Thursday, May 9, 2024

Magadi Ranganatha Swamy Temple -- Magadi

 

Sri Magadi Ranganatha Swamy Temple – Magadi


ಶ್ರೀ ಮಾಗಡಿ ರಂಗನಾಥ ಸ್ವಾಮಿ ದೇವಸ್ಥಾನ -- ಮಾಗಡಿ
 
Lord Ranganatha Swamy

Magadi town is about 60 kms from Bangalore city and the route to this place passes through Lush Green hilly area. You will come across Thippagondanahalli Reservoir en route to Magadi.


The drive to the place is enjoyable. The temple is situated near Magadi town & from here it is about 3  kms .



                                                  Route - 1


According to legend, sage Mandavya and Vasishta installed the idol in standingposition of Lord Vishnu which is also known as Lord Ranganatha.The Magadi Ranganatha temple was first consecrated in early 12th century bythe Chola’s Ruler and the temple has undergone renovations and expansion.

 

 

                                        on the way route scenery


The Ranganatha Swamy Temple located in Magadi is an ancient temple and a protected monument. This is one of the popular pilgrimage sites to visit around Bangalore. The ancient structure, known as Lakshmi Ranganatha kshetra However, it was renovated several times by successive rulers and local chieftains in the region.                                     

 

It is the birthplace of Kempegowda who is the founder of Bangalore. It has many temples, forts and places of interest ! Ranganathaswamy temple, a Shiva temple built by Kempegowda, 


Kempegowda's Magadi fort, Kalabhairaveshwara temple Lakshmi Venkateshwara temple in the nearby Savanadurga are very famous & Savanadurga also boasts of Lord  Narasimha Temple.

 

 

                                Route - 2

 

 

The beautiful Gopuras were built by Vijayanagar emperor Krishnadevaraya in the 16th century and later renovated by King Jayachamaraja Wodeyar of Mysore. There are structures inside the sanctum sanctorum which were also built by the Cholas and later renovated.


The Temple dedicated to Lord Ranganatha is 1500 Years old , actually in a standing position of Narayana about 3 ft tall in Vijayanagara style with Shankha, Chakra, Gada and Abhaya attributes in four hands. The main deity is  traditionally believed to be installed by Mandavya Rishi. Gopura of the temple  is in Dravidian style. 


There are beautiful pillars inside the temple. Usually the idol of Lord Ranganatha would be in reclining position. But here it is in standing posture. Originally it is said to be the idol of Lord Venkateshwara. 

 

                                                Temple Entrance
 

During the period of Tippu Sultan, many Hindu temples were destroyed. To save this temple, they called Venkateshwara as Ranganatha, as Tippu Sultan was faithful to his god Ranganatha Swamy at Srirangapattana. One more interesting idol inside is Beleyo Ranga (Growing Ranga) which is a small idol of Ranganatha in reclining position.

 

                                        Steps of the Temple


 

There are other shrines dedicated to Rama, Sita, Anjaneya and Venugopala Krishna. Behind the main shrine, there is a small temple dedicated to Putta Ranganatha. The temple of Goddess Lakshmi is also near this shrine. There is a  Garuda Sthamba (flag post) which mentions the offerings made by Emperor Krishnadevaraya in 1524 AD. The stepped well or kalyani (sacred pond) is on the right side of the temple and many rituals are conducted here.

 


                                                   The Main Gopura

 

The Ranganatha temple complex consists of several shrines which includes sanctums for the Hindu deities Rama, Sita, Anjaneya, Lakshmi, Venugopala Krishna and Ranganatha (a form of the Hindu god Vishnu).


Legend has it that the main deity (Ranganatha) was installed by Sage Mandavya lending the location the name "Mandavya Kshetra" (abode of Manavya). The pillars in the  temple have attractive sculptures in relief. On either side of the temple entrance  are two large colorful images of elephants.

 


                                               another View

The idol is about three feet tall – 3 feet one hand in a Mudra, which suggests that the deity fulfills all the wishes of people who pray to him here, according to local belief with Shankha, Chakra, Gada and Abhaya attributes in four hands.


There are other sub shrines dedicated to Rama, Sita, Anjaneya and VenugopalaKrishna. Behind the main shrine, there is a small temple dedicated to Putta Ranganatha.

 


                                                       Pic - 1

 

One must Visit this Place and get blessings from Lord Ranganatha Swamy andits a Nice & Blissful serene Beauty drive from Bangalore and there are many frequent Local & Government Buses plying to Magadi and from here it is just 3 kms one can Walk or take local Rickshaws & shared ones also available.

 

 

-------------- Hari Om -------------



 

 



 




 


Wednesday, April 10, 2024

Cow’s 32 Limbs ---- Each God Residing in each of them ---- ಗೋವಿನ ೩೨ ಅಂಗಗಳಲ್ಲಿ ವಾಸಿಸುವ ದೇವತೆಗಳು..

 


Cow’s 32 Limbs ---- Each God Residing in each of them


ಗೋವಿನ ೩೨ ಅಂಗಗಳಲ್ಲಿ ವಾಸಿಸುವ ದೇವತೆಗಳು..


1) ತಲೆಯ ಮಧ್ಯ ಭಾಗದಲ್ಲಿ ಈಶ್ವರನು ವಾಸವಾಗಿದ್ದಾನೆ..

2) ಹಣೆಯ ತುದಿಯಲ್ಲಿ ಪಾರ್ವತಿಯ ವಾಸ..

3) ಮೂಗಿನಲ್ಲಿ ಸುಬ್ರಹ್ಮಣ್ಯ ವಾಸ..

4) ಮೂಗಿನ ಹೊರಳೆಗಳಲ್ಲಿ ಕಂಬಲ ಮತ್ತು ಅಶ್ವತ್ಥರ ವಾಸ,

5) ಕೋಡಿನ(ಕೊಂಬು) ಮೂಲಭಾಗದಲ್ಲಿ ಬ್ರಹ್ಮ ಮತ್ತು ವಿಷ್ಣುವಿನ ವಾಸ..

6) ಕೋಡುಗಳ ತುದಿಯಲ್ಲಿ ಎಲ್ಲಾ ತೀರ್ಥಹಳ್ಳಿ ವಾಸ.

7) ಕಿವಿಗಳಲ್ಲಿ ಅಶ್ವಿನೀ ಕುಮಾರರ ವಾಸ..

8) ಕಣ್ಣುಗಳಲ್ಲಿ ಸೂರ್ಯ ಚಂದ್ರರ ವಾಸ..

 


 

9) ಹಲ್ಲುಗಳಲ್ಲಿ ಪ್ರಾಣಾಪಾನಾದಿ ಎಲ್ಲಾ ಬಾಯಿಗಳ ವಾಸ..

10) ನಾಲಗೆಯಲ್ಲಿ ವರುಣನ ವಾಸ..

11) ಗಂಡ ಸ್ಥಳದಲ್ಲಿ ಮಾಸ ಮತ್ತು ಪಕ್ಷ ದೇವತೆಗಳ ವಾಸ..

12) ತುಟಿಗಳಲ್ಲಿ ಸಂಧ್ಯಾದೇವತೆ ವಾಸ..

