Sunday, September 15, 2019

Pitru Devathegalu & Mahalaya Pitru Paksha

Pitru Devathegalu & Mahalaya Pitru Paksha


ಪಿತೃದೇವತೆಗಳು


ಒಮ್ಮೆ ದೇವತೆಗಳು ತಮ್ಮನ್ನು ಸೃಷ್ಟಿಸಿದ ಬ್ರಹ್ಮನನ್ನೇ ಮರೆತು ತಮ್ಮ ತಮ್ಮ ವೈಭವ ಸುಖಗಳಲ್ಲಿ ತಲ್ಲೀನರಾದರು. ಇದರಿಂದ ಕುಪಿತನಾದ ಬ್ರಹ್ಮನು - ನಿಮ್ಮನ್ನು ಅಜ್ಞಾನವು ಆವರಿಸಲಿ ಎಂದು ಶಪಿಸಿದನು.
ಚಿಂತಿತರಾದ ದೇವತೆಗಳು ತಮ್ಮ ತಪ್ಪನ್ನರಿತು ಬ್ರಹ್ಮನನ್ನು ಪ್ರಾರ್ಥಿಸಿದಾಗ ನೀವು ಪಿತೃದೇವತೆಗಳನ್ನು ಪೂಜಿಸಿ ಶಾಪವಿಮುಕ್ತರಾಗಿರಿ ಎಂಬುದಾಗಿ ಅನುಗ್ರಹಿಸಿದನು.

ಅಂದಿನಿಂದ ದೇವತೆಗಳು ಸಹ ಪಿತೃದೇವತೆಗಳನ್ನು ಪೂಜಿಸುತ್ತಿದ್ದಾರೆ. ಮತ್ತು ಪಿತೃಗಳು ದೇವತೆಗಳಿಗಿಂತ ಉನ್ನತಸ್ಥಾನದಲ್ಲಿದ್ದಾರೆ.(ಗುರು ಸ್ಥಾನದಲ್ಲಿ)ದೇವಪುತ್ರರೇ ಆದರೂ ಪಿತೃಗಳು ದೇವತೆಗಳನ್ನು ಮಕ್ಕಳೇ ಎಂದು ಸಂಭೋದಿಸಿದರು.

ಪಿತೃದೇವತೆಗಳಲ್ಲಿ ಏಳು ಮುಖ್ಯ ಗುಂಪುಗಳಿವೆ. ಇವರಲ್ಲಿ ಸುಕಾಲರು, ಅಂಗಿರಸರು, ಸುಸ್ವಧರು ಮತ್ತು ಸೋಮಪರು ಎಂಬ ನಾಲ್ವರು ಮೂರ್ತರು ಅಂದರೆ ಇವರಿಗೆ ಕರ್ಮಜನ್ಯವಾದ ದಿವ್ಯ ಶರೀರವಿರುತ್ತದೆ. ವೈರಾಜರು, ಅಗ್ನಿಷ್ಟಾತ್ತರು ಮತ್ತು ಬಹಿ೯ಷದರು ಅಮೂರ್ತರು ಅಂದರೆ ಇವರು ಯಾವ ರೂಪವನ್ನಾದರೂ ಧರಿಸಬಲ್ಲ ಕಾಮರೂಪಿಗಳು. ಈ ಅಮೂರ್ತ ಪಿತೃಗಳೇ ಶ್ರೇಷ್ಠರು. ಪವಿತ್ರವಾದ ಅಗ್ನಿಯ ಮೂಲಕ ತರ್ಪಣ ಮುಂತಾದವುಗಳನ್ನು ಸ್ವೀಕರಿಸುವವರು ಸಾಗ್ನಿಗಳು. ಪವಿತ್ರ ಅಗ್ನಿಯಿಲ್ಲದೆ ಬರೇ ತರ್ಪಣ ಮುಂತಾದವುಗಳನ್ನು ಸ್ವೀಕರಿಸುವವರು ನಿರಗ್ನಿಗಳು.

ಈ ಸಪ್ತ ಪಿತೃಗಳಿಗೆ ಅಧೀನರಾಗಿ ಇಪ್ಪತ್ತೊಂದು ಪಿತೃಗಣಗಳಿವೆ. ಕವ್ಯವನು ಮಾನವ ಪಿತೃಗಳಿಗೆ ಈ ಇಪ್ಪತ್ತೊಂದು ಪಿತೃಗಣಗಳು ತಲುಪಿಸುತ್ತಾರೆ. ಈ ಮಾನವ ಪಿತೃಗಳು ಪುಣ್ಯಲೋಕದಲ್ಲಿರಬಹುದು ಅಥವಾ ಕರ್ಮಭ್ರಷ್ಟರಾಗಿ ನಾಯಿ, ನರಿ, ಮನುಷ್ಯ, ರಾಕ್ಷಸ ಮುಂತಾದ ಯೋನಿಗಳಲ್ಲಿ ಜನಿಸಿರಬಹುದು ಅಥವಾ ಪ್ರೇತರೂಪದಲ್ಲಿರಬಹುದು.

ಪಿತೃಗಳ ಪವಿತ್ರ ಸ್ಥಳಗಳು ಅಮಾವಾಸ್ಯೆ, ಕುತಪಕಾಲ(ಹಗಲಿನ 8ನೆಯ ಕಾಲ), ಆಕಾಶ, ದಕ್ಷಿಣದಿಕ್ಕು, ಬೆಳ್ಳಿ, ಅಪಸವ್ಯ, ನೀರು, ಎಳ್ಳು, ದಬೆ೯, ಹಸುವಿನ ಹಾಲು, ಸಿಹಿ ಪದಾರ್ಥಗಳು, ಬಿಸಿ ಬಿಸಿ ಆಹಾರ, ತಾಮ್ರ, ಜೇನುತುಪ್ಪ, ಗೋಧಿ, ಗಯಾಶ್ರಾದ್ಧ ಮುಂತಾದವುಗಳು.


ಪಿತೃಗಳು ಬಿಸಿಬಿಸಿ ಆಹಾರವನ್ನು ಇಷ್ಪಡುವುದರಿಂದ ಅವರನ್ನು ಉಷ್ಣಪರು ಎಂದು ಕರೆಯುತ್ತಾರೆ.

ಪಿತೃಕಾರ್ಯವನ್ನು ಅಪರಾಹ್ಣದಲ್ಲೇ ಮಾಡಬೇಕು ಬೇರೆ ಸಮಯದಲ್ಲಿ ಮಾಡಿದರೆ ಆ ಶ್ರಾದ್ಧ ಫಲವನ್ನು ರಾಕ್ಷಸರು ಪಡೆಯುತ್ತಾರೆ.

ನಮ್ಮ ವಂಶದಲ್ಲಿ ಬಹಳ ಪುತ್ರರು ಜನಿಸಬೇಕು. ಏಕೆಂದರೆ ಅವರಲ್ಲಿ ಒಬ್ಬನಾದರೂ ಗಯಾದಲ್ಲಿ ಶ್ರಾದ್ಧ ಮಾಡಬಹುದು ಎಂದು ಪಿತೃಗಳು ಅನುಗಾಲವೂ ಚಿಂತಿಸುತ್ತಿರುತ್ತಾರೆ. ಆದ್ದರಿಂದ ಗಯಾದಲ್ಲಿರುವ ವಟ ವೃಕ್ಷದ ಕೆಳಗೆ ಶ್ರಾದ್ಧ ಮಾಡಿದರೆ ಶ್ರಾದ್ಧದ ಫಲವು ಅಕ್ಷಯವಾಗುತ್ತದೆ. ಅಲ್ಲದೆ ಕರ್ತೃವಿನ ಮುಂದಿನ ಪೀಳಿಗೆಯ ಯಾರೂ ಪ್ರೇತರಾಗುವುದಿಲ್ಲ. ಪಿತೃಗಳು ಎಂದರೆ ಪಾಲಿಸುವವರು ಎಂದರ್ಥ.

ಪಿತೃಗಣಗಳು ದಕ್ಷ ಪುತ್ರಿ ಸ್ವಧಾನನ್ನು ಮದುವೆಯಾದರು. ಪಿತೃದೇವತೆಗಳಿಗೆ ಕವ್ಯವನ್ನು ಅರ್ಪಿಸುವಾಗ ಸ್ವಧಾ ಎಂದು ಹೇಳಬೇಕು.

ಯಾವ ಮನೆಯಲ್ಲಿ ಸ್ವಾಹಾಕಾರಗಳು ಮತ್ತು ಸ್ವಧಾಕಾರಗಳು ಕೇಳಿಸುವುದಿಲ್ಲವೋ ಆ ಮನೆಯು ಸ್ಮಶಾನಕ್ಕೆ ಸಮಾನವೆಂದು ಹೇಳುತ್ತಾರೆ.

ಯಮನು ಪಿತೃಗಣಗಳ ಅಧಿಪತಿಯಾಗಿರುವುದರಿಂದ ಅವನನ್ನು ಶ್ರಾದ್ದ ದೇವ ಎಂದು ಕರೆಯುತ್ತಾರೆ.

