Tuesday, April 5, 2022

ShubaKruta Nama Samvatsara - UGADI - Hindu New Year

 

Shubha Kruta Nama Samvatsara – New Year UGADI - ( 02-April 2022 to 21st March 2023 )

 

                                                       Lord Vishnu or Hari


This New Year is being Celebrated by mainly in Karnataka , Telangana and AndraPradesh States and as Gudi Padva in Maharashtra in India.

 

ಶ್ರೀ ಶುಭಕೃತುನಾಮ ಸಂವತ್ಸರದ ಆಗಮನವು
ಪ್ರತಿಯೊಬ್ಬರಿಗೂ,
ಶು ಶುಭ್ರ ಮನದ ಶುಭದ ಆನಂದ,
ಭ ಭಕ್ತಿ, ಶ್ರಧ್ದೆಯ ಸಂಭ್ರಮದಿಂದ
ಕೃ ಕೃಷ್ಣ ಪರಮಾತ್ಮನ ಆರಾಧನೆಯನ್ನು
ತು ತುಳಸಿ ದಳಗಳಿಂದ ಅರ್ಚಿಸಿ
ನಾ ನಾಮ ಸ್ಮರಣೆಯನ್ನು
ಮ ಮನಃಪೂರ್ವಕವಾಗಿ ಮಾಡಿ
ಜಗದೊಡೆಯನ ಅನುಗ್ರಹದಿಂದ
ಸಂತಸ, ಸಂಭ್ರಮ, ಸಂತೃಪ್ತಿಯನ್ನು
ಪಡೆದು ಜನ್ಮ ಸಾರ್ಥಕವಾಗಲಿ.


2 - 4 -2022
ಇಂದಿನಿಂದ 21-03-2023

ಶುಭಕೃತ್ ನಾಮ ಸಂವತ್ಸರ ಆರಂಭ

ಸಂವತ್ಸರದ ಮೊದಲ ಹಬ್ಬ.
ಹೊರಗೆಲ್ಲೂ ಹೋಗದೆ ಮನೆಯಲ್ಲಿಯೇ ಇದ್ದು, ಇದ್ದುದರಲ್ಲಿಯೇ ಸರಳವಾಗಿ ಹಬ್ಬವನ್ನಾಚರಿಸಿ,ಲೋಕಕ್ಕೆ ಒಳಿತಾಗಲಿ ಎಂದು ಭಗವಂತನನ್ನು ಪ್ರಾರ್ಥಿಸೋಣ.

ಶುಭಕೃತ್ ನಾಮ ಸಂವತ್ಸರದ ಯುಗಾದಿಯ ಶುಭಾಶಯಗಳು.

ಶತಾಯುರ್ವಜ್ರ ದೇಹಾಯ
ಸರ್ವ ಸಂಪತ್ಕರಾಯ ಚ|
ಸರ್ವಾರಿಷ್ಟ ವಿನಾಶಾಯ
ನಿಂಬಕಂ ದಳ ಭಕ್ಷಣಂ ||

ಯುಗಾದಿಯ ದಿನ ಪಂಚಾಂಗಕ್ಕೆ ಪೂಜೆ ಮಾಡಿ,
ಮೇಲಿನ ಶ್ಲೋಕ ಹೇಳಿ ಬೇವು ಬೆಲ್ಲ ಸವಿಯಬೇಕು.

ಈ ಸಂವತ್ಸರದಲ್ಲಿ ನಿಮಗೆಲ್ಲರಿಗೂ ಬೇವಿಗಿಂತಲೂ,ಸಿಹಿಯ ಬೆಲ್ಲದ ಸವಿ ಫಲಗಳೇ ಲಭಿಸಲಿ.

ಸರ್ವೇವೈ ಸುಖಿನಸ್ಸಂತು
ಸರ್ವೇಸಂತು ನಿರಾಮಯಾಃ |
ಸರ್ವೇ ಭದ್ರಾಣಿ ಪಶ್ಯಂತು
ಮಾ ಕಶ್ಚಿದ್ದುಃಖಭಾಗ್ಭವೇತ್ ||

ಎಲ್ಲರೂ ಸುಖವಾಗಿರಲಿ.
ಎಲ್ಲರೂ ಕಷ್ಟ-ತಾಪತ್ರಯಗಳಿಲ್ಲದೆ ನೆಮ್ಮದಿಯಿಂದ ಇರುವಂತಾಗಲಿ.
ಎಲ್ಲರಿಗೂ ಎಲ್ಲೆಡೆಗಳಿಂದ ಮಂಗಳಕರವಾದ ಒಳಿತೇ ಕಾಣಿಸಲಿ.
ಯಾರೊಬ್ಬರೂ ದುಃಖಭಾಗಿಗಳಾಗದಿರಲಿ.

ಕಾಲೇ ವರ್ಷಂತು ಪರ್ಜನ್ಯಃ
ಪೃಥಿವೀ ಸಸ್ಯ ಶಾಲಿನೀ |
ದೇಶೋsಯಂ ಕ್ಷೋಭ ರಹಿತಃ
ಸಾತ್ವಿಕಾಃ ಸಂತು ನಿರ್ಭಯಾಃ ||

ಸಕಾಲದಲ್ಲಿ ಸಾಕಷ್ಟು ಮಳೆ ಸುರಿಯಲಿ.
ಭೂಮಿಯು ಪೈರು-ಪಚ್ಚೆಗಳಿಂದ ತುಂಬಿರಲಿ.
ಈದೇಶವು ಬಾಧೆ-ಕ್ಷೋಭೆಗಳಿಲ್ಲದ್ದಾಗಲಿ.
ಸಾತ್ವಿಕ ಸಜ್ಜನರು ಭಯಮುಕ್ತರಾಗಿ ಜೀವಿಸಲಿ.

ಪ್ಲವನಾಮ ಸಂವತ್ಸರದಲ್ಲಿ ಬಂದ ಸಕಲ ಪ್ಲವ ವನ್ನು *ಶುಭಕೃತ್ ನಾಮ ಸಂವತ್ಸರವು ದೂರಮಾಡಲಿ.

ಎಲ್ಲರಿಗೂ ನೂತನ ಶುಭಕೃತ್ ನಾಮ ಸಂವತ್ಸರದ ಹಾರ್ದಿಕ ಶುಭಾಶಯಗಳು..
ಶುಭವಾಗಲಿ.


ಬೇವು ಎಷ್ಟೇ ಕಹಿಯಿದ್ದರೂ ಅದರ ರೋಗ ನಿರೋಧಕ ಶಕ್ತಿ ಮಹತ್ವದ್ದು.
ಹಾಗೆಯೇ ನಮ್ಮ ಜೀವನದಲ್ಲಿ ಬರುವ ಎಲ್ಲಾ ಸಂಕಷ್ಟಗಳು ಮನಸ್ಸನ್ನು ಧೃಡಪಡಿಸಿ ಸಾಗುವುದನ್ನು ಕಲಿಸುತ್ತದೆ.


ಬೆಲ್ಲ ಎಷ್ಟೇ ಸಿಹಿಯೆನಿಸಿದರೂ ನಿರಂತರ ಸ್ವೀಕರಿಸಲಾಗುವುದಿಲ್ಲ..
ಹಾಗೂ ಕಹಿಯ ರುಚಿ ಅನುಭವ ಇಲ್ಲದಿದ್ದರೇ ಸಿಹಿಯ ಬೆಲೆಯ ಆನಂದಿಸಲಾಗುವುದಿಲ್ಲ. ಸಿಹಿ-ಕಹಿ ಇವೆರಡೂ ಜೀವನಕ್ಕೆ ಧಾವಿಸಿದರೂ ಬೆಲ್ಲದಂಥ ಮನಸ್ಸು ನಮ್ಮದಾಗಿ ಕಹಿಯನ್ನೂ ಸಹ ಸಿಹಿಯಾಗಿ ಪರಿವರ್ತಿಸುವ ಆಶಯದೊಡನೆ ಈ ನೂತನ ಶುಭಕೃತ್ ವರ್ಷವನ್ನು ಪ್ರಾರಂಭಿಸೋಣ.


ಶ್ರೀ ಹರಿ ವಾಯು ಗುರುಗಳ ಅನುಗ್ರಹ ಸದಾ ನಮ್ಮೆಲ್ಲರ ಮೇಲೆ ಇರಲೆಂದು ಪ್ರಾರ್ಥನೆ ಮಾಡುತ್ತಾ.. ..ಸುಖವಾಗಲಿ ಬಹು ದುಃಖವಾಗಲಿ ಸಖ ನೀನಾಗಿರು ಪಾಂಡುರಂಗ.

 

                                                            another picture of the Lord

 

Let Lord Hari Vayu give us with their Blessings to beget Happiness and Prosperity to All.


                                            ------------ Hari Om ------------ 

Wednesday, March 30, 2022

Elders Value in any Home

 Elders Value in any Home

 

 


 

ಹಿರಿಯರು ಮನೆಯ ಲಕ್ಷಣ, ಅವರಿಲ್ಲದ ಮನೆ ಭಣ ಭಣ,
ನಮ್ಮ ಹಿರಿಯರನ್ನು ಗೌರವಿಸಲು ಕನಿಷ್ಟ ಈ ಕೆಳಗಿನ ೩೫ – 35 ನಿಯಮ ಪಾಲಿಸಬೇಕು:-


1.
ಅವರ ಮುಂದೆ ಕುಳಿತಾಗ ಫೋನ್ ಗಳನ್ನು ದೂರವಿಡಿ
2.
ಅವರು ಹೇಳುವ ಮಾತುಗಳನ್ನು ಪೂರ್ತಿಯಾಗಿ ಕೇಳಿ ಮಧ್ಯದಲ್ಲೇ ನಿಲ್ಲಿಸಬೇಡಿ.
3.
ಅವರ ಅಭಿಪ್ರಾಯ ಒಪ್ಪಿಕೊಳ್ಳಿ
4.
ಅವರ ಜೊತೆ ಮಾತಾಡುವಾಗ ಚಿತ್ತವಿಡಿ
5.
ಅವರ ಜೊತೆ ಇರುವಾಗ ಗೌರವದಿಂದ ವ್ಯವಹರಿಸಿ
6.
ಕೇವಲ ಸಂತೋಷದ ವಿಷಯ ಮಾತ್ರ ಹಂಚಿಕೊಳ್ಳಿ
7.
ದುಖ:ದ ವಿಷಯ ಆದಷ್ಟು ಅವೈಡ್ ಮಾಡಿ
8.
ಅವರಿಗೆ ಇಷ್ಟವಿರುವ ಗೆಳೆಯರ, ಆಪ್ತರ ಬಗ್ಗೆ ಮಾತ್ರ ಮಾತಾಡಿ
9.
ಅವರ ಸಂತೋಷದ ದಿನಗಳ ಬಗ್ಗೆ ನೆನಪಿಸಿ
10.
ಅವರು ಹೇಳಿದ್ದನ್ನೇ ಹೇಳುತ್ತಿದ್ದರೆ, ನೀವು ಹೊಸದಾಗಿ ಕೇಳುತ್ತಿರುವ ಹಾಗೆ ಇರಿ
11.
ಕಳೆದುಹೋದ ಕಹಿ ವಿಷಯಗಳನ್ನು ನೆನಪಿಸಬೇಡಿ, ಮರೆಯುವಂತೆ ಮಾಡಿ
12.
ಅವರ ಮುಂದೆ ಕುಳಿತಾಗ ಬೇರೆಯವರ ಜೊತೆ ಮಾತಾಡಬೇಡಿ
13.
ಅವರ ಮುಂದೆ ಗೌರವವಾಗಿ ಕುಳಿತುಕೊಳ್ಳಿ
14.
ಅವರ ಮಾತನ್ನು ತೆಗಳಬೇಡಿ.
15.
ಅವರು ಮಾತನಾಡುವಾಗ ಅರ್ಧಕ್ಕೆ ನಿಲ್ಲಿಸಬೇಡಿ.
16.
ಅವರ ವಯಸ್ಸಿಗೆ ಬೆಲೆಕೊಡಿ.
17.
ಅವರ ಮುಂದೆ ಅವರ ಮಕ್ಕಳನ್ನು ಬೈಯಬೇಡಿ
18.
ಅವರ ಮುಂದೆ ಮೊಮ್ಮಕ್ಕಳನ್ನು ಹೊಡೆಯಬೇಡಿ
19.
ನೀವು ಎಷ್ಟೇ ದೊಡ್ಡ ಹುದ್ದೆಯಲ್ಲಿರಲಿ, ನಿಮ್ಮ ಗೆಳೆಯರ ಮುಂದೆ ನಿಮ್ಮ ಹಿರಿಯರನ್ನು ಗೌರವಿಸಿ, ಇಲ್ಲದಿದ್ದರೆ ಗೆಳೆಯರೂ ಕೂಡ ಗೌರವಿಸುವುದಿಲ್ಲ.
20.
ಅವರ ಮುಂದೆ ಜೋರಾಗಿ ಮಾತನಾಡಬೇಡಿ