13) ಕುತ್ತಿಗೆಯಲ್ಲಿ ಇಂದ್ರನ ವಾಸ..

14) ಹೃದಯದಲ್ಲಿ ಸಾಧ್ಯ ದೇವಗಣಗಳ ವಾಸ..

15) ತೊಡೆಯಲ್ಲಿ ಧರ್ಮ ದೇವತೆಯ ವಾಸ..

16) ಕಾಲಿನ ಗೊರಸುಗಳ ಮಧ್ಯದಲ್ಲಿ ಗಂಧರ್ವ ದೇವತೆ ವಾಸ..

 



17) ಗೊರಸುಗಳ ತುದಿಯಲ್ಲಿ ಸರ್ಪ ದೇವತೆ ವಾಸ

18) ಗೊರಸುಗಳ ಪಕ್ಕದಲ್ಲಿ ಅಪ್ಸರೆಯರ ವಾಸ

19) ಬೆನ್ನಿನಲ್ಲಿ ರುದ್ರರ ವಾಸ..

20) ಎಲ್ಲ ಸಂಧಿಗಳಲ್ಲಿ ಅಷ್ಟವಸುಗಳ ವಾಸ.

21) ಬಾಲದಲ್ಲಿ ಸೋಮದೇವತೆಯ ವಾಸ.

22) ಹೊಟ್ಟೆಯಲ್ಲಿ ದ್ವಾದಶ ಆದಿತ್ಯರ ವಾಸ..

23) ರೋಮಗಳಲ್ಲಿ ಸೂರ್ಯನ ಕಿರಣಗಳ ವಾಸ..

24) ಗೋಮೂತ್ರದಲ್ಲಿ ಗಂಗೆಯ ವಾಸ..

 

 


 

25) ಗೋಮಯದಲ್ಲಿ ಯಮುನೆಯ ವಾಸ..

26) ಹಾಲಿನಲ್ಲಿ ಸರಸ್ವತಿಯ ವಾಸ..

27) ಮೊಸರಿನಲ್ಲಿ ನರ್ಮದೆಯ ವಾಸ..

28) ತುಪ್ಪದಲ್ಲಿ ಅಗ್ನಿಯ ವಾಸ..

29) ಗೋವುಗಳ ಕೂದಲುಗಳಲ್ಲಿ ೩೩ಕೋಟಿ ದೇವತೆಗಳ ವಾಸ..

30) ಸ್ತನಗಳಲ್ಲಿ ನಾಲ್ಕು ಸಾಗರಗಳ ವಾಸ..

31) ಉದರದಲ್ಲಿ ಪೃಥ್ವೀ ದೇವತೆಗಳ ವಾಸ..

32) ಸಗಣಿ ಇಡುವ ಜಾಗದಲ್ಲಿ ಮಹಾಲಕ್ಷ್ಮೀ ವಾಸ..



ಹೀಗೆ ಇಡೀ ಬ್ರಹ್ಮಾಂಡವನ್ನೇ ದೇಹದಲ್ಲಿ ಹೊಂದಿರುವ ಗೋವಿನ ರಕ್ಷಣೆ 

ನಮ್ಮ ಹೊಣೆ.

Thus it is our responsibility to protect the
cow that it has the whole universe in its body.
 
--------- Hari Om ---------

 

Sunday, March 3, 2024

Use Jaggery instead of Sugar or ಸಕ್ಕರೆ ಬದಲು ಬೆಲ್ಲ ಏಕೆ ಬಳಸಬೇಕು

 


 

ಸಕ್ಕರೆ ಬದಲು ಬೆಲ್ಲ ಏಕೆ ಬಳಸಬೇಕು-- Use Jaggery instead of Sugar

 

ಕಬ್ಬಿನ ರಸವನ್ನು ಬತ್ತಿಸಿ ಬೆಲ್ಲವನ್ನು ತಯಾರಿಸಲಾಗುತ್ತದೆ. ಬೆಲ್ಲವನ್ನು ತಯಾರಿಸುವಾಗ, ಕಬ್ಬಿನಲ್ಲಿ 

ಇರುವ ವಿವಿಧ ಪೋಷಕಾಂಶಗಳು, ಖನಿಜಗಳು, ಲವಣಗಳು ಮತ್ತು ಜೀವಸತ್ವಗಳು ಬೆಲ್ಲದಲ್ಲಿ 

ಉಳಿಯುತ್ತವೆ. ಬೆಲ್ಲವು ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಮ್ಯಾಂಗನೀಸ್ ಮುಂತಾದ 

ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ ಮತ್ತು ಇದು ವಿಟಮಿನ್-ಬಿ, ಕ್ಯಾಲ್ಸಿಯಂ, ಸತು, ರಂಜಕ ಮತ್ತು

ತಾಮ್ರದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಬೆಲ್ಲ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ 

ಇಲ್ಲಿ ಮಾಹಿತಿ ನೀಡಲಾಗಿದೆ.


Jaggery is made by drying Sugarcane juice. While making Jaggery, various Nutrients, 

Minerals, Salts and Vitamins present in Sugarcane remain in the Jaggery. Jaggery is rich in

Nutrients like Iron, Magnesium, Potassium, Manganese and contains important elements

like Vitamin-B, Calcium, Zinc, Phosphorus and Copper. 

 


 

Here is information about the benefits of eating Jaggery.



ಬೆಲ್ಲದ ಲಾಭಗಳು ಕೆಳಗಿನಂತಿವೆ -- Some of the Uses of Using Jaggery



ಹಿಮೋಗ್ಲೋಬಿನ್ ಹೆಚ್ಚಿಸುತ್ತದೆ... Increases Hemoglobin Levels


ಬೆಲ್ಲವನ್ನು ತಿನ್ನುವುದು ರಕ್ತಹೀನತೆ ನಿವಾರಣೆಗೆ ಪ್ರಯೋಜನಕಾರಿ. 100 ಗ್ರಾಂ ಬೆಲ್ಲದಲ್ಲಿ 11 ಮಿಗ್ರಾಂ

 ಕಬ್ಬಿಣಾಂಶವಿದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾಗುವುದು ರಕ್ತಹೀನತೆಗೆ ಕಾರಣವಾಗುತ್ತದೆ

ಅಂತಹ ಸಂದರ್ಭದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸಲು ಬೆಲ್ಲವು ತುಂಬಾ 

ಉಪಯುಕ್ತವಾಗಿದೆ.

 

Eating Jaggery is beneficial in treating anemia. 100 grams of Jaggery contains 11 mg of 

iron. Decrease in hemoglobin in the blood leads to anemia. Jaggery is very useful in 

increasing the amount of hemoglobin in such a case. It is also a Blood purifier.

 


 



ರಕ್ತದೊತ್ತಡವನ್ನು ಹತೋಟಿಯಲ್ಲಿಡುತ್ತದೆ… Controls Blood Pressure


ಬೆಲ್ಲ ತಿನ್ನುವುದರಿಂದ ರಕ್ತದೊತ್ತಡವನ್ನು ಸರಿಯಾಗಿ ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ

ಬೆಲ್ಲದಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಕಾರಣ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

 

Eating Jaggery helps in maintaining proper Blood Pressure. Jaggery keeps Blood pressure 

under control as it is rich in Potassium.

