Thursday, February 18, 2021

Ratha Saptami

                                                      Lord Surya / Sun God / Bhagavan
 

🌞 ☀️ "ರಥಸಪ್ತಮಿ" ☀️ 🌞


Ratha Saptami Muhurata Or Timings

Ratha Saptami on Friday, February 19, 2021


Snana Muhurata on Ratha Saptami -Day – between 05:03 AM to 06:40 AM

Duration - 01 Hour 38 Minutes

Main timing for Ratha Saptami - 06:19 AM

 

Observing or Viewing Sun time on Ratha Saptami day - 06:40 AM

Saptami Tithi Begins - 08:17 AM on Feb 18, 2021

Saptami Tithi Ends - 10:58 AM on Feb 19, 2021

 

                                                                        Pic1


🕉️ ರಥ ಸಪ್ತಮಿ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ 🕉



🌞🌺ಬಾಲ್ಯದಲ್ಲಿ ಅಜ್ಜಿ ಪಾಡ್ಯ, ಬಿದಿಗೆ, ತದಿಗೆ... ಅಮಾವಾಸ್ಯೆಯವರೆಗೆ ಕಂಠಪಾಠ ಮಾಡಿಸುವಾಗ ಒಂದೊಂದು ತಿಥಿಗೂ ಒಂದೊಂದು ಹಬ್ಬವನ್ನು ಸೇರಿಸಿ ಹೇಳಿಕೊಡುತ್ತಿದ್ದರು.

🌞🌺
ಪಾಡ್ಯ- ಉಗಾದಿ ಪಾಡ್ಯ, ಬಿದಿಗೆ-ಭಾನು ಬಿದಿಗೆ, ತದಿಗೆ-ಅಕ್ಷ ತದಿಗೆ, ಚೌತಿ-ವಿನಾಯಕನ ಚೌತಿ. . . . ಹೀಗೆ ‘ಸಪ್ತಮಿ’ಯ ಸರದಿ ಬಂದಾಗ ರಥಸಪ್ತಮಿ ಸೇರಿಕೊಳ್ಳುತ್ತಿತ್ತು.

🌞🌺
ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ವಿವರಿಸುತ್ತಿದ್ದರು.ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಅರ್ಥಪೂರ್ಣ ಆಚರಣೆಯಾಗುತ್ತದೆ.

🌞🌺
ಯುಗಾದಿ ಹೊಸತನವನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ.

🌞🌺 “
ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆ” ಅಂತ ಅಜ್ಜಿ ಹೇಳುತ್ತಿದ್ದುದು ನೆನಪಾಗುತ್ತದೆ.

🌞🌺
ಅಲ್ಲದೆ ಈ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ.

🌞🌺
ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ.

🌞🌺
ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ.

🌞🌺
ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ.

🌞🌺
ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ.

🌞🌺
ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ನಾಳೆ (ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿ-ಗುರುವಾರ) ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ.

ಆರೋಗ್ಯಂ ಭಾಸ್ಕರಾದಿಚ್ಛೇತ್...

🌞🌺
ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯ ತುಂಬಿಕೊಳ್ಳುತ್ತದೆ. ‘

🌞🌺
ಆರೋಗ್ಯಂ ಭಾಸ್ಕರಾದಿಚ್ಛೇತ್’ ಅಂದರೆ ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ.

🌞🌺
ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.

🌞🌺
ಚಂದ್ರನ ಬೆಳಕಿನಲ್ಲಿ ವಿಟಮಿನ್ ‘ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ‘ಡಿ’ ಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

🌞🌺
ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧ ನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ.

🌞🌺
ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ.

🌞🌺
ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ.

🌞🌺
ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ.

🌞🌺
ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

🌞🌺
ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.

🌞🌺108
ಸೂರ್ಯ ನಮಸ್ಕಾರ ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ.

🌞🌺
ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ.

🌞🌺
ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.

🌞🌺
ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ.

 

                                                                             Pic2
       


ಪೌರಾಣಿಕ ಹಿನ್ನೆಲೆಯೇನು?



🌞🌺
ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ.

🌞🌺
ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ.

🌞🌺
ಈ ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು.

🌞🌺
ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು.

🌞🌺
ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು.

🌞🌺
ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ.

🌞🌺
ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ.

🌞🌺
ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.

🌞🌺
ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

🌞🌺
ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ.

🌞🌺
ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ.

🌞🌺
ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ.

🌞🌺
ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.

🌞🌺
ಇನ್ನು, ‘ಭೂರ್ಭುವಸ್ವಃ'. . . ಎಂಬಮಂತ್ರದಲ್ಲಿ ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

🌞🌺
ಎಕ್ಕದೆಲೆಯ ಸ್ನಾನ ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು.

🌞🌺
ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

🌞🌺
ಹೀಗಾಗಿಯೇ ಈ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

🌞🌺
ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುವ ಬದಲು ಪ್ರತ್ಯಕ್ಷವಾಗಿ ಕಾಣುವ ದೈವೀ ಸ್ವರೂಪಗಳಾದ, ಯಾವುದೇ ಜಾತಿಭೇದ, ಧರ್ಮದ ಚೌಕಟ್ಟಿಲ್ಲದ ಸೂರ್ಯ, ಚಂದ್ರ, ವೃಕ್ಷ, ಬೆಟ್ಟ, ನದೀನದಗಳ ಆರಾಧನೆಯನ್ನು ನಮ್ಮ ಪೂರ್ವಿಕರು ಆಚರಣೆಗೆ ತಂದಿರುವುದು ಎಷ್ಟೊಂದು ಅರ್ಥಪೂರ್ಣವಾಗಿದೆಯಲ್ಲವ?