21.
ಅವರ ಮುಂದೆ ಕಾಲು ತೋರಿಸುವ ಹಾಗೆ ಕುಳಿತುಕೊಳ್ಳಬೇಡಿ
22.
ಅವರಕಡೆ ಬೆನ್ನುಮಾಡಿ ಕುಳಿತುಕೊಳ್ಳಬೇಡಿ
23.
ಅವರ ನ್ಯೂನ್ಯತೆಯನ್ನು ಪದೇ ಪದೇ ಎತ್ತಿ ತೋರಿಸಬೇಡಿ.
24.
ಸಣ್ಣ ಸಣ್ಣ ಬಳಲಿಕೆಯನ್ನು ಅವರ ಮುಂದೆ ಹೇಳಬೇಡಿ.
25.
ಅವರು ಮಾಡಿದ ಸಂಪ್ರದಾಯಗಳನ್ನು ಬದಲಿಸಲು ಪ್ರಯತ್ನಿಸಬೇಡಿ
26.
ನಿಮ್ಮ ಕಷ್ಟಗಳನ್ನು ಆದಷ್ಟು ತಿಳಿಸಬೇಡಿ, ಆದರೆ ಅವರಿಂದ ಸಲಹೆ ಪಡೆದುಕೊಳ್ಳಿ.
27.
ಅವರ ವಯಸ್ಸಿನ ಬಗ್ಗೆ ಹೀಯಾಳಿಸಬೇಡಿ
28.
ಅವರು ಮಾಡಿದ ತಪ್ಪಿಗೆ ನಗಬೇಡಿ, ನೋಡಿಯೂ ನೋಡದಹಾಗೆ ಇರಿ.
29.
ಹೋಗುವಾಗ ಬರುವಾಗ ಭೆಟ್ಟಿಯಾಗಿ ಆಶೀರ್ವಾದ ಪಡೆಯಿರಿ
30.
ಅವರಿಗೆ ಇಷ್ಟವಾದ ಹೆಸರಿನಿಂದಲೇ ಕರೆಯಿರಿ
31.
ಅವರ ಅನುಭವವನ್ನು ತಿಳಿದುಕೊಳ್ಳಿ ಮತ್ತು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ
32.
ದಿನಕ್ಕೆ ಕನಿಷ್ಟ 1ಗಂಟೆಯಾದರೂ ಮಕ್ಕಳನ್ನು ಅವರ ಹತ್ತಿರ ಬಿಡಿ
33.
ಅವರನ್ನು ಒಂಟಿಯಾಗಿ ಬಿಡಬೇಡಿ, ನಿಮ್ಮ ಜೊತೆ ಇರಿಸಿಕೊಳ್ಳಿ
34.
ಅವರ ಪ್ರಶ್ನೆಗೆ ಸರಿಯಾದ ಉತ್ತರ ಕೊಡಿ, ಪ್ರಶ್ನೆಗೆ ಮರುಪ್ರಶ್ನೆ ಮಾಡಬೇಡಿ
35.
ನಿಮ್ಮ ಕರ್ತವ್ಯ ಮರೆಯಬೇಡಿ, ಬೇರೆಯವರ ಕರ್ತವ್ಯಲೋಪದ ಬಗ್ಗೆ ಯೋಚಿಸಬೇಡಿ.
ಹಿರಿಯರು ನಮಗೆ ದೇವರಿದ್ದಹಾಗೆ, ಅವರ ಅನುಭವ, ಮಾರ್ಗದರ್ಶನ, ಅವರ ಆಶೀರ್ವಾದ ನಮಗೆ ಅತ್ಯವಶ್ಯಕ, ಹಿರಿಯರು ಮನೆಯ ಲಕ್ಷಣ, ಅವರಿಲ್ಲದ ಮನೆ ಭಣ ಭಣ.



ಕೃಷ್ಣಾರ್ಪಣಮಸ್ತು

Monday, February 21, 2022

Benefits of Bhajane or Bhajans-- ಭಜನೆ

Benefits of Bhajane / ಭಜನೆ

 

 

                      Pic -1

     

ಭಜನೆ ಎಂಬ ಮೂರಕ್ಷರಕ್ಕೆ ಬಹಳ ಮಹತ್ವವಿದ್ದು, ನಮ್ಮಿಂದ ಮನಃಪೂರ್ವಕವಾಗಿ ದೇವರಿಗೆ ನೀಡುವಂತಹ ಒಂದು ಸಂಪತ್ತು ಇದ್ದರೆ ಅದು ಭಜನೆ. ಭಜನೆಯನ್ನು ಭಕ್ತಿಪೂರ್ವಕವಾಗಿ ಅರ್ಪಿಸಿದರೆ, ಭಗವಂತನಿಗೆ ಅತಕ್ಕಿಂತ ದೊಡ್ಡ ಹರಕೆಯಿಲ್ಲ.

ಪುರಂದರದಾಸರು , ಕನಕದಾಸರು ಭಜನೆಯಿಂದ ಭಗವಂತನನ್ನು ಸಾಕ್ಷಾತ್ಕರಿಸಿಕೊಂಡವರು.


ಭಜನೆಯಿಂದ ಮನೆಯ ಎಲ್ಲಾ ಸದಸ್ಯರಲ್ಲೂ ಆಧ್ಯಾತ್ಮಿಕ ಭಾವನೆ ಬೆಳೆಯುತ್ತದೆ. ಭಜನೆಯಿಂದ ಮನೆಯ ವಿಭಜನೆಯಿಲ್ಲ.



ಭಜನೆ ಹೇಳುತ್ತಾ ಚಪ್ಪಾಳೆ ತಟ್ಟುವುದರಿಂದ ಆರೋಗ್ಯ ಭಾಗ್ಯ, ಅನೇಕ ಕಾಯಿಲೆಗಳನ್ನು ಶಮನ ಮಾಡಬಲ್ಲ ಪರಿಣಾಮಕಾರಿ ವ್ಯಾಯಾಮ ಎನಿಸಿದೆ.
ಹೃದಯ ರೋಗ ಮತ್ತು ಅಸ್ತಮಾ ಶ್ವಾಸಕೋಶದ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.


ಚಪ್ಪಾಳೆ ಯನ್ನು ತಟ್ಟುವಾಗ ನಾವು ಲಯಬದ್ಧವಾಗಿ ತಾಳ ಹಾಕುತ್ತೇವೆ. ಈ ಶಬ್ದವು ಕೂಡ ನಮಗೆ ಬಹಳ ಉಪಯೋಗಿಯಾಗಿದೆ. ಈ ಲಯಬದ್ಧವಾಗಿ ಪುನರಾವರ್ತಿಯಾಗುವ ಶಬ್ದವು ನಮ್ಮಲ್ಲಿ ಒಂದು ವಿಧವಾದ ಶಿಸ್ತನ್ನು ಉಂಟು ಮಾಡುತ್ತದೆ. ಇದರಿಂದ ನಮ್ಮ ಏಕಾಗ್ರತೆಯು ಹೆಚ್ಚುತ್ತದೆ.

 

                                                                             Pic-2


 

ಹೀಗಾಗಿಯೇ ನಾವು ಭಜನೆ ಮಾಡುವಾಗ ತಾಳಕ್ಕೆ ತಕ್ಕಂತೆ ಚಪ್ಪಾಳೆ ತಟ್ಟುತ್ತೇವೆ. ಇದರಿಂದ ಕ್ರಮೇಣ ನಮ್ಮ ಮನಸ್ಸು ಶಿಸ್ತಿನಿಂದ ಭಜನೆಯಲ್ಲಿ ಏಕಾಗ್ರಗೊಂಡು ತಲ್ಲಿನವಾಗುತ್ತದೆ. ಇದರ ಮಹತ್ವ ಅರಿತು ಏನೋ ನಮ್ಮ ಪೂರ್ವಿಕರು ಭಜನೆಯ ಜೊತೆಗೆ ಚಪ್ಪಾಳೆಯನ್ನು ಸೇರಿಸಿ ನಮ್ಮನ್ನು ಸುಲಭವಾಗಿ ಬಾಹ್ಯ ಜಗತ್ತನ್ನು ಮರೆತು ದೇವರನಾಮ ಹಾಡುವಂತೆ ಮಾಡಿದ್ದು.


ಜೀರ್ಣಾಂಗ ತೊಂದರೆಗಳನ್ನೆದುರಿಸುತ್ತಿರುವ ಜನರಿಗೆ ಪರಿಣಾಮಕಾರಿ ಪರಿಹಾರ.

ಚಪ್ಪಾಳೆ, ದೇಹದಲ್ಲಿ ಬಿಳಿ ರಕ್ತ ಕಣಗಳನ್ನು ಬಲಪಡಿಸುವ ಮೂಲಕ ಸೋಂಕುಗಳು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

 


                                                                        Pic-3

ಪ್ರತಿದಿನ ಚಪ್ಪಾಳೆ ತಟ್ಟುವುದು ಅಧಿಕ ರಕ್ತದೊತ್ತಡ, ಮಧುಮೇಹ, ಖಿನ್ನತೆ, ಸಂಧಿವಾತ, ತಲೆನೋವು, ನಿದ್ರಾಹೀನತೆ ಮತ್ತು ಕೂದಲು ನಷ್ಟದಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರಿಗೆ ಲಾಭಕರವಾಗಿರುತ್ತದೆ.



ಚಪ್ಪಾಳೆ ತಟ್ಟುವುದರಿಂದ ನಮ್ಮ ಕೈಗಳಲ್ಲಿ ಇರುವ ನರಗಳು ಹಾಗೂ ನಮ್ಮ ಮೆದುಳಿನ ಸಂವೇದನಾ ಗ್ರಾಹಕಗಳು ಸಕ್ರಿಯಗೊಳುತ್ತವೆ. ಇದರಿಂದ ನಮ್ಮ ಮೆದುಳು ಚುರುಕಾಗುತ್ತದೆ.