ಕಾಲ

ಪಿತೃಗಳಿಗೆ ಶುಕ್ಲಪಕ್ಷವು ರಾತ್ರಿಯಾಗಿಯೂ, ಕೃಷ್ಣಪಕ್ಷವು ಹಗಲಾಗಿಯೂ ಇರುತ್ತದೆ. ಅಂದರೆ ಮಾನವನ ಒಂದು ಮಾಸವು ಪಿತೃಗಳಿಗೆ ಒಂದು ಅಹೋರಾತ್ರಿಯಾಗಿರುತ್ತದೆ. ಈ ಕಾಲಮಾನದಲ್ಲಿ ಪಿತೃಗಳ ಪೂರ್ಣಾಯಸ್ಸು 3000 ವರ್ಷಗಳು.

ಪಿತೃದೇವತೆಗಳು ಮಾನವರಿಗೆ ದೇವತೆಗಳಿಗಿಂತ ಹತ್ತಿರದಲ್ಲಿದ್ದು ಬಹುಬೇಗ ತೃಪ್ತರಾಗಿ ದೇವತೆಗಳಿಗಿಂತ ಮೊದಲು ವರವನ್ನು ಕೊಡುತ್ತಾರೆ.
ಅದಕ್ಕೆ ಹೇಳೋದು ಏನನ್ನು ಮರೆತರೂ ಮಾಡಿದರೂ ಶ್ರಾದ್ಧವನ್ನು ಮರೆಯಬಾರದು ಎಂದು.

ಶ್ರಾದ್ಧದ ದಿನ ಹಬ್ಬ ಹರಿ ದಿನಗಳನ್ನು ಪಕ್ಕಕ್ಕೆ ಇಟ್ಟು ಶ್ರಾದ್ಧವನ್ನು ಮಾಡಬೇಕು ಎಂದು ಶಾಸ್ತ್ರಗಳು ಹೇಳುತ್ತವೆ.

ಶ್ರಾದ್ಧಗಳು

ನಾಂದೀ ಶ್ರಾದ್ಧ / ವೃದ್ಧಿ ಶ್ರಾದ್ಧ / ಅಭ್ಯುದಯ ಶ್ರಾದ್ಧ - ಮದುವೆ, ಉಪನಯನ ಮುಂತಾದ ಸಂಸ್ಕಾರಗಳಲ್ಲಿ ಮಾಡುವುದು ಪಿತೃಗಳ ಆಶೀರ್ವಾದಕೋಸ್ಕರ.(ನಂದತಿ ದೇವತಾ ಇತಿ ನಾಂದೀ). ಈ ಶ್ರಾದ್ಧ ದಲ್ಲಿ ಎಳ್ಳಿನ ಬದಲು ಅಕ್ಕಿಯನ್ನು ಉಪಯೋಗಿಸುತ್ತಾರೆ ಮತ್ತು ಇದನ್ನು ಪ್ರಾತಃಕಾಲದಲ್ಲಿ ಮಾಡುತ್ತಾರೆ. ಈ ಶ್ರಾದ್ಧದಲ್ಲಿ ಮನುಷ್ಯ ಮಾತೃಕೆಯರನ್ನು(ಮಾತೃ, ಪಿತಾಮಹಿ ಮತ್ತು ಪ್ರಪಿತಾಮಹಿ) ಮತ್ತು ದೇವಮಾತೃಕೆಯರನ್ನು (ಬ್ರಾಹ್ಮೀ, ಮಾಹೇಶ್ವರಿ, ವೈಷ್ಣವಿ, ಕೌಮಾರಿ,ಇಂದ್ರಾಣಿ, ಮಾಹೆಂದ್ರಿ, ವಾರಾಹಿ ಮತ್ತು ಚಾಮುಂಡಾ) ಪೂಜಿಸಿ ನಂತರ ಪಿತೃಗಳನ್ನು ಪೂಜಿಸುತ್ತಾರೆ.

ಸಪಿಂಡೀಕರಣ ಶ್ರಾದ್ಧ

ಮೃತನು ಸತ್ತ 12ನೆ ದಿನ ಮತ್ತು ಒಂದು ವರ್ಷದ ಬಳಿಕ ಮಾಡುವ ಶ್ರಾದ್ಧ.
ಅಷ್ಟಕ ಶ್ರಾದ್ಧ, ಏಕೋದಿಷ್ಟ ಶ್ರಾದ್ಧ, ಪಾರ್ವಣ ಶ್ರಾದ್ಧ, ನಿತ್ಯ ಶ್ರಾದ್ಧ, ಕಾಮ್ಯ ಶ್ರಾದ್ದ, ಗೋಷ್ಠ ಶ್ರಾದ್ಧ, ಶುದ್ದಿ ಶ್ರಾದ್ಧ, ಕರ್ಮಾಂಗ ಶ್ರಾದ್ಧ, ದೈವಿಕ ಶ್ರಾದ್ಧ, ಮತ್ತು ಇತರೇ

ಪಿತೃಸ್ಥಾನದಲ್ಲಿರುವ ಬ್ರಾಹ್ಮಣನ ಕೈಯಲ್ಲಿ ಅನ್ನವನ್ನು ಹೋಮ ಮಾಡುವುದೇ ಪಾಣಿಹೋಮ. ಪಾಣಿ ಎಂದರೆ ಕೈ.(ಪಾಣಿ ಮುಖಾವೈ ಪಿತರಃ)

ದರ್ಭೆಯಿಂದ ಮಾಡಿದ ಪವಿತ್ರವನ್ನು ಧರಿಸದೆ ಮಾಡಿದ ವೈದಿಕ ಕರ್ಮಗಳೆಲ್ಲಾ ರಾಕ್ಷಸರ ಪಾಲಾಗುತ್ತದೆ.
ಸರ್ವೇಷಾಂ ಧಾನ್ಯ ರಾಶೀನಾಂ ತಿಲಾಃ ಪಾಪ ಪ್ರಣಾಶನಾಃ ಎಂಬಂತೆ ಧಾನ್ಯಗಳಲ್ಲಿ ತಿಲವೇ ಶ್ರೇಷ್ಠ ಮತ್ತು ಪಾಪನಾಶಕ.ಮದುವೆಮಾಡಿ ಎರಡು ತಿಂಗಳಾಯಿತು ತಂದೆಯ(ತಾಯಿಯ)ತಿಥಿ ಬಂದಿದೆ. ಮಾಡಬಹುದೇ? ಎಂದು ಪ್ರಶ್ನೆ ಮಾಡುವುದು ಪರಮ ಮೂಖ೯ತನ.

ತಿಲ ದಾನ ಪುಣ್ಯದಾಯಕ, ಅದರಲ್ಲೂ ಮಾಘಮಾಸದಲ್ಲಿ ಎಳ್ಳನ್ನು ದಾನ ಮಾಡಿದರೆ ಪರಮಪುಣ್ಯ...



Importance and inner Secrets of --- Mahalaya Amavasya




                                                                    Page 1 of 2


                                                                  Page 2 of 2



Mahalaya Paksha – Sarva Pitru’s from 14.09.19 to 28.09.19

" ಮಹಾಲಯ ಪಕ್ಷಾರಂಭ "

(
ದಿನಾಂಕ : 14.09.19 - 28.09.19 ವರೆಗೆ ಪಕ್ಷಮಾಸ )

"
ಶ್ರಾದ್ಧದ ಮಹತ್ವ - ಒಂದು ಚಿಂತನೆ "

"
ಶ್ರಾದ್ಧ " ಯೆಂದರೆ...

"
ಶ್ರದ್ಧಯಾ ಕ್ರೀಯತೇ ಕರ್ಮ ಇತಿ ಶ್ರಾದ್ಧಮ್ " - ಶ್ರದ್ಧೆಯಿಂದ ಆಚರಿಸುವ ಕಾರ್ಯವೇ " ಶ್ರಾದ್ಧ " ಎಂದು ಕರೆಸಿಕೊಳ್ಳುತ್ತದೆ. ಅತ್ಯಂತ ನಿಷ್ಠೆಯಿಂದ ಪಿಂಡ ಪ್ರದಾನ ಮಾಡಿ ಪಿತೃ ದೇವತೆಗಳ ಅಂತರ್ಯಾಮಿಯಾದ ಶ್ರೀ ಜನಾರ್ದನ ರೂಪಿ ಭಗವಂತನನ್ನು ತೃಪ್ತಿ ಪಡಿಸಬೇಕು. ಇದರಿಂದ ತನ್ನ ಪಿತೃಗಳಿಗೆ ಸದ್ಗತಿಯು ದೊರೆಯಲಿದೆಯೆಂದು ಪ್ರಾರ್ಥಿಸಬೇಕು.

ಕರ್ಮಭೂಮಿ ಯೆನಿಸಿದ ಈ ಭರತ ಖಂಡದ ಸನಾತನ ಧರ್ಮಗಳಲ್ಲಿ " ಶ್ರಾದ್ಧ " ಕರ್ಮವು ಮುಖ್ಯವಾಗಿದೆ. ಇದು ಅತ್ಯಂತ ಶ್ರೇಯಸ್ಕರವಾದ ಕರ್ಮವಾಗಿದೆ. ಇದನ್ನು " ಪಿತೃ ಯಜ್ಞ " ಎಂದು ಕರೆಯುತ್ತಾರೆ.

"
ಬ್ರಹ್ಮಾಂಡ ಪುರಾಣ " ದಲ್ಲಿ...