*
ಸಪ್ತ ಸಪ್ತ ಮಹಾಸಪ್ತ
ಸಪ್ತ ದ್ವೀಪ ವಸುಂಧರ*

*
ಸಪ್ತಾರ್ಕ ಪ್ರಣಮಾಧ್ಯಾಯ
ಸಪ್ತಮಿ ರಥ ಸಪ್ತಮಿ*

ಎಂದು ಈ ಶ್ಲೋಕವನ್ನು ಹೇಳಿಕೊಂಡು ತಲೆಗೆ ಸ್ನಾನ ಮಾಡಿದರೆ ಓಳ್ಳಯದು

ಈ ಮೇಲಿನ ಎಲ್ಲಾ ಸಂಗತಿಗಳನ್ನು ಓದಿ, ನಿಮ್ಮ ಕುಟುಂಬ, ಬಂದು, ಬಳಗ, ಮತ್ತು ವಿಶೇಷ ವಾಗಿ ಇಂದಿನ ಮಕ್ಕಳಿಗೆ ಮನವರಿಕೆ ಮಾಡಿ.


ನಮ್ಮ ಸಂಸ್ಕೃತಿ ಉಳಿಸಲು ನಿಮ್ಮ ಕೊಡುಗೆ ಇರಲಿ.


                                                                             Pic3                                                 


                                                             ----------- Hari Om -----------








 

 

 

Tuesday, January 12, 2021

27 Nakshatra or Star --- Mantras

27 Nakshatra or Star ---- Mantras

 

27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು: ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ಸೂರ್ಯನ ನೋಡುತ್ತಾ ೯ರಿಂದ ೧೦೮ ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ

 

These are the 27 different Nakshatra Mantras pertaining to each Nakshatras and very powerful need to Recite minimum 9 times to 108 times to their respective it is allocated based on individual Birth Date.Each persons Nakshatras can be known if correct given Birth day Date.

Each respective Mantra are to be Recited facing East wards looking at the SUN in early morning one will get induced with Cosmic/Positive Energy.



1.
ಅಶ್ವಿನಿ:


ಓಂ ಶ್ವೇತವರ್ಣೈ ವಿದ್ಮಹೇl
ಸುಧಾಕರಾಯೈ ಧೀಮಹಿl
ತನ್ನೋ ಅಶ್ವಿನೇನ ಪ್ರಚೋದಯಾತ್ ll

2.
ಭರಣಿ:


ಓಂ ಕೃಷ್ಣವರ್ಣೈ ವಿದ್ಮಹೇl
ದಂಡಧರಾಯೈ ಧೀಮಹಿl
ತನ್ನೋ ಭರಣೀ ಪ್ರಚೋದಯಾತ್ ll

3.
ಕೃತ್ತಿಕಾ:


ಓಂ ವಣ್ಣಿದೇಹಾಯೈ ವಿದ್ಮಹೇl
ಮಹಾತಪಾಯೈ ಧೀಮಹಿl
ತನ್ನೋ ಕೃತ್ತಿಕಾ ಪ್ರಚೋದಯಾತ್ ll

4.
ರೋಹಿಣಿ:


ಓಂ ಪ್ರಜಾವಿರುದ್ಧೈ ಚ ವಿದ್ಮಹೇl
ವಿಶ್ವರೂಪಾಯೈ ಧೀಮಹಿl
ತನ್ನೋ ರೋಹಿಣೀ ಪ್ರಚೋದಯಾತ್ ll

5.
ಮಗಶಿರಾ:


ಓಂ ಶಶಿಶೇಖರಾಯ ವಿದ್ಮಹೇl
ಮಹಾರಾಜಾಯ ಧೀಮಹಿl
ತನ್ನೋ ಮಗಶೀರ್ಷಾಃ ಪ್ರಚೋದಯಾತ್ ll

6.
ಆರ್ದ್ರಾ:


ಓಂ ಮಹಾಶ್ರೇಷ್ಠಾಯ ವಿದ್ಮಹೇl
ಪಶುಂ ತನಾಯ ಧೀಮಹಿl
ತನ್ನೋ ಆರ್ದ್ರಾ ಪ್ರಚೋದಯಾತ್ ll

7.
ಪುನರ್ವಸು:


ಓಂ ಪ್ರಜಾವರುಧ್ಯೈ ಚ ವಿದ್ಮಹೇl
ಅದಿತಿ ಪುತ್ರಾಯ ಧೀಮಹಿl
ತನ್ನೋ ಪುನರ್ವಸು ಪ್ರಚೋದಯಾತ್ ll


8. ಪುಷ್ಯಾ:


ಓಂ ಬ್ರಹ್ಮವರ್ಚಸಾಯ ವಿದ್ಮಹೇl
ಮಹಾದಿಶಾಯಾಯ ಧೀಮಹಿl
ತನ್ನೋ ಪುಷ್ಯಃ ಪ್ರಚೋದಯಾತ್ ll

9.
ಆಶ್ಲೇಷಾ:


ಓಂ ಸರ್ಪರಾಜಾಯ ವಿದ್ಮಹೇl
ಮಹಾರೋಚನಾಯ ಧೀಮಹಿl
ತನ್ನೋ ಆಶ್ಲೇಷಃ ಪ್ರಚೋದಯಾತ್ ll

10.
ಮಖಾ:


ಓಂ ಮಹಾ ಅನಗಾಯ ವಿದ್ಮಹೇl
ಪಿತ್ರಿಯಾದೇವಾಯ ಧೀಮಹಿl
ತನ್ನೋ ಮಖಃ ಪ್ರಚೋದಯಾತ್ ll

11.
ಪುಬ್ಬಾ:


ಓಂ ಅರಿಯಂನಾಯ ವಿದ್ಮಹೇl
ಪಶುದೇಹಾಯ ಧೀಮಹಿl
ತನ್ನೋ ಪೂರ್ವ ಫಲ್ಗುಣಿ ಪ್ರಚೋದಯಾತ್ ll

12.
ಉತ್ತರಾ:


ಓಂ ಮಹಾಬಕಾಯೈ ವಿದ್ಮಹೇl
ಮಹಾಶ್ರೇಷ್ಠಾಯೈ ಧೀಮಹಿl
ತನ್ನೋ ಉತ್ತರ ಫಲ್ಗುಣಿ ಪ್ರಚೋದಯಾತ್ ll

13.
ಹಸ್ತಾ:


ಓಂ ಪ್ರಯಚ್ಚತಾಯೈ ವಿದ್ಮಹೇl
ಪ್ರಕೃಪ್ರಣೀತಾಯೈ ಧೀಮಹಿl
ತನ್ನೋ ಹಸ್ತಾ ಪ್ರಚೋದಯಾತ್ ll


 

14. ಚಿತ್ತಾ:


ಓಂ ಮಹಾದೃಷ್ಟಾಯೈ ವಿದ್ಮಹೇl
ಪ್ರಜಾರಪಾಯೈ ಧೀಮಹಿl
ತನ್ನೋ ಚೈತ್ರಾಃ ಪ್ರಚೋದಯಾತ್ ll

15.
ಸ್ವಾತಿ:


ಓಂ ಕಾಮಸಾರಾಯೈ ವಿದ್ಮಹೇl
ಮಹಾನಿಷ್ಠಾಯೈ ಧೀಮಹಿl
ತನ್ನೋ ಸ್ವಾತಿ ಪ್ರಚೋದಯಾತ್ ll

16. ವಿಶಾಖಾ:


ಓಂ ಇಂದ್ರಾಗ್ನೇಸ್ಯೈ ವಿದ್ಮಹೇl
ಮಹಾಶ್ರೇಷ್ಠಾಯೈ ಚ ಧೀಮಹಿl
ತನ್ನೋ ವಿಶಾಖಾ ಪ್ರಚೋದಯಾತ್ ll

17.
ಅನೂರಾಧಾ:


ಓಂ ಮಿತ್ರದೇಯಾಯೈ ವಿದ್ಮಹೇl
ಮಹಾಮಿತ್ರಾಯ ಧೀಮಹಿl
ತನ್ನೋ ಅನೂರಾಧಾ ಪ್ರಚೋದಯಾತ್ ll

18.
ಜ್ಯೇಷ್ಠಾ:


ಓಂ ಜ್ಯೇಷ್ಠಾಯೈ ವಿದ್ಮಹೇl
ಮಹಾಜ್ಯೇಷ್ಠಾಯೈ ಧೀಮಹಿl
ತನ್ನೋ ಜ್ಯೇಷ್ಠಾ ಪ್ರಚೋದಯಾತ್ ll

19
ಮೂಲಾ:


ಓಂ ಪ್ರಜಾಧಿಪಾಯೈ ವಿದ್ಮಹೇl
ಮಹಾಪ್ರಜಾಧಿಪಾಯೈ ಧೀಮಹಿl
ತನ್ನೋ ಮೂಲಾ ಪ್ರಚೋದಯಾತ್ ll

20.
ಪೂರ್ವಾಷಾಢಾ:


ಓಂ ಸಮುದ್ರಕಾಮಾಯೈ ವಿದ್ಮಹೇl
ಮಹಾಬೀಜಿತಾಯೈ ಧೀಮಹಿl
ತನ್ನೋ ಪೂರ್ವಾಷಾಢಾ ಪ್ರಚೋದಯಾತ್ ll

21.
ಉತ್ತರಾಷಾಢಾ:


ಓಂ ವಿಶ್ವೇದೇವಾಯ ವಿದ್ಮಹೇl
ಮಹಾಷಾಢಾಯ ಧೀಮಹಿl
ತನ್ನೋ ಉತ್ತರಾಷಾಢಾ ಪ್ರಚೋದಯಾತ್ ll

22.
ಶ್ರವಣಾ:


ಓಂ ಮಹಾಶ್ರೇಷ್ಠಾಯೈ ವಿದ್ಮಹೇl
ಪುಣ್ಯಶ್ಲೋಕಾಯ ಧೀಮಹಿl
ತನ್ನೋ ಶ್ರವಣ ಪ್ರಚೋದಯಾತ್ ll

23.
ಧನಿಷ್ಠಾ:


ಓಂ ಅಗ್ರನಾಥಾಯ ವಿದ್ಮಹೇl
ವಸೂಪ್ರೀತಾಯ ಧೀಮಹಿl
ತನ್ನೋ ಶರ್ವಿಷ್ಠಾ ಪ್ರಚೋದಯಾತ್ ll

24.
ಶತಭಿಷಾ:


ಓಂ ಭೇಷಜಾಯ ವಿದ್ಮಹೇl
ವರುಣದೇಹಾಯ ಧೀಮಹಿl
ತನ್ನೋ ಶತಭಿಷಾ ಪ್ರಚೋದಯಾತ್ ll

25.
ಪೂರ್ವಾಭಾದ್ರ:


