ಅಡ್ಡಿಮಾಡಿದನೆಂದು , ಪ್ರತಿಷ್ಠಾಪನೆಯ ಮುಹೂರ್ತವು ಅತಿಕ್ರಮೆಸಿತೆಂಬ ಯೋಚನೆಯಿಂದ ಭೂತರಾಜರು ಅ ರಥದ ಒಂದು ಗಾಲಿಯಿಂದ ಆ ದೈತ್ಯನನ್ನು ಸಂಹರಿಸಿದರೆಂದು , ಆದಕಾರಣ ಈ ರಥಕ್ಕೆ ಮೂರು ಚಕ್ರಗಳು ಇರುವುದೆಂದು ಹೇಳುತ್ತಾರೆ.

ಗುರ್ವನ್ತರ್ಗತ ಕೃಷ್ಣಾರ್ಪಣಮಸ್ತು.


------------------ Hari Om ------------------

 


 

Friday, June 26, 2026

ಚಿಕ್ಕ ಕೆರೆ ಆಂಜನೇಯ ಸ್ವಾಮಿ ದೇವಸ್ಥಾನ-ದೇವನಹಳ್ಳಿ - Chickka Kere Anjaneya Swamy Temple-Devanahalli

 

                                                                      Anjaneya Swamy

ಚಿಕ್ಕ ಕೆರೆ ಆಂಜನೇಯ ಸ್ವಾಮಿ ದೇವಸ್ಥಾನ-ದೇವನಹಳ್ಳಿ 

Chickka Kere Anjaneya Swamy Temple-

Devanahalli

 

                     

                    Chikka Kere Anjaneya Swamy


 

ಈ ಚಿಕ್ಕ ಕೆರೆ ಆಂಜನೇಯ ಸ್ವಾಮಿ ದೇವಸ್ಥಾನವು ಕೋಟೆ ಪ್ರವೇಶದ್ವಾರದ ಪಕ್ಕದಲ್ಲಿದೆ
ಇದು ಶಾಂತ, ತಂಪಾದ, ಶಾಂತಿಯುತ, ಪ್ರಶಾಂತ ಮತ್ತು ಆನಂದದಾಯಕ 
ವಾತಾವರಣವನ್ನು ಕಾಣಬಹುದು ಎಂಬುದರಲ್ಲಿ ಸಂದೇಹವಿಲ್ಲ. ಇದು ಸರೋವರದ 
ಪಕ್ಕದಲ್ಲಿದೆ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವಲ್ಪ
 ದೂರದಲ್ಲಿದೆ. 
 
 ಈ ಚಿಕ್ಕ ದೇವಸ್ಥಾನ -- ಕೆರೆ ಆಂಜನೇಯ ಸ್ವಾಮಿ ವಿಗ್ರಹವು 500 ವರ್ಷಗಳಷ್ಟು
 ಹಳೆಯದಾಗಿದ್ದು, ವಿಜಯ ನಗರ ಸಾಮ್ರಾಜ್ಯದ ಅವಧಿಯಲ್ಲಿ ಮಾಧ್ವ ಸಂತರಾದ 
ಸಂತ ಶ್ರೀ ವ್ಯಾಸರಾಜ ತೀರ್ಥರು ಸ್ಥಾಪಿಸಿದರು ಮತ್ತು ಶ್ರೀ ವ್ಯಾಸರಾಜರು ಸ್ವತಃ ಕೆತ್ತಿದ 
 732 ಆಂಜನೇಯ ವಿಗ್ರಹಗಳನ್ನು ಸ್ಥಾಪಿಸಿದರು. 
 
Lake side Temple
 
 
ಇದು ಒಂದು ಸಣ್ಣ ದೇವಾಲಯ ಮತ್ತು ದೇವನಹಳ್ಳಿಯ ಎಂಟು ದಿಕ್ಕುಗಳಲ್ಲಿ 
ನೆಲೆಗೊಂಡಿರುವ ಅಂತಹ 8 ಆಂಜನೇಯ ದೇವಾಲಯಗಳಲ್ಲಿ ಒಂದಾಗಿದೆ.

ಬೆಂಗಳೂರಿನಿಂದ ಒಂದು ದಿನದ ಪ್ರವಾಸ ಸಾಕು. 
 