 


 

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ… Improves Digestion



ಬೆಲ್ಲವು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಬೆಲ್ಲವನ್ನು ನಿಯಮಿತವಾಗಿ

 ತಿನ್ನುವುದರಿಂದ ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.


Jaggery helps improve Digestion. Also eating Jaggery regularly cleans the Stomach and 

relieves from Constipation.


ಬೆಲ್ಲವು ತೂಕವನ್ನು ಇಳಿಸಿಕೊಳ್ಳಲು, ಹೊಟ್ಟೆಯ ಸಮಸ್ಯೆಯನ್ನು ಶಮನ 

ಮಾಡಿಕೊಳ್ಳಲು ಬಳಸಲಾಗುತ್ತದೆ. ಇದರಲ್ಲಿರುವ ಪೌಷ್ಟಿಕ ಸತ್ವಗಳು ರೋಗ ನಿರೋಧಕ 

ಶಕ್ತಿಯನ್ನು ಹೊಂದಿದೆ.


ಬೆಲ್ಲ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಅದ್ಭುತವಾದ ಮನೆಮದ್ದಾಗಿದೆ. ಸಾಮಾನ್ಯವಾಗಿ ಶೀತ, ಹೊಟ್ಟೆ ಅಸ್ವಸ್ಥತೆ, ಮುಟ್ಟಿನ ನೋವು, ಸೆಳೆತ, ಆತಂಕ , ತಲೆನೋವು, ಊದಿಕೊಂಡ ಪಾದಗಳು ಇನ್ನು ಅನೇಕ ಸಮಸ್ಯೆಗಳಿಗೆ ಬೆಲ್ಲವು ಅತ್ಯುತ್ತಮವಾದ ಮನೆಮದ್ದಾಗಿ ನಮ್ಮ ಹಿರಿಯರ ಕಾಲದಿಂದಲೂ ಬಳಸುತ್ತಾ ಬಂದ್ದಿದ್ದೇವೆ.

Jaggery has immunity power and is a wonderful home remedy. Generally, we have been 

using Jaggery as an excellent home remedy for Cold, Stomach Discomfort, Menstrual pain,

Muscle cramps, Anxiety, Headache, Swollen Feet and many other problems since the time of our Elders. 


 

ನಿಮ್ಮ ಶೀತವನ್ನು ಪರಿಣಾಮಕಾರಿಯಾಗಿ ಹೊಡೆದೋಡಿಸಲು ಶುಂಠಿಯ ರಸದೊಂದಿಗೆ ಬೆಲ್ಲವನ್ನು ಬೆರಸಿ ಸೇವಿಸಿ.

Mix Jaggery with ginger juice to fight your cold effectively.

ಹೆಚ್ಚು ಶಕ್ತಿ ಹೊಂದಲು ಬೆಲ್ಲವನ್ನು ತುಪ್ಪದೊಂದಿಗೆ ತೆಗೆದುಕೊಳ್ಳಬಹುದು.

Jaggery can be taken with Ghee to have more power.

ನಿಮ್ಮ ಆಯಾಸ ಮತ್ತು ಉಸಿರಾಟದ ತೊಂದರೆಗೆ ಬೆಲ್ಲವನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಸೇವಿಸಲಾಗುತ್ತದೆ.

 


 

 

ಎಳ್ಳಿನೊಂದಿಗೆ ಬೆಲ್ಲ ಸೇವನೆ ಮಾಡಿದಾಗ ಮಹಿಳೆಯರಲ್ಲಿ ಕಾಣಿಸುವ ಡಿಸ್ಮೆನೋರಿಯಾ ಸಮಸ್ಯೆಗೆ

ಚಿಕಿತ್ಸಕವಾಗಿ ಕಾರ್ಯ ನಿರ್ವಹಿಸುತ್ತದೆ.

Jaggery mixed with mustard oil is consumed for your tiredness and shortness of breath.

When Jaggery is consumed with Sesame seeds, it works therapeutically for dysmenorrhea

in women. 


 

ಮಹಿಳೆಯರಿಗೆ ಉಪಯುಕ್ತ… Useful for Females or Women


ಬೆಲ್ಲ ತಿನ್ನುವುದು ಎಲ್ಲಾ ವಯಸ್ಸಿನ ಮಹಿಳೆಯರಿಗೆ ಉಪಯುಕ್ತವಾಗಿದೆ. ಗೋಚರಿಸುತ್ತದೆ.

It appears Eating Jaggery is useful for women of all ages since it increases their 

Hemoglobin Level.

 

---------- Hari Om ----------



Friday, February 16, 2024

Ratha Saptami -- Importance

 

ಏಳು ಕುದುರೆ ಮೇಲೇರಿ ಬರುವ ಸೂರ್ಯ; ರಥ ಸಪ್ತಮಿಯ ಮಹತ್ವ


Importance of Ratha Saptami – 

 Seated on 7 Horses

 

                             

 

ಈ ದಿನ ಸೂರ್ಯದೇವನು ಏಳು ಕುದುರೆಗಳ ರಥದಲ್ಲಿ ಕಾಣಿಸಿಕೊಂಡನು. ಆದ್ದರಿಂದಲೇ ಈ ಸಪ್ತಮಿ ದಿನವನ್ನು ರಥಸಪ್ತಮಿ ಎಂದು ಕರೆಯುತ್ತಾರೆ.

 
ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ದಿನ ಈ ರಥ ಸಪ್ತಮಿ ಬರುತ್ತದೆ. ರಥ ಸಪ್ತಮಿ ಹಬ್ಬವನ್ನು ಸೂರ್ಯ ಜಯಂತಿ ಎಂದು ಸೂರ್ಯನ ಜನ್ಮದಿನವೆಂದು ಆಚರಿಸಲಾಗುತ್ತದೆ. ಇದೇ ಕಾರಣಕ್ಕೆ ಈ ದಿನವನ್ನು ಸೂರ್ಯ ಸಪ್ತಮಿ ಎಂದೂ ಕರೆಯುತ್ತಾರೆ. ಈ ದಿನ ಸೂರ್ಯದೇವನು ಏಳು ಕುದುರೆಗಳ ರಥದಲ್ಲಿ ಕಾಣಿಸಿಕೊಂಡನು. ಆದ್ದರಿಂದಲೇ ಈ ಸಪ್ತಮಿ ದಿನವನನು ರಥಸಪ್ತಮಿ ಎಂದು ಕರೆಯುತ್ತಾರೆ.