ಓಂ ತೇಜಸ್ಕರಾಯ ವಿದ್ಮಹೇl
ಅಜರಕ ಪಾದಾಯ ಧೀಮಹಿl
ತನ್ನೋ ಪೂರ್ವಪ್ರೋಷ್ಟಪತ ಪ್ರಚೋದಯಾತ್ ll

26.
ಉತ್ತರಾಭಾದ್ರ:


ಓಂ ಅಹಿರಬುಧ್ನಾಯ ವಿದ್ಮಹೇl
ಪ್ರತಿಷ್ಠಾಪನಾಯ ಧೀಮಹಿl
ತನ್ನೋ ಉತ್ತರಪ್ರೋಷ್ಟಪತ ಪ್ರಚೋದಯಾತ್ ll

27.
ರೇವತಿ:


ಓಂ ವಿಶ್ವರೂಪಾಯ ವಿದ್ಮಹೇl
ಪೂಷ್ಣ ದೇಹಾಯ ಧೀಮಹಿl
ತನ್ನೋ ರೇವತಿ ಪ್ರಚೋದಯಾತ್ ll

 

Please Recite respective Mantra according their Nakshatra derived from their Birth dates and achieve Positive Energy and get good Health, Success and get greater achievements in Life.


----------- Hari Om ----------



Friday, December 25, 2020

Vaikunta Ekadasi - Understanding & its Significance

Sri Vaikunta Ekadasi – Understanding and its Significance

                                                                  Lord Venkateswara

Sri  Vaikunta Ekadasi - Understanding & its Significance 

ಶ್ರೀ ವೈಕುಂಠ ಏಕಾದಶಿ ಅದರ ಮಹತ್ವ

ದಿನಾಂಕ 25--12--2020 ಶುಕ್ರವಾರ ದ೦ದು ಆಚರಿಸಲಾಗುತ್ತಿದೆ

ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ
ಉಪವಾಸದ ವೈಜ್ಞಾನಿಕ ಸತ್ಯ….!

ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”,

ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ :

ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

ಇನ್ನು “ಏಕಾದಶಿ” ಎಂದರೆ

ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು. “ಏಕಾದಶಿ” ಒಂದು ವ್ರತ.

ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.

ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.

ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು.

ಎಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.
ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ.

ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.

ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :

ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.

ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.

ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.

ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.

ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.

ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ.

ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.
ನಂದಗೋಪನಿಗೆ ಪರಮಾನಂದವಾಯಿತು


                                                      Lord Venkateswara or Srinivasa

ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜ ರೂಪ ಅರಿಯಲಾರೆವು ಎಂದು ಪರಿತಪಿಸಿದರು.

ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು,

ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.

ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.

ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.

ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು.

ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.

ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು.

ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..

ವೈಕುಂಠ ಏಕಾದಶಿ...!!!
ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.

ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ.

ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು ಬಂದಿದೆ.
ಈ ಒಂದು ಏಕಾದಶಿ ಮೂರು ಕೋಟಿ ಏಕಾದಶಿಗಳಿಗೆ ಸಮವಾದ ಪವಿತ್ರತೆಯನ್ನು ಹೊಂದಿರುವ ಕಾರಣ ಇದನ್ನು ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.

ಮುಕ್ಕೋಟಿ ಏಕಾದಶಿ ದಿನ ಹಾಲಾಹಲ, ಅಮೃತ ಎರಡೂ ಹುಟ್ಟಿದವು. ಈ ದಿನವೇ ಶಿವನು ಹಾಲಾಹಲ ನುಂಗಿದ. ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಕೃಷ್ಣನು ಅರ್ಜುನನಿಗೆ ಇದೇ ದಿನ ಉಪದೇಶಿಸಿದ ಎಂಬ ನಂಬಿಕೆ ಇದೆ.

 

                                                                Pic-1


ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ .

ವಿಷ್ಣು ಪುರಾಣದ ಪ್ರಕಾರ ಇಬ್ಬರು ರಾಕ್ಷಸರು ತನಗೆ ವಿರೋದ ವಾಗಿದ್ದರೂ ವೈಕುಂಠ ಏಕಾದಶಿ ದಿನ ತನ್ನ ಬಾಗಿಲನ್ನು ತೆರೆದಿರುತ್ತಾನಂತೆ ಈ ಕತೆಯನ್ನು ಕೇಳಿದವರಿಗೆ ಮೋಕ್ಷ ಪ್ರಾಪ್ತಿಯಾಗುವಂತೆ ವೈಕುಂತದ ಬಾಗಿಲನ್ನು ತೆರೆದಿಡುವಂತೆ ಬೇಡಿಕೊಳ್ಳುತ್ತಾರೆ.

ಆದುದರಿಂದ ಎಲ್ಲಾ ವಿಷ್ಣು ದೇವಾಲಯದ ಬಾಗಿಲುಗಳನ್ನು ಆ ದಿನ ತೆಗೆದಿರುತ್ತಾರೆ . ಮಾಮೂಲಿ ದಿನಗಳಲ್ಲಿ ಉತ್ತರ ದ್ವಾರಗಳನ್ನು ಮುಚ್ಚಿರುತ್ತಾರೆ .