Nagara Kallu
 
ಆಂಜನೇಯ ಸ್ವಾಮಿಯ ದರ್ಶನ ಪಡೆದ ನಂತರ ದೇವನಹಳ್ಳಿ ಕೋಟೆಗೆ ಭೇಟಿ 
ನೀಡಬಹುದು ಮತ್ತು ಕೋಟೆಯ ಒಳಗೆ ಶ್ರೀ ವೇಣುಗೋಪಾಲ ಸ್ವಾಮಿ 
ದೇವಾಲಯಕ್ಕೂ ಭೇಟಿ ನೀಡಬಹುದು. 
 
Ashwatha Katte
 
 
 

This Chickka Kere Anjaneya Swamy Temple is Located next to Devanahalli 

Fort Entrance a Calm , Cool , Peaceful , Serene and Blissful atmosphere one 

finds No doubt at all. It is by the side of a Lake and a short distance from 

Kempegowda International Airport.

 

                                                          Pic-1

 
 

This Chikka Kere Anjaneya Swamy idol is 500 Years old installed by Saint

Sri Vyasaraja Tirtharu a Madhwa Saint during the Vijaya Nagara Kingdom

 Period and Sri Vyasaraja installed 732 such Anjaneya Vigrahas Carved by 

himself.

                                                        Pic-2

 
 

Its a Small Temple and 1 of 8 such Anjaneya Temples situated in the Eight 

Directions of Devanahalli. ( Asta Dikkugalu ) .

 

                                                        Pic-3

 
 

One Day Trip from Bengaluru will be sufficient.

 

                                                       Pic-4
 

 

After having Darshan of Anjaneya Swamy on can visit Devanahalli Fort and 

inside the Fort one can also visit Sri Venugopla Swamy Temple.


------------------- Hari Om ----------------





  


 

Wednesday, June 24, 2026

ಕೃಷ್ಣಾರ್ಪಣೆಯ ಮಹತ್ವ---- Importance of Krishna Arpana




                                                                        Lord Krishna

 

ಕೃಷ್ಣಾರ್ಪಣೆಯ ಮಹತ್ವ


     Importance of KrishnaArpana

ನಮ್ಮಲ್ಲೊಂದು ಕ್ರಮವಿದೆ, ಯಾವುದೇ ಪೂಜೆಯ ಕೊನೆಗೆ ಅಥವಾ ಯಾವುದೇ ಸೇವೆ ಯಾ ವಸ್ತು ದೇವರಿಗೆ ಅರ್ಪಿಸುವಾಗ "ಕೃಷ್ಣಾರ್ಪಣಮಸ್ತು" ಎಂದು ಹೇಳಿ ತುಳಸಿ ನೀರು ಬಿಟ್ಟು ಸೇವೆ ಯಾ ವಸ್ತುವನ್ನು ದೇವರಿಗೆ ಅರ್ಪಿಸಿ ತುಳಸಿಯನ್ನು ಮಾತ್ರ ಸ್ವೀಕರಿಸುತ್ತೇವೆ. ಯಾಕೇ "ಕೃಷ್ಣಾರ್ಪಣಮಸ್ತು" ಯಾಕಿಲ್ಲ ರಾಮಾರ್ಪಣಮಸ್ತು, ವೆಂಕಟರಮಣಾರ್ಪಣಮಸ್ತು , ಮತ್ಸ್ಯಾರ್ಪಣಮಸ್ತು, ಕೂರ್ಮಾರ್ಪಣಮಸ್ತು, ವರಾಹಾರ್ಪಣಮಸ್ತು, ನರಸಿಂಹಾರ್ಪಣಮಸ್ತು, ವಾಮನಾರ್ಪಣಮಸ್ತು, ಭಾರ್ಗವಾರ್ಪಣಮಸ್ತು, ಬುದ್ಧಾರ್ಪಣಮಸ್ತು, ಕಲ್ಕ್ಯಾರ್ಪಣಮಸ್ತು ಅಥವಾ ಯಾವುದೇ ದೇವರ ಹೆಸರಿನಲ್ಲಿ ಅರ್ಪಣಮಸ್ತು?