ಈ ದಿನದಂದು ಸೂರ್ಯನ ಆರಾಧನೆ ಮಾಡಿದರೆ ಒಳಿತಾಗಲಿದೆ ಎಂಬ ನಂಬಿಕೆ ಇದೆ



ಸಕಲ ಜೀವಿಗಳಿಗೂ ಬೇಕು ಸೂರ್ಯನ ಬೆಳಕು

ಸಕಲ ಜೀವಿಗಳ ಜೀವನಕ್ಕೆ ಸೂರ್ಯ ಅವಶ್ಯಕ. ಇದೇ ಕಾರಣಕ್ಕೆ ಸೂರ್ಯನ ಪೂಜೆಗೆ ವಿಶೇಷ ಮಾನ್ಯತೆ ಇದೆ. ಈ ದಿನ ಸೂರ್ಯನ ಆರಾಧನೆ ನಡೆಸಿದರೆ ಆರೋಗ್ಯ ಮತ್ತು ಖ್ಯಾತಿ ಸಿಗುತ್ತದೆ. ಶಿಕ್ಷಣ, ಉದ್ಯೋಗ ಮತ್ತು ವೃತ್ತಿಯಲ್ಲಿ ಅಡೆತಡೆ ನಿವಾರಣೆ ಆಗುತ್ತದೆ. ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ರೋಗಗಳು ಮತ್ತು ನೋವುಗಳು ಗುಣವಾಗುತ್ತವೆ ಎಂಬ ನಂಬಿಕೆ ಇದೆ.

 

                                                                        SUN God

 

ನವಚೈತನ್ಯ ತರುವ ರಥಸಪ್ತಮಿ

ಚಳಿಗಾಲದಲ್ಲಿ ಒಣಗಿದ ತರಗೆಲೆಯಂತೆ ಆದ ಶರೀರ ರಥ ಸಪ್ತಮಿಯ ಬಳಿಕ ಸೂರ್ಯನ ಶಾಖದಿಂದ ಹೊಸ ಚೈತನ್ಯ ಪಡೆಯುತ್ತದೆ. ಈ ಕಾರಣದಿಂದ ಈ ದಿನ ಸೂರ್ಯನಿಗೆ ಮೈಯೊಡ್ಡಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಸೂರ್ಯನ ಬೆಳಕು ಅನೇಕ ರೋಗಗಳನ್ನು ಗುಣಮುಖಮಾಡುವ ಶಕ್ತಿ ಹೊಂದಿದ್ದು, ಈ ದಿನ ಆರೋಗ್ಯಕ್ಕಾಗಿ ಸೂರ್ಯನ ಪೂಜೆ ನಡೆಸಲಾಗುವುದು.



ಈ ರೀತಿ ಮಾಡಿ ಪೂಜೆ

ರಥ ಸಪ್ತಮಿ ದಿನಕ್ಕೆ ಗ್ರಂಥಗಳಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಈ ದಿನ ಬೆಳಿಗ್ಗೆ ಸ್ನಾನ ಇತ್ಯಾದಿಗಳನ್ನು ಮುಗಿಸಿ ಗಂಗಾಜಲ, ಹೂವುಗಳನ್ನು ಸೂರ್ಯ ದೇವರಿಗೆ ಅರ್ಘ್ಯ ನೀಡುವ ಮೂಲಕ ಅರ್ಪಿಸಬೇಕು. ಸೂರ್ಯನನ್ನು ತುಪ್ಪದ ದೀಪ ಮತ್ತು ಕೆಂಪು ಹೂವುಗಳು, ಕರ್ಪೂರ ಮತ್ತು ಧೂಪದಿಂದ ಪೂಜಿಸಬೇಕು.

ಸೂರ್ಯನನ್ನು ಪೂಜಿಸಿ ಆದಿತ್ಯ ಹೃದಯ ಸ್ತೋತ್ರವನ್ನು ಪಠಿಸಿ ಅಥವಾ ಸೂರ್ಯ ಚಾಲೀಸಾವನ್ನು ಪಠಿಸಬೇಕು ನಂತರ ಹಸುವಿನ ತುಪ್ಪದ ದೀಪದಿಂದ ಸೂರ್ಯ ದೇವರ ಆರತಿ ಮಾಡಬೇಕು.



ರಥಸಪ್ತಮಿ ಪೌರಣಿಕ ಮಹತ್ವ

ಯಶೋ ವರ್ಮ ಎಂಬ ರಾಜನಿಗೆ ರೋಗಿಷ್ಠ ಮಗ ಜನಿಸುತ್ತಾನೆ, ಆತನನ್ನು ಗುಣಮುಖನನ್ನಾಗಿ ಮಾಡಲು ರಾಜ ಇನ್ನಿಲ್ಲದ ಪ್ರಯತ್ನ ಮಾಡುತ್ತಾನೆ. ಆಗ ಜ್ಯೋತಿಷಿಯೊಬ್ಬರು ರಥಸಪ್ತಮಿ ವ್ರತ ಆಚರಿಸಲು ಸಲಹೆ ನೀಡುತ್ತಾರೆ. ಅದರಂತೆ ರಾಜನ ಮಗ ಪ್ರತಿನಿತ್ಯ ಸೂರ್ಯನ ಆರಾಧನೆ ಮಾಡುತ್ತಾನೆ. ಇದರಿಂದ ಆತನ ರೋಗ ರುಜಿನಗಳು ಮಾಯಾವಾಗುತ್ತದೆ. ಇದೇ ಕಾರಣಕ್ಕೆ ಪುರಾಣದಲ್ಲಿ ಸೂರ್ಯನ ಆರಾಧನೆಗೆ ವಿಶೇಷ ಮಹತ್ವ ಇದೆ.

 


 

ದಾನಕ್ಕಿದೆ ವಿಶೇಷ ಮಹತ್ವ

ರಥ ಸಪ್ತಮಿಯನ್ನು ಸೂರ್ಯನನ್ನು ಆರಾಧಿಸುವುದರ ಹೊರತಾಗಿ ದಾನ ಮತ್ತು ದಾನದ ದೃಷ್ಟಿಯಿಂದ ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ.


ಈ ದಿನ ಸೂರ್ಯನಿಗೆ ಸಂಬಂಧಿಸಿದ ತಾಮ್ರ, ಬೆಲ್ಲ, ಕೆಂಪು ಬಟ್ಟೆ ಮುಂತಾದವುಗಳನ್ನು ದಾನ ಮಾಡಬೇಕು. ಈ ದಿನ ಸೂರ್ಯನನ್ನು ಪೂಜಿಸುವುದರ ಜೊತೆಗೆ ಉಪವಾಸವನ್ನು ಆಚರಿಸುವುದು ಎಲ್ಲಾ ರೋಗಗಳಿಂದ ಮುಕ್ತಿ ನೀಡುತ್ತದೆ ಎಂದು ನಂಬಲಾಗಿದೆ.


ಜಾತಕದಲ್ಲಿ ಸೂರ್ಯನ ಸ್ಥಾನ ಬಲವಾಗುತ್ತದೆ. ಇದಲ್ಲದೇ, ಮಕ್ಕಳಿಲ್ಲದ ದಂಪತಿಗಳು ಮಗುವನ್ನು ಪಡೆಯುತ್ತಾರೆ. ವೃತ್ತಿಯಲ್ಲಿ

 ಬರುತ್ತಿದ್ದ ಅಡೆತಡೆಗಳು ದೂರವಾಗಿ, ವ್ಯಕ್ತಿಯು ಪ್ರಗತಿಯನ್ನು ಪಡೆಯುತ್ತಾನೆ ಎನ್ನಲಾಗಿದೆ.