 

ಇದರಿಂದಾಗಿ ನಮ್ಮ ದೇಹದ ಅನೇಕ ಭಾಗಗಳು ಕ್ರಿಯಾಶೀಲವಾಗುತ್ತವೆ. ಹೀಗಾಗಿ ನಿಂತಲ್ಲಿಯೇ ನಾವು ನಮ್ಮ ದೈಹಿಕ ವ್ಯಾಯಾಮಕ್ಕೆ ಒಂದು ವ್ಯತ್ಯಾಸದ ಸ್ಪರ್ಶ ಕೊಡುತ್ತೇವೆ.
ನಾವು ಚಪ್ಪಾಳೆ ತಟ್ಟುವಾಗ ಬಿರುಸಿನಿಂದ ಎರಡು ಕೈಗಳನ್ನು ತಟ್ಟುವಾಗ ನಮ್ಮ ಅಂಗೈ ಹಾಗೂ ಬೆರಳುಗಳ "ಪ್ರೆಶರ್ ಪಾಯಂಟ್ಸ್" ಸಕ್ರಿಯಗೊಳ್ಳುತ್ತವೆ. ಇದರಲ್ಲಿ ವಿಸ್ಮಯಕಾರಿ ಅಂಶವೆಂದರೆ ನಮ್ಮ ದೇಹದ ಎಲ್ಲ ಮುಖ್ಯಭಾಗಗಳಾದ ಮೆದುಳು, ಹಣೆ, ಕಣ್ಣು, ಮೂಗು, ಗಂಟಲು, ಶ್ವಾಸಕೋಶ, ಹೊಟ್ಟೆ, ಹೃದಯ, ಯಕೃತ್, ಗರ್ಭಕೋಶ, ಕರುಳು, ಕಾಲು ಇತ್ಯಾದಿ ಎಲ್ಲ ಅಂಗಗಳಿಗೆ ಸೇರುವ "ಪ್ರೆಶರ್ ಪಾಯಂಟ್ಸ್" ನಮ್ಮ ಅಂಗೈ ಹಾಗೂ ಬೆರಳಿನಲ್ಲಿ ಇವೆ.
ಚಪ್ಪಾಳೆ ಮಕ್ಕಳ ಕಲಾ ಕೌಶಲಗಳನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ-

 

                                                                     Pic-4

 

ಅಚ್ಚುಕಟ್ಟಾದ ಕೈಬರಹ, ಕಡಿಮೆ ಕಾಗುಣಿತ ದೋಷ, ಇತ್ಯಾದಿ ಇತರರನ್ನು ಹುರಿದುಂಬಿಸುವ ಸಂಕೇತವಾಗಿ ತಟ್ಟುವ ಚಪ್ಪಾಳೆಯಿಂದ ಅದ್ಭುತವಾದ ಆರೋಗ್ಯ ಲಾಭಗಳನ್ನು ಪಡೆಯಿರಿ. ಇನ್ನು ನಮಗಾಗಿಯೂ ಸಹ ಚಪ್ಪಾಳೆ ತಟ್ಟಲು ಪ್ರಾರಂಭಿಸೋಣ. ಇದರಿಂದ ಇತರರನ್ನು ಪ್ರೋತ್ಸಾಹಿಸಿದಂತೆಯೂ ಆಯಿತು ಹಾಗೆಯೇ ನಮ್ಮ ಆರೋಗ್ಯ ವೃದ್ಧಿಯೂ ಆಯಿತು.

ಹೀಗೆ ನಮ್ಮ ಸ್ವಾಮಿಕಾರ್ಯ ಸ್ವಕಾರ್ಯ ಎರಡೂ ಆಯಿತು.

 

------------ Hari Om -----------



Thursday, January 27, 2022

Achyutashtakam

Achyutashtakam

 

                                 Lord - Achyuta

ಅಚ್ಯುತಾಷ್ಟಕಂ


ಅಚ್ಯುತಂ ಕೇಶವಂ ರಾಮನಾರಾಯಣಂ
ಕೃಷ್ಣದಾಮೋದರಂ ವಾಸುದೇವಂ ಹರಿಂ ।
ಶ್ರೀಧರಂ ಮಾಧವಂ ಗೋಪಿಕಾ ವಲ್ಲಭಂ
ಜಾನಕೀನಾಯಕಂ ರಾಮಚಂದ್ರಂ ಭಜೇ ॥ 1

ಅಚ್ಯುತಂ ಕೇಶವಂ ಸತ್ಯಭಾಮಾಧವಂ
ಮಾಧವಂ ಶ್ರೀಧರಂ ರಾಧಿಕಾ ರಾಧಿತಂ ।
ಇಂದಿರಾಮಂದಿರಂ ಚೇತಸಾ ಸುಂದರಂ
ದೇವಕೀನಂದನಂ ನಂದಜಂ ಸಂದಧೇ ॥ 2

ವಿಷ್ಣವೇ ಜಿಷ್ಣವೇ ಶಂಕನೇ ಚಕ್ರಿಣೇ
ರುಕ್ಮಿಣೀ ರಾಗಿಣೇ ಜಾನಕೀ ಜಾನಯೇ ।
ವಲ್ಲವೀ ವಲ್ಲಭಾಯಾರ್ಚಿತಾ ಯಾತ್ಮನೇ
ಕಂಸ ವಿಧ್ವಂಸಿನೇ ವಂಶಿನೇ ತೇ ನಮಃ ॥ 3

ಕೃಷ್ಣ ಗೋವಿಂದ ಹೇ ರಾಮ ನಾರಾಯಣ
ಶ್ರೀಪತೇ ವಾಸುದೇವಾಜಿತ ಶ್ರೀನಿಧೇ ।
ಅಚ್ಯುತಾನಂತ ಹೇ ಮಾಧವಾಧೋಕ್ಷಜ
ದ್ವಾರಕಾನಾಯಕ ದ್ರೌಪದೀರಕ್ಷಕ ॥ 4

ರಾಕ್ಷಸ ಕ್ಷೋಭಿತಃ ಸೀತಯಾ ಶೋಭಿತೋ
ದಂಡಕಾರಣ್ಯಭೂ ಪುಣ್ಯತಾಕಾರಣಃ ।
ಲಕ್ಷ್ಮಣೋನಾನ್ವಿತೋ ವಾನರೈಃ ಸೇವಿತೋ
ಅಗಸ್ತ್ಯ ಸಂಪೂಜಿತೋ ರಾಘವಃ ಪಾತು ಮಾಂ ॥ 5

ಧೇನುಕಾರಿಷ್ಟಕಾಽನಿಷ್ಟಿಕೃದ್-ದ್ವೇಷಿಹಾ
ಕೇಶಿಹಾ ಕಂಸಹೃದ್-ವಂಶಿಕಾವಾದಕಃ ।
ಪೂತನಾಕೋಪಕಃ ಸೂರಜಾಖೇಲನೋ
ಬಾಲಗೋಪಾಲಕಃ ಪಾತು ಮಾಂ ಸರ್ವದಾ ॥ 6

ಬಿದ್ಯುದುದ್-ಯೋತವತ್-ಪ್ರಸ್ಫುರದ್-ವಾಸಸಂ
ಪ್ರಾವೃಡಂ-ಭೋದವತ್-ಪ್ರೋಲ್ಲಸದ್-ವಿಗ್ರಹಂ ।
ವಾನ್ಯಯಾ ಮಾಲಯಾ ಶೋಭಿತೋರಃ ಸ್ಥಲಂ
ಲೋಹಿತಾಙ್-ಘಿದ್ವಯಂ ವಾರಿಜಾಕ್ಷಂ ಭಜೇ ॥ 7

ಕುಂಚಿತೈಃ ಕುಂತಲೈ ಭ್ರಾಜಮಾನಾನನಂ
ರತ್ನಮೌಳಿಂ ಲಸತ್-ಕುಂಡಲಂ ಗಂಡಯೋಃ ।
ಹಾರಕೇಯೂರಕಂ ಕಂಕಣ ಪ್ರೋಜ್ಜ್ವಲಂ
ಕಿಂಕಿಣೀ ಮಂಜುಲಂ ಶ್ಯಾಮಲಂ ತಂ ಭಜೇ ॥ 8

ಅಚ್ಯುತಸ್ಯಾಷ್ಟಕಂ ಯಃ ಪಠೇದಿಷ್ಟದಂ
ಪ್ರೇಮತಃ ಪ್ರತ್ಯಹಂ ಪೂರುಷಃ ಸಸ್ಪೃಹಂ ।
ವೃತ್ತತಃ ಸುಂದರಂ ಕರ್ತೃ ವಿಶ್ವಂಭರಃ
ತಸ್ಯ ವಶ್ಯೋ ಹರಿ ರ್ಜಾಯತೇ ಸತ್ವರಂ ॥

 

             --------------- Hari Om --------------

 


 

Thursday, December 30, 2021

Mritunjaya Maha Mantra

 Mritunjaya Maha Mantra

 

                                                                       Lord Shiva
 

 

ಮಹಾ ಮೃತ್ಯುಂಜಯ ಮಂತ್ರ

 

ಬಹುತೇಕರು ಮೃತ್ಯುಂಜಯ ಮಹಾ ಮಂತ್ರವನನ್ನು ಪ್ರತಿದಿನ ಪಠನೆ ಮಾಡುವ ಅಭ್ಯಾಸ ರೂಢಿಸಿಕೊಂಡಿರುವುದು ಉತ್ತಮ ಮಾರ್ಗವೇ ಸರಿ.
ಅದು ಬೆಳಗಿನ ಜಾವ ಅಥವ ರಾತ್ರಿ ಮಲಗುವ ಮೊದಲು ಕನಿಷ್ಠ ಹನ್ನೊಂದು ಬಾರಿ ಪಠನೆ ಮಾಡುವುದು ಸಾಮಾನ್ಯ ಕ್ರಮ.

ಈ ಮಂತ್ರವನ್ನು ಪಠನ ಮಾಡುವುದು ಒಂದು ಭಾಗವಾದರೆ, ಅದರ ಅರ್ಥ ತಿಳಿದು ಪಠನೆ ಮಾಡುವುದು ಮತ್ತೊಂದು ಭಾಗ, ಇದರಿಂದ ಮನಸ್ಸಿಗೆ ಹೆಚ್ಚು ನೆಮ್ಮದಿ ಮತ್ತು ಫಲವೂ ಅಧಿಕ.



ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ|
ಊರ್ವಾರು ಕಮಿವ ಬಂಧನಾತ್‌ ಮೃತ್ಯೋಮೃಕ್ಷೀಯ ಮಾಮೃತಾತ್‌||



||ಮೃತ್ಯುಂಜಯ ಮಂತ್ರದಲ್ಲಿ ಬರುವ 'ಉರ್ವಾರು' (ಸೌತೆಕಾಯಿಯ) ಸಂಭಂದ ಹೇಗೆ ಎಂಬುದನ್ನು ತಿಳಿಯೋಣ.||
ಓಂ = ಪ್ರಣವ
ತ್ರಯಂಬಕಂ ಮೂರು ಕಣ್ಣಿನ ಪರಮೇಶ್ವರನೇ...
ಯಜಾಮಹೇ = ಪೂಜನೀಯನೇ....
ಸುಗಂಧಿಂ = ಸುಗಂಧದಿಂದ ಕೂಡಿದ,
ಪುಷ್ಟಿ ವರ್ಧನಂ = ಇಷ್ಟ ಕಾಮ್ಯ, ಆರೋಗ್ಯವು ವೃದ್ಧಿಯಾಗಲಿ
(
ಊರ್ವಾರುಕಮಿವ ಬಂಧನಾತ್ ಹೇಗೆ ಸೌತೆಕಾಯಿಯ ತೊಟ್ಟು ತನ್ನ ಬಳ್ಳಿಯೊಂದಿಗೆ ಬಹಳ ಸೂಕ್ಷ್ಮವಾಗಿ ಅಂಟಿಕೊಂಡಿರುತ್ತದೆಯೋ ಆ ರೀತಿಯಲ್ಲಿ.....
ಮೃತ್ಯೋಮೃಕ್ಷೀ = ಅಂತಹ ಮೃತ್ಯುವಿನಿಂದ, ಮುಕ್ತಿ ದೊರೆಯಲಿ.
ಮಾಮೃತಾತ್ ಅಮೃತತ್ವವನ್ನು ಪಡಯುವಂತಾಗಲಿ.

ಇಲ್ಲಿ "ಊರ್ವಾರು ಕಮಿಕ ಬಂಧನದ ಬಗ್ಗೆ ಸ್ವಲ್ಪ ಹೆಚ್ಚಿನ ವಿವರಣೆಯ ಅಗತ್ಯವಿದೆ. ಆ ಅದ್ಭುತ ವಿವರಣೆಯನ್ನು ನೋಡೋಣ.