ಶ್ರೀ ಮಹಾವಿಷ್ಣುವಿನ ದಶಾವತಾರಗಳಲ್ಲಿ ಕೃಷ್ಣಾವತಾರಕ್ಕೆ ವಿಶಿಷ್ಟ ಮಹತ್ವವಿದೆ. ಕೃಷ್ಣಾವತಾರಕ್ಕೆ ಹೋಲಿಸಿದರೆ ಇನ್ನಿತರ ಅವತಾರಗಳಲ್ಲಿ  ದೇವರು ಸಾಮಾನ್ಯ ಜನರಿಗೆ ಶ್ರೀ ಕೃಷ್ಣನಷ್ಟು ಹತ್ತಿರವಾಗಿರಲಿಲ್ಲ. ಶ್ರೀ ಕೃಷ್ಣನು ಅತೀ ಸಾಮಾನ್ಯರಲ್ಲಿ ಸಾಮಾನ್ಯರಿಗೆ ಕೈಗೆ ನಿಲುಕುತ್ತಿದ್ದನು. ಅದಕ್ಕಾಗಿಯೇ ಶ್ರೀ ಕೃಷ್ಣನನ್ನು " ಗೋವಿಂದ" ಎಂದು ಕರೆಯುವುದು.

ಗೋವಿಂದ ಎಂದರೆ ಗೋಪಾಲಕನಲ್ಲ. "ಗೋ" ಎಂದರೆ ಇಂದ್ರಿಯ , "ವಿಂದ" ಎಂದರೆ ನಿಲುಕು ಅಥವಾ ಸಿಗು ಎಂಬರ್ಥ. ಯಃ ಇಂದ್ರಿಯಾಣಾಂ ವಿಂದತಿ ಸಃ ಗೋವಿಂದಃ, ಅವನೇ ಶ್ರೀ ಕೃಷ್ಣ.

ಶ್ರೀ ಕೃಷ್ಣಾವತಾರವು ಒಂದು ಸಂಪೂರ್ಣ ಅವತಾರ. ಈ ಅವತಾರದಲ್ಲಿ ದಶಾವತಾರದ ಒಂಬತ್ತು ಅವತಾರಗಳಲ್ಲಿ ಭಗವಂತನು ತೋರಿಸಿದ ಲೀಲೇಗಳೇಲ್ಲವೂ ಇವೆ. ಹಾಗಾಗಿ ಶ್ರೀ ಕೃಷ್ಣನಿಗೆ ಅರ್ಪಣೆ ಮಾಡಿದರೆ ಉಳಿದೆಲ್ಲಾ ದೇವರಿಗೂ ಅರ್ಪಿಸಿದಂತೆ. ಹಾಗಾಗಿಯೇ "ಶ್ರೀ ಕೃಷ್ಣಾರ್ಪಣಮಸ್ತು".

 


 

                                                      Naivaidya - Sri Krishnarpanamastu

 

ನಮ್ಮಲ್ಲಿ ಕೆಲವರಿಗೂಂದು ಅಭ್ಯಾಸವಿದೆ, ಮನುಷ್ಯ ಸಹಜವಾದ ಅಭ್ಯಾಸ -ಇದು ನಾನು ದೇವರಿಗೆ ಅರ್ಪಿಸಿದ್ದು, ಇದು ನನ್ನದು, ನಾನು ಅತೀ ದೊಡ್ಡ ಕಾಣಿಕೆ ಯಾ ಸೇವೆ ಮಾಡಿದ್ದೇನೇ ನನಗೆ ಅಗ್ರ ಪ್ರಸಾದ ಸಿಗಬೇಕು, ಹೆಸರನ್ನು ಬೋರ್ಡ್ ಮೇಲೆ ಬರೆಯದಿದ್ದರೆ ಕೋಪ ಬರುತ್ತದೆ....ಇತ್ಯಾದಿ.