 


                                              Ratha Saptami Rangoli


------------- Hari Om ------------

  


 

Ratha Saptami

 

 

ರಥಸಪ್ತಮಿ / Ratha Saptami -- 16th February 2024

 

 
 
                                                                 Lord Surya Bhagavan

 

ರಥಸಪ್ತಮಿ ಯು ಜಗತ್ ಚಕ್ಷುವಾದ ಶ್ರೀ ಸೂರ್ಯದೇವ ನನ್ನು ಆರಾಧಿಸಲು ಮೀಸಲಾದ ದಿನ.


ಆರೋಗ್ಯಕಾರಕನಾದ ಸೂರ್ಯದೇವ, ಚರ್ಮ ರೋಗಾದಿಗಳನ್ನು ನಿವಾರಿಸಿ, ನಮ್ಮ ದೇಹವನ್ನು ಸದೃಢಗೊಳಿಸುವ ದಿವಾಕರ ನೂ ಹೌದು. ಇಂತಹ ಖಗ ಇಂದಿನಿಂದ ಗತಿ ಬದಲಿಸಲಿದ್ದಾನೆ. ಮಕರ ಸಂಕ್ರಮಣದ ನಂತರ, ಉತ್ತರಕ್ಕೆ ಚಲಿಸುವ ಭಾನು ವಿನ ವೇಗ ಈ ದಿನದಿಂದ ಕ್ಷಿಪ್ರವಾಗಲಿದೆ.



ರಥಸಪ್ತಮಿಯ ಪರ್ವಕಾಲದ ನಂತರ ಮಿತ್ರ ನು, ಶಿಶಿರ ಋತುವಿನ ಚಳಿಯನ್ನು ಮಾಯಮಾಡಿ ಸುಡು ಬಿಸಿಲು ಹೆಚ್ಚಿಸಲಿದ್ದಾನೆ. ಸಕಲ ಜೀವರಾಶಿಗಳಿಗೂ ಲೇಸನ್ನೇ ಬಯಸುವ ಅರ್ಕ ನು ನಮ್ಮ ಆರೋಗ್ಯ ಹೆಚ್ಚಿಸಲೆಂದು ಈ ಪರ್ವಕಾಲದಲ್ಲಿ ಪ್ರಾರ್ಥಿಸೋಣ.



ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |


ತಮೋಽರಿಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ ||


ಈ ದಿನದ ಸ್ನಾನ ಅತಿ ವಿಶೇಷವಾದುದಾಗಿದೆ.


ವಿಷ್ಣುಸ್ಮೃತಿಃ ಪ್ರಕಾರ,


ಸೂರ್ಯಗ್ರಹಣ ತುಲ್ಯಾ ತು ಶುಕ್ಲಾ ಮಾಘಸ್ಯ ಸಪ್ತಮೀ | ಅರುಣೋದಯವೇಲಾಯಾಂ ತಸ್ಯಾಂ ಸ್ನಾನಂ ಮಹಾಫಲಮ್ || ಎಂಬಂತೆ ರಥಸಪ್ತಮಿ ದಿನ ಮಾಡುವ ಸ್ನಾನ ಹೆಚ್ಚಿನ ಫಲ ನೀಡುತ್ತದೆ.



ಈ ದಿನ ಸೂರ್ಯನಿಗೆ ಪ್ರಿಯವಾದ ಏಳು ಎಕ್ಕದ ಎಲೆಗಳನ್ನು ತಲೆಯ ಮೇಲಿಟ್ಟುಕೊಂಡು ಸ್ನಾನ ಮಾಡಬೇಕು. ಪಾದಗಳ ಮೇಲೆ ಒಂದೊಂದು, ಮಂಡಿಗಳ ಮೇಲೆ ಒಂದೊಂದು, ಭುಜಗಳ ಮೇಲೆ ಒಂದೊಂದು ಹಾಗೂ ತಲೆಯ ಮೇಲೆ ಒಂದನ್ನು ಇಟ್ಟುಕೊಂಡು ಸ್ನಾನ ಮಾಡುವ ಪದ್ಧತಿಯೂ ಇದೆ. ನದಿ ಅಥವಾ ಸರೋವರದಲ್ಲಾದರೇ ಏಳು ಸಲ ಮುಳುಗಬೇಕು. ಮನೆಯಲ್ಲಾದರೆ ನೀರನ್ನು ದೇಹದ ಮೇಲೆ ಸುರಿದುಕೊಳ್ಳಬೇಕು

 

 

                                                                    Ratha Saptami 

 

 

ಧಾರ್ಮಿಕವಾಗಿ ಎಕ್ಕದೆಲೆಯ ಸ್ನಾನಕ್ಕೆ ಮನ್ನಣೆ ನೀಡಲಾಗಿದೆ. ಈ ದಿನ ಎಕ್ಕದೆಲೆಯ ಸ್ನಾನ 

ಸಪ್ತವಿಧದ ಪಾಪ ನಿವಾರಣೆ ಮಾಡುತ್ತದೆ ಎನ್ನುತ್ತದೆ ಧರ್ಮಶಾಸ್ತ್ರ

 

.ಈ ಜನ್ಮದಲ್ಲಿ ಮಾಡಿದ ಪಾಪ,

.ಹಿಂದಿನ ಆರು ಜನ್ಮದಲ್ಲಿ ಮಾಡಿದ ಪಾಪ, .ದೈಹಿಕವಾಗಿ ಮಾಡಿದ ಪಾಪ,

.ಮಾತಿನ ಮೂಲಕ ಮಾಡಿದ ಪಾಪ, .ಮನಸ್ಸಿನ ಮೂಲಕ ಮಾಡಿದ ಪಾಪ,

.ತಿಳಿದು ಮಾಡಿದ ಪಾಪ,

. ತಿಳಿಯದೇ ಮಾಡಿದ ಪಾಪ.


ಇವು ಸಪ್ತವಿಧ ಪಾಪಗಳು.

ಇದರ ಜತೆ ವೈಜ್ಞಾನಿಕವಾಗಿಯೂ ಅರ್ಕ ಪತ್ರೆ ಸ್ನಾನ ಅಷ್ಟೇ ಪ್ರಾಮುಖ್ಯತೆ ಪಡೆದಿದೆ. ಆಯುರ್ವೇದದ ಪ್ರಕಾರ ದೇಹದ ಕೀಲು, ಹಲ್ಲು ಹಾಗೂ ಹೊಟ್ಟೆ ನೋವು ನಿವಾರಣೆಗೆ ಎಕ್ಕದ ಎಲೆಗಳಲ್ಲಿರುವ ಔಷಧೀಯ ಗುಣಗಳು ಪ್ರಯೋಜನಕಾರಿ ಎನ್ನಲಾಗಿದೆ. ಹಾಗಾಗಿ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

 

ಈ ದಿನ ಅರುಣೋದಯ ಕಾಲದಲ್ಲಿ ಎಕ್ಕದ ಎಲೆ ಸಹಿತ ಸ್ನಾನ ಮಾಡುವಾಗ,
ಯದಾಜನ್ಮಕೃತಂ ಪಾಪಂ ಮಯಾ ಜನ್ಮಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ ||
ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜಾತೆ ಚ ಯೇ ಪುನಃ ||
ಇತಿ ಸಪ್ತವಿಧಂ ಪಾಪಂ ಸ್ನಾನಾಮ್ನೇ ಸಪ್ತ ಸಪ್ತಿಕೇ |
ಸಪ್ತವ್ಯಾದಿಸಮಾಯುಕ್ತಂ ಹರ ಮಾಕರಿ ಸಪ್ತಮೀ || ಎಂಬ ಶ್ಲೋಕ ಪಠಿಸಬೇಕು.