ಆದರೆ, ವೈಕುಂಠ ಏಕಾದಶಿದಿನ ಬಾಗಿಲನ್ನು ತೆರೆದಿರುತ್ತಾರೆ .
ವೈಕುಂಠ ಏಕಾದಶಿ ದಿನ ತಿರುಮಲೆಯ ದೇವಾಲಯದಲ್ಲಿರುವ ಉತ್ತರ ದ್ವಾರವನ್ನು ತೆರೆದಿರುತ್ತಾರೆ. ಪದ್ಮ ಪುರಾಣದ ಪ್ರಕಾರ ವಿಷ್ಣುವಿನಿಂದ ಬಂದ ಶಕ್ತಿಯಿಂದ ಮೊರಾ ಎಂಬ ರಾಕ್ಷಸನನ್ನು ಸಂಹರಿಸಿದ ದಿನವಂತೆ .

ಮುಕ್ಕೋಟಿ ಏಕಾದಶಿ ದಿನದಂದು ಅಂದರೆ ಧನುರ್ಮಾಸ ಶುಕ್ಲ ಏಕಾದಶಿ ದಿನದಂದು ಉಪಾಸವಿರ ಬೇಕಂತೆ ಇದಕ್ಕೆ ಕಾರಣವೇನೆಂದರೆ..

ಮೊರಾ ಎಂಬ ರಾಕ್ಷಸನು ಅಂದು ಅಕ್ಕಿಯಲ್ಲಿ ಅಡಗಿ ಕುಳಿತಿರುತ್ತಾನಂತೆ ಆದುದರಿಂದ ಅಂದು ಅಕ್ಕಿಯಿಂದ ಮಾಡಿದ ಯಾವುದೇ ಪದಾರ್ಥವನ್ನು ತಿನ್ನ ಬಾರದು .

 

                                                          Lord Vishnu's Dasavatara


ಮುಕ್ಕೋಟಿ ಏಕಾದಶಿ ಒಂದು ದಿನ ಉಪವಾಸ ವಿದ್ದರೆ ಮಿಕ್ಕ 23 ಏಕಾದಶಿಗಳಲ್ಲಿ ಉಪವಾಸ ವಿದ್ದಂತೆಯೇ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ.
ಮೊರಾ ಎಂದರೆ ರಾಜಸಿಕ ಹಾಗೂ ತಾಮಾಸಿಕ ಗುಣಗಳಿಗೆ ಪ್ರತೀಕ ಅವುಗಳನ್ನು ಉಪವಾಸ ವಿರುವುದರ ಮೂಲಕ ಜಯಿಸುವುದರ ಮೂಲಕ ಮುಕ್ತಿಗೆ ಮಾರ್ಗ ದೊರೆಯುತ್ತದಂತೆ.

-------- Hari Om --------

Wednesday, November 18, 2020

ಮನೆ ಮದ್ದು Mane Maddu or Home Remedies

ಮನೆ ಮದ್ದು 

 

 Mane Maddu or Home Remedies 

 

                                                         Menthiya or Fenugreek seeds


                                                       Oma Kalu or Carom seeds


                                                           Zeerige or Cumin seeds


ಮೆಂತ್ಯೆ, ಓಂಕಾಳು, ಜೀರಿಗೆ ಮೂರೂ ಬೆರೆಸಿ ಮೂರು ತಿಂಗಳ ಕಾಲ ತೆಗೆದುಕೊಂಡರೆ…ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತವೆ.


ಬಿಸಿ ನೀರಿನಲ್ಲಿ ಮೆಂತ್ಯೆ, ಓಂಕಾಳು, ಜೀರಿಗೆ ಪುಡಿ ಬೆರೆಸಿ ಕುಡಿದರೆ 3 ತಿಂಗಳಲ್ಲಿ ದೇಹದಲ್ಲಿನ ಕೆಟ್ಟ ಕೊಬ್ಬೆಲ್ಲಾ ಕರಗಿ ತೂಕ ಕಡಿಮೆಯಾಗುತ್ತವೆ.. ಕೇವಲ ತೂಕವಷ್ಟೇ ಅಲ್ಲ… ಕೂದಲ ಬೆಳವಣಿಗೆ, ಹೃದಯ ಸಂಬಂಧಿ ಕಾಯಿಲೆಗಳು, ಮಲಬದ್ಧತೆ ಇನ್ನೂ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿ ಈ ಪುಡಿ ಕೆಲಸ ಮಾಡುತ್ತದೆ. ಆ ಪುಡಿಯನ್ನು ಹೇಗೆ ತಯಾರಿಸಿಕೊಳ್ಳಬೇಕು, ಹೇಗೆ ಬಳಸಬೇಕು… ಅದರಿಂದ ಆಗುವ ಇತರೆ ಉಪಯೋಗಗಳು ಏನು ಎಂದು ತಿಳಿದುಕೊಳ್ಳೋಣ.

ಬೇಕಾದ ಪದಾರ್ಥಗಳು:

250
ಗ್ರಾಂ ಮೆಂತ್ಯೆ
100
ಗ್ರಾಂ ಓಂಕಾಳು
50
ಗ್ರಾಂ ಜೀರಿಗೆ


ತಯಾರಿಸುವ ವಿಧಾನ:
ಮೊದಲು 3 ಪದಾರ್ಥಗಳನ್ನು ಬೇರೆಬೇರೆ ಹೆಂಚಿನ ಮೇಲೆ ಹಾಕಿ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಮೆಂತ್ಯೆ, ಓಂಕಾಳು, ಕಪ್ಪು ಜೀರಿಗೆ ಬೆರೆಸಿ ಪುಡಿ ಮಾಡಿಕೊಳ್ಳಬೇಕು. ಆ ಪುಡಿಯನ್ನು ಗಾಳಿಯಾಡದ ಬಾಟಲಿಯಲ್ಲಿಡಬೇಕು.