ಪಿತೃನ್ಯೂದ್ಧಿಶ್ಯ ವಿಪ್ರೇಭ್ಯೋ ದತ್ತಾಂ ಶ್ರಾದ್ಧಮುದಾಹೃತಮ್ ।।

ನಮ್ಮ ಜನ್ಮಕ್ಕೆ ಕಾರಣರಾಗಿ, ನಮ್ಮನ್ನು ಹೆತ್ತು - ಹೊತ್ತು - ಸಾಕಿ - ಸಲುಹಿ ನಮ್ಮ ಉದ್ಧಾರಕ್ಕೆ ಶ್ರಮಿಸಿ, ನಮ್ಮನ್ನಗಲಿ ಹೋದ ತಂದೆ - ತಾಯಿ - ಹಿರಿಯರು ಮುಂತಾದವರನ್ನು ಸ್ಮರಿಸಿ, ಅವರನ್ನು ಕುರಿತು ಶ್ರದ್ಧೆಯಿಂದ ಅನ್ನ - ಜಲಾದಿಗಳನ್ನು ಕೊಡುವ ಪಿತೃ ಕಾರ್ಯಕ್ಕೆ " ಶ್ರಾದ್ಧ " ಎಂದು ಹೆಸರು.

"
ಶ್ರಾದ್ಧ ಕಲ್ಪಲತಾ " ದಲ್ಲಿ....

ಪಿತೃನುದ್ಧಿಶ್ಯೇನ ಶ್ರದ್ಧಯಾ ತ್ಯಕ್ತಸ್ಯ ದ್ರವ್ಯಸ್ಯ ।
ಬ್ರಾಹ್ಮಣೈರ್ಯತ್ಸ್ವೀಕರಣಂ ತತ್ ಶ್ರಾದ್ಧಮ್ ।।

ಪಿತೃಗಳನ್ನುದ್ಧೇಶಿಸಿ ಶ್ರದ್ಧೆಯಿಂದ ಕೊಡಲ್ಪಟ್ಟ ದ್ರವ್ಯವನ್ನು ಬ್ರಾಹ್ಮಣರು ಸ್ವೀಕರಿಸುವುದಕ್ಕೆ " ಶ್ರಾದ್ಧ " ಎಂದು ಹೆಸರು.

ಒಟ್ಟಿನಲ್ಲಿ ಶ್ರದ್ಧೆಯಿಂದ ತನಗೆ ಪ್ರಿಯವಾದ ಭೋಜ್ಯವನ್ನು ತನ್ನ ಪಿತೃಗಳನ್ನುದ್ಧೇಶಿಸಿ ಕೊಡುವ " ಪಿಂಡ ಪ್ರದಾನ " ಕ್ರಿಯೆಗೆ " ಶ್ರಾದ್ಧ " ಎಂದು ಹೆಸರು.

ಇಲ್ಲಿ ಕೆಲವರು ಪ್ರಶ್ನೆ ಮಾಡುವುದುಂಟು...

ನಮ್ಮನ್ನಗಲಿ ಹೋದ ಪಿತೃಗಳಿಗೆ ನಾವು ಕೊಡುವ ಜಲಾಂಜಲಿ - ಪಿಂಡ ಪ್ರಧಾನದಿಂದ ತೃಪ್ತಿಯಾಗುವುದು ಹೇಗೆ? ಅವರಿಗೆ ನಾವು ಕೊಟ್ಟಿದ್ದು ತಲುಪುವುದು ಹೇಗೆ?

ಇದಕ್ಕೆ ಉತ್ತರ ಹೀಗಿದೆ...

ನಾವು ಕೊಟ್ಟ ಅನ್ನವನ್ನು ಅಂದರೆ...

ಅದರ ಸಾರ ಭಾಗವನ್ನು ವಸು - ರುದ್ರ - ಆದಿತ್ಯ ತದಂತರ್ಗತ ಭಾರತೀ ರಾಮಣ ಮುಖ್ಯಪ್ರಾಣಾಂತರ್ಗತ ಪ್ರದ್ಯುಮ್ನ - ಸಂಕರ್ಷಣ - ವಾಸುದೇವ ರೂಪಿ ಭಗವಂತನು ಸ್ವೀಕರಿಸಿ ಅದನ್ನು ನಮ್ಮ ಪಿತೃಗಳು ಯಾವ ಯೋನಿಯಲ್ಲಿ ಎಲ್ಲಿ ಇರುವರೋ ಅಲ್ಲಿ ಅವರಿಗೆ ಆಹಾರ ರೂಪವಾಗಿ ಸೂಕ್ತ ರೀತಿಯಲ್ಲಿ ಕೊಟ್ಟು ಸಂತೋಷ ಪಡಿಸುತ್ತಾನೆ.

ಶ್ರಾದ್ಧ ಕರ್ತೃವಿನ ತಂದೆಯು / ಪಿತೃಗಳು ದೇವತ್ವವನ್ನು ಹೊಂದಿದ್ದರೆ ಆ ಅನ್ನವು ಅಮೃತವಾಗಿ, ಪಶುವಾಗಿದ್ದರೆ ಹುಲ್ಲಾಗಿ, ಸರ್ಪವಾಗಿದ್ದರೆ ವಾಯು ರೂಪವಾಗಿ, ಹದ್ದು ಮೊದಲಾದವಾಗಿದ್ದರೆ ಮಾಂಸವಾಗಿ, ಮನುಷ್ಯನಾಗಿದ್ದರೆ ಯೋಗ್ಯ ಅನ್ನವಾಗಿ ಅವರಿಗೆ ತಲುಪುತ್ತದೆ.

ಪಿತೃಗಳ ( ತಂದೆ - ತಾಯಿ - ಹಿರಿಯರು ) ತೃಪ್ತಿಗಾಗಿ ಶ್ರಾದ್ಧ ಕರ್ಮವನ್ನು ಮಾಡಲೇಬೇಕು ಎಂದು " ಕೂರ್ಮ ಪುರಾಣ " ದಲ್ಲಿ...

ಶ್ರಾದ್ಧಾತ್ಪರಾತ್ಪರಾನ್ನಾಸ್ತಿ ಶ್ರೇಯಸ್ಕರ ಮುದಾಹೃತಮ್ ।
ತಸ್ಮಾತ್ ಸರ್ವ ಪ್ರಯತ್ನೇನ ಶ್ರಾದ್ಧ೦ ಕುರ್ಯಾದ್ವಿಚಕ್ಷಣಃ ।।

ಮಾನವರಿಗೆ ತಮ್ಮ ಪಿತೃಗಳ ಶಾಸ್ತ್ರೋಕ್ತವಾದ ಶ್ರಾದ್ಧ ಕರ್ಮಕ್ಕಿಂತ ಶ್ರೇಯಸ್ಕರವಾದ ಕಾರ್ಯವು ಯಾವುದೂ ಇಲ್ಲ. ಆದುದರಿಂದ ವಿವೇಕಿಗಳೂ; ಜ್ಞಾನಿಗಳೂ ಸರ್ವ ಪ್ರಯತ್ನದಿಂದ ಶ್ರಾದ್ಧವನ್ನು ಮಾಡಬೇಕು.

"
ಯಮ ಸ್ಮೃತಿ "

ಯೇ ಯಜಂತಿ ಪಿತೃನ್ ದೆವಾನ್ ಬ್ರಾಹ್ಮಣಾ: ಸರ್ವ ಕಾಮದಾನ್ ।
ಸರ್ವ ಭೂತಾಂತರಾತ್ಮಾನ್ ವಿಷ್ಣುಮೇವ ಯಜಂತಿ ತೇ ।।

ಯಾವ ಬ್ರಾಹ್ಮಣನು ಎಲ್ಲಾ ಇಷ್ಟಾರ್ಥವನ್ನು ಕೊಡುವವರಾದ ಪಿತೃಗಳನ್ನೂ; ದೇವತೆಗಳನ್ನೂ ಪೂಜಿಸುವರೋ ಅವರು ಎಲ್ಲಾ ಚೇತನಾಚೇತನಾತ್ಮಕವಾದ ಪ್ರಪಂಚಕ್ಕೆ ನಿಯಾಮಕನಾದ ಶ್ರೀ ಮಹಾವಿಷ್ಣುವನ್ನೇ ಪೂಜಿಸುತ್ತಾರೆ!!

ಶ್ರಾದ್ಧ ಕರ್ಮವನ್ನು ಮಾಡದಿದ್ದರೆ ಏನಾಗುತ್ತದೆ? ಎಂದು ಕೇಳುವವರಿಗೆ..

"
ಹಾರಿತ ಸ್ಮೃತಿ " ಯು ಹೀಗೆ ಉತ್ತರಿಸುತ್ತದೆ...

ನ ಸಂತಿ ಪಿತರಶ್ಚೇತಿ ಕೃತ್ವಾ ಮನಸಿ ಯೋ ನರಃ ।
ಶ್ರಾದ್ಧ೦ ನ ಕುರುತೇ ತತ್ರ ತಸ್ಯ ರಕ್ತ೦ ಪಿಬಂತಿ ತೇ ।।

ಯಾವ ಮನುಷ್ಯರು ಪಿತೃಗಳೂ ಅಥವಾ ತಂದೆ - ತಾಯಿಗಳ ದೇಹವನ್ನು ಸುಟ್ಟು ಭಸ್ಮ ಮಾಡಿದ ಮೇಲೆ ಅವರಿಗೆ ಹೊಟ್ಟೆ ಇಲ್ಲ ಎಂಬ ಭಾವನೆಯಿಂದ ಪಿತೃಗಳ ಶ್ರಾದ್ಧಾದಿಗಳನ್ನು ಮಾಡುವುದಿಲ್ಲವೋ ಅಂಥವರ ಪಿತೃಗಳು ಸಿಟ್ಟಾಗಿ ನಾಸ್ತಿಕರ ರಕ್ತವನ್ನು ಕುಡಿಯುತ್ತಾರೆ.