 

                                                                        Pic - 1

 

ಸ್ನಾನಾನಂತರ ಒಂದು ಮಣೆ ಮೇಲೆ ರಂಗೋಲಿ ಹಿಟ್ಟಿನಿಂದ ಒಂಟಿ ಚಕ್ರದ ರಥದಲ್ಲಿ ಸೂರ್ಯದೇವನು ಕುಳಿತಿರುವಂತೆ ಬರೆದು ಧ್ಯೇಯಃ ಸದಾ ಸವಿತೃಮಂಡಲಮಧ್ಯವರ್ತಿ ನಾರಾಯಣಃ ಸರಸಿಜಾಸನಸನ್ನಿವಿಷ್ಟ: |


ಕೇಯೂರವಾನ್ ಮಕರಕುಂಡಲವಾನ್ ಕಿರೀಟಹಾರೀ ಹಿರಣ್ಮಯವಪುಃ ಧೃತಶಂಖಚಕ್ರಃ || ಎಂದು ಧ್ಯಾನಿಸಬೇಕು.



ಜನನಿ ಸರ್ವ ಲೋಕಾನಾಂ ಸಪ್ತಮೀ ಸಪ್ತಸಪ್ತಿಕೆ l


ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯ ಮಂಡಲೇ ll


ಎಂದು ಪ್ರಾರ್ಥಿಸಬೇಕು.


ಓಂ ಮಿತ್ರಾಯ ನಮಃ | ಓಂ ರವಯೇ ನಮಃ |
ಓಂ ಸೂರ್ಯಾಯ ನಮಃ | ಓಂ ಖಗಾಯ ನಮಃ |
ಓಂ ಭಾನುವೇ ನಮಃ | ಓಂ ಪೂಷ್ಣೇ ನಮಃ |
ಓಂ ಹಿರಣ್ಯಗರ್ಭಾಯ ನಮಃ | ಓಂ ಮರೀಚಯೇ ನಮಃ | ಓಂ ಆದಿತ್ಯಾಯ ನಮಃ | ಓಂ ಸವಿತ್ರೇ ನಮಃ | ಓಂ ಅರ್ಕಾಯ ನಮಃ | ಓಂ ಭಾಸ್ಕರಾಯ ನಮಃ | ಓಂ ಸರ್ವರೋಗಹರಾಯ ನಮಃ | ಓಂ ಸರ್ವ ಸಂಪತ್ಪದಾಯ ನಮಃ |


ಓಂ ಸರ್ವಲೋಕಹಿತಾಯ ನಮಃ | ಎಂದು ಅರ್ಚಿಸಬೇಕು.

ಹಾಲು ಮಿಶ್ರಿತ ಗೋಧಿ ಪಾಯಸವನ್ನು ನಿವೇದಿಸಿ ಪೂಜಿಸಬೇಕು.

ಇದಾದ ಮೇಲೆ ಸೂರ್ಯಾಂತರ್ಗತ ಸವಿತೃನಾಮಕ ಲಕ್ಷ್ಮೀನಾರಾಯಣ ದೇವರಿಗೆ


ಸಪ್ತ ಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀಸಹಿತೋ ದೇವ ಗೃಹಾಣಾರ್ಘಂ ದಿವಾಕರ || ಎಂದು ಅರ್ಘ್ಯವನ್ನು ನೀಡಬೇಕು.

ಇದರ ಜೊತೆಗೆ, ಮಿತ್ರಾಯನಮಃ ಇದಮರ್ಘ್ಯಂ ಎಂದು ಹೇಳಿ, ಇದೇ ರೀತಿ,


ರವಯೇ ನಮಃ |
ಸೂರ್ಯಾಯ ನಮಃ |
ಭಾನವೇ ನಮಃ |
ಖಗಾಯ ನಮಃ |
ಪೂಷ್ಣೇ ನಮಃ |
ಹಿರಣ್ಯಗರ್ಭಾಯ ನಮಃ |
ಮರೀಚಯೇ ನಮಃ |
ಆದಿತ್ಯಾಯ ನಮಃ |
ಸವಿತ್ರೇ ನಮಃ |
ಅರ್ಕಾಯ ನಮಃ |
ಭಾಸ್ಕರಾಯ ನಮಃ


ಇದಮರ್ಘ್ಯಂ | ಎಂದು 12 ಬಾರಿ ಅರ್ಘ್ಯ ನೀಡಬಹುದು.

ನಂತರ ದಿವಾಕರಂ ದೀಪ್ತಸಹಸ್ರರಶ್ಮಿಂ ತೇಜೋಮಯಂ ಜಗತಃ ಕರ್ಮಸಾಕ್ಷಿಮ್ | ಎಂದು ನಮಿಸಿ, ಪೂಜೆಯ ನಂತರ ಆರೋಗ್ಯಾದಿ ಸಕಲ ಭಾಗ್ಯ ನೀಡುವಂತೆ ಕುಟುಂಬ ಸಮೇತ ಪ್ರಾರ್ಥಿಸಬೇಕು. ಕೆಂಪು ಹೂವು, ಕೆಂಪು ಬಣ್ಣದ ಗಂಧವನ್ನು ಸಮರ್ಪಿಸುವುದು ವಿಶೇಷವಾಗಿದೆ

 

                                                                  Ratha - Done from Rangoli

 

 

ಸೂರ್ಯ ದ್ವಾದಶ ನಾಮ ಸ್ತೋತ್ರವನ್ನು ಪಠಿಸಬಹುದು.

 

ಆದಿತ್ಯಃ ಪ್ರಥಮಂ ನಾಮ ದ್ವಿತೀಯಂ ತು ದಿವಾಕರಃ ।
ತೃತೀಯಂ ಭಾಸ್ಕರಃ ಪ್ರೋಕ್ತಂ ಚತುರ್ಥಂ ಚ ಪ್ರಭಾಕರಃ ॥
ಪಂಚಮಂ ಚ ಸಹಸ್ರಾಂಶು ಷಷ್ಠಂ ಚೈವ ತ್ರಿಲೋಚನಃ ।
ಸಪ್ತಮಂ ಹರಿದಶ್ವಂ ಚ ಅಷ್ಟಮಂ ತು ಅಹರ್ಪತಿಃ ॥
ನವಮಂ ದಿನಕರಃ ಪ್ರೋಕ್ತಂ ದಶಮಂ ದ್ವಾದಶಾತ್ಮಕಃ ।
ಏಕಾದಶಂ ತ್ರಿಮೂರ್ತಿಶ್ಚ ದ್ವಾದಶಂ ಸೂರ್ಯ ಏವ ತು ॥