ಪರಶಿವನೇ......
ಈ ಜಗತ್ತಿನೊಂದಿಗೆ ನಮ್ಮ ಬಂಧನವು ಹೇಗಿರಬೇಕು ಎಂದರೆ, ಸೌತೆಕಾಯಿಯು ತನ್ನ ಬಳ್ಳಿಯೊಂದಿಗೆ ಎಷ್ಟು ಸೂಕ್ಷ್ಮವಾಗಿ ಅಂಟಿಕೊಂಡಿರುತ್ತದೆಯೋ, ಅದೇ ರೀತಿಯಲ್ಲಿ ಈ ಲೌಕಿಕ ಜಗತ್ತಿನೊಂದಿಗಿನ ನಮ್ಮ ಬಂಧನವು ಸಾಕು ಎಂಬ ಅರ್ಥ ಅಧ್ಬುತ.

|
ಅದು ಹೇಗೆಂಬುದನ್ನು ನೋಡೋಣ |

ನಾವು ಇಲ್ಲಿ ಗಮನಿಸಬೇಕಾದದ್ದು, ಗಿಡದ ಬಳ್ಳಿಯಿಂದ ಬೆಳೆಯುವ ಕುಂಬಳಕಾಯಿ, ಸೋರೇಕಾಯಿ, ಹೀರೇಕಾಯಿ ಮುಂತಾದವುಗಳಿಗೂ ಮತ್ತು ಅದೇರೀತಿ ಬಳ್ಳಿಯಿಂದ ಬೆಳೆಯುವ ಸೌತೆಕಾಯಿಗೂ ಕಾಣುವ ವ್ಯತ್ಯಾಸ ಬಗ್ಗೆ ಸೂಕ್ಷ್ಮವಾಗಿ ಗಮನಿಸಿದಾಗ......!


1. ಸೌತೆಕಾಯಿಯನ್ನು ಗಿಡದ ಬಳ್ಳಿಯಿಂದ ಬೇರ್ಪಡಿಸುವಾಗ, ಕಾಯಿಯ ಜೊತೆ ಬಳ್ಳಿಯ ತೊಟ್ಟು ಅಂಟಿಕೊಂಡು ಬರುವುದಿಲ್ಲ, ಅದು ಗಿಡದ ಬಳ್ಳಿಯೊಂದಿಗೆ ಗಿಡದಲ್ಲೇ ಉಳಿಯುತ್ತದೆ.


2. ಆದರೆ, ಬಳ್ಳಿಯಿಂದ ಬೆಳೆಯುವ ಕುಂಬಳಕಾಯಿ, ಸೋರೇಕಾಯಿ, ಹೀರೇಕಾಯಿ ಮುಂತಾದವುಗಳು ಬಳ್ಳಿಯ ತೊಟ್ಟು ಕಾಯಿಯೊಂದಿಗೆ ಗಟ್ಟಿಯಾಗಿ ಅಂಟಿಕೊಂಡಿವುದನ್ನು ನಾವು ಗಮನಿದ್ದೇವೆ.


3.
ಗಿಡದ ಬಳ್ಳಿಯಿಂದ ಉತ್ಪತ್ತಿಯಾದ ತರಕಾರಿಗಳನ್ನು ಮಾರುಕಟ್ಟೆಯಿಂದ ತರುವಾಗ ಕುಂಬಳಕಾಯಿ, ಹೀರೇಕಾಯಿ, ಸೋರೇಕಾಯಿ ಮುಂತಾದವುಗಳು ತೊಟ್ಟಿನ ಸಮೇತ ಕೊಳ್ಳುತ್ತೇವೆ. ಆದರೆ ತೊಟ್ಟಿನೊಂದಿಗೆ ಇರುವ ಸೌತೆಕಾಯಿ ಮಾರುಕಟ್ಟೆಯಲ್ಲಿ ದೊರೆಯುವುದು ಅತಿ ವಿರಳ..!
ಕಾರಣ....! ಸೌತೆಕಾಯಿ ಮತ್ತು ಅದರ ಗಿಡದ ಬಳ್ಳಿಯ ಸಂಭಂದ ಬಹಳ ಸೂಕ್ಷ್ಮ. ಸೌತೆಕಾಯಿಯನ್ನು ಗಿಡದ ಬಳ್ಳಿಯಿಂದ ಬೇರ್ಪಡಿಸು ಸಮಯದಲ್ಲಿ, ಕಾಯಿಯೊಂದಿಗೆ ಅಂಟಿಕೊಂಡಿದ್ದ ಅದರ ತೊಟ್ಟು ಬಳ್ಳಿಯಲ್ಲೇ ಉಳಿಯುತ್ತದೆ ಎನ್ನುವ ಅಧ್ಬುತವಾದ ವಿವರಣೆ.


ಅದೇ ರೀತಿಯಲ್ಲಿ ಲೌಕಿಕ ಜಗತ್ತಿನ ನಮ್ಮ ಬಂಧನಗಳು ಇರಬೇಕು ಎಂಬ ಸಂದೇಶ.

ಮೃತ್ಯುಂಜಯ ಮಂತ್ರವನ್ನು ಪ್ರತಿದಿನವೂ ಹೇಳುವುದು ಮೃತ್ಯುವನ್ನು ಜಯಿಸುವ ಕಾರಣಕ್ಕಾಗಿ ಅಲ್ಲ. ಮೃತ್ಯುವು ಸುಲಭವಾಗಿ, ರೋಗ ರುಜಿನಗಳಿಲ್ಲದೆ ಅನಾಯಾಸವಾಗಿ ಬರಲಿ ಎಂಬ ಅರ್ಥ.


ಇದನ್ನೇ ಗುರು ದ್ರೋಣಾಚಾರ್ಯರೂ ಸಹಾ....
"ಅನಾಯಾಸೇನ ಮರಣಂ, ವಿನಾ ದೈನ್ಯೇನ ಜೀವನಂ, ದೇಹಿ ಮೇ ಕೃಪಯಾ ಶಂಭೋ ತ್ವಯಿ ಭಕ್ತಿಮಚಲಂ ಎಂದು ತಿಳಿಸಿದ್ದು.


ಮಾನವರಾಗಿ ಜನಿಸಿದ ನಾವು ಈ ಲೌಕಿಕ ಜಗತ್ತಿನೊಂದಿಗೆ ಅತಿ ಸೂಕ್ಷ್ಮವಾದ, ಕನ ಮೋಹದ ಬದುಕನ್ನು ಆಯ್ಕೆ ಮಾಡಿಕೊಳ್ಳಬೇಕು. ಅತಿಯಾದ ಗಟ್ಟಿ ಬಂಧನಗಳಿಗೆ ಅಂಟಿಕೊಂಡಾಗ, ಅನಭವಿಸುವ ನೋವೇ ಹೆಚ್ಚು,

 

                                                                   another Picture


The less attached YOU are, the more peaceful YOU are.


ಎನ್ನುವುದನ್ನು ಸರಳವಾಗಿ ವಿವರಿಸಲಾಗಿದೆ.

"
ಹರ ಹರ ಮಹಾದೇವ, ಶಂಭೋ ಶಂಕರ

ಧರ್ಮೋ ರಕ್ಷತಿ ರಕ್ಷಿತಃ


------------ Hari Om -----------

                                                   

Wednesday, November 3, 2021

Deepavali Day – Water storing & Bathing Festival

 


                              Festival of Lights



Deepavali Day – Water storing & Bathing 

Festival


ನೀರು ತುಂಬುವ ಹಬ್ಬದ ದಿನ ಏನು ಮಾಡಬೇಕು


1) ಹಂಡೆತುಂಬಿ ಕಾಯಿಸಿ ಸ್ನಾನ ಮಾಡುವ ಅನುಕೂಲ ಇದ್ದವರು ಅದನ್ನು ತಿಕ್ಕಿ ತೊಳೆದು ಅಲಂಕರಿಸಿ ಶುದ್ಧವಾದ ನೀರನ್ನು ಮುಕ್ಕಾಲು ಭಾಗ ತುಂಬಿ ಇಡಿ.

2)
ಅನಂತರ ಬಾವಿ ಇದ್ದವರು ತಮ್ಮ ಮನೆಯ ಸಂಪ್ರದಾಯದಂತೆ ನೀರು ಸೇದಿ ತಂದು ಒಂದು ಕಲಶದಲ್ಲಿ ದೇವರ ಕೊಣೆಯೊಳಗೋ ಹೊರಗೋ ಶುದ್ಧವಾದ ಜಾಗದಲ್ಲೋ ಇಡಿ

3)
ತಂಡುಲಾಕ್ಷತೆ, ಹೂವು, ಹಣ್ಣು , ಗಂಧ, ಅರಸಿಣ ಪುಡಿ, ಕುಂಕುಮ ಇತ್ಯಾದಿ ಸಿದ್ಧಪಡಿಸಿ.

4)
ಮಂತ್ರಾಕ್ಷತೆ , ಹೂವು ಕೈಯಲ್ಲಿ ಹಿಡಿದು ನೀರು ತುಂಬಿದ ಕಲಶದಲ್ಲಿ ತನ್ನ ಅಂಗುಷ್ಟದಿಂದ ಗಂಗೆಗೆ ಜನ್ಮವಿತ್ತ ರಮಾಪತಿ ತ್ರಿವಿಕ್ರಮನನ್ನು ಅವಾಹಿಸಿ.


ಮಮ ಗುರ್ವಂತರ್ಗತ ವರುಣಾಂತರ್ಗತ ಭಾರತೀರಮಣ ಮುಖ್ಯಪ್ರಾಣಾಂತರ್ಗತ ಗಂಗಾಜನಕಂ ರಮಾಸಹಿತ ತ್ರಿವಿಕ್ರಮಂ ಆವಾಹಯಾಮಿ. ಪ್ರಸೀದ ಪ್ರಸೀದ ಭಗವನ್ ಆಗಚ್ಛ ಆಗಚ್ಛ ಎಂದು ಕಲಶದಲ್ಲಿ ಹೂವು ಅಕ್ಷತೆ ಹಾಕಿ.


ನಂತರ ಆಸನ, ಅರ್ಘ್ಯ, ಪಾದ್ಯ, ಆಚಮನ, ಮಧುಪರ್ಕ, ಸ್ನಾನ, ವಸ್ತ್ರ, ಯಜ್ನೋಪವೀತ, ಗಂಧ, ಪುಷ್ಪ, ಧೂಪ, ದೀಪ, ನೈವೇದ್ಯ, ತಾಂಬೂಲ, ಮಂಗಲಾರತಿ, ಮಂತ್ರಪುಷ್ಪ, ನಮಸ್ಕಾರ ಅರ್ಪಿಸಿ.

5)
ನಂತರ ಅಕ್ಷತೆ ಹೂವು ಕೈಯಲ್ಲಿ ಹಿಡಿದುಕೊಂಡು ಕಲಶದಲ್ಲಿ ಗಂಗಾದೇವಿಯನ್ನು ಅವಾಹಿಸಿ
ಗಂಗೇ ಚ ಯಮುನೇ ಕೃಷ್ಣೇ ಗೋದಾವರೀ ಸರಸ್ವತೀ|
ನರ್ಮದೇ ಸಿಂಧು ಕಾವೇರೀ ಜಲೇ$ಸ್ಮಿನ್ ಸನ್ನಿಧಿಮ್ ಕುರು||
ಕಲಶಮಧ್ಯೆ ತ್ರಿವಿಕ್ರಮ ರೂಪಿಣಃ ಪುತ್ರಿಮ್ ಗಂಗಾಂ ಆವಾಹಯಾಮಿ
ಎಂದು ಅಕ್ಷತೆ ಹೂವು ಹಾಕಿ ಮುಂದಿನ ಮಂತ್ರಗಳಿಂದಲೂ ಕಲಶದಲ್ಲಿ ಅಕ್ಷತೆ ಹಾಕಿ
ಭೂ: ಗಂಗಾಂ ಆವಾಹಯಾಮಿ, ಭುವಃ ಗಂಗಾಂ ಆವಾಹಯಾಮಿ, ಸ್ವ: ಗಂಗಾಂ ಆವಾಹಯಾಮಿ, ಭೂರ್ಭುವಸ್ವ: ಗಂಗಾಂ ಆವಾಹಯಾಮಿ.