                                                        Menthiya seeds

 
ಬಳಸುವುದು ಹೇಗೆ?


ನಿತ್ಯ ರಾತ್ರಿ ಊಟದ ಬಳಿಕ 1 ಗ್ಲಾಸ್ ಬಿಸಿ ನೀರಿನಲ್ಲಿ 1 ಸ್ಪೂನ್ ಪುಡಿಯನ್ನು ಬೆರೆಸಿ ಕುಡಿಯಬೇಕು. ಕುಡಿದ ಬಳಿಕ ಯಾವುದೇ ಆಹಾರ ತೆಗೆದುಕೊಳ್ಳಬಾರದು.

ನಿತ್ಯ ಈ ಪುಡಿಯನ್ನು ಬಳಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ವಿಷ ಪದಾರ್ಥಗಳು ಮಲ, ಮೂತ್ರ, ಬೆವರಿನ ಮೂಲಕ ಹೊರಹೋಗುತ್ತವೆ. ನಿಯಮಿತವಾಗಿ 40-45 ದಿನ ಬಳಸಿದರೆ ತುಂಬಾ
ಪ್ರಯೋಜನಕಾರಿಯಾಗುತ್ತದೆ. 3 ತಿಂಗಳು ಬಳಸಿದರೆ ನಿಮ್ಮ ಆರೋಗ್ಯಕ್ಕೆ ಸರಿಸಾಟಿ ಇರಲ್ಲ.

ಈ ಪುಡಿಯನ್ನು ಬಳಸಿದ ಮೇಲೆ ದೇಹದಲ್ಲಿನ ಅಧಿಕ ಕೊಬ್ಬು ಕರಗಿಹೋಗುತ್ತದೆ. ರಕ್ತ ಶುದ್ಧಿಯಾಗುತ್ತದೆ.

ದೇಹದಲ್ಲಿ ಉತ್ತಮವಾದ ರಕ್ತ ಪ್ರವಹಿಸುತ್ತದೆ. ದೇಹದ ಮೇಲಿನ ಸುಕ್ಕುಗಳು ನಿವಾರಣೆಯಾಗುತ್ತದೆ. ಯೌವನದಿಂದ ಇರುತ್ತೀರ. ದೇಹ ದೃಢವಾಗಿ, ಚುರುಗಾಗಿ, ಹೊಳಪಿನಿಂದ ಕೂಡಿರುತ್ತದೆ.

 


                                                     Oma Kalu or Oma seeds


ಈ ಪುಡಿಯಿಂದ ಆಗುವ ಇತರೆ ಪ್ರಯೋಜನಗಳು:

ಕೀಲು, ಮೊಣಕಾಲು ನೋವು ಕಡಿಮೆಯಾಗುತ್ತದೆ. ಮೂಳೆಗಳು ಬಲಗೊಳ್ಳುತ್ತವೆ.

ಕಣ್ಣಿನ ದೃಷ್ಟಿ ಚುರುಕಾಗುತ್ತದೆ ಅಲ್ಲದೆ… ವಸಡುಗಳು ದೃಢವಾಗುತ್ತವೆ, ಆರೋಗ್ಯವಾಗಿ ಬದಲಾಗುತ್ತಾರೆ.

ಈ ಹಿಂದೆ ತೆಗೆದುಕೊಂಡಿದ್ದ ಇಂಗ್ಲಿಷ್ ಮೆಡಿಸಿನ್ ಸೈಡ್ ಎಫೆಕ್ಟ್ಸ್‌ನ್ನು ಇದು ಕ್ಲಿಯರ್ ಮಾಡುತ್ತದೆ. ಕೂದಲ ಬೆಳವಣಿಗೆಯನ್ನು ಇದು ಉತ್ತಮ ಪಡಿಸುತ್ತದೆ.

ಮಲಬದ್ಧತೆ ಶಾಶ್ವತವಾಗಿ ದೂರವಾಗುತ್ತದೆ. ಮೋಷನ್ ಸುಲಭವಾಗಿ ಆಗುತ್ತದೆ.

ರಕ್ತ ಸಂಚಲನೆ ಉತ್ತಮಗೊಳ್ಳುತ್ತದೆ. ಹೃದಯದ ಕೆಲಸ ಸುಧಾರಿಸುತ್ತದೆ.

ದೀರ್ಘಕಾಲದಿಂದ ಕೆಮ್ಮಿನಿಂದ ಬಳಲುತ್ತಿರುವವರಿಗೆ ಇದು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಇದನ್ನು ನಿತ್ಯ ರಾತ್ರಿ ಹೊತ್ತು ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತದೆ.

ಮಿದುಳು ಚುರುಕಾಗುತ್ತದೆ. ಶ್ರವಣ ಸಾಮರ್ಥ್ಯ ಬೆಳೆಯುತ್ತದೆ. ನಿತ್ಯ ಕೆಲಸಗಳಲ್ಲಿ ಚುರುಕಾಗಿ ಪಾಲ್ಗೊಳ್ಳಬಹುದು.

ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ಇದರ ಫಲಿತಾಂಶಗಳನ್ನು ಗಮನಿಸಿದವರು ಈ ಪುಡಿಯನ್ನು ಮತ್ತೆ ಬಳಸಬೇಕೆಂದರೆ ಮೂರು ತಿಂಗಳಿಗೊಮ್ಮೆ ಹದಿನೈದು ದಿನ ಗ್ಯಾಪ್ ಬಿಟ್ಟು ಮತ್ತೆ ಕುಡಿಯುವುದನ್ನು ಶುರು ಮಾಡಬೇಕು

 

                                                               Zeerige Kalu


 This is a wonderful Kashaya mix of basic 3 herbs it has many Health benefits follow above instructions and be Hale & Healthy all the Times.


----------- Hari Om ----------

Tuesday, October 13, 2020

Pushya Arka Yoga

 Pushya Arka Yoga

 

PUSHYA-ARKA YOGA 


 

      Sri Raghavendra Swamy

 
Combination of Pushyami Nakshathra associated with Sunday (Arka Vaara) is spiritually considered as meritorious (parvakaala) for performing sacred deeds like prayer, daAna etc.

Astrologically this phenomena of Pushya-Arka yoga occurs when Moon is transiting in Pushyami star in Karkataka Rasi associated with Sunday. It occurs more than once in a year.

If it is also associated with Pournami thithi > Pushya maasa (when Moon will be in Pushyami star on the full moon day) and Sun transiting in Uttaraashaada Nakshathra (Sun is star lord of Uttaraashaada) in Makara Raasi the merits are > bountiful.

Jupiter (Guru) is star lord of Pushyami Nakshathra and it is befitting and auspicious to invoke/seek the blessings of spiritual Gurus' on this sacred day.

Who else can we worship other than Mantralaya Guru Saarvabhouma Sri Raghavendra Swamy?

> who is a true Guru, Kaamadhenu, Kalpa Vriksha.

Sri Appanaachaarya an ardent devotee and prime disciple of Sri Guru Raayaru in his famous hymn on Guru Raaghavendra (Sri Raaghavednra Stothra) emphasizes as follows....


ಸೋಮಸೂರ್ಯೋಪರಾಗೇ ಚ ಪುಷ್ಯಾರ್ಕಾದಿಸಮಾಗಮೇ |
ಯೋನೋತ್ತಮಮಿದಂ ಸ್ತೋತ್ರಮಷ್ಟೋತ್ತರಶತಂ ಜಪೇತ್ |
ಭೂತಪ್ರೇತಪಿಶಾಚಾದಿ ಪೀಡಾ ತಸ್ಯ ನ ಜಾಯತೇ |

Soma sooryo paraage cha pushyaarkaadi samaagame,
Yo anuthamam idham stotramashtothara satham japeth,
Bootha pretha pisachaadi peeda thasya na jaayathe

Whenever there is a lunar or solar eclipse or during Pushya Star occurring on Sunday, any person reciting Sri Raaghavendra Stothra 108 times with all sincerity and devotion will not have trouble from ghosts/devils and no evil befall on him.

ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯ ಚ |
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||

ದುರ್ವಾದಿ ಧ್ವಾಂತರವಯೇ ವೈಷ್ಣವೇಂದೀವರೇಂದವೇ
ಶ್ರೀರಾಘವೇಂದ್ರಗುರವೇ ನಮೋತ್ಯಂತದಯಾಳವೇ ||

ಮೂಕೋಪಿ ಯತ್ಪ್ರಸಾದೇನ ಮುಕುಂದ ಶಯನಾಯತೇ
ರಾಜರಾಜಾಯತೇ ರಿಕ್ತೋ ರಾಘವೇಂದ್ರಂ ತಮಾಶ್ರಯೇ ||

ಆಪಾದಃ ಮೌಲಿ ಪರ್ಯಂತಂ ಗುರೂಣಾಂ ಆಕೃತಿಂ ಸ್ಮರೇತ್
ತೇನ ವಿಘ್ನಾಃ ಪ್ರಣಶ್ಯಂತಿ ಸಿಧ್ಧ್ಯಂತಿ ಚ ಮನೋರಥಾಃ ||

naMbi keTTavarillavO ee gurugaLa |
naMbadE keDuvaruMTE ||


yadbrindaavanasapradakshinanamaskaaraabhishhekastuti
dhyaanaaraadhanamridvilepanamukaanekopachaaraan sadaa |
kaarankaaramabhiprayaanti chaturo lokaha pumarthaan sadaa
Shrimadsadgururaaghavendrayatiraat kuryaaddhruvam mangalam;

ಯದ್ಬೃಂದಾವನಸತ್ಪ್ರದಕ್ಷಿಣನಮಸ್ಕಾರಾಭಿಷೇಕಸ್ತುತಿ
ಧ್ಯಾನಾರಾಧನ ಮೃದ್ವಿಲೇಪನಮುಖಾನೇಕೋಪಚಾರಾನ್ ಸದಾ |
ಕಾರಂಕಾರಮಭಿಪ್ರಯಾಂತಿ ಚತುರೋ ಲೋಕಾಃ ಪುಮರ್ಥಾನ್ ಸದಾ
ಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಲಂ ||

(says Sri AppanaCharya in Sri Raghavendra MangalaAshtaka)

➡️ Sri Guru RaAyaru;