ದ್ವಾದಶಾದಿತ್ಯನಾಮಾನಿ ಪ್ರಾತಃಕಾಲೇ ಪಠೇನ್ನರಃ ।
ದುಃಸ್ವಪ್ನೋ ನಶ್ಯತೇ ತಸ್ಯ ಸರ್ವದುಃಖಂ ಚ ನಶ್ಯತಿ ॥
ದದ್ರುಕುಷ್ಟಹರಂ ಚೈವ ದಾರಿದ್ರ್ಯಂ ಹರತೇ ಧ್ರುವಮ್ ।
ಸರ್ವತೀರ್ಥಕರಂ ಚೈವ ಸರ್ವಕಾಮಫಲಪ್ರದಮ್ ॥
ಯಃ ಪಠೇತ್ ಪ್ರಾತರುತ್ಥಾಯ ಭಕ್ತ್ಯಾ ಸ್ತೋತ್ರಮಿದಂ ನರಃ ।
ಸೌಖ್ಯಮಾಯುಸ್ತಥಾರೋಗ್ಯಂ ಲಭತೇ ಮೋಕ್ಷಮೇವ ಚ ॥



ಸಪ್ತಾಶ್ವ ರಥಮಾರೂಢಂ ಪ್ರಚಂಡಂ ಕಶ್ಯಪಾತ್ಮಜಂ |
ಶ್ವೇತಪದ್ಮಧರಂ ದೇವಂ‌ ತಂ ಸೂರ್ಯಂ ಪ್ರಣಮಾಮ್ಯಹಂ ||



ಶ್ರೀ ಸೂರ್ಯಾಂತರ್ಗತ ಭಾರತಿರಮಣ ಮುಖ್ಯಪ್ರಾಣಾಂತರ್ಗತ ಶ್ರೀ 

ಸೂರ್ಯನಾರಾಯಣ ಸ್ವಾಮಿ ಎಲ್ಲರನ್ನೂ ಸಲಹಿ ಕಾಪಾಡಲಿ.


------------ Hari Om ------------




 


                                                   

Wednesday, February 7, 2024

Rama Darshana

 

Sri Rama Darshana ---- ಶ್ರೀ ರಾಮನ ದರ್ಶನ

 


                                               Lord Sri Rama with Sita Devi


Sri Rama Darshana ---- ಶ್ರೀರಾಮನ ದರ್ಶನ

One Instance Incident :


ಒಮ್ಮೆ ಭಕ್ತನೊಬ್ಬ ಗೋಸ್ವಾಮಿ
ತುಳಸೀದಾಸರನ್ನು ಕೇಳುತ್ತಾನೆ...

"
ನೀವು
ಇಷ್ಟೆಲ್ಲ ರಾಮನಾಮ ಗುಣಗಾನ
ಮಾಡಿದ್ದೀರಲ್ವಾ, ನಿಮಗೆ ಒಮ್ಮೆಯಾದರೂ
ಶ್ರೀರಾಮನ ದರ್ಶನ ಆಗಿದೆಯೇ?"

ಅದಕ್ಕೆ ತುಳಸೀದಾಸರು,
"
ಖಂಡಿತವಾಗಿಯೂ ಆಗಿದೆ!" ಎಂದು
ಹೆಮ್ಮೆಯಿಂದ ಹೇಳುತ್ತಾರೆ.

ಭಕ್ತನು
"
ಹಾಗಿದ್ದರೆ ನನಗೂ ಶ್ರೀರಾಮದರ್ಶನ
ಸಾಧ್ಯವಿದೆಯೇ?" ಎಂದು ಕೇಳುತ್ತಾನೆ.

ತುಳಸೀದಾಸರು "ಯಾಕಿಲ್ಲ? ನಿನಗೂ
ಶ್ರೀರಾಮದರ್ಶನ ಸಾಧ್ಯವಿದೆ! ಅದು ಬಹಳ
ಸುಲಭವಾಗಿಯೂ ಇದೆ. ನೀನು ಈ
ಪ್ರಪಂಚದಲ್ಲಿ ಯಾವುದೇ
ವ್ಯಕ್ತಿಯನ್ನಾದರೂ ನೋಡು, ಅಲ್ಲಿ ನಿನಗೆ
ರಾಮನೇ ಕಾಣುತ್ತಾನೆ!" ಎನ್ನುತ್ತಾರೆ.

ಭಕ್ತನಿಗೆ ಅರ್ಥವಾಗಲಿಲ್ಲ. "ಬಿಡಿಸಿ ಹೇಳಿ
ಸ್ವಾಮೀ" ಎಂದು ವಿನಂತಿಸಿದ.

ತುಳಸೀದಾಸರು ಹೇಳುತ್ತಾರೆ-
"
ನೋಡು, ಇದಕ್ಕೊಂದು ಸುಲಭಸೂತ್ರ
ಇದೆ. ಈ ಪ್ರಪಂಚದಲ್ಲಿ ಯಾರದೇ
ಹೆಸರಿಗಾದರೂ ಸರಿ ಈ ಸೂತ್ರವನ್ನು
ಅಳವಡಿಸಿದರೆ ಕೊನೆಯಲ್ಲಿ ನಿನಗೆ ರಾಮನ
ಹೆಸರೇ ಸಿಗುತ್ತದೆ!"

ಭಕ್ತನಿಗೆ ಮತ್ತಷ್ಟು ಕುತೂಹಲ, ಅಚ್ಚರಿ.
ಯಾವುದು ಆ ಸೂತ್ರ? ಎಂದು ಕೇಳಿದ.

ಆಗ ತುಳಸೀದಾಸರು ಹೇಳುತ್ತಾರೆ:



ನಾಮ ಚತುರ್ಗುಣ ಪಂಚತತ್ತ್ವ ಮಿಲನ
ತಾಸಾಂ ದ್ವಿಗುಣ ಪ್ರಮಾಣ
ತುಲಸೀ ಅಷ್ಟಸೌಭಾಗ್ಯೇ ಅಂತ ಮೇ
ಶೇಷ ರಾಮ ಹೀ ರಾಮ ||

ಇದರ ಪ್ರಕಾರ, ಯಾರದೇ ಹೆಸರಾದರೂ ಸರಿ,
ಅದರಲ್ಲಿರುವ ಅಕ್ಷರಗಳನ್ನು ಎಣಿಸು. ಅದನ್ನು
ನಾಲ್ಕರಿಂದ ಗುಣಿಸು (ಚತುರ್ಗುಣ). ಅದಕ್ಕೆ
ಐದನ್ನು ಕೂಡಿಸು (ಪಂಚತತ್ತ್ವ ಮಿಲನ). ಆಗ
ಬಂದ ಸಂಖ್ಯೆಯನ್ನು ದುಪ್ಪಟ್ಟು ಮಾಡು
(
ದ್ವಿಗುಣ ಪ್ರಮಾಣ). ಬಂದ ಉತ್ತರವನ್ನು
ಎಂಟರಿಂದ ಭಾಗಿಸು (ಅಷ್ಟಸೌಭಾಗ್ಯ).
ಭಾಗಲಬ್ಧ ಎಷ್ಟೇ ಇರಲಿ, ಶೇಷ
ಉಳಿಯುವುದು ಎರಡೇ. ಆ ಎರಡು
ಅಕ್ಷರಗಳೇ "ರಾಮ"!