ಇದೆಲ್ಲವು ನಮ್ಮ ಅಹಂ ತೋರಿಸುತ್ತದೆ. ಒಮ್ಮೆ ದೇವರಿಗೆ ಕೃಷ್ಣಾರ್ಪಣೆ ಆಯಿತೋ ಆ ವಸ್ತು ಯಾ ಸೇವೆ ಯಾ ಪೂಜೆ ದೇವರಿಗೆ ಸೇರಿದ್ದು. ನಮಗೆ ಅದರ ಮೇಲೆ ಯಾವುದೇ ಹಕ್ಕಿಲ್ಲ. ಕೃಷ್ಣಾರ್ಪಣೆಯ ತುಳಸಿಯೋಂದೇ ನಮ್ಮ ಭಾಗಕ್ಕೆ. ಅಹಂಕಾರವನ್ನು ತ್ಯಜಿಸಿ ಕೃಷ್ಣಾರ್ಪಣ ಮಾಡಿದರಂತೂ ಅಮಿತ ಪುಣ್ಯ ಫಲ.

 

                                                                           Pic-1
 


 ಗೋವಿಂದನ ಮುಂದೆ ಅಹಂಭಾವದಿಂದ ವರ್ತಿಸಿದರೆ "for every action there is an equal and opposite reaction". ನಿರಂಹಂಕಾರದಿಂದ ಗೋವಿಂದನ ಮುಂದೆ ವರ್ತಿಸಿದರೆ ಜೀವನದಲ್ಲಿ "only ಭಗವಂತನ ACTION - ಅದುವೇ ದೇವರ ಕೃಪೆ.


ಶ್ರೀ ಕೃಷ್ಣಾನುಗ್ರಹ


------------------ Hari Om ----------------

Saturday, June 20, 2026

ನಿಮ್ಮ ಜೀವನ ಸಂಗಾತಿ ಯಾರು? - ಭಗವದ್ಗೀತೆ ತಿಳಿಸುತ್ತದೆ.

 

                                                          Lord Krishna & Bhagavad Gita

 

ನಿಮ್ಮ ಜೀವನ ಸಂಗಾತಿ ಯಾರು? - ಭಗವದ್ಗೀತೆ 

ತಿಳಿಸುತ್ತದೆ.


Who is Your Life Partner-The Bhagavad Gita Reveals

ಭಗವದ್ಗೀತೆಯಲ್ಲಿ ಭಗವಾನ್ ಶ್ರೀ ಕೃಷ್ಣ ಹೇಳುತ್ತಾರೆ:


Lord Krishna says in the Bhagavad Gita:
 

ಅಮ್ಮ? ---- Mother ?

ಅಪ್ಪ? ---- Father ?

ಹೆಂಡತಿ? ---- Wife ?

ಮಗ? ---- Son ?

ಗಂಡ? ---- Husband ?

ಮಗಳು? --- Daughter ?

ಸ್ನೇಹಿತರು? ---- Friends ?

ಇಲ್ಲವೇ ಇಲ್ಲ --- None of the Above at ALL


ನಿಮ್ಮ ನಿಜ ಜೀವನದ ಸಂಗಾತಿ ನಿಮ್ಮ ದೇಹ.


Your Real Life Partner is Your Body.


ನಿಮ್ಮ ದೇಹವು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ ನಂತರ ಯಾರೂ ನಿಮ್ಮೊಂದಿಗೆ ಇಲ್ಲ.
ನೀವು ಮತ್ತು ನಿಮ್ಮ ದೇಹವು ಹುಟ್ಟಿನಿಂದ ಸಾವಿನವರೆಗೆ ಒಟ್ಟಿಗೆ ಇರಿ.
ನಿಮ್ಮ ದೇಹಕ್ಕೆ ನೀವು ಏನು ಮಾಡುತ್ತೀರಿ ಎಂಬುದು ನಿಮ್ಮ ಜವಾಬ್ದಾರಿ ಮತ್ತು ಅದು ನಿಮ್ಮ ಬಳಿಗೆ ಬರುತ್ತದೆ.

 

                                                                     Human Body

 

ನಿಮ್ಮ ದೇಹವನ್ನು ನೀವು ಹೆಚ್ಚು ಕಾಳಜಿ ವಹಿಸುತ್ತೀರಿ, ನಿಮ್ಮ ದೇಹವು ನಿಮ್ಮನ್ನು ಹೆಚ್ಚು ಕಾಳಜಿ ವಹಿಸುತ್ತದೆ.