ಇನ್ನು ಶ್ರಾದ್ಧವನ್ನು ಮಾಡುವವರು ನ್ಯಾಯದಿಂದ ಹಣದಿಂದಲೇ ಮಾಡಬೇಕೆಂದು " ಮಾರ್ಕಂಡೇಯ ಪುರಾಣ " ಈ ಕೆಳಗಿನಂತೆ ಖಚಿತ ಪಡಿಸಿದೆ.

ಅನ್ಯಾಯೋಪಾರ್ಜಿತೈರ್ವಿತ್ತೈ: ಯತ್ ಶ್ರಾದ್ಧ೦ ಕ್ರೀಯತೇ ನರೈ:
ತೃಪ್ಯಂತಿ ತೇನ ಚಾಂಡಾಲಾ: ಪುಲ್ಕಸಾದ್ಯಾಶ್ಚಯೋನಯಃ ।।

ಮಾನವರು ಅನ್ಯಾಯ - ಅಧರ್ಮದಿಂದ ಹಣವನ್ನು ಗಳಿಸಿ ಅದರಿಂದ ಶ್ರಾದ್ಧ ಮಾಡಿದರೆ ಆ ಶ್ರಾದ್ಧದಿಂದ ಚಾಂಡಾಲ - ಪುಲಸ್ಕ ( ಬ್ರಾಹ್ಮಣನಿಗೆ ಕ್ಷತ್ರೀಯ ಜಾತಿಯಲ್ಲಿ ಹುಟ್ಟಿದ ಮಿಶ್ರ ಜಾತಿಯವ ) ಮುಂತಾದ ಪಾಪಿಗಳಿಗೆ ತೃಪ್ತಿಯಾಗುವುದೇ ಹೊರತು ಪಿತೃಗಳಿಗೆ ತೃಪ್ತಿಯಾಗುವುದೇ ಇಲ್ಲ!!
***

ಈ ಪವಿತ್ರವಾದ ಪಿತೃ ಯಜ್ಞದಲ್ಲಿ ಶ್ರೀ ಜನಾರ್ದನ ರೂಪಿಯಾದ ಶ್ರೀ ಪರಮಾತ್ಮನನ್ನೇ " ಶ್ರಾದ್ಧಾ ಸ್ವಾಮಿ " ಎಂದು ಭಾವಿಸಿಬೇಕು.

ಶ್ರಾದ್ಧದಲ್ಲಿ ಬಳಸುವ ಎಳ್ಳು - ದರ್ಭೆ ಮೊದಲಾದ ಪದಾರ್ಥಗಳಲ್ಲಿ ಶ್ರೀ ಜನಾರ್ದನನು ಒಂದೊಂದು ರೂಪದಿಂದ ನೆಲೆಸುವನು.

ವಿಶ್ವೇ ದೇವತೆಗಳ ಅಂತರ್ಯಾಮಿಯಾಗಿ 3555 ರೂಪಗಳಿಂದ ಶ್ರಾದ್ಧ ಕರ್ಮಕ್ಕೆ ಯಾವ ವಿಘ್ನಗಳು ಬರದಂತೆ ಶ್ರೀ ಜನಾರ್ದನನು ಶ್ರಾದ್ಧ ಕರ್ಮವನ್ನು ರಕ್ಷಿಸುವನು.

ಶ್ರೀ ಜನಾರ್ದನನ ಹೆಸರೇ ಇದನ್ನು ಹೇಳುತ್ತದೆ...

= 3
ನಾ = 5
ರ್ದ = 5
= 5

ಶ್ರಾದ್ಧ ಕಾಲದಲ್ಲಿ ಪಠಿಸಬೇಕಾದವುಗಳು...

. ಶ್ರೀ ಪದ್ಮ ಪುರಾಣಾಂತರ್ಗತ ಔರ್ಧ್ವ ದೇಹಿಕ ಶ್ರೀ ರಾಮ ಸ್ತೋತ್ರ
. ಕಾಠಕೋಪನಿಷತ್
. ಶ್ರೀ ವಿಜಯವಿಠ್ಠಲ ವಿರಚಿತ " ಪೈತೃಕ ಸುಳಾದಿ "
. ಶ್ರೀ ಜಗನ್ನಾಥದಾಸ ಕೃತ " ಪಿತೃ ಗಣ ಸಂಧಿ "

ಹೀಗೆ ಶ್ರೀ ಜನಾರ್ದನನ ರೂಪಗಳು.

ನರಕೋದ್ಧಾರ ಇದರಿಂದ ಸತ್ಯ ಪಿತೃಗಳಿಗೆ ।
ನರಕಾತೀತ ನಮ್ಮ ವಿಜಯವಿಠ್ಠಲ ಸುಳಿವಾ ।।


---------------- Hari Om ---------------

Thursday, August 15, 2019

Sri Raghavendra Kavacham

Sri Raghavendra Kavacham


                                                            Sri Raghavendra Swamy

 
Sri Raghavendra Kavacham – ಶ್ರೀರಾಘವೇಂದ್ರಕವಚಂ



No one can deny the fact that Mantralaya Guru Saarvabhouma Sri Raaghavendra Swamy (Sri Raayaru) is called as Bhavaroga Vaidya, doctor of worldly sickness. That`s why people keep rushing towards His feet seeking solutions for their problems. Hundreds of devotees have realized by themselves various ways of pleasing Sri Raayaru.

Still many people keep asking if there is any Stothra on Sri Raayaru that can bring them out of ill health both mental and physical. Well, Sri Appanacharya an ardent devotee of Sri Raayaru, about 400 years ago had anticipated this question! 

So he composed a wonderful Stothra on Sri Raayaru. Here, He admires Sri Raayaru by wonderful words and requests His compassionate sight on each and every part of the body.

This divine sight of Sri Rayaru acts like a bullet-proof jacket and protects us from all sorts of diseases. Hence this stothra is very meaningfully called Sri Raghavendra Kavacha. If there is any one around you, suffering from any disease ask them to chant this stotra devotedly.


ಶ್ರೀರಾಘವೇಂದ್ರಕವಚಂ (ಶ್ರೀಅಪ್ಪಣ್ಣಾಚಾರ್ಯ ಕೃತ)

ಕವಚಂ ರಾಘವೇಂದ್ರಸ್ಯ ಯತೀಂದ್ರಸ್ಯ ಮಹಾತ್ಮನಃ |
ವಕ್ಷ್ಯಾಮಿ ಗುರುವರ್ಯಸ್ಯ ವಾಂಛಿತಾರ್ಥಪ್ರದಾಯಕಮ್ || ||

ಋಷಿರಸ್ಯಾಪ್ಪಣಾಚಾರ್ಯಃ ಛಂದೋsನುಷ್ಟುಪ್ ಪ್ರಕೀರ್ತಿತಮ್ |
ದೇವತಾ ಶ್ರೀರಾಘವೇಂದ್ರಗುರುರಿಷ್ಟಾರ್ಥಸಿದ್ಧಯೇ || ||

ಅಷ್ಟೋತ್ತರಶತಂ ಜಪ್ಯಂ ಭಕ್ತಿಯುಕ್ತೇನ ಚೇತಸಾ |
ಉದ್ಯತ್ಪ್ರದ್ಯೋತನದ್ಯೋತಭರ್ಮಕೂರ್ಮಾಸನೇ ಸ್ಥಿತಮ್ || ||

ಏದ್ಯಖದ್ಯೋತನದ್ಯೋತಪ್ರತಾಪಂ ರಾಮಮಾನಸಮ್ |
ಧೃತಕಾಷಾಯವಸನಂ ತುಲಸೀಹಾರವಕ್ಷಸಮ್ || ||

ದೋರ್ದಂಡವಿಲಸದ್ದಂಡಕಮಂಡಲುವಿರಾಜಿತಮ್ |
ಅಭಯeನಮುದ್ರಾಕ್ಷಮಾಲಾಶೀಲಕರಾಂಬುಜಮ್ || ||

ಯೋಗೀಂದ್ರವಂದ್ಯಪಾದಾಬ್ಜಂ ರಾಘವೇಂದ್ರಗುರುಂ ಭಜೇ |
ಶಿರೋ ರಕ್ಷತು ಮೇ ನಿತ್ಯಂ ರಾಘವೇಂದ್ರೋsಖಿಲೇಷ್ಟದಃ || ||

ಪಾಪಾದ್ರಿಪಾಟನೇ ವಜ್ರಃ ಕೇಶಾನ್ ರಕ್ಷತು ಮೇ ಸದಾ |
ಕ್ಷಮಾಸುರಗಣಾಧೀಶೋ ಮುಖಂ ರಕ್ಷತು ಮೇ ಗುರುಃ || ||