ಆ ನಂತರ ಮೇಲೆ ಹೇಳಿದಂತೆ ಅಸನದಿಂದ ವಸ್ತ್ರವನ್ನು ಅರ್ಪಿಸಿ ಹರಿದ್ರಾ, ಕುಂಕುಮ, ಗಂಧ , ಪುಷ್ಪ ಅರ್ಪಿಸಿ

6)
ಈ ಕೆಳಗಿನ ನಾಮಗಳಿಂದ ಅಕ್ಷತೆ ಹಾಕಿ


ನಂದಿನ್ಯೈ ನಮಃ, ನಲಿನ್ಯೆ ನಮಃ, ಸೀತಾಯೈ ನಮಃ , ಮಾಲತ್ಯೈ ನಮಃ , ಮಲಾಪಹಾಯೈ ನಮಃ, ವಿಷ್ಣುಪಾದಾಬ್ಜ ಸಂಭೂತಾಯೈ ನಮಃ, ಗಂಗಾಯೈ ನಮಃ, ತ್ರಿಪಥಗಾಮಿನ್ಯೈ ನಮಃ , ಭಾಗೀರಥ್ಯೈ ನಮಃ, ಭೋಗವತ್ಯೈ ನಮಃ, ಜಾಹ್ನವ್ಯೈ ನಮಃ, ತ್ರಿದಶೇಶ್ವರ್ಯೈ ನಮಃ, ಗಂಗಾಭಾಗೀರಥ್ಯೆ ನಮಃ

7)
ಧೂಪವನ್ನು ತೋರಿಸಿ


ವನಸ್ಪತ್ಯುದ್ಭವೋ ದಿವ್ಯೋ ಗಂಧಾಢ್ಯೋ ಗಂಧ ಉತ್ತಮಃ |
ಆಘ್ರೇಯಃ ಸರ್ವದೇವಾನಾ೦ ಧೂಪೋ$ಯಂ ಪ್ರತಿಗೃಹ್ಯತಾಮ್ ||

8)
ಸಾಜ್ಯ೦ ತ್ರಿವರ್ತಿಸಂಯುಕ್ತ೦ ವಹ್ನಿನಾ ದ್ಯೋತಿತಂ ಮಯಾ|
ದೀಪಂ ಗೃಹಾಣ ದೇವೇಶ ತ್ರೈಲೋಕ್ಯತಿಮಿರಾಪಹ||
ಎನ್ನುತ್ತಾ ಮೂರು ಬತ್ತಿಯ ಆರತಿ ತೋರಿಸಿ ನಂದಿಸಿ



9)
ಹಣ್ಣು ಕಾಯಿ ಮತ್ತು ಅನುಕೂಲ ಇದ್ದಲ್ಲಿ ಇತರ ನೈವೇದ್ಯಗಳನ್ನು ಮೊದಲು ತ್ರಿವಿಕ್ರಮ ದೇವರಿಗೆ ಅರ್ಪಿಸಿ ಅನಂತರ ರಮಾದೇವಿ , ಮುಖ್ಯಪ್ರಾಣ ದೇವರಿಗೆ ಅರ್ಪಿಸಿ. ಇದರೊಳಗಿಂದ ಸ್ವಲ್ಪ ಬೇರೊಂದು ತಟ್ಟೆಯಲ್ಲಿ ಬಡಿಸಿ ಭಾಗೀರಥಿ ದೇವಿಗೆ ಅದನ್ನು ನಿವೇದಿಸಿ.



10)
ತದನಂತರ ಕರ್ಪೂರ ಹಾಕಿ ಮಹಾಮಂಗಳಾರತಿ ಮೊದಲು ತ್ರಿವಿಕ್ರಮ ದೇವರು ನಂತರ ರಮಾದೇವಿ ಪ್ರಾಣದೇವರಿಗೆ ತೋರಿಸಿ ಭಾಗೀರಥಿಗೆ ತೋರಿಸಿ



11)
ನಾರಾಯಣಾಯ ವಿದ್ಮಹೇ ವಾಸುದೇವಾಯ ದೀಮಹಿ ತನ್ನೋ ವಿಷ್ಣು: ಪ್ರಚೋದಯಾತ್
ಎನ್ನುತ್ತಾ ತ್ರಿವಿಕ್ರಮ ದೇವರಿಗೆ ಮಂತ್ರಪುಷ್ಪಾ೦ಜಲಿ ಅರ್ಪಿಸಿ



12)
ಭಾಗೀರಥೀ ದೇವಿಯನ್ನು ಪ್ರಾರ್ಥಿಸಿ


ಹೇ ಗಂಗೇ! ತವ ಕೋಮಲಾಂಘ್ರಿ ನಲಿನಂ ರಂಭೋರು ನೀವಿಲಸತ್
ಕಾಂಚೀದಾಮ ತನೂದರಂ ಘನಕುಚ ವ್ಯಾಕೀರ್ಣಹಾರಂ ವಪು: |
ಸನ್ಮುದ್ರಾ೦ಗದ ಕಂಕಣಾವೃತಕರ೦ ಸ್ಮೇರಂ ಸ್ಫುರತ್ಕುಂಡಲಂ
ಸಾರಂಗಾಕ್ಷಿ ಜಲಾನ್ಯದಿಂದುರುಚಯೇ ಜಾನಂತಿ ತೇ$ನ್ಯೇ ಜಲಾತ್ |
ಪ್ರಾರ್ಥನಾಂ ಸಮರ್ಪಯಾಮಿ ಎನ್ನುತ್ತ ಅಕ್ಷತೆ ಹಾಕಿ ನಮಸ್ಕರಿಸಿ.

13)
ತದನಂತರ ಯಸ್ಯ ಸ್ಮೃತ್ಯಾ ಶ್ಲೋಕ ಹೇಳಿ


ಅನೇನ ಅಸ್ಮದ್ ಗುರ್ವಂತರ್ಗತ ಭಾರತೀರಮಣ ಮುಖ್ಯಪ್ರಾಣಾ೦ತರ್ಗತ ಗಂಗಾಜನಕ ಶ್ರೀರಮಾತ್ರಿವಿಕ್ರಮ ರೂಪಿ ಶ್ರೀಲಕ್ಷ್ಮೀನಾರಾಯಣ: ಪ್ರೀಯತಾಂ ಪ್ರೀತೋ ಭಾವತು ತತ್ ಸರ್ವಂ ಶ್ರೀಕೃಷ್ಣಾರ್ಪಣಾಮಸ್ತು ಎಂದು ಅರ್ಪಿಸಿ.



14)
ಈಗ ಆ ಕಲಶದ ನೀರನ್ನು ಗಂಟೆ, ಜಾಗಟೆ, ಶಂಖಾದಿ ವಾದ್ಯ ಪುರಸ್ಸರ ತುಂಬಿಟ್ಟ ಹಂಡೆಯಲ್ಲಿ ಹಾಕಿ



15)
ಸೂರ್ಯಾಸ್ತದ ನಂತರ ಇಂದಿನಿಂದ ಆಕಾಶದೀಪವನ್ನು ಹಚ್ಚಬೇಕು.


ಒಬ್ಬ ಮನುಷ್ಯನ ಎತ್ತರದಷ್ಟು ಒಂದು ಕೋಲನ್ನು ಅಂಗಳದಲ್ಲಿ ನೆಟ್ಟು (ಬಿದಿರಿನ ಕೋಲು ಉಪಯೋಗಿಸಬಾರದು) ಆ ಕೋಲಿನ ತುದಿಯಲ್ಲಿ ಅಷ್ಟದಲ ಕಮಲಾಕಾರದಲ್ಲಿ ಎಂಟು ದಿಕ್ಕುಗಳಲ್ಲಿ ಎಂಟು ದೀಪಗಳನ್ನೂ ಮಧ್ಯೆ ಒಂದು ದೊಡ್ಡ ದೀಪವನ್ನೂ ಹಚ್ಚಬೇಕು. ಎಳ್ಳೆಣ್ಣೆ ಬಿಟ್ಟು ಬೇರೆ ಎಣ್ಣೆ ಉಪಯೋಗಿಸಬಾರದು.
ಇದನ್ನು ಒಂದು ತಿಂಗಳು ಹಚ್ಚಬೇಕು.



16)
ಹಾಗೆಯೇ ಮನೆಯ ಹೊರಗೆ ಎತ್ತರದಲ್ಲಿ ಯಮದೇವರಿಗೆ ಕೂಡಾ ಇಂದು ಒಂದು ದೀಪ ಹಚ್ಚಬೇಕು.


---------- Happy Deepavali -----------

Tuesday, October 26, 2021

Health benefits on Honey & Cinnamon

 

Great information on Cinnamon and Honey --- Health benefits on Honey and Cinnamon

 


                                             
   Honey

                                                                         Cinnamon


It is found that a mix of honey and cinnamon cures most diseases. Honey is produced in most of the countries of the world. Scientists of today also note honey as very effective medicine for all kinds of diseases. Honey can be used without side effects which is also a plus. Today's science says that even though honey is sweet, when it is taken in the right dosage as a medicine, it does not harm even diabetic patients. Researched by western scientists:

HEART DISEASES: Make a paste of honey and cinnamon powder, put it on toast instead of jelly and jam and eat it regularly for breakfast. It reduces the cholesterol and could potentially save one from heart attack. Also, even if you have already had an attack studies show you could be kept miles away from the next attack. Regular use of cinnamon honey strengthens the heart beat. In America and Canada, various nursing homes have treated patients successfully and have found that as one ages the arteries and veins lose their flexibility and get clogged; honey and cinnamon revitalize the arteries and the veins.

ARTHRITIS: Arthritis patients can benefit by taking one cup of hot water with two tablespoons of honey and one small teaspoon of cinnamon powder. When taken daily even chronic arthritis can be cured. In a recent research conducted at the Copenhagen University, it was found that when the doctors treated their patients with a mixture of one tablespoon Honey and half teaspoon Cinnamon powder before breakfast, they found that within a week (out of the 200 people so treated) practically 73 patients were totally relieved of pain -- and within a month, most all the patients who could not walk or move around because of arthritis now started walking without pain.

BLADDER INFECTIONS: Take two tablespoons of cinnamon powder and one teaspoon of honey in a glass of lukewarm water and drink it. It destroys the germs in the bladder....who knew?

CHOLESTEROL: Two tablespoons of honey and three teaspoons of Cinnamon Powder mixed in 16 ounces of tea water given to a cholesterol patient was found to reduce the level of cholesterol in the blood by 10 percent within two hours. As mentioned for arthritic patients, when taken three times a day, any chronic cholesterol-could be cured. According to information received in the said Journal, pure honey taken with food daily relieves complaints of cholesterol.

COLDS: Those suffering from common or severe colds should take one tablespoon lukewarm honey with 1/4 spoon cinnamon powder daily for three days. This process will cure most chronic cough, cold, and, clear the sinuses, and it's delicious too!


                                                             another picture


                                                                       Honey Picture

 

UPSET STOMACH: Honey taken with cinnamon powder cures stomach ache and also is said to clear stomach ulcers from its root.

GAS: According to the studies done in India and Japan, it is revealed that when Honey is taken with cinnamon powder the stomach is relieved of gas.

IMMUNE SYSTEM: Daily use of honey and cinnamon powder strengthens the immune system and protects the body from bacterial and viral attacks. Scientists have found that honey has various vitamins and iron in large amounts. Constant use of Honey strengthens the white blood corpuscles (where DNA is contained) to fight bacterial and viral diseases.

INDIGESTION: Cinnamon powder sprinkled on two tablespoons of honey taken before food is eaten relieves acidity and digests the heaviest of meals

INFLUENZA: A scientist in Spain has proved that honey contains a natural 'Ingredient' which kills the influenza germs and saves the patient from flu.

LONGEVITY: Tea made with honey and cinnamon powder, when taken regularly, arrests the ravages of old age. Use four teaspoons of honey, one teaspoon of cinnamon powder, and three cups of boiling water to make a tea. Drink 1/4 cup, three to four times a day. It keeps the skin fresh and soft and arrests old age. Life spans increase and even a 100 year old will start performing the chores of a 20-year-old.

RASPY OR SORE THROAT: When throat has a tickle or is raspy, take one tablespoon of honey and sip until gone. Repeat every three hours until throat is without symptoms.

PIMPLES: Three tablespoons of honey and one teaspoon of cinnamon powder paste. Apply this paste on the pimples before sleeping and wash it off the next morning with warm water. When done daily for two weeks, it removes all pimples from the root.

SKIN INFECTIONS:Applying honey and cinnamon powder in equal parts on the affected parts cures eczema, ringworm and all types of skin Infections.