ನೀವು ಏನು ತಿನ್ನುತ್ತೀರಿ, ಫಿಟ್‌ ಆಗಿರುವುದಕ್ಕಾಗಿ ನೀವು ಏನು ಮಾಡುತ್ತೀರಿ, ನೀವು ಒತ್ತಡವನ್ನು ಹೇಗೆ ಎದುರಿಸುತ್ತೀರಿ, ಅದಕ್ಕೆ ನೀವು ಎಷ್ಟು ವಿಶ್ರಾಂತಿ ನೀಡುತ್ತೀರಿ, ನಿಮ್ಮ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ನಿರ್ಧರಿಸುತ್ತದೆ.


ನೀವು ವಾಸಿಸುವ ಏಕೈಕ ಶಾಶ್ವತ ವಿಳಾಸ ನಿಮ್ಮ ದೇಹ ಎಂದು ನೆನಪಿಡಿ.


ನಿಮ್ಮ ದೇಹವು ನಿಮ್ಮ ಆಸ್ತಿ / ಹೊಣೆಗಾರಿಕೆ, ಅದನ್ನು ಬೇರೆ ಯಾರೂ ಹಂಚಿಕೊಳ್ಳಲಾಗುವುದಿಲ್ಲ. ನಿಮ್ಮ ದೇಹವು ನಿಮ್ಮ ಜವಾಬ್ದಾರಿ. ಏಕೆಂದರೆ, ನೀವು ನಿಜ ಜೀವನದ ಸಂಗಾತಿ.

ಶಾಶ್ವತವಾಗಿ ಫಿಟ್ ಆಗಿರಿ. ನೀವೇ ನೋಡಿಕೊಳ್ಳಿ. ಹಣ ಬರುತ್ತದೆ ಮತ್ತು ಹೋಗುತ್ತದೆ. ಸಂಬಂಧಿಕರು ಮತ್ತು ಸ್ನೇಹಿತರು ಶಾಶ್ವತವಲ್ಲ.


ನಿಮ್ಮನ್ನು ಹೊರತುಪಡಿಸಿ ನಿಮ್ಮ ದೇಹಕ್ಕೆ ಯಾರೂ ಸಹಾಯ ಮಾಡಲಾರರು ಎಂಬುದನ್ನು ನೆನಪಿಡಿ.


1)
ಪ್ರಾಣಾಯಾಮ - ಶ್ವಾಸಕೋಶಕ್ಕೆ
2)
ಧ್ಯಾನ-ಮನಸ್ಸಿಗೆ
3)
ಯೋಗಾಸನ-ದೇಹಕ್ಕಾಗಿ
4)
ವಾಕಿಂಗ್-ಹೃದಯಕ್ಕಾಗಿ
5)
ಉತ್ತಮ ಆಹಾರ-ಕರುಳಿಗೆ
6)
ಒಳ್ಳೆಯ ಆಲೋಚನೆಗಳು-ಆತ್ಮಕ್ಕಾಗಿ
7)
ಒಳ್ಳೆಯ ಕರ್ಮ-ಜಗತ್ತಿಗೆ

----- Hari Om -----

 

                                                                             Pic-1

In the Bhagavad Gita, Lord Sri Krishna says:


Who is your Life Partner:


Mom ??

Dad ??

Wife ??

Son ??

Husband ??

The daughter ??

Friends ??


Not at all !!!! No One


Your real Life Partner is your Body.

After your Body stops responding, No one is with you.

You and your Body stay together from Birth to Death.

What you do with your Body is your responsibility and it comes down to you.

 

                                                                   Pic-2

  
 

The more you care about your Body, the more your Body will take care of you.

What you Eat What you do to stay fit How you deal with Stress how much you Relax and how your Body Responds.


* Remember that the only permanent address where you live is your Body. *


* Remember that the only permanent address where you live is your Body. *


Your Body is your Property / Liability that NO one else shares. Your Body is your Responsibility.


Because you are a Real Life partner.

Be Fit Forever.

Take care of Yourself.

Money comes and goes.

Relatives and friends are not permanent.

Remember that no one can help your Body except you.


Pranayama – its to the Lungs

Meditation - its for the Mind

Yogasana - it is for the Body

Walking - it is for the Heart

Good Food - its for the Stomach or Intestine

Good thoughts — its for the Soul

Good Karma - its for the World


------ Hari Om -----