ಹರಿಸೇವಾಲಬ್ಧಸರ್ವಸಂಪತ್ಫಾಲಂ ಮಮಾವತು |
ದೇವಸ್ವಭಾವೋsವತು ಮೇ ದೃಶೌ ತತ್ತ ಪ್ರದರ್ಶಕಃ || ||

ಇಷ್ಟಪ್ರದಾನೇ ಕಲ್ಪದ್ರುಃ ಶ್ರೋತ್ರೇ ಶ್ರುತ್ಯರ್ಥಬೋಧಕಃ |
ಭವ್ಯಸ್ವರೂಪೋ ಮೇ ನಾಸಾಂ ಜಿಹ್ವಾಂ ಮೇsವತು ಭವ್ಯಕೃತ್ || ||

ಆಸ್ಯಂ ರಕ್ಷತು ಮೇ ದುಃಖತೂಲಸಂಘಾಗ್ನಿಚರ್ಯಕಃ |
ಸುಖಧೈರ್ಯಾದಿಸುಗುಣೋ ಭ್ರುವೌ ಮಮ ಸದಾsವತು || ೧೦ ||

ಓಷ್ಠೌ ರಕ್ಷತು ಮೇ ಸರ್ವಗ್ರಹನಿಗ್ರಹಶಕ್ತಿಮಾನ್ |
ಉಪಪ್ಲವೋದಧೇಸ್ಸೇತುರ್ದಂತಾನ್ ರಕ್ಷತು ಮೇ ಸದಾ || ೧೧ ||

ನಿರಸ್ತದೋಷೋ ಮೇ ಪಾತು ಕಪೋಲೌ ಸರ್ವಪಾಲಕಃ |
ನಿರವದ್ಯಮಹಾವೇಷಃ ಕಂಠಂ ಮೇsವತು ಸರ್ವದಾ || ೧೨ ||

ಕರ್ಣಮೂಲೇ ತು ಪ್ರತ್ಯರ್ಥಿಮೂಕತ್ವಾಕರವಾಙ ಮಮ |
ಬಹುವಾದಿಜಯೀ ಪಾತು ಹಸ್ತೌ ಸತ್ತತ್ತ್ವವಾದಕೃತ್ || ೧೩ ||

ಕರೌ ರಕ್ಷತು ಮೇ ವಿದ್ವತ್ಪರಿಜ್ಞೇಯವಿಶೇಷವಾನ್ |
ವಾಗ್ವೈಖರೀಭವ್ಯಶೇಷಜಯೀ ವಕ್ಷಸ್ಥಲಂ ಮಮ || ೧೪ ||

ಸತೀಸಂತಾನಸಂಪತ್ತಿಭಕ್ತಿeನಾದಿವೃದ್ಧಿಕೃತ್ |
ಸ್ತನೌ ರಕ್ಷತು ಮೇ ನಿತ್ಯಂ ಶರೀರಾವದ್ಯಹಾನಿಕೃತ್ || ೧೫ ||

ಪುಣ್ಯವರ್ಧನಪಾದಾಬ್ಜಾಭಿಷೇಕಜಲಸಂಚಯಃ |
ನಾಭಿಂ ರಕ್ಷತು ಮೇ ಪಾರ್ಶ್ವೌ ದ್ಯುನದೀತುಲ್ಯಸದ್ಗುಣಃ || ೧೬ ||

ಪೃಷ್ಟಂ ರಕ್ಷತು ಮೇ ನಿತ್ಯಂ ತಾಪತ್ರಯವಿನಾಶಕೃತ್ |
ಕಟಿಂ ಮೇ ರಕ್ಷತು ಸದಾ ವಂಧ್ಯಾಸತ್ಪುತ್ರದಾಯಕಃ || ೧೭ ||

ಜಘನಂ ಮೇsವತು ಸದಾ ವ್ಯಂಗಸ್ವಂಗಸಮೃದ್ಧಿಕೃತ್ |
ಗುಹ್ಯಂ ರಕ್ಷತು ಮೇ ಪಾಪಗ್ರಹಾರಿಷ್ಟವಿನಾಶಕೃತ್ || ೧೮ ||

ಭಕ್ತಾಘವಿಧ್ವಂಸಕರನಿಜಮೂರ್ತಿಪ್ರದರ್ಶಕಃ |
ಮೂರ್ತಿಮಾನ್ಪಾತು ಮೇ ರೋಮಂ ರಾಘವೇಂದ್ರೋ ಜಗದ್ಗುರುಃ || ೧೯ ||

ಸರ್ವತಂತ್ರಸ್ವತಂತ್ರೋsಸೌ ಜಾನುನೀ ಮೇ ಸದ್ರಾವತು |
ಜಂಘೇ ರಕ್ಷತು ಮೇ ನಿತ್ಯಂ ಶ್ರೀಮಧ್ವಮತವರ್ಧನಃ || ೨೦ ||

ವಿಜಯೀಂದ್ರಕರಾಬ್ಜೋತ್ಥಸುಧೀಂದ್ರವರಪುತ್ರಕಃ |
ಗುಲ್ಫೌ ಶ್ರೀರಾಘವೇಂದ್ರೋ ಮೇ ಯತಿರಾಟ್ ಸರ್ವದಾsವತು | | ೨೧ ||

ಪಾದೌ ರಕ್ಷತು ಮೇ ಸರ್ವಭಯಹಾರೀ ಕೃಪಾನಿಧಿಃ |
e
ನಭಕ್ತಿಸುಪುತ್ರಾಯುರ್ಯಶಃ ಶ್ರೀಪುಣ್ಯವರ್ಧನಃ || ೨೨ ||

ಕರಪಾದಾಂಗುಲೀಃ ಸರ್ವಾ ಮಮಾವತು ಜಗದ್ಗುರುಃ |
ಪ್ರತಿವಾದಿಜಯಸ್ವಾಂತಭೇದಚಿಹ್ನಾದರೋ ಗುರುಃ || ೨೩ ||

ನಖಾನವತು ಮೇ ಸರ್ವಾನ್ ಸರ್ವಶಾಸ್ತ್ರವಿಶಾರದಃ |
ಅಪರೋಕ್ಷೀಕೃತಶ್ರೀಶಃ ಪ್ರಾಚ್ಯಾಂ ದಿಶಿ ಸದಾsವತು || ೨೪ ||

ಸ ದಕ್ಷಿಣೇ ಚಾವತು ಮಾಂ ಸಮುಪೇಕ್ಷಿತಭಾವಜಃ |
ಅಪೇಕ್ಷಿತಪ್ರದಾತಾ ಚ ಪ್ರತೀಚ್ಯಾಮವತು ಪ್ರಭುಃ || ೨೫ ||

ದಯಾದಾಕ್ಷಿಣ್ಯವೈರಾಗ್ಯವಾಕ್ಪಾಟವಮುಖಾಂಕಿತಃ |
ಸದೋದೀಚ್ಯಾಮವತು ಮಾಂ ಶಾಪಾನುಗ್ರಹಶಕ್ತಿಮಾನ್ || ೨೬ ||

ನಿಖಿಲೇಂದ್ರಿಯದೋಷಘ್ನೋ ಮಹಾನುಗ್ರಹಕೃದ್ಗುರುಃ |
ಅಧಶ್ಚೋರ್ಧ್ವಂ ಚಾವತು ಮಾಮಷ್ಟಾಕ್ಷರಮನೂದಿತಮ್ || ೨೭ ||

ಆತ್ಮಾತ್ಮೀಯಾಘರಾಶಿಘ್ನೋ ಮಾಂ ರಕ್ಷತು ವಿದಿಕ್ಷು ಚ |
ಚತುರ್ಣಾಂ ಚ ಪುಮರ್ಥಾನಾಂ ದಾತಾ ಪ್ರಾತಃ ಸದಾsವತು || ೨೮ ||

ಸಂಗಮ್ರೇವತು ಮಾಂ ನಿತ್ಯಂ ತತ್ತ್ವವಿತ್ಸರ್ವಸೌಖ್ಯಕೃತ್ |
ಮಧ್ಯಾಹ್ನೇಽಗಮ್ಯಮಹಿಮಾ ಮಾಂ ರಕ್ಷತು ಮಹಾಯಶಾಃ || ೨೯ ||

ಮೃತಪೋತಪ್ರಾಣದಾತಾ ಸಾಯಾಹ್ನೇ ಮಾಂ ಸದಾsವತು |
ವೇದಿಸ್ಥಪುರುಷೋಜ್ಜೀವೀ ನಿಶೀಥೇ ಪಾತು ಮಾಂ ಗುರುಃ || ೩೦ ||

ವಹ್ನಿಸ್ಥಮಾಲಿಕೋದ್ಧರ್ತಾ ವಹ್ನಿತಾಪಾತ್ಸದಾsವತು |
ಸಮಗ್ರಟೀಕಾವ್ಯಾಖ್ಯಾತಾ ಗುರುರ್ಮೇ ವಿಷಯೇsವತು || ೩೧ ||

ಕಾಂತಾರ್ರೇವತು ಮಾಂ ನಿತ್ಯಂ ಭಾಟ್ಟ (ಭಾಷ್ಯ) ಸಂಗ್ರಹಕೃದ್ಗುರುಃ |
ಸುಧಾಪರಿಮಳೋದ್ಧರ್ತಾ ಸು (ಸ್ವ)ಚ್ಛಂದಸ್ತು ಸದಾsವತು || ೩೨ ||

ರಾಜಚೋರವಿಷವ್ಯಾಧಿಯಾದೋವನ್ಯಮೃಗಾದಿಭಿಃ |
ಅಪಸ್ಮಾರಾಪಹರ್ತಾ ನಃ ಶಾಸ್ತ್ರವಿತ್ಸರ್ವದಾsವತು || ೩೩ ||