ಭಕ್ತನಿಗೆ ಆಶ್ಚರ್ಯವೋ ಆಶ್ಚರ್ಯ. ಮೊದಲು
ತನ್ನ ಹೆಸರು "ನಿರಂಜನ" ಎಂದು ನಾಲ್ಕು
ಅಕ್ಷರಗಳು ಇದ್ದದ್ದಕ್ಕೆ ಸೂತ್ರವನ್ನು
ಅನ್ವಯಿಸಿದ. 4X4=16; 16+5=21;
21X2=42; 42/8=
ಭಾಗಲಬ್ಧ 5. ಶೇಷ 2.

ತನ್ನ ಹೆಂಡತಿಯ ಹೆಸರು "ನಿರ್ಮಲಾ" ಎಂದು
ಇದ್ದದ್ದಕ್ಕೆ ಸೂತ್ರ ಅನ್ವಯಿಸಿದ. 3X4=12;
12+5=17; 17X2=34; 34/8 =
ಭಾಗಲಬ್ಧ 4. ಶೇಷ 2.

ತನ್ನ ಮಗಳ ಹೆಸರು "ನಿಧಿ" ಎಂದು ಇದ್ದದ್ದಕ್ಕೆ
ಸೂತ್ರ ಅನ್ವಯಿಸಿದ. 2X4=8; 8+5=13;
13X2=26; 26/8 =
ಭಾಗಲಬ್ಧ 3. ಶೇಷ
2.

ತನ್ನ ಪಕ್ಕದಮನೆಯವನ ಹೆಸರು "ನಿಖಿಲಾನಂದ"
ಎಂದು ಇದ್ದದ್ದಕ್ಕೆ ಸೂತ್ರ ಅನ್ವಯಿಸಿದ.
5X4=20; 20+5=25; 25X2=50; 50/8
=
ಭಾಗಲಬ್ಧ 6. ಶೇಷ 2.

ಹೌದಲ್ವಾ! ಹೆಸರು ಯಾವುದೇ ಇದ್ದರೂ,
ಎಷ್ಟು ಅಕ್ಷರಗಳೇ ಇದ್ದರೂ
ಕೊನೆಯಲ್ಲುಳಿಯುವುದು ಎರಡಕ್ಷರ
"
ರಾಮ" ಮಾತ್ರ! ಭಕ್ತನಿಗೆ ಬಹಳ
ಖುಷಿಯಾಯ್ತು.

ತುಳಸೀದಾಸರ
ಕಾಲಿಗೆರಗಿದ. ಇವತ್ತು ನನಗೆ
ಶ್ರೀರಾಮದರ್ಶನ ಮಾಡಿಸಿದಿರಿ. ಇನ್ನು
ಯಾವಾಗಲೂ ನಾನು ರಾಮನನ್ನೇ
ಕಾಣುತ್ತಿರುತ್ತೇನೆ ಎಂದು ಅಲ್ಲಿಂದ
ಹೊರಟುಹೋದ.

ಅಷ್ಟಾಗಿ, ತುಳಸೀದಾಸರು ಹೇಳಿದ
ಸೂತ್ರದಲ್ಲಿನ ಸಂಖ್ಯೆಗಳ ಮತ್ತು
ಗಣಿತಕ್ರಿಯೆಗಳ ಮಹತ್ವ ಏನು ಗೊತ್ತೇ?

ಚತುರ್ಗುಣ = ಧರ್ಮ, ಅರ್ಥ, ಕಾಮ, ಮೋಕ್ಷ
ಎಂಬ ನಾಲ್ಕು ಪುರುಷಾರ್ಥ.

ಪಂಚತತ್ತ್ವ = ಭೂಮಿ, ನೀರು, ಅಗ್ನಿ,
ವಾಯು, ಆಕಾಶ ಎಂಬ ಪಂಚಮಹಾಭೂತ.

ದ್ವಿಗುಣ = ಮಾಯೆ ಮತ್ತು ಬ್ರಹ್ಮ.

ಅಷ್ಟಸೌಭಾಗ್ಯ = ಅನ್ನ, ಅರ್ಥ, ಪ್ರಭುತ್ವ,
ಯೌವನ, ವೈಭವ, ಗೃಹ, ವಸ್ತ್ರ, ಆಭರಣ ಎಂಬ
ಎಂಟು ಸೌಭಾಗ್ಯಗಳು.

ಇವೆಲ್ಲದರೊಟ್ಟಿಗೆ ನಾವು ಜೀವನಜಂಜಾಟ
ನಡೆಸಿ, ಗುಣಿಸಿ, ಕೂಡಿಸಿ, ಭಾಗಿಸಿ, ಭೋಗಿಸಿ
ಕೊನೆಗೂ ಉಳಿಯುವ ಶೇಷ "ರಾಮ"
ಮಾತ್ರ!


ಜೈ ಶ್ರೀರಾಮ್ ---------- "ಭಗವತ್ ಗೀತೆ ನುಡಿ "



ಹುಟ್ಟಿದಾಗ ನೀ ಅಳುತ್ತಿದ್ದೆ,
ಮಡಿದಾಗ ನಿನ್ನವರು ಅಳುತ್ತಿದ್ದರು.

ಹುಟ್ಟಿದಾಗ ನಿನಗೆ ವಸ್ತ್ರ ತೊಡಿಸುವರು,
ಮಡಿದಾಗ ನಿನ್ನ ವಸ್ತ್ರವ ಬಿಚ್ಚುವರು.

ಹುಟ್ಟಿದಾಗ ಹುಡುಕುವರು ನಿನಗೆ
ನೂರೆಂಟು ನಾಮ,
ಮಡಿದಮೇಲೆ ಶವ ಎಂದೇ
ನಿನ್ನ ನಾಮ.

ನೀನೇನನ್ನೂ ಗಳಿಸದೇ ಬಂದೆ,
ಮಡಿದಾಗ
ನೀನು ಗಳಸಿದ್ದನ್ನು ಕಳದುಕೊಂಡೆ.



ಓ ಮಾನವಾ..


ಮಡಿದಾಗ ಮಣ್ಣಲ್ಲಿ ಮರಳಾಗಿ
ಹೊಗುವ ನೀನು
ನಿನ್ನದು ಎನ್ನಲು ನಿನಗೇನಿದೆ,

ನಿನಗೆ ಜನ್ಮ ಕೊಟ್ಟವರು ಮತ್ತೊಬ್ಬರು,

ನಿನಗೆ ಹೆಸರು ಕೊಟ್ಟದ್ದು ಮತ್ತೊಬ್ಬರು,

ನಿನಗೆ ಜ್ಙಾನ ಹೇಳಿ ಕೊಟ್ಟದ್ದು ಮತ್ತೊಬ್ಬರು,

ಕಡೆಗೆ ನಿನ್ನ ಅಂತ್ಯ ಸಂಸ್ಕಾರ
ನಿರ್ವಹಿಸುವುದು ಕೂಡಾ ಮತ್ತೊಬ್ಬರೇ.

ನಾನು ಎಂದು ಅಹಂಕರಿಸಲು
ನಾನು ಯಾರು ?
ಏನಿದೇ ನನ್ನಲ್ಲಿ ?

ಚಿಂತಿಸುವವನಿಗೆ ದೃಷ್ಟಾಂತವಿದೆ.


------------ Hari Om -------------