WEIGHT LOSS:Daily in the morning one half hour before breakfast and on an empty stomach, and at night before sleeping, drink honey and cinnamon powder boiled in one cup of water. When taken regularly, it reduces the weight of even the most obese person. Also, drinking this mixture regularly does not allow the fat to accumulate in the body even though the person may eat a high calorie diet. Use 1 part cinnamon and 2 parts honey.

CANCER: Recent research in Japan and Australia has revealed that advanced cancer of the stomach and bones have been cured successfully. Patients suffering from these kinds of cancer should daily take one tablespoon of honey with one teaspoon of cinnamon powder three times a day for one month.

FATIGUE: Recent studies have shown that the sugar content of honey is more helpful rather than being detrimental to the strength of the body. Senior citizens who take honey and cinnamon powder in equal parts are more alert and flexible. Dr. Milton, who has done research, says that a half tablespoon of honey taken in a glass of water and sprinkled with cinnamon powder, even when the vitality of the body starts to decrease, when taken daily after brushing and in the afternoon at about 3:00 P.M., the vitality of the body increases within a week.

BAD BREATH: People of South America, gargle with one teaspoon of honey and cinnamon powder mixed in hot water first thing in the morning so their breath stays fresh throughout the day.

HEARING LOSS: Daily morning and night honey and cinnamon powder, taken in equal parts restores hearing.

 


 Keep Safe and be Healthy to All. 

 

------ Hari Om ------

 

 

 

 

Tuesday, September 21, 2021

Mahalaya Pitrupaksha - 2021

 

Mahalaya Pitru Paksha


Starts from 21st September 2021 to 6th October 2021


The 15-day period of Pitru Paksha or Shrarddha Paksha is considered to be an auspicious time when our ancestors come to stay with us. It is believed that angry ancestors can cause severe harm to your life, so it is very important to take care of dos and don’ts.

Importance:
1. Rites performed for each of the 15 days of the fortnight are considered important and equal to that being performed in holy places like Gaya Kshetra
2. Thila (Sesame seeds) Tharpana and Pinda Pradhana (rice ball) offerings are made to departed ancestors during the fortnight
3. Those ancestors who had lost their lives in an unnatural manner or by accident or suicide would also be able to get the offerings, which would not be possible at other times
4. Those whose death dates are not known, and annual rites cannot be performed too, will benefit by these offerings
5. Offerings made would give peace to the ancestors and they would bestow their blessings for health, longevity, knowledge, and wealth on those who perform, according to the sacred scriptures (Shastras)
6. Rites when not performed by the descendants for their ancestors would make them aimlessly wander in the earth plane, infuriating them

Do’s and Don’ts


1. It is recommended to do Thila Tharpana every day of the Mahalaya Paksha except Ekadashi day
2. Perform Mahalya Chataka Shrarddha for Sarva Piturs at least one day within paksha period
3. Donate proper Satvik food and other useful items to Brahmanas, it helps in reducing the guilt of your known or unknown mistakes
4. Satvik Bhojana is advised to be taken during this paksha. Surely avoid onion, ginger, and garlic during this time
5. Organise daily prayer(s) to keep a peaceful and positive environment at home. It makes your ancestors feel happy and relaxed
6. It is believed that the ancestors can come in any form to check on you, so, never send anyone back with empty hands. Treat even the beggars and poor people nicely
7. According to the Sanathana Dharma, no new works begin in this period. Even, the purchase of new clothes, Jewellery, gadgets and etc., are prohibited
8. During Pitru Paksha, marriages, inaugurations and any kind of celebration are avoided. Either postpone such occasions or plan accordingly
9. Overseas travel and long journeys are to be avoided. Pilgrimages can be undertaken.

 


Pitru Devathegalu & Mahalaya Pitru Paksha


ಪಿತೃದೇವತೆಗಳು


ಒಮ್ಮೆ ದೇವತೆಗಳು ತಮ್ಮನ್ನು ಸೃಷ್ಟಿಸಿದ ಬ್ರಹ್ಮನನ್ನೇ ಮರೆತು ತಮ್ಮ ತಮ್ಮ ವೈಭವ ಸುಖಗಳಲ್ಲಿ ತಲ್ಲೀನರಾದರು. ಇದರಿಂದ ಕುಪಿತನಾದ ಬ್ರಹ್ಮನು - ನಿಮ್ಮನ್ನು ಅಜ್ಞಾನವು ಆವರಿಸಲಿ ಎಂದು ಶಪಿಸಿದನು.
ಚಿಂತಿತರಾದ ದೇವತೆಗಳು ತಮ್ಮ ತಪ್ಪನ್ನರಿತು ಬ್ರಹ್ಮನನ್ನು ಪ್ರಾರ್ಥಿಸಿದಾಗ ನೀವು ಪಿತೃದೇವತೆಗಳನ್ನು ಪೂಜಿಸಿ ಶಾಪವಿಮುಕ್ತರಾಗಿರಿ ಎಂಬುದಾಗಿ ಅನುಗ್ರಹಿಸಿದನು.

ಅಂದಿನಿಂದ ದೇವತೆಗಳು ಸಹ ಪಿತೃದೇವತೆಗಳನ್ನು ಪೂಜಿಸುತ್ತಿದ್ದಾರೆ. ಮತ್ತು ಪಿತೃಗಳು ದೇವತೆಗಳಿಗಿಂತ ಉನ್ನತಸ್ಥಾನದಲ್ಲಿದ್ದಾರೆ.(ಗುರು ಸ್ಥಾನದಲ್ಲಿ)ದೇವಪುತ್ರರೇ ಆದರೂ ಪಿತೃಗಳು ದೇವತೆಗಳನ್ನು ಮಕ್ಕಳೇ ಎಂದು ಸಂಭೋದಿಸಿದರು.

ಪಿತೃದೇವತೆಗಳಲ್ಲಿ ಏಳು ಮುಖ್ಯ ಗುಂಪುಗಳಿವೆ. ಇವರಲ್ಲಿ ಸುಕಾಲರು, ಅಂಗಿರಸರು, ಸುಸ್ವಧರು ಮತ್ತು ಸೋಮಪರು ಎಂಬ ನಾಲ್ವರು ಮೂರ್ತರು ಅಂದರೆ ಇವರಿಗೆ ಕರ್ಮಜನ್ಯವಾದ ದಿವ್ಯ ಶರೀರವಿರುತ್ತದೆ. ವೈರಾಜರು, ಅಗ್ನಿಷ್ಟಾತ್ತರು ಮತ್ತು ಬಹಿ೯ಷದರು ಅಮೂರ್ತರು ಅಂದರೆ ಇವರು ಯಾವ ರೂಪವನ್ನಾದರೂ ಧರಿಸಬಲ್ಲ ಕಾಮರೂಪಿಗಳು. ಈ ಅಮೂರ್ತ ಪಿತೃಗಳೇ ಶ್ರೇಷ್ಠರು. ಪವಿತ್ರವಾದ ಅಗ್ನಿಯ ಮೂಲಕ ತರ್ಪಣ ಮುಂತಾದವುಗಳನ್ನು ಸ್ವೀಕರಿಸುವವರು ಸಾಗ್ನಿಗಳು. ಪವಿತ್ರ ಅಗ್ನಿಯಿಲ್ಲದೆ ಬರೇ ತರ್ಪಣ ಮುಂತಾದವುಗಳನ್ನು ಸ್ವೀಕರಿಸುವವರು ನಿರಗ್ನಿಗಳು.

ಈ ಸಪ್ತ ಪಿತೃಗಳಿಗೆ ಅಧೀನರಾಗಿ ಇಪ್ಪತ್ತೊಂದು ಪಿತೃಗಣಗಳಿವೆ. ಕವ್ಯವನು ಮಾನವ ಪಿತೃಗಳಿಗೆ ಈ ಇಪ್ಪತ್ತೊಂದು ಪಿತೃಗಣಗಳು ತಲುಪಿಸುತ್ತಾರೆ. ಈ ಮಾನವ ಪಿತೃಗಳು ಪುಣ್ಯಲೋಕದಲ್ಲಿರಬಹುದು ಅಥವಾ ಕರ್ಮಭ್ರಷ್ಟರಾಗಿ ನಾಯಿ, ನರಿ, ಮನುಷ್ಯ, ರಾಕ್ಷಸ ಮುಂತಾದ ಯೋನಿಗಳಲ್ಲಿ ಜನಿಸಿರಬಹುದು ಅಥವಾ ಪ್ರೇತರೂಪದಲ್ಲಿರಬಹುದು.

ಪಿತೃಗಳ ಪವಿತ್ರ ಸ್ಥಳಗಳು ಅಮಾವಾಸ್ಯೆ, ಕುತಪಕಾಲ(ಹಗಲಿನ 8ನೆಯ ಕಾಲ), ಆಕಾಶ, ದಕ್ಷಿಣದಿಕ್ಕು, ಬೆಳ್ಳಿ, ಅಪಸವ್ಯ, ನೀರು, ಎಳ್ಳು, ದಬೆ೯, ಹಸುವಿನ ಹಾಲು, ಸಿಹಿ ಪದಾರ್ಥಗಳು, ಬಿಸಿ ಬಿಸಿ ಆಹಾರ, ತಾಮ್ರ, ಜೇನುತುಪ್ಪ, ಗೋಧಿ, ಗಯಾಶ್ರಾದ್ಧ ಮುಂತಾದವುಗಳು.


ಪಿತೃಗಳು ಬಿಸಿಬಿಸಿ ಆಹಾರವನ್ನು ಇಷ್ಪಡುವುದರಿಂದ ಅವರನ್ನು ಉಷ್ಣಪರು ಎಂದು ಕರೆಯುತ್ತಾರೆ.

ಪಿತೃಕಾರ್ಯವನ್ನು ಅಪರಾಹ್ಣದಲ್ಲೇ ಮಾಡಬೇಕು ಬೇರೆ ಸಮಯದಲ್ಲಿ ಮಾಡಿದರೆ ಆ ಶ್ರಾದ್ಧ ಫಲವನ್ನು ರಾಕ್ಷಸರು ಪಡೆಯುತ್ತಾರೆ.

ನಮ್ಮ ವಂಶದಲ್ಲಿ ಬಹಳ ಪುತ್ರರು ಜನಿಸಬೇಕು. ಏಕೆಂದರೆ ಅವರಲ್ಲಿ ಒಬ್ಬನಾದರೂ ಗಯಾದಲ್ಲಿ ಶ್ರಾದ್ಧ ಮಾಡಬಹುದು ಎಂದು ಪಿತೃಗಳು ಅನುಗಾಲವೂ ಚಿಂತಿಸುತ್ತಿರುತ್ತಾರೆ. ಆದ್ದರಿಂದ ಗಯಾದಲ್ಲಿರುವ ವಟ ವೃಕ್ಷದ ಕೆಳಗೆ ಶ್ರಾದ್ಧ ಮಾಡಿದರೆ ಶ್ರಾದ್ಧದ ಫಲವು ಅಕ್ಷಯವಾಗುತ್ತದೆ. ಅಲ್ಲದೆ ಕರ್ತೃವಿನ ಮುಂದಿನ ಪೀಳಿಗೆಯ ಯಾರೂ ಪ್ರೇತರಾಗುವುದಿಲ್ಲ. ಪಿತೃಗಳು ಎಂದರೆ ಪಾಲಿಸುವವರು ಎಂದರ್ಥ.

ಪಿತೃಗಣಗಳು ದಕ್ಷ ಪುತ್ರಿ ಸ್ವಧಾನನ್ನು ಮದುವೆಯಾದರು. ಪಿತೃದೇವತೆಗಳಿಗೆ ಕವ್ಯವನ್ನು ಅರ್ಪಿಸುವಾಗ ಸ್ವಧಾ ಎಂದು ಹೇಳಬೇಕು.

ಯಾವ ಮನೆಯಲ್ಲಿ ಸ್ವಾಹಾಕಾರಗಳು ಮತ್ತು ಸ್ವಧಾಕಾರಗಳು ಕೇಳಿಸುವುದಿಲ್ಲವೋ ಆ ಮನೆಯು ಸ್ಮಶಾನಕ್ಕೆ ಸಮಾನವೆಂದು ಹೇಳುತ್ತಾರೆ.