ಗತೌ ಸರ್ವತ್ರ ಮಾಂ ಪಾತೂಪನಿಷದರ್ಥಕೃದ್ಗುರುಃ |
ಋಗ್ವ್ಯಾಖ್ಯಾನಕೃದಾಚಾರ್ಯಃ ಸ್ಥಿತೌ ರಕ್ಷತು ಮಾಂ ಸದಾ || ೩೪ ||

ಮಂತ್ರಾಲಯನಿವಾಸೀ ಮಾಂ ಜಾಗ್ರತ್ಕಾಲೇ ಸದಾsವತು |
ನ್ಯಾಯಮುಕ್ತಾವಲೀಕರ್ತಾ ಸ್ವಪ್ನೇ ರಕ್ಷತು ಮಾಂ ಸದಾ || ೩೫ ||

ಮಾಂ ಪಾತು ಚಂದ್ರಿಕಾವ್ಯಾಖ್ಯಾಕರ್ತಾ ಸುಪ್ತೌ ಹಿ ತತ್ತ ಕೃತ್ |
ಸುತಂತ್ರದೀಪಿಕಾಕರ್ತಾ ಮುಕ್ತೌ ರಕ್ಷತು ಮಾಂ ಗುರುಃ || ೩೬ ||

ಗೀತಾರ್ಥಸಂಗ್ರಹಕರಸ್ಸದಾ ರಕ್ಷತು ಮಾಂ ಗುರುಃ |
ಶ್ರೀಮಧ್ವಮತದುಗ್ಧಾಬ್ಧಿಚಂದ್ರೋsವತು ಸದಾsನಘಃ || ೩೭ ||

ಇತಿ ಶ್ರೀರಾಘವೇಂದ್ರಸ್ಯ ಕವಚಂ ಪಾಪನಾಶನಮ್ |
ಸರ್ವವ್ಯಾಧಿಹರಂ ಸದ್ಯಃ ಪಾವನಂ ಪುಣ್ಯವರ್ಧನಮ್ || ೩೮ ||

ಯ ಇದಂ ಪಠತೇ ನಿತ್ಯಂ ನಿಯಮೇನ ಸಮಾಹಿತಃ |
ಅದೃಷ್ಟಿಃ ಪೂರ್ಣದೃಷ್ಟಿಃ ಸ್ಯಾದೇಡಮೂಕೋsಪಿ ವಾಕ್ಪತಿಃ || ೩೯ ||

ಪೂರ್ಣಾಯುಃ ಪೂರ್ಣಸಂಪತ್ತಿಭಕ್ತಿeನಾಭಿವೃದ್ಧಿಕೃತ್ |
ಪೀತ್ವಾ ವಾರಿ ನರೋ ಯೇನ ಕವಚೇನಾಭಿಮಂತ್ರಿತಮ್ || ೪೦ ||

ಜಹಾತಿ ಕುಕ್ಷಿಗಾನ್ ರೋಗಾನ್ ಗುರುವರ್ಯಪ್ರಸಾದತಃ |
ಪ್ರದಕ್ಷಿಣನಮಸ್ಕಾರಾನ್ ಗುರೋರ್ವೃಂದಾವನಸ್ಯ ಯಃ || ೪೧ ||

ಕರೋತಿ ಪರಯಾ ಭಕ್ತ್ಯಾ ತದೇತತ್ಕವಚಂ ಪಠನ್ |
ಪಂಗುಃ ಕೂಣಿಶ್ಚ ಪೌಗಂಡಃ ಪೂರ್ಣಾಂಗೋ ಜಾಯತೇ ಧ್ರುವಮ್ || ೪೨ ||

ಶೇಷಾಶ್ಚ ಕುಷ್ಠಪೂರ್ವಾಶ್ಚ ನಶ್ಯಂತ್ಯಾಮಯರಾಶಯಃ |
ಅಷ್ಟಾಕ್ಷರೇಣ ಮಂತ್ರೇಣ ಸ್ತೋತ್ರೇಣ ಕವಚೇನ ಚ || ೪೩ ||

ವೃಂದಾವನೇ ಸನ್ನಿಹಿತಮಭಿಷಿಚ್ಯ ಯಥಾವಿಧಿ |
ಯಂತ್ರೇ ಮಂತ್ರಾಕ್ಷರಾಣ್ಯಷ್ಟೌ ವಿಲಿಖ್ಯಾತ್ರ ಪ್ರತಿಷ್ಠಿತಮ್ || ೪೪ ||

ಷೋಡಶೈರುಪಚಾರೈಶ್ಚ ಸಂಪೂಜ್ಯ ತ್ರಿಜಗದ್ಗುರುಮ್ |
ಅಷ್ಟೋತ್ತರಶತಾಖ್ಯಾಭಿರರ್ಚಯೇತ್ಕುಸುಮಾದಿಭಿಃ || ೪೫ ||

ಫಲೈಶ್ಚ ವಿವಿಧೈರೇವ ಗುರೋರರ್ಚಾಂ ಪ್ರಕುರ್ವತಃ |
ನಾಮಶ್ರವಣಮಾತ್ರೇಣ ಗುರುವರ್ಯಪ್ರಸಾದತಃ || ೪೬ ||

ಭೂತಪ್ರೇತಪಿಶಾಚಾದ್ಯಾಃ ವಿದ್ರವಂತಿ ದಿಶೋ ದಶ |
ಪಠೇದೇತತ್ತ್ರಿಕಂ ನಿತ್ಯಂ ಗುರೋರ್ವೃಂದಾವನಾಂತಿಕೇ || ೪೭ ||

ದೀಪಂ ಸಂಯೋಜ್ಯ ವಿದ್ಯಾವಾನ್ ಸಭಾಸು ವಿಜಯೀ ಭವೇತ್ |
ರಾಜಚೋರಮಹಾವ್ಯಾಘ್ರಸರ್ಪನಕ್ರಾದಿಪೀಡನಾತ್ || ೪೮ ||

ಕವಚಸ್ಯ ಪ್ರಭಾವೇಣ ಭಯಂ ತಸ್ಯ ನ ಜಾಯತೇ |
ಸೋಮಸೂರ್ಯೋಪರಾಗಾದಿಕಾಲೇ ವೃಂದಾವನಾಂತಿಕೇ || ೪೯ ||

ಕವಚಾದಿತ್ರಿಕಂ ಪುಣ್ಯಮಪ್ಪಣಾಚಾರ್ಯದರ್ಶಿತಮ್ |
ಜಪೇದ್ಯಃ ಸ ಧನಂ ಪುತ್ರಾನ್ ಭಾರ್ಯಾಂ ಚ ಸುಮನೋರಮಾಮ್ || ೫೦ ||

ಜ್ಞಾನಂ ಭಕ್ತಿಂ ಚ ವೈರಾಗ್ಯಂ ಭುಕ್ತಿಂ ಮುಕ್ತಿಂ ಚ ಶಾಶ್ವತೀಮ್ |
ಸಂಪ್ರಾಪ್ಯ ಮೋದತೇ ನಿತ್ಯಂ ಗುರುವರ್ಯಪ್ರಸಾದತಃ || ೫೧ ||

ಇತಿ ಶ್ರೀಮದಪ್ಪಣಾಚಾರ್ಯವಿರಚಿತಂ ಶ್ರೀರಾಘವೇಂದ್ರಕವಚಂ ಸಂಪೂರ್ಣಮ್

ಶ್ರೀಕೃಷ್ಣಾರ್ಪಣಮಸ್ತು 




                   sri Raghavendra swamy Praying Lord Krishna



ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯ ಚ |
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||

ಆಪಾದಃ ಮೌಲಿ ಪರ್ಯಂತಂ ಗುರೂಣಾಂ ಆಕೃತಿಂ ಸ್ಮರೇತ್
ತೇನ ವಿಘ್ನಾಃ ಪ್ರಣಶ್ಯಂತಿ ಸಿಧ್ಧ್ಯಂತಿ ಚ ಮನೋರಥಾಃ ||

ದುರ್ವಾದಿ ಧ್ವಾಂತರವಯೇ ವೈಷ್ಣವೇಂದೀವರೇಂದವೇ
ಶ್ರೀರಾಘವೇಂದ್ರಗುರವೇ ನಮೋತ್ಯಂತದಯಾಳವೇ ||

ಮೂಕೋಪಿ ಯತ್ಪ್ರಸಾದೇನ ಮುಕುಂದ ಶಯನಾಯತೇ
ರಾಜರಾಜಾಯತೇ ರಿಕ್ತೋ ರಾಘವೇಂದ್ರಂ ತಮಾಶ್ರಯೇ ||


OM SRI GURU RAGHVENDRAYA NAMAHA.

--------- Hari Om ---------

Saturday, July 13, 2019

Ashada Ekadasi

Ashada Ekadasi



This day, a huge Yatra or religious procession of pilgrims known as Pandharpur Ashada Ekadasi Waari Yatra culminates at Pandharpur, in Solapur district in south Maharastra, situated on the banks of the Chandrabhaga River. Pandharpur is main center of worship of the deity Vitthal , a local form of Vishnu. Lakhs (hundreds of thousands) of pilgrims come to Pandharpur on this day from different parts of Maharashtra. Some of them carry Palkhis(palanquins) with the images of the saints of Maharashtra. Dnyaneswar's image is carried from Alandi,Namdev's image from Narsi Namdev, Tukaram's from Dehu, Eknath's from Paithan, Niruttinath's from Trimbakeshwar, Mukthabai's from Mukthanagar, Sopan's from Saswad and Saint Gajanan Maharaj from Shegoan. These pilgrims are referred to as Warkaris. They sing Abhangas(chanting hymns) of Saint Tukaram and Saint Dnyaneshwar, dedicated to Vitthal.