1. Mantralayam (abode of Sri Guru Raaghavendra);
2. Raayara Brindavana Darshana;
3. Raayara Seva/Aaraadhana;
4. Raayara Paadodaka;
5. Raayara Smarane/Guna Stavana;
6. Raayara Abhisheka; Archana;
7. Raayara Brindavana Pradakshina/Namaskaara;
8. Raayara Ashtakshari Manthra/Raayara Stothra;
9. Raayara Mrittika;
10. Raayara Hastodaka;
11. Raayara Phala-Mantrakshate;
12. Raayara Mahima/Leela;
(list is not exhaustive....)
> are always sacred and highly meritorious;

Therefore, Sri Guru Raayaru should always be adored with utmost reverence; devotion; faith; obeisance and gratitude. He is Kaliyuga Kaamadhenu – Kalpavriksha; His glory is everlasting;

> Worshiping Sri Guru RaAyaru is Hari Preeti;

> Lord Vishnu will not get pleased if His devotees are ignored/disrespected;

> Raayaru is one of the greatest devotees of Lord Vishnu -
Parama Bhagavatottama;

> RaAyaru is an incarnation of Bhakta Prahlada (Prahlada Raayaru) whose Apratima Vishnu Bhakti has been mentioned by Sri Madhvacharyaru in his scripts;

> Only such of those who follow the footsteps of Sri Guru Raayaru will get the Grace of Lord Narasimha;

> Having Visesha Vaayu Aavesha in Sri Guru Raayaru, one must always worship Lord Vishnu with anusandhana of Sri Raaghavendra Theertha Guruvanthargatha - Bharateeramana Mukhya Praanaanthargatha

Hari Sarvottama - Vaayu Jeevottama
'nAham kartA hariH kartA'
Sri GuruRaajoVijayate

 

----------- Hari Om ----------

Sunday, October 11, 2020

Anjaneya temple in Chikka Bommasandra-Yelahanka New Town

 Anjaneya temple in Chikka Bommasandra-Yelahanka New Town -- Bengaluru -- 560064

 

                                      Kambada Anjaneya swamy installed by sri Vyasarajaru 

This Kambada Anjaneya temple is in Chikka Bommansandra in Yelahanka New Town and just walk-able 1 km distance from Yelahanka New town Bus stand.

 

                                                          Kambada Anjaneya Swamy

 

                                                              View of both Anjaneya                                      


This Kambada Anjaneya idol was installed sri Vyasaraja tirtharu and has been moved to the side by local people and another Anjaneya idol which has been installed main along with side recently.

 

                                                             Main Entrance

 

                                                             Main Anjaneya Idol

Sri VYASARAJA Tirtharu has installed/consecreted MukyaPrana ( Anjaneya ) 732 Idols mainly all over South India and only 510 such idols are Found till date & Remaining idols are yet to be traced / identified, regular Poojas / Festivals are carried out at all the places.


To Understand and identify Sri Vyasaraja Tirtha installed Lord Anjaneya , we need to know what are the features and characteristics of all those Idols which were installed by him.

Some common salient features of the idols are:

Avatara Thraya Roopa - representing Hanuma, Bheema & Madhwa avataragalu

1. Hanuma Roopa - Bala, Ghante , Abhaya Hastha, Moothi/Face - etc
2. Bheema Roopa- Gadhe, Sougandhika Pushpa, Karna Kundala etc (any other Kshatriya features)
3. Madhwa Roopa- Shikha, Yogada patti, granthas etc.

AUM ANJANEYAYE VIDMAHE,
MAHABALAYE DHI-MAHI
TANNO HANUMAN PRACHODAYAT

Let us contemplate on divine Hanuman, let this power fill and direct us.

 

                                                        Other idols- Lord Ganesha

                                                                 Sri Kodanda Rama


Asaadhya Saadhaka Swaamin Asaadhyam Thava Kim Vadha /
Sri Raama Dhootha Krupaa Sindhoh Math Kaaryam Saadhaya Prabhoh //

Oh! SrI RAma dhootha!  (Hanuman) You are the one who can accomplish the impossible. Come! Tell me! Is there anything that by the mercy of RAma, you cannot accomplish? Oh! Ocean of mercy! My Lord!  Kindly make my wishes come true"


anjana nandanam viram janaki-soka naashanam
kapisha maksahan taaram vande lanka-bhayankaram

I salute the heroic Hanuman, the leader of the monkeys and the son of Anjana, who is the slayer of (Ravan’s son) Akshkumara, who was a terror to the inhabitants of Lanka, and who assuaged the grief of Sita.


anjaneya mati patalaananam
kanchanadri kamaniya-vigraham
parijata tarumula-vasinam
bhavayaami paavamana-nananam

I meditate on the son of the Wind God and Anjana, whose face is deep red in complexion, whose body is as fascinating as a mountain of gold, and whose favorite resort is the base of the Parijatha tree.

 

                                                                      Pic2


                                                                           Pic3


                                                                   Pic4 

yatra yatra raghunaatha-kirtanam
tatra tatra krta masta kaanjalim
baspa vaari paripurna-lochanam
maarutim naamata rakshas-antakam  


मनोजवम् मारुततुल्यवेगम् जितेन्द्रियम् बुद्धिमताम् वरिष्ठम्।
वातात्मजम् वानरयूथमुख्यम् श्रीरामदूतम् शरणम् प्रपद्ये॥

Manojavam Marutatulyavegam Jitendriyam Buddhimatam Varishtham।
Vatatmajam Vanarayuthamukhyam Shriramadutam Sharanam Prapadye॥

 

Pic5

                                                                           Pic6

Please Visit this temple which has 500 years old History and get Blessings from Lord Anjaneya.




                                                                    ------ Hari Om  ------