ಯಮನು ಪಿತೃಗಣಗಳ ಅಧಿಪತಿಯಾಗಿರುವುದರಿಂದ ಅವನನ್ನು ಶ್ರಾದ್ದ ದೇವ ಎಂದು ಕರೆಯುತ್ತಾರೆ.

ಕಾಲ

ಪಿತೃಗಳಿಗೆ ಶುಕ್ಲಪಕ್ಷವು ರಾತ್ರಿಯಾಗಿಯೂ, ಕೃಷ್ಣಪಕ್ಷವು ಹಗಲಾಗಿಯೂ ಇರುತ್ತದೆ. ಅಂದರೆ ಮಾನವನ ಒಂದು ಮಾಸವು ಪಿತೃಗಳಿಗೆ ಒಂದು ಅಹೋರಾತ್ರಿಯಾಗಿರುತ್ತದೆ. ಈ ಕಾಲಮಾನದಲ್ಲಿ ಪಿತೃಗಳ ಪೂರ್ಣಾಯಸ್ಸು 3000 ವರ್ಷಗಳು.

ಪಿತೃದೇವತೆಗಳು ಮಾನವರಿಗೆ ದೇವತೆಗಳಿಗಿಂತ ಹತ್ತಿರದಲ್ಲಿದ್ದು ಬಹುಬೇಗ ತೃಪ್ತರಾಗಿ ದೇವತೆಗಳಿಗಿಂತ ಮೊದಲು ವರವನ್ನು ಕೊಡುತ್ತಾರೆ.
ಅದಕ್ಕೆ ಹೇಳೋದು ಏನನ್ನು ಮರೆತರೂ ಮಾಡಿದರೂ ಶ್ರಾದ್ಧವನ್ನು ಮರೆಯಬಾರದು ಎಂದು.

ಶ್ರಾದ್ಧದ ದಿನ ಹಬ್ಬ ಹರಿ ದಿನಗಳನ್ನು ಪಕ್ಕಕ್ಕೆ ಇಟ್ಟು ಶ್ರಾದ್ಧವನ್ನು ಮಾಡಬೇಕು ಎಂದು ಶಾಸ್ತ್ರಗಳು ಹೇಳುತ್ತವೆ.

ಶ್ರಾದ್ಧಗಳು

ನಾಂದೀ ಶ್ರಾದ್ಧ / ವೃದ್ಧಿ ಶ್ರಾದ್ಧ / ಅಭ್ಯುದಯ ಶ್ರಾದ್ಧ - ಮದುವೆ, ಉಪನಯನ ಮುಂತಾದ ಸಂಸ್ಕಾರಗಳಲ್ಲಿ ಮಾಡುವುದು ಪಿತೃಗಳ ಆಶೀರ್ವಾದಕೋಸ್ಕರ.(ನಂದತಿ ದೇವತಾ ಇತಿ ನಾಂದೀ). ಈ ಶ್ರಾದ್ಧ ದಲ್ಲಿ ಎಳ್ಳಿನ ಬದಲು ಅಕ್ಕಿಯನ್ನು ಉಪಯೋಗಿಸುತ್ತಾರೆ ಮತ್ತು ಇದನ್ನು ಪ್ರಾತಃಕಾಲದಲ್ಲಿ ಮಾಡುತ್ತಾರೆ. ಈ ಶ್ರಾದ್ಧದಲ್ಲಿ ಮನುಷ್ಯ ಮಾತೃಕೆಯರನ್ನು(ಮಾತೃ, ಪಿತಾಮಹಿ ಮತ್ತು ಪ್ರಪಿತಾಮಹಿ) ಮತ್ತು ದೇವಮಾತೃಕೆಯರನ್ನು (ಬ್ರಾಹ್ಮೀ, ಮಾಹೇಶ್ವರಿ, ವೈಷ್ಣವಿ, ಕೌಮಾರಿ,ಇಂದ್ರಾಣಿ, ಮಾಹೆಂದ್ರಿ, ವಾರಾಹಿ ಮತ್ತು ಚಾಮುಂಡಾ) ಪೂಜಿಸಿ ನಂತರ ಪಿತೃಗಳನ್ನು ಪೂಜಿಸುತ್ತಾರೆ.

ಸಪಿಂಡೀಕರಣ ಶ್ರಾದ್ಧ

ಮೃತನು ಸತ್ತ 12ನೆ ದಿನ ಮತ್ತು ಒಂದು ವರ್ಷದ ಬಳಿಕ ಮಾಡುವ ಶ್ರಾದ್ಧ.
ಅಷ್ಟಕ ಶ್ರಾದ್ಧ, ಏಕೋದಿಷ್ಟ ಶ್ರಾದ್ಧ, ಪಾರ್ವಣ ಶ್ರಾದ್ಧ, ನಿತ್ಯ ಶ್ರಾದ್ಧ, ಕಾಮ್ಯ ಶ್ರಾದ್ದ, ಗೋಷ್ಠ ಶ್ರಾದ್ಧ, ಶುದ್ದಿ ಶ್ರಾದ್ಧ, ಕರ್ಮಾಂಗ ಶ್ರಾದ್ಧ, ದೈವಿಕ ಶ್ರಾದ್ಧ, ಮತ್ತು ಇತರೇ

ಪಿತೃಸ್ಥಾನದಲ್ಲಿರುವ ಬ್ರಾಹ್ಮಣನ ಕೈಯಲ್ಲಿ ಅನ್ನವನ್ನು ಹೋಮ ಮಾಡುವುದೇ ಪಾಣಿಹೋಮ. ಪಾಣಿ ಎಂದರೆ ಕೈ.(ಪಾಣಿ ಮುಖಾವೈ ಪಿತರಃ)

ದರ್ಭೆಯಿಂದ ಮಾಡಿದ ಪವಿತ್ರವನ್ನು ಧರಿಸದೆ ಮಾಡಿದ ವೈದಿಕ ಕರ್ಮಗಳೆಲ್ಲಾ ರಾಕ್ಷಸರ ಪಾಲಾಗುತ್ತದೆ.
ಸರ್ವೇಷಾಂ ಧಾನ್ಯ ರಾಶೀನಾಂ ತಿಲಾಃ ಪಾಪ ಪ್ರಣಾಶನಾಃ ಎಂಬಂತೆ ಧಾನ್ಯಗಳಲ್ಲಿ ತಿಲವೇ ಶ್ರೇಷ್ಠ ಮತ್ತು ಪಾಪನಾಶಕ.ಮದುವೆಮಾಡಿ ಎರಡು ತಿಂಗಳಾಯಿತು ತಂದೆಯ(ತಾಯಿಯ)ತಿಥಿ ಬಂದಿದೆ. ಮಾಡಬಹುದೇ? ಎಂದು ಪ್ರಶ್ನೆ ಮಾಡುವುದು ಪರಮ ಮೂಖ೯ತನ.

ತಿಲ ದಾನ ಪುಣ್ಯದಾಯಕ, ಅದರಲ್ಲೂ ಮಾಘಮಾಸದಲ್ಲಿ ಎಳ್ಳನ್ನು ದಾನ ಮಾಡಿದರೆ ಪರಮಪುಣ್ಯ...



Importance and inner Secrets of --- Mahalaya Amavasya




                                                                    Page 1 of 2


                                                                  Page 2 of 2



Mahalaya Paksha – Sarva Pitru’s from 14.09.19 to 28.09.19

" ಮಹಾಲಯ ಪಕ್ಷಾರಂಭ "

(
ದಿನಾಂಕ : 14.09.19 - 28.09.19 ವರೆಗೆ ಪಕ್ಷಮಾಸ )

"
ಶ್ರಾದ್ಧದ ಮಹತ್ವ - ಒಂದು ಚಿಂತನೆ "

"
ಶ್ರಾದ್ಧ " ಯೆಂದರೆ...

"
ಶ್ರದ್ಧಯಾ ಕ್ರೀಯತೇ ಕರ್ಮ ಇತಿ ಶ್ರಾದ್ಧಮ್ " - ಶ್ರದ್ಧೆಯಿಂದ ಆಚರಿಸುವ ಕಾರ್ಯವೇ " ಶ್ರಾದ್ಧ " ಎಂದು ಕರೆಸಿಕೊಳ್ಳುತ್ತದೆ. ಅತ್ಯಂತ ನಿಷ್ಠೆಯಿಂದ ಪಿಂಡ ಪ್ರದಾನ ಮಾಡಿ ಪಿತೃ ದೇವತೆಗಳ ಅಂತರ್ಯಾಮಿಯಾದ ಶ್ರೀ ಜನಾರ್ದನ ರೂಪಿ ಭಗವಂತನನ್ನು ತೃಪ್ತಿ ಪಡಿಸಬೇಕು. ಇದರಿಂದ ತನ್ನ ಪಿತೃಗಳಿಗೆ ಸದ್ಗತಿಯು ದೊರೆಯಲಿದೆಯೆಂದು ಪ್ರಾರ್ಥಿಸಬೇಕು.

ಕರ್ಮಭೂಮಿ ಯೆನಿಸಿದ ಈ ಭರತ ಖಂಡದ ಸನಾತನ ಧರ್ಮಗಳಲ್ಲಿ " ಶ್ರಾದ್ಧ " ಕರ್ಮವು ಮುಖ್ಯವಾಗಿದೆ. ಇದು ಅತ್ಯಂತ ಶ್ರೇಯಸ್ಕರವಾದ ಕರ್ಮವಾಗಿದೆ. ಇದನ್ನು " ಪಿತೃ ಯಜ್ಞ " ಎಂದು ಕರೆಯುತ್ತಾರೆ.

"
ಬ್ರಹ್ಮಾಂಡ ಪುರಾಣ " ದಲ್ಲಿ...

ಪಿತೃನ್ಯೂದ್ಧಿಶ್ಯ ವಿಪ್ರೇಭ್ಯೋ ದತ್ತಾಂ ಶ್ರಾದ್ಧಮುದಾಹೃತಮ್ ।।

ನಮ್ಮ ಜನ್ಮಕ್ಕೆ ಕಾರಣರಾಗಿ, ನಮ್ಮನ್ನು ಹೆತ್ತು - ಹೊತ್ತು - ಸಾಕಿ - ಸಲುಹಿ ನಮ್ಮ ಉದ್ಧಾರಕ್ಕೆ ಶ್ರಮಿಸಿ, ನಮ್ಮನ್ನಗಲಿ ಹೋದ ತಂದೆ - ತಾಯಿ - ಹಿರಿಯರು ಮುಂತಾದವರನ್ನು ಸ್ಮರಿಸಿ, ಅವರನ್ನು ಕುರಿತು ಶ್ರದ್ಧೆಯಿಂದ ಅನ್ನ - ಜಲಾದಿಗಳನ್ನು ಕೊಡುವ ಪಿತೃ ಕಾರ್ಯಕ್ಕೆ " ಶ್ರಾದ್ಧ " ಎಂದು ಹೆಸರು.

"
ಶ್ರಾದ್ಧ ಕಲ್ಪಲತಾ " ದಲ್ಲಿ....

ಪಿತೃನುದ್ಧಿಶ್ಯೇನ ಶ್ರದ್ಧಯಾ ತ್ಯಕ್ತಸ್ಯ ದ್ರವ್ಯಸ್ಯ ।
ಬ್ರಾಹ್ಮಣೈರ್ಯತ್ಸ್ವೀಕರಣಂ ತತ್ ಶ್ರಾದ್ಧಮ್ ।।

ಪಿತೃಗಳನ್ನುದ್ಧೇಶಿಸಿ ಶ್ರದ್ಧೆಯಿಂದ ಕೊಡಲ್ಪಟ್ಟ ದ್ರವ್ಯವನ್ನು ಬ್ರಾಹ್ಮಣರು ಸ್ವೀಕರಿಸುವುದಕ್ಕೆ " ಶ್ರಾದ್ಧ " ಎಂದು ಹೆಸರು.