ಆಷಾಢ ಏಕಾದಶಿ ಅಥವಾ ಪ್ರಥಮೈಕಾದಶಿ

ಆಷಾಢ ಮಾಸದ ಶುಕ್ಲಪಕ್ಷದಲ್ಲಿನ ಏಕಾದಶಿಯನ್ನು "ದೇವಶಯನಿ" (ದೇವರ ನಿದ್ರೆಯ) /
'
ಶಯನೈಕಾದಶಿ" ಎನ್ನುತ್ತಾರೆ.
ಕಾರಣ ಅಂದು ಮಹಾವಿಷ್ಣುವು ಆದಿಶೇಷ ತಲ್ಪದಲ್ಲಿ ಯೋಗನಿದ್ರೆಯಲ್ಲಿ ಮಲಗುತ್ತಾನೆ. ಅವನು ಏಳುವುದು ಕಾರ್ತಿಕ ಶುದ್ಧ ದ್ವಾದಶಿಯಂದು.ಅದನ್ನು "ಉತ್ಥಾನ(ಏಳುವುದು)ದ್ವಾದಶಿ" ಎಂದು ಕರೆಯುವರು.

ಈ ನಾಲ್ಕು ತಿಂಗಳು ಸನ್ಯಾಸಿಗಳು ಯತಿಗಳು ಚಾತುರ್‌ಮಾಸ್ಯವನ್ನು ಮಾಡುತ್ತಾರೆ

ಹಿಂದೆ ದೇವ ದಾನವರ ಯುದ್ಧವಾದಾಗ, ಕುಂಭದೈತ್ಯನ ಮಗನಾದ ಮೃದುಮಾನ್ಯನು ತಪಸ್ಸು ಮಾಡಿ ಈಶ್ವರನಿಂದ ಅಮರತ್ವವನ್ನು ಪಡೆದು ತ್ರಿಮೂರ್ತಿಗಳಾದಿಯಾಗಿ ಎಲ್ಲ ದೇವತೆಗಳನ್ನು ಸೋಲಿಸಿ ಸ್ವರ್ಗದಿಂದ ಓಡಿಸಿದನು.ದೇವತೆಗಳು ಅವನ ಭಯದಿಂದ ತ್ರಿಕೂಟ ಪರ್ವತದ ಧಾತ್ರಿ (ನೆಲ್ಲಿಕಾಯಿ) ವೃಕ್ಷದ ಕೆಳಗಿನ ಒಂದು ಗುಹೆಯಲ್ಲಿ ಅಡಗಿ ಕುಳಿತರು.ಆ ದಿನವು ಆಷಾಢ ಶುದ್ಧ ಏಕಾದಶಿಯಾಗಿತ್ತು.!

ಅನಿವಾರ್ಯವಾಗಿ ಅವರು ಅಂದು ಉಪವಾಸ ಮಾಡುವಂತಾಯಿತು.
ಅವರ ಉಪವಾಸದ ಫಲವಾಗಿ ಅವರೆಲ್ಲರ ಶ್ವಾಸದಿಂದ ಒಂದು ಶಕ್ತಿಯು ಆವಿರ್ಭವಿಸಿ,ಗುಹೆಯ ಬಾಗಿಲಿನಲ್ಲಿ , ದೇವತೆಗಳು ಹೊರಬರುವುದನ್ನು ಕಾಯುತ್ತಿದ್ದ ಮೃದುಮಾನ್ಯ ದೈತ್ಯನನ್ನು ವಧಿಸಿತು.

ಈ ಶಕ್ತಿದೇವತೆಯೇ ಏಕಾದಶಿ ತಿಥಿಯ ಅಧಿದೇವತೆಯಾಗಿದ್ದಾಳೆ.
ಅಂದಿನಿಂದ ಪ್ರಥಮೈಕಾದಶಿಯಿಂದ ಕಾರ್ತಿಕ ಶುದ್ಧ ಏಕಾದಶಿಯ ವರೆಗೆ ಒಂಬತ್ತು ಏಕಾದಶಿಗಳಂದು ಉಪವಾಸ ಮಾಡುವ ಪದ್ಧತಿ ಆರಂಭವಾಯಿತು.

ಏಕಾದಶಿಯಂದು ಸ್ನಾನ ಮಾಡಿ,ವಿಷ್ಣುವನ್ನು ತುಳಸಿ ಕುಡಿಯಿಂದ ಭಕ್ತಿಯಿಂದ ಅರ್ಚಿಸಿ,ತೀರ್ಥಪ್ರಾಶನ ಮಾಡಿ,ಅಹೋರಾತ್ರಿ ವಿಷ್ಣುನಾಮ ಸಂಕೀರ್ತನೆ,
ಭಜನೆ ಮಾಡುತ್ತಾ ಜಾಗರಣೆ ಮಾಡಿ,ದ್ವಾದಶಿಯ ದಿನ ಬೆಳಿಗ್ಗೆ ಸ್ನಾನ ಪೂಜೆ ಮುಗಿಸಿ,ನೈವೇದ್ಯ ಮಾಡಿದ ಪದಾರ್ಥಗಳನ್ನು ಸೇವಿಸಿ,ಉಪವಾಸ ಮುಕ್ತಾಯದ ಪಾರಣೆ ಮಾಡಬೇಕು.

ಸಾಮಾನ್ಯವಾಗಿ ಶಯನೀ ಏಕಾದಶಿಯಿಂದ,ಉತ್ಥಾನದ್ವಾದಶಿಯವರೆಗೆ,ವಿಷ್ಣುವು ಯೋಗನಿದ್ರಾವಸ್ಥೆಯಲ್ಲಿರುವುದರಿಂದ,ಮದುವೆ ,ಉಪನಯನ,ಗೃಹಪ್ರವೇಶಾದಿ ಮಂಗಳ ಕಾರ್ಯಗಳನ್ನು ನೆರವೇರಿಸುವುದಿಲ್ಲ.

ಉತ್ಥಾನ ದ್ವಾದಶಿಯಂದೇ ವಿಷ್ಣುವು ತುಲಸಿಯನ್ನು ವಿವಾಹವಾದುದು.
ನೆಲ್ಲಿ ಮರದ ಕೆಳಗಿನ ಗುಹೆ ದೇವತೆಗಳನ್ನು ರಕ್ಷಿಸಿತ್ತು.
ಇವೆರಡರ ಸವಿನೆನಪಿನಲ್ಲಿ ನೆಲ್ಲಿ ಕೊಂಬೆಯನ್ನು ತುಳಸಿಗಿಡದೊಂದಿಗೆ ಇಟ್ಟು "ತುಳಸಿ ಹಬ್ಬ/ತುಳಸಿದೀಪ" ಎಂದು ಪೂಜೆ,
ದೀಪಾರಾಧನೆ ಮಾಡುವುದು ಆಚರಣೆಗೆ ಬಂದಿದೆ.

ಪಂಢರಪುರದ ವಿಠ್ಠಲನ ಭಕ್ತರು ನೂರಾರು ಮೈಲಿ ದೂರದ ತಮ್ಮ ಊರಿನಿಂದ ವಿಟ್ಠಲನ ಭಜನೆ ಮಾಡುತ್ತ ಸಾಕಷ್ಟು ದಿನ ಮೊದಲೇ ಹೊರಟು ಕಾಲ್ನಡಿಗೆಯಲ್ಲಿಯೇ ಏಕಾದಶಿಗೆ ಮೊದಲು ಪಂಢರಪುರ ಸೇರಿ, ಅಂದು ವಿಠ್ಠಲನ ದರ್ಶನ ಮಾಡುತ್ತಾರೆ.ಇದನ್ನು "ವಾರ್ಕರಿ" ಅಥವಾ "ವಾರಕರಿಗಳು" ಎಂದು ಹೇಳುತ್ತಾರೆ.ಅವರಿಗೆ ವಿಠ್ಠಲನ ಪಾದ ಮುಟ್ಟಿ ನಮಸ್ಕರಿಸಲು ಮತ್ತು ಬೇಗ ದರ್ಶನವಾಗುವಂತೆ ಪ್ರತ್ಯೇಕ ಸರದಿ ಸಾಲಿನ ವ್ಯವಸ್ಥೆ ಅಲ್ಲಿದೆ.

ಆಷಾಢ ಶುದ್ಧ ಏಕಾದಶಿಯಂದು ಶ್ರೀ ವಿಠ್ಠಲನು ಭಕ್ತ ಪುಂಡಲೀಕನನ್ನು ಭೇಟಿಯಾಗಲು ಪಂಢರಪುರಕ್ಕೆ ಬಂದನೆಂದು,ಈಗಲೂ ಆ ದಿನ ವಿಷ್ಣುವು ಅಲ್ಲಿಗೆ ಬಂದು ಭಕ್ತರನ್ನು ಹರಸುತ್ತಾನೆಂದು ಪ್ರತೀತಿ ಇದೆ.