ಒಟ್ಟಿನಲ್ಲಿ ಶ್ರದ್ಧೆಯಿಂದ ತನಗೆ ಪ್ರಿಯವಾದ ಭೋಜ್ಯವನ್ನು ತನ್ನ ಪಿತೃಗಳನ್ನುದ್ಧೇಶಿಸಿ ಕೊಡುವ " ಪಿಂಡ ಪ್ರದಾನ " ಕ್ರಿಯೆಗೆ " ಶ್ರಾದ್ಧ " ಎಂದು ಹೆಸರು.

ಇಲ್ಲಿ ಕೆಲವರು ಪ್ರಶ್ನೆ ಮಾಡುವುದುಂಟು...

ನಮ್ಮನ್ನಗಲಿ ಹೋದ ಪಿತೃಗಳಿಗೆ ನಾವು ಕೊಡುವ ಜಲಾಂಜಲಿ - ಪಿಂಡ ಪ್ರಧಾನದಿಂದ ತೃಪ್ತಿಯಾಗುವುದು ಹೇಗೆ? ಅವರಿಗೆ ನಾವು ಕೊಟ್ಟಿದ್ದು ತಲುಪುವುದು ಹೇಗೆ?

ಇದಕ್ಕೆ ಉತ್ತರ ಹೀಗಿದೆ...

ನಾವು ಕೊಟ್ಟ ಅನ್ನವನ್ನು ಅಂದರೆ...

ಅದರ ಸಾರ ಭಾಗವನ್ನು ವಸು - ರುದ್ರ - ಆದಿತ್ಯ ತದಂತರ್ಗತ ಭಾರತೀ ರಾಮಣ ಮುಖ್ಯಪ್ರಾಣಾಂತರ್ಗತ ಪ್ರದ್ಯುಮ್ನ - ಸಂಕರ್ಷಣ - ವಾಸುದೇವ ರೂಪಿ ಭಗವಂತನು ಸ್ವೀಕರಿಸಿ ಅದನ್ನು ನಮ್ಮ ಪಿತೃಗಳು ಯಾವ ಯೋನಿಯಲ್ಲಿ ಎಲ್ಲಿ ಇರುವರೋ ಅಲ್ಲಿ ಅವರಿಗೆ ಆಹಾರ ರೂಪವಾಗಿ ಸೂಕ್ತ ರೀತಿಯಲ್ಲಿ ಕೊಟ್ಟು ಸಂತೋಷ ಪಡಿಸುತ್ತಾನೆ.

ಶ್ರಾದ್ಧ ಕರ್ತೃವಿನ ತಂದೆಯು / ಪಿತೃಗಳು ದೇವತ್ವವನ್ನು ಹೊಂದಿದ್ದರೆ ಆ ಅನ್ನವು ಅಮೃತವಾಗಿ, ಪಶುವಾಗಿದ್ದರೆ ಹುಲ್ಲಾಗಿ, ಸರ್ಪವಾಗಿದ್ದರೆ ವಾಯು ರೂಪವಾಗಿ, ಹದ್ದು ಮೊದಲಾದವಾಗಿದ್ದರೆ ಮಾಂಸವಾಗಿ, ಮನುಷ್ಯನಾಗಿದ್ದರೆ ಯೋಗ್ಯ ಅನ್ನವಾಗಿ ಅವರಿಗೆ ತಲುಪುತ್ತದೆ.

ಪಿತೃಗಳ ( ತಂದೆ - ತಾಯಿ - ಹಿರಿಯರು ) ತೃಪ್ತಿಗಾಗಿ ಶ್ರಾದ್ಧ ಕರ್ಮವನ್ನು ಮಾಡಲೇಬೇಕು ಎಂದು " ಕೂರ್ಮ ಪುರಾಣ " ದಲ್ಲಿ...

ಶ್ರಾದ್ಧಾತ್ಪರಾತ್ಪರಾನ್ನಾಸ್ತಿ ಶ್ರೇಯಸ್ಕರ ಮುದಾಹೃತಮ್ ।
ತಸ್ಮಾತ್ ಸರ್ವ ಪ್ರಯತ್ನೇನ ಶ್ರಾದ್ಧ೦ ಕುರ್ಯಾದ್ವಿಚಕ್ಷಣಃ ।।

ಮಾನವರಿಗೆ ತಮ್ಮ ಪಿತೃಗಳ ಶಾಸ್ತ್ರೋಕ್ತವಾದ ಶ್ರಾದ್ಧ ಕರ್ಮಕ್ಕಿಂತ ಶ್ರೇಯಸ್ಕರವಾದ ಕಾರ್ಯವು ಯಾವುದೂ ಇಲ್ಲ. ಆದುದರಿಂದ ವಿವೇಕಿಗಳೂ; ಜ್ಞಾನಿಗಳೂ ಸರ್ವ ಪ್ರಯತ್ನದಿಂದ ಶ್ರಾದ್ಧವನ್ನು ಮಾಡಬೇಕು.

"
ಯಮ ಸ್ಮೃತಿ "

ಯೇ ಯಜಂತಿ ಪಿತೃನ್ ದೆವಾನ್ ಬ್ರಾಹ್ಮಣಾ: ಸರ್ವ ಕಾಮದಾನ್ ।
ಸರ್ವ ಭೂತಾಂತರಾತ್ಮಾನ್ ವಿಷ್ಣುಮೇವ ಯಜಂತಿ ತೇ ।।

ಯಾವ ಬ್ರಾಹ್ಮಣನು ಎಲ್ಲಾ ಇಷ್ಟಾರ್ಥವನ್ನು ಕೊಡುವವರಾದ ಪಿತೃಗಳನ್ನೂ; ದೇವತೆಗಳನ್ನೂ ಪೂಜಿಸುವರೋ ಅವರು ಎಲ್ಲಾ ಚೇತನಾಚೇತನಾತ್ಮಕವಾದ ಪ್ರಪಂಚಕ್ಕೆ ನಿಯಾಮಕನಾದ ಶ್ರೀ ಮಹಾವಿಷ್ಣುವನ್ನೇ ಪೂಜಿಸುತ್ತಾರೆ!!

ಶ್ರಾದ್ಧ ಕರ್ಮವನ್ನು ಮಾಡದಿದ್ದರೆ ಏನಾಗುತ್ತದೆ? ಎಂದು ಕೇಳುವವರಿಗೆ..

"
ಹಾರಿತ ಸ್ಮೃತಿ " ಯು ಹೀಗೆ ಉತ್ತರಿಸುತ್ತದೆ...

ನ ಸಂತಿ ಪಿತರಶ್ಚೇತಿ ಕೃತ್ವಾ ಮನಸಿ ಯೋ ನರಃ ।
ಶ್ರಾದ್ಧ೦ ನ ಕುರುತೇ ತತ್ರ ತಸ್ಯ ರಕ್ತ೦ ಪಿಬಂತಿ ತೇ ।।

ಯಾವ ಮನುಷ್ಯರು ಪಿತೃಗಳೂ ಅಥವಾ ತಂದೆ - ತಾಯಿಗಳ ದೇಹವನ್ನು ಸುಟ್ಟು ಭಸ್ಮ ಮಾಡಿದ ಮೇಲೆ ಅವರಿಗೆ ಹೊಟ್ಟೆ ಇಲ್ಲ ಎಂಬ ಭಾವನೆಯಿಂದ ಪಿತೃಗಳ ಶ್ರಾದ್ಧಾದಿಗಳನ್ನು ಮಾಡುವುದಿಲ್ಲವೋ ಅಂಥವರ ಪಿತೃಗಳು ಸಿಟ್ಟಾಗಿ ನಾಸ್ತಿಕರ ರಕ್ತವನ್ನು ಕುಡಿಯುತ್ತಾರೆ.

ಇನ್ನು ಶ್ರಾದ್ಧವನ್ನು ಮಾಡುವವರು ನ್ಯಾಯದಿಂದ ಹಣದಿಂದಲೇ ಮಾಡಬೇಕೆಂದು " ಮಾರ್ಕಂಡೇಯ ಪುರಾಣ " ಈ ಕೆಳಗಿನಂತೆ ಖಚಿತ ಪಡಿಸಿದೆ.

ಅನ್ಯಾಯೋಪಾರ್ಜಿತೈರ್ವಿತ್ತೈ: ಯತ್ ಶ್ರಾದ್ಧ೦ ಕ್ರೀಯತೇ ನರೈ:
ತೃಪ್ಯಂತಿ ತೇನ ಚಾಂಡಾಲಾ: ಪುಲ್ಕಸಾದ್ಯಾಶ್ಚಯೋನಯಃ ।।

ಮಾನವರು ಅನ್ಯಾಯ - ಅಧರ್ಮದಿಂದ ಹಣವನ್ನು ಗಳಿಸಿ ಅದರಿಂದ ಶ್ರಾದ್ಧ ಮಾಡಿದರೆ ಆ ಶ್ರಾದ್ಧದಿಂದ ಚಾಂಡಾಲ - ಪುಲಸ್ಕ ( ಬ್ರಾಹ್ಮಣನಿಗೆ ಕ್ಷತ್ರೀಯ ಜಾತಿಯಲ್ಲಿ ಹುಟ್ಟಿದ ಮಿಶ್ರ ಜಾತಿಯವ ) ಮುಂತಾದ ಪಾಪಿಗಳಿಗೆ ತೃಪ್ತಿಯಾಗುವುದೇ ಹೊರತು ಪಿತೃಗಳಿಗೆ ತೃಪ್ತಿಯಾಗುವುದೇ ಇಲ್ಲ!!
***

ಈ ಪವಿತ್ರವಾದ ಪಿತೃ ಯಜ್ಞದಲ್ಲಿ ಶ್ರೀ ಜನಾರ್ದನ ರೂಪಿಯಾದ ಶ್ರೀ ಪರಮಾತ್ಮನನ್ನೇ " ಶ್ರಾದ್ಧಾ ಸ್ವಾಮಿ " ಎಂದು ಭಾವಿಸಿಬೇಕು.

ಶ್ರಾದ್ಧದಲ್ಲಿ ಬಳಸುವ ಎಳ್ಳು - ದರ್ಭೆ ಮೊದಲಾದ ಪದಾರ್ಥಗಳಲ್ಲಿ ಶ್ರೀ ಜನಾರ್ದನನು ಒಂದೊಂದು ರೂಪದಿಂದ ನೆಲೆಸುವನು.

ವಿಶ್ವೇ ದೇವತೆಗಳ ಅಂತರ್ಯಾಮಿಯಾಗಿ 3555 ರೂಪಗಳಿಂದ ಶ್ರಾದ್ಧ ಕರ್ಮಕ್ಕೆ ಯಾವ ವಿಘ್ನಗಳು ಬರದಂತೆ ಶ್ರೀ ಜನಾರ್ದನನು ಶ್ರಾದ್ಧ ಕರ್ಮವನ್ನು ರಕ್ಷಿಸುವನು.

ಶ್ರೀ ಜನಾರ್ದನನ ಹೆಸರೇ ಇದನ್ನು ಹೇಳುತ್ತದೆ...

= 3
ನಾ = 5
ರ್ದ = 5
= 5

ಶ್ರಾದ್ಧ ಕಾಲದಲ್ಲಿ ಪಠಿಸಬೇಕಾದವುಗಳು...

. ಶ್ರೀ ಪದ್ಮ ಪುರಾಣಾಂತರ್ಗತ ಔರ್ಧ್ವ ದೇಹಿಕ ಶ್ರೀ ರಾಮ ಸ್ತೋತ್ರ
. ಕಾಠಕೋಪನಿಷತ್
. ಶ್ರೀ ವಿಜಯವಿಠ್ಠಲ ವಿರಚಿತ " ಪೈತೃಕ ಸುಳಾದಿ "
. ಶ್ರೀ ಜಗನ್ನಾಥದಾಸ ಕೃತ " ಪಿತೃ ಗಣ ಸಂಧಿ "

ಹೀಗೆ ಶ್ರೀ ಜನಾರ್ದನನ ರೂಪಗಳು.

ನರಕೋದ್ಧಾರ ಇದರಿಂದ ಸತ್ಯ ಪಿತೃಗಳಿಗೆ ।
ನರಕಾತೀತ ನಮ್ಮ ವಿಜಯವಿಠ್ಠಲ ಸುಳಿವಾ ।।


---------------- Hari Om ---------------