ವಿಷ್ಣುವಿನ ಭಕ್ತರು,+
ಮಾಧ್ವ ಸಂಪ್ರದಾಯದ ಬಂಧುಗಳು ಈ ಒಂಬತ್ತು ಏಕಾದಶಿ ಮಾತ್ರವಲ್ಲದೆ ವರ್ಷದ ಎಲ್ಲ ಏಕಾದಶಿಯಲ್ಲಿಯೂ ನಿರಾಹಾರ ಉಪವಾಸ ವ್ರತ ಆಚರಿಸುತ್ತಾರೆ.
ಅದಾಗದವರು ಆಷಾಢ ಏಕಾದಶಿಯಿಂದ ಕಾರ್ತಿಕ ಶುದ್ಧ ಏಕಾದಶಿಯವರೆಗೆ ಒಂಬತ್ತು ಏಕಾದಶಿಗಳಂದು ಉಪವಾಸ ವ್ರತ ಆಚರಿಸುತ್ತಾರೆ.

ವೈಜ್ಞಾನಿಕ ಮತ್ತು ವೈದ್ಯಕೀಯವಾಗಿಯೂ ವಾರದಲ್ಲಿ,ಅಥವಾ ಪಕ್ಷದಲ್ಲಿ ಒಂದು ದಿನ ಉಪವಾಸ ಮಾಡುವುದು ದೇಹ ಮತ್ತು ಆರೋಗ್ಯಕ್ಕೆ ಪರಿಣಾಮಕಾರಿ ಮತ್ತು ಬಹಳ ಒಳ್ಳೆಯದು ಎಂದು ಸಾಬೀತಾಗಿದೆ.

ಏಕಾದಶಿವ್ರತ ನಿಷ್ಠೆಯಿಂದ ಮಾಡಿ ಮೋಕ್ಷ ಪಡೆದ ಮಹರ್ಷಿಗಳ, ಮಹಾರಾಜ ಅಂಬರೀಷ,ಮೊದಲಾದವರ ಕತೆ ಪುರಾಣಗಳಲ್ಲಿವೆ.

ಏಕಾದಶಿ ವ್ರತ ಮಾಡಿ ಲಕ್ಷ್ಮೀ ನಾರಾಯಣ ನ ಕೃಪೆಗೆ ಪಾತ್ರರಾಗಿ


ಆಷಾಢ ಏಕಾದಶಿಯ ಮಹತ್ವ

ಈ ಪವಿತ್ರ ದಿನವು ಹಿಂದೂ ಸ್ಥಿತಿಕರ್ತ ದೇವರು ವಿಷ್ಣುವಿನ ಅನುಯಾಯಿಗಳಾದ ವೈಷ್ಣವರಿಗೆ ವಿಶೇಷ ಮಹತ್ವವುಳ್ಳದ್ದಾಗಿದೆ. ಈ ದಿನ ವಿಷ್ಣು ಮತ್ತು ಲಕ್ಷ್ಮೀ ಪೂಜೆ ಮಾಡಲಾಗುತ್ತದೆ. ಹಲವು ಭಕ್ತರು ಇಡೀ ರಾತ್ರಿ ಪ್ರಾರ್ಥನೆ, ಭಜನೆ ಮಾಡುತ್ತಾರೆ. ಭಕ್ತರು ಉಪವಾಸವಿದ್ದು, ಮುಂದಿನ ನಾಲ್ಕು ತಿಂಗಳ ಕಾಲ (ಚಾತುರ್ಮಾಸ) ಆಚರಿಸಬೇಕಾದ ವ್ರತಗಳನ್ನು ಈ ದಿನ ಇಟ್ಟುಕೊಳ್ಳುತ್ತಾರೆ. ಯಾವುದಾದರೂ ಆಹಾರ ಪದಾರ್ಥವನ್ನು ತ್ಯಜಿಸುವ ಬಗ್ಗೆ ಹಾಗೂ ಪ್ರತಿ ಏಕಾದಶಿ ದಿನ ಹಲವು ಭಕ್ತರು ಉಪವಾಸ ಆಚರಿಸುತ್ತಾರೆ.

ಇನ್ನು, ವಿಷ್ಣುವು ಕ್ಷೀರಸಾಗರದಲ್ಲಿ ಆದಿಶೇಷನ ಮೇಲೆ ಈ ದಿನ ಮಲಗಿ ನಿದ್ದೆ ಮಾಡುತ್ತಾನೆ ಎಂಬ ನಂಬಿಕೆ ಇದೆ. ಈ ಕಾರಣದಿಂದ ಇದನ್ನು ದೇವಶಯನಿ ಏಕಾದಶಿ ಅಥವಾ ಹರಿ ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ.

ನಂತರ, ವಿಷ್ಣುವು ನಾಲ್ಕು ತಿಂಗಳ ನಂತರ ಬರುವ ಪ್ರಬೋಧಿನಿ ಏಕಾದಶಿಯಂದು ತನ್ನ ನಿದ್ದೆಯಿಂದ ಎಚ್ಚತ್ತುಕೊಳ್ಳುತ್ತಾನೆ. ಈ ನಾಲ್ಕು ತಿಂಗಳ ಅವಧಿಯನ್ನು ಚಾತುರ್ಮಾಸ ಎಂದು ಕರೆಯುತ್ತಾರೆ. ಶಯನಿ ಏಕಾದಶಿಯು ಚಾತುರ್ಮಾಸದ ಆರಂಭವೆಂಬ ಪ್ರತೀತಿ ಇದೆ. ಭಕ್ತರು ವಿಷ್ಣುವಿನ ಪ್ರೀತ್ಯರ್ಥ ಚಾತುರ್ಮಾಸ ವ್ರತವನ್ನು ಆಚರಿಸಲು ಈ ದಿನ ಆರಂಭಿಸುತ್ತಾರೆ. ಈ ದಿನ ಹಲವು ಭಕ್ತರು ಉಪವಾಸವನ್ನು ಆಚರಿಸಲಾಗುತ್ತದೆ. ಈ ಉಪವಾಸದಲ್ಲಿ ಕೆಲವು ಅಹಾರ ಪದಾರ್ಥಗಳನ್ನು ಸೇವಿಸುವುದಿಲ್ಲ.

ಮಹತ್ವ

ಪುರಾಣ ಗ್ರಂಥದಲ್ಲಿ ಸೃಷ್ಟಿಕರ್ತ-ದೇವರ ಬ್ರಹ್ಮನು ನಾರದನಿಗೆ ಹೇಳಿದಂತೆ ಕೃಷ್ಣನು ಈ ದಿನದ ಮಹತ್ವವನ್ನು ಯುಧಿಷ್ಠಿರನಿಗೆ ವಿವರಿಸಿದ್ದಾನೆ

                                                ---------- Hari Om ----------


Sunday, June 9, 2019

Bande Satya Anjaneya Temple-Nandidurga Road Bengaluru

Bande Sathya Anjaneya Swamy Temple-Nandidurga Road, Bengaluru -46


                                                   Bande Sathya Anjaneya swamy
 
 
                                                                 another Picture 


 
ಮನೋಜವಂ ಮಾರುತ ತುಲ್ಯವೇಗಂ ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಟಮ್ |
ವಾತಾತ್ಮಜಂ ವಾನರಯೂಧ ಮುಖ್ಯಂ ಶ್ರೀರಾಮದೂತಂ ಶಿರಸಾ ನಮಾಮಿ ||
 

                                                             Main Entrance to Temple

                                                                Lord Anjaneya

                                                                Dhwajasthamba


                                                               Ashwathakatte


ಬುದ್ಧಿರ್ಬಲಂ ಯಶೊಧೈರ್ಯಂ ನಿರ್ಭಯತ್ವ-ಮರೋಗತಾ |
ಅಜಾಡ್ಯಂ ವಾಕ್ಪಟುತ್ವಂ ಚ ಹನುಮತ್-ಸ್ಮರಣಾದ್-ಭವೇತ್ ||
 

                                                                  Lord Venkateswara


                                                            Sri  Padmavathi Devi

                                                                   Sri Ganesha

 
ಅಂಜನಾನಂದನಂ ವೀರಂ ಜಾನಕೀ ಶೋಕ ನಾಶನಂ
ಕಪೀಶಂ ಅಕ್ಷಹಂತಾರಂ ವಂದೇ ಲಂಕಾ ಭಯಂಕರಂ 
 

                              Sri Rama Devaru

                                                        Sri Rama Devara Alankara


                                                           Sri Venu Gopala Swamy
 
 
sri Anjaneya Mangalashtakam:

`Suvarchalaa kalathraaya chaturbhuja dharaaya cha
Ushtraa roodhaya veeraya mangalam Sri Hanumathe.''


                                                                  Nagara kallu


                                                                       Pic-1

                                                                        Pic-2

                                                                     Pic-3

                                                                         Pic-4


 
ಓಂ ಆಂಜನೇಯಯ ವಿದ್ಮಹೇ ಮಹಬಲಾಯ ಧೀಮಹಿ ತನ್ನೋ ಹನುಮಾನ್ ಪ್ರಚೋದಯಾತ್
 
 
                                                               Tulasi Alankara
 


                                                              Bande sri Sathya Anjaneya


This Bande Sathya Anjaneya Swamy Temple is in the Heart of the Bengaluru city behind Cantonment Railway Station here Lots of Positive Energy is prevailing and one can feel this experience as soon as they enter the Temple Premises and get Lords Blessings.


                                 ------- Hari